ETV Bharat / state

10 ದೇಶಗಳ ಅಕ್ರಮ ನಗದು ಸಾಗಣೆ: ಕಾರವಾರದಲ್ಲಿ ಇಬ್ಬರು ಆರೋಪಿಗಳು ವಶಕ್ಕೆ

ಅಕ್ರಮವಾಗಿ ವಿದೇಶಿ ಹಣ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾರವಾರ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಈ ಪ್ರಕರಣವನ್ನು ಇಡಿಗೆ ಹಸ್ತಾಂತರಿಸಿದ್ದಾರೆ.

author img

By

Published : Nov 14, 2019, 7:58 AM IST

ಇಬ್ಬರ ಬಂಧನ

ಕಾರವಾರ: ಅಕ್ರಮವಾಗಿ ವಿದೇಶಿ ಹಣ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಕಾರವಾರ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರಿಂದ ಅಂದಾಜು 80ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.

ವಿದೇಶಿ ಹಣ ಸಾಗಿಸುತ್ತಿದ್ದ ಇಬ್ಬರ ಬಂಧನ

ಭಟ್ಕಳ ಆಝಾದ್ ನಗರದ ಸಿರಾಜ್ ಕತ್ತಾರ್ ಹಾಗೂ ಅಬ್ದುಲ್ ನಜೀರ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರಿಂದ ಇಂಗ್ಲೆಂಡ್, ಯುರೋಪ್, ಆಸ್ಟ್ರೇಲಿಯಾ ಸೇರಿದಂತೆ 10 ದೇಶಗಳ ಕರೆನ್ಸಿಗಳನ್ನು ಜಪ್ತಿ ಮಾಡಲಾಗಿದೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಪಿಐ ಸಂತೋಷ್ ಶೆಟ್ಟಿ ಹಾಗೂ ಕಾರವಾರ ನಗರ ಠಾಣೆಯ ಪಿಎಸ್‌ಐ ಸಂತೋಷ್ ಎಂ ಸಾರಿಗೆ ಬಸ್‌ನಲ್ಲಿ ಭಟ್ಕಳಕ್ಕೆ ತೆರಳುತ್ತಿದ್ದ ಇಬ್ಬರನ್ನೂ ಕಾರವಾರದ ಸುಭಾಷ್ ವೃತ್ತದ ಬಳಿ ವಶಕ್ಕೆ ಪಡೆದಿದ್ದಾರೆ. ಡಿವೈಎಸ್‌ಪಿ ಶಂಕರ್ ಮಾರಿಹಾಳ ಅವರು ವಿಚಾರಣೆ ನಡೆಸಿ, ಕೆಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು, ಪ್ರಕರಣವನ್ನು ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಪೊಲೀಸರು ಹಸ್ತಾಂತರಿಸಿದ್ದು, ಅವರೇ ವಿಚಾರಣೆಯನ್ನು ಕೈಗೊಳ್ಳಲಿದ್ದಾರೆ. ಹೆಚ್ಚಿನ ಮೊತ್ತದ ಹಾಗೂ ವಿದೇಶಿ ಹಣ ಆಗಿರುವುದರಿಂದ ಪ್ರಕರಣವನ್ನು ಅವರಿಗೆ ಹಸ್ತಾಂತರಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.

ಕಾರವಾರ: ಅಕ್ರಮವಾಗಿ ವಿದೇಶಿ ಹಣ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಕಾರವಾರ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರಿಂದ ಅಂದಾಜು 80ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.

ವಿದೇಶಿ ಹಣ ಸಾಗಿಸುತ್ತಿದ್ದ ಇಬ್ಬರ ಬಂಧನ

ಭಟ್ಕಳ ಆಝಾದ್ ನಗರದ ಸಿರಾಜ್ ಕತ್ತಾರ್ ಹಾಗೂ ಅಬ್ದುಲ್ ನಜೀರ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರಿಂದ ಇಂಗ್ಲೆಂಡ್, ಯುರೋಪ್, ಆಸ್ಟ್ರೇಲಿಯಾ ಸೇರಿದಂತೆ 10 ದೇಶಗಳ ಕರೆನ್ಸಿಗಳನ್ನು ಜಪ್ತಿ ಮಾಡಲಾಗಿದೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಪಿಐ ಸಂತೋಷ್ ಶೆಟ್ಟಿ ಹಾಗೂ ಕಾರವಾರ ನಗರ ಠಾಣೆಯ ಪಿಎಸ್‌ಐ ಸಂತೋಷ್ ಎಂ ಸಾರಿಗೆ ಬಸ್‌ನಲ್ಲಿ ಭಟ್ಕಳಕ್ಕೆ ತೆರಳುತ್ತಿದ್ದ ಇಬ್ಬರನ್ನೂ ಕಾರವಾರದ ಸುಭಾಷ್ ವೃತ್ತದ ಬಳಿ ವಶಕ್ಕೆ ಪಡೆದಿದ್ದಾರೆ. ಡಿವೈಎಸ್‌ಪಿ ಶಂಕರ್ ಮಾರಿಹಾಳ ಅವರು ವಿಚಾರಣೆ ನಡೆಸಿ, ಕೆಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು, ಪ್ರಕರಣವನ್ನು ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಪೊಲೀಸರು ಹಸ್ತಾಂತರಿಸಿದ್ದು, ಅವರೇ ವಿಚಾರಣೆಯನ್ನು ಕೈಗೊಳ್ಳಲಿದ್ದಾರೆ. ಹೆಚ್ಚಿನ ಮೊತ್ತದ ಹಾಗೂ ವಿದೇಶಿ ಹಣ ಆಗಿರುವುದರಿಂದ ಪ್ರಕರಣವನ್ನು ಅವರಿಗೆ ಹಸ್ತಾಂತರಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.

Intro:Body:

ವಿದೇಶಿ ಹಣ ಸಾಗಿಸುತ್ತಿದ್ದ ಇಬ್ಬರ ಬಂಧನ; ಪ್ರಕರಣ ಇಡಿ ತನಿಖೆಗೆ

ಕಾರವಾರ: ಅಕ್ರಮವಾಗಿ ವಿದೇಶಿ ಹಣ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕಾರವಾರ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರಿಂದ ಅಂದಾಜು ೮೦ ಲಕ್ಷ ರೂ. ನಗದನ್ನು ಜಪ್ತಿಪಡಿಸಿಕೊಳ್ಳಲಾಗಿದೆ.
ಭಟ್ಕಳದ ಆಝಾದ್ ನಗರದ ಸಿರಾಜ್ ಕತ್ತಾರ್ ಹಾಗೂ ಅಬ್ದುಲ್ ನಜೀರ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರಿಂದ ಇಂಗ್ಲೆಡ್, ಯುರೋಪ್, ಆಸ್ಟ್ರೇಲಿಯಾ ಸೇರಿದಂತೆ ೧೦ ದೇಶಗಳ ಕರೆನ್ಸಿಗಳನ್ನು ಜಪ್ತಿ ಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಪಿಐ ಸಂತೋಷ್ ಶೆಟ್ಟಿ ಹಾಗೂ ಕಾರವಾರ ನಗರ ಠಾಣೆಯ ಪಿಎಸ್‌ಐ ಸಂತೋಷ್ ಎಂ., ಸಾರಿಗೆ ಬಸ್‌ನಲ್ಲಿ ಭಟ್ಕಳಕ್ಕೆ ತೆರಳುತ್ತಿದ್ದ ಇಬ್ಬರನ್ನೂ ಕಾರವಾರದ ಸುಭಾಷ್ ವೃತ್ತದ ಬಳಿ ವಶಕ್ಕೆ ಪಡೆದಿದ್ದಾರೆ. ಡಿವೈಎಸ್‌ಪಿ ಶಂಕರ್ ಮಾರಿಹಾಳ ಅವರು ವಿಚಾರಣೆ ನಡೆಸಿ, ಕೆಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ.
ಮಡಗಾಂವ್‌ನಿಂದ ಸವಣೂರಿಗೆ ತೆರಳುವ ಸಾರಿಗೆ ಬಸ್‌ನಲ್ಲಿ ಭಟ್ಕಳಕ್ಕೆ ತೆರಳುತ್ತಿದ್ದರು. ಇದೇ ವೇಳೆ ಖಚಿತ ಮಾಹಿತಿ ಪಡೆದ ನಗರ ಠಾಣೆಯ ಪೊಲೀಸರು, ಕಾರವಾರದ ಸುಭಾಷ್ ವೃತ್ತದ ಬಳಿ ಬಸ್‌ನಲ್ಲಿದ್ದ ಇಬ್ಬರನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಪ್ರಕರಣವನ್ನು ಜಾರಿನಿರ್ದೇಶನಕ್ಕೆ (ಇಡಿ) ಹಸ್ತಾಂತರ ಮಾಡಲಾಗಿದೆ. ಅವರೇ ವಿಚಾರಣೆಯನ್ನು ಕೈಗೊಳ್ಳಲಿದ್ದಾರೆ. ಹೆಚ್ಚಿನ ಮೊತ್ತದ ಹಾಗೂ ವಿದೇಶಿ ಹಣ ಆಗಿರುವುದರಿಂದ ಪ್ರಕರಣವನ್ನು ಅವರಿಗೆ ಹಸ್ತಾಂತರಿಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.