ETV Bharat / state

ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಅನಂತಕುಮಾರ್​​​​ ಹೆಗಡೆ

ಒಟ್ಟು ಆರು ಬಾರಿ ಚುನಾವಣೆ ಎದುರಿಸಿರುವ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಐದು ಬಾರಿ ಗೆದ್ದಿದ್ದಾರೆ. ಇದೀಗ ಏಳನೇ ಬಾರಿ ಲೋಕಸಭಾ ಚುನಾವಣೆಗೆ ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.

author img

By

Published : Apr 2, 2019, 3:00 PM IST

Updated : Apr 2, 2019, 3:28 PM IST

ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗಡೆ

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಇಂದು ಅಪಾರ ಬೆಂಬಲಿಗರೊಂದಿಗೆ ತೆರಳಿ ಏಳನೇ ಬಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ಅನಂತ ಕುಮಾರ್ ಹೆಗಡೆ

ಕಾರವಾರದ ಅಮದಳ್ಳಿ ಮಹಾಗಣಪತಿ ದೇವಸ್ಥಾನ ಹಾಗೂ ನಗರದ ಮಹಾದೇವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು, ಬಳಿಕ ಬಿಜೆಪಿ ಕಾರ್ಯಾಲಯಕ್ಕೆ ತೆರಳಿ ಅಲ್ಲಿಂದ ಕಾಲ್ನಡಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಈ ವೇಳೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್, ಶಾಸಕರಾದ ರೂಪಾಲಿ ನಾಯ್ಕ, ಸುನೀಲ್ ನಾಯ್ಕ, ದಿನಕರ್ ಶೆಟ್ಟಿ ಸೇರಿದಂತೆ ಅಪಾರ ಬೆಂಬಲಿಗರು ಜೊತೆಯಲ್ಲಿದ್ದರು.

ಈ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿದರು. ನಾಮಪತ್ರ ಸಲ್ಲಿಕೆಗೆ ಐವರು ಮಾತ್ರ ತೆರಳಲು ಅವಕಾಶವಿದ್ದರಿಂದ ಅನಂತಕುಮಾರ್ ಹೆಗಡೆ, ಅವರ ಪತ್ನಿ ಶ್ರೀರೂಪಾ ಹೆಗಡೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ.ನಾಯ್ಕ, ವಕೀಲ ಬಿ.ಎಸ್. ಪೈ ಸೇರಿ ಐವರು ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು ಆರು ಬಾರಿ ಚುನಾವಣೆ ಎದುರಿಸಿರುವ ಅನಂತಕುಮಾರ್ ಐದು ಬಾರಿ ಗೆದ್ದಿದ್ದಾರೆ. ಇದೀಗ ಏಳನೇ ಬಾರಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಇಂದು ಅಪಾರ ಬೆಂಬಲಿಗರೊಂದಿಗೆ ತೆರಳಿ ಏಳನೇ ಬಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ಅನಂತ ಕುಮಾರ್ ಹೆಗಡೆ

ಕಾರವಾರದ ಅಮದಳ್ಳಿ ಮಹಾಗಣಪತಿ ದೇವಸ್ಥಾನ ಹಾಗೂ ನಗರದ ಮಹಾದೇವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು, ಬಳಿಕ ಬಿಜೆಪಿ ಕಾರ್ಯಾಲಯಕ್ಕೆ ತೆರಳಿ ಅಲ್ಲಿಂದ ಕಾಲ್ನಡಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಈ ವೇಳೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್, ಶಾಸಕರಾದ ರೂಪಾಲಿ ನಾಯ್ಕ, ಸುನೀಲ್ ನಾಯ್ಕ, ದಿನಕರ್ ಶೆಟ್ಟಿ ಸೇರಿದಂತೆ ಅಪಾರ ಬೆಂಬಲಿಗರು ಜೊತೆಯಲ್ಲಿದ್ದರು.

ಈ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿದರು. ನಾಮಪತ್ರ ಸಲ್ಲಿಕೆಗೆ ಐವರು ಮಾತ್ರ ತೆರಳಲು ಅವಕಾಶವಿದ್ದರಿಂದ ಅನಂತಕುಮಾರ್ ಹೆಗಡೆ, ಅವರ ಪತ್ನಿ ಶ್ರೀರೂಪಾ ಹೆಗಡೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ.ನಾಯ್ಕ, ವಕೀಲ ಬಿ.ಎಸ್. ಪೈ ಸೇರಿ ಐವರು ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು ಆರು ಬಾರಿ ಚುನಾವಣೆ ಎದುರಿಸಿರುವ ಅನಂತಕುಮಾರ್ ಐದು ಬಾರಿ ಗೆದ್ದಿದ್ದಾರೆ. ಇದೀಗ ಏಳನೇ ಬಾರಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

Intro:ಏಳನೇ ಬಾರಿ ನಾಮಪತ್ರ ಸಲ್ಲಿಸಿದ ಅನಂತಕುಮಾರ್ ಹೆಗಡೆ
ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗಡೆ ಇಂದು ಅಪಾರ ಬೆಂಬಲಿಗರೊಂದಿಗೆ ತೆರಳಿ ಏಳನೇ ಬಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಕಾರವಾರದ ಅಮದಳ್ಳಿ ಮಹಾಗಣಪತಿ ದೇವಸ್ಥಾನ ಹಾಗೂ ನಗರದ ಮಹಾದೇವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು ಬಳಿಕ ಬಿಜೆಪಿ ಕಾರ್ಯಾಲಯಕ್ಕೆ ತೆರಳಿ ಅಲ್ಲಿಂದ ಕಾಲ್ನಡಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಈ ವೇಳೆ ಮಾಜಿ ಸಿಎಂ ಜಗದೀಶ ಶೆಟ್ಟರ್, ಶಾಸಕರಾದ ರೂಪಾಲಿ ನಾಯ್ಕ, ಸುನೀಲ್ ನಾಯ್ಕ, ದಿನಕರ್ ಶೆಟ್ಟಿ ಸೇರಿದಂತೆ ಅಪಾರ ಬೆಂಬಲಿಗರು ಜೊತೆಯಲ್ಲಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರ ಮೋದಿ ಪರ ಘೋಷಣೆಗಳು ಜೋರಾಗಿತ್ತು.
ಆದರೆ ನಾಮಪತ್ರ ಸಲ್ಲಿಕೆಗೆ ಐವರು ಮಾತ್ರ ತೆರಳಲು ಅವಕಾಶವಿದ್ದರಿಂದ ಅನಂತ್ ಕುಮಾರ್ ಹೆಗಡೆ, ಅವರ ಪತ್ನಿ ಶ್ರೀರೂಪಾ ಹೆಗಡೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ ನಾಯ್ಕ, ವಕೀಲ ಬಿಎಸ್ ಪೈ ಸೇರಿ ಐವರು ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಒಟ್ಟು ಆರು ಭಾರಿ ಚುನಾವಣೆ ಎದುರಿಸಿರುವ ಅನಂತ್ ಕುಮಾರ್ ಐದು ಬಾರಿ ಗೆದ್ದಿದ್ದಾರೆ. ಇದೀಗ ಏಳನೆ ಬಾರಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದದ್ದಾರೆ.


Body:ಕ


Conclusion:ಕ
Last Updated : Apr 2, 2019, 3:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.