ETV Bharat / state

ವರದಿಗಾರ ಮಂಜುನಾಥ್ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೋರಿ ಮುಖ್ಯಮಂತ್ರಿಗೆ ಮನವಿ! - kArawar news

ನವೆಂಬರ್​​ 20ರಂದು ಅಪಘಾತದಲ್ಲಿ ಮೃತಪಟ್ಟ ಪ್ರಜಾವಾಣಿಯ ಹಾವೇರಿ ಜಿಲ್ಲಾ ವರದಿಗಾರ ಎಂ.ಸಿ. ಮಂಜುನಾಥ್ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೋರಿ ಕಾರವಾರ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಇಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ವರದಿಗಾರ ಮಂಜುನಾಥ್ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೋರಿ ಮುಖ್ಯಮಂತ್ರಿಗೆ ಮನವಿ!
author img

By

Published : Nov 21, 2019, 7:34 PM IST

ಕಾರವಾರ: ನವೆಂಬರ್​​ 20ರಂದು ಅಪಘಾತದಲ್ಲಿ ಮೃತಪಟ್ಟ ಪ್ರಜಾವಾಣಿಯ ಹಾವೇರಿ ಜಿಲ್ಲಾ ವರದಿಗಾರ ಎಂ.ಸಿ. ಮಂಜುನಾಥ್ ಅವರ ಮೃತದೇಹವನ್ನು ಸರಕು ಸಾಗಣೆ ವಾಹನದಲ್ಲಿ ಸಾಗಿಸಿ, ಅಮಾನವವೀಯತೆ ಮೆರೆದಿದ್ದನ್ನ ಖಂಡಿಸಿ ಮತ್ತು ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೋರಿ ಕಾರವಾರ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಇಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ವರದಿಗಾರ ಮಂಜುನಾಥ್ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೋರಿ ಮುಖ್ಯಮಂತ್ರಿಗೆ ಮನವಿ!

ಪ್ರಜಾವಾಣಿಯ ಹಾವೇರಿ ವರದಿಗಾರ ಎಂ.ಸಿ.ಮಂಜುನಾಥ ಅವರು ದಾವಣಗೆರೆ ಜಿಲ್ಲೆಯ ಮಾಯಕೊಂಡ ಬಳಿ ಬುಧವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನೊಂದ ಕುಟುಂಬಕ್ಕೆ ಈಗಾಗಲೇ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ಆದರೆ, ಅವರ ಕುಟುಂಬ ಸಂಕಷ್ಟದಲ್ಲಿರುವ ಕಾರಣ,ಇದೊಂದು ವಿಶಿಷ್ಟ ಪ್ರಕರಣ ಎಂದು ಪರಿಗಣಿಸಿ,ನೆರವಿನ ಮೊತ್ತವನ್ನು 10 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ಮೃತ ಮಂಜುನಾಥ ಅವರ ಸಾವಿಗೆ ಕಾರಣನಾದ ಟ್ರ‍್ಯಾಕ್ಟರ್ ಚಾಲಕನನ್ನು ಶೀಘ್ರವೇ ಪತ್ತೆ ಹಚ್ಚಿ, ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಮೃತರ ಶವವನ್ನು ಸಾಗಿಸಲು ಸಕಾಲದಲ್ಲಿ ಆಂಬುಲೆನ್ಸ್ ನೆರವು ಸಿಗದೇ ಸರಕು ಸಾಗಣೆಯ ವಾಹನದಲ್ಲಿ ಕೊಂಡೊಯ್ದಿರುವುದು ವಿಷಾದಕರ. ಇನ್ನು ಮುಂದಾದರೂ ಯಾರದೇ ಶವವನ್ನು ಈ ರೀತಿ ಅಮಾನವೀಯ ರೀತಿಯಲ್ಲಿ ಸಾಗಿಸುವಂತಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿಸಿದವರಿಗೆ ಕಟ್ಟುನಿಟ್ಟಿನ ಆದೇಶ ಮಾಡುವಂತೆ ವಿನಂತಿ ಮಾಡಲಾಗಿದೆ.

ಕಾರವಾರ: ನವೆಂಬರ್​​ 20ರಂದು ಅಪಘಾತದಲ್ಲಿ ಮೃತಪಟ್ಟ ಪ್ರಜಾವಾಣಿಯ ಹಾವೇರಿ ಜಿಲ್ಲಾ ವರದಿಗಾರ ಎಂ.ಸಿ. ಮಂಜುನಾಥ್ ಅವರ ಮೃತದೇಹವನ್ನು ಸರಕು ಸಾಗಣೆ ವಾಹನದಲ್ಲಿ ಸಾಗಿಸಿ, ಅಮಾನವವೀಯತೆ ಮೆರೆದಿದ್ದನ್ನ ಖಂಡಿಸಿ ಮತ್ತು ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೋರಿ ಕಾರವಾರ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಇಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ವರದಿಗಾರ ಮಂಜುನಾಥ್ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೋರಿ ಮುಖ್ಯಮಂತ್ರಿಗೆ ಮನವಿ!

ಪ್ರಜಾವಾಣಿಯ ಹಾವೇರಿ ವರದಿಗಾರ ಎಂ.ಸಿ.ಮಂಜುನಾಥ ಅವರು ದಾವಣಗೆರೆ ಜಿಲ್ಲೆಯ ಮಾಯಕೊಂಡ ಬಳಿ ಬುಧವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನೊಂದ ಕುಟುಂಬಕ್ಕೆ ಈಗಾಗಲೇ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ಆದರೆ, ಅವರ ಕುಟುಂಬ ಸಂಕಷ್ಟದಲ್ಲಿರುವ ಕಾರಣ,ಇದೊಂದು ವಿಶಿಷ್ಟ ಪ್ರಕರಣ ಎಂದು ಪರಿಗಣಿಸಿ,ನೆರವಿನ ಮೊತ್ತವನ್ನು 10 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ಮೃತ ಮಂಜುನಾಥ ಅವರ ಸಾವಿಗೆ ಕಾರಣನಾದ ಟ್ರ‍್ಯಾಕ್ಟರ್ ಚಾಲಕನನ್ನು ಶೀಘ್ರವೇ ಪತ್ತೆ ಹಚ್ಚಿ, ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಮೃತರ ಶವವನ್ನು ಸಾಗಿಸಲು ಸಕಾಲದಲ್ಲಿ ಆಂಬುಲೆನ್ಸ್ ನೆರವು ಸಿಗದೇ ಸರಕು ಸಾಗಣೆಯ ವಾಹನದಲ್ಲಿ ಕೊಂಡೊಯ್ದಿರುವುದು ವಿಷಾದಕರ. ಇನ್ನು ಮುಂದಾದರೂ ಯಾರದೇ ಶವವನ್ನು ಈ ರೀತಿ ಅಮಾನವೀಯ ರೀತಿಯಲ್ಲಿ ಸಾಗಿಸುವಂತಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿಸಿದವರಿಗೆ ಕಟ್ಟುನಿಟ್ಟಿನ ಆದೇಶ ಮಾಡುವಂತೆ ವಿನಂತಿ ಮಾಡಲಾಗಿದೆ.

Intro:Body:ಕಾರವಾರ: ನ.೨೦ ರಂದು ಅಪಘಾತದಲ್ಲಿ ಮೃತಪಟ್ಟ ಪ್ರಜಾವಾಣಿಯ ಹಾವೇರಿ ಜಿಲ್ಲಾ ವರದಿಗಾರ ಎಂ.ಸಿ. ಮಂಜುನಾಥ ಅವರ ಮೃತದೇಹವನ್ನು ಸರಕು ಸಾಗಣೆ ವಾಹನದಲ್ಲಿ ಸಾಗಿಸಿ ಮಾನವಿಯತೆ ಮರೆತಿದ್ದನ್ನು ಖಂಡಿಸಿ ಮತ್ತು ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೋರಿ ಕಾರವಾರ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಇಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿಯ ಹಾವೇರಿ ವರದಿಗಾರ ಎಂ.ಸಿ.ಮಂಜುನಾಥ ಅವರು ದಾವಣಗೆರೆ ಜಿಲ್ಲೆಯ ಮಾಯಕೊಂಡ ಬಳಿ ಬುಧವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನೊಂದ ಕುಟುಂಬಕ್ಕೆ ಈಗಾಗಲೇ ರೂ.೫ ಲಕ್ಷ ನರವನ್ನು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ಆದರೆ, ಅವರ ಕುಟುಂಬ ಸಂಕಷ್ಟದಲ್ಲಿರುವ ಕಾರಣ ಇದೊಂದು ವಿಶಿಷ್ಟ ಪ್ರಕರಣ ಎಂದು ಪರಿಗಣಿಸಿ, ನೆರವಿನ ಮೊತ್ತವನ್ನು ರೂ.೧೦ ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.
ಮೃತ ಮಂಜುನಾಥ ಅವರ ಸಾವಿಗೆ ಕಾರಣನಾದ ಟ್ರ‍್ಯಾಕ್ಟರ್ ಚಾಲಕನನ್ನು ಶೀಘ್ರವೇ ಪತ್ತೆ ಹಚ್ಚಿ, ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಒತ್ತಾಯಿಸಿದ ಪತ್ರಕರ್ತರು, ಮೃತರ ಶವವನ್ನು ಸಾಗಿಸಲು ಸಕಾಲದಲ್ಲಿ ಆಂಬುಲೆನ್ಸ್ ನೆರವು ಸಿಗದೇ ಸರಕು ಸಾಗಣೆಯ ವಾಹನದಲ್ಲಿ ಕೊಂಡೊಯ್ದಿರುವುದು ವಿಷಾಧಕರ. ಇನ್ನು ಮುಂದಾದರೂ ಯಾರದೇ ಶವವನ್ನು ಈ ರೀತಿ ಅಮಾನವೀಯ ರೀತಿಯಲ್ಲಿ ಸಾಗಿಸುವಂತಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿಸಿದವರಿಗೆ ಕಟ್ಟುನಿಟ್ಟಿನ ಆದೇಶ ಮಾಡುವಂತೆ ವಿನಂತಿಸಿಕೊಳ್ಳಲಾಗಿದೆ.
ಸಂಘದ ಅಧ್ಯಕ್ಷ ಟಿ.ಬಿ.ಹರಿಕಂತ್ರ, ಕಾರ್ಯದರ್ಶಿ ಶೇಷಗಿರಿ ಮುಂಡಳ್ಳಿ ಸೇರಿದಂತೆ ಸದಸ್ಯರು ಹಾಜರಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.