ETV Bharat / state

ಭಾರತ್ ಬಂದ್ ಯಶಸ್ವಿಗೆ ಬಹುಜನ ಕ್ರಾಂತಿ ಮೋರ್ಚಾ ಕರೆ : ಪೋಸ್ಟರ್ ಬಿಡುಗಡೆ - ಭಟ್ಕಳ ಸುದ್ದಿ

ಡಿಎನ್​ಎ ಆಧಾರಿತ ಎನ್​ಆರ್​ಸಿ ಮಾಡಬೇಕು ಎಂದು ಬಹುಜನ ಕ್ರಾಂತಿ ಮೋರ್ಚಾ ಸಂಘಟನೆ ದೇಶದಾದ್ಯಂತ ನಾಳೆ ಬಂದ್​ಗೆ ಕರೆ ನೀಡಿದೆ. ಭಟ್ಕಳದಲ್ಲಿ ಇದನ್ನು ಯಶಸ್ವಿಗೊಳಿಸಬೇಕೆಂದು ಬಹುಜನ ಕ್ರಾಂತಿ ಮೋರ್ಚಾದ ಮುಖಂಡ ಆದಂ ಪಣಂಬೂರು ಕರೆ ನೀಡಿದರು.

bahujan-revolution-morcha-calls-for-bharat-bandh-success
ಭಾರತ್ ಬಂದ್ ಯಶಸ್ವಿಗೆ ಬಹುಜನ ಕ್ರಾಂತಿ ಮೋರ್ಚಾ ಕರೆ
author img

By

Published : Jan 28, 2020, 11:16 PM IST

Updated : Jan 28, 2020, 11:27 PM IST

ಭಟ್ಕಳ : ಡಿಎನ್​ಎ ಆಧಾರಿತ ಎನ್​ಆರ್​ಸಿ ಮಾಡಬೇಕು ಎಂದು ಬಹುಜನ ಕ್ರಾಂತಿ ಮೋರ್ಚಾ ಸಂಘಟನೆ ದೇಶದಾದ್ಯಂತ ಜ.29ರಂದು ಬಂದ್​ಗೆ ಕರೆ ನೀಡಿದೆ. ಭಟ್ಕಳದಲ್ಲಿ ಇದನ್ನು ಯಶಸ್ವಿಗೊಳಿಸಬೇಕೆಂದು ಬಹುಜನ ಕ್ರಾಂತಿ ಮೋರ್ಚಾದ ಮುಖಂಡ ಆದಂ ಪಣಂಬೂರು ಕರೆ ನೀಡಿದರು.

ಹೊಟೇಲ್ ಶ್ರೀನಿವಾಸ ಡಿಲಕ್ಸ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಹುಜನ ಕ್ರಾಂತಿ ಮೋರ್ಚಾ ಮೂರು ಹಂತದಲ್ಲಿ ರಾಷ್ಟ್ರವ್ಯಾಪಿ ಆಂದೋಲನ ನಡೆಸಲಿದ್ದು ಬುಧವಾರ ನಡೆಯುತ್ತಿರುವುದು ಮೂರನೇ ಹಂತದ ಹೋರಾಟ, ನಾವು ಡಿಎನ್​ಎ ಆಧಾರಿತ ಎನ್ಆ​ರ್​ಸಿ ಮಾಡಬೇಕೆಂದು ಆಗ್ರಹಿಸುತ್ತೇವೆ. ದೇಶದ ಮೂಲ ನಿವಾಸಿಗಳು ಯಾರೆಂದು ಆಗ ತಿಳಿದು ಬರುತ್ತದೆ. ಇದರಿಂದಾಗಿ ಇಡೀ ದೇಶದ ಮುಂದೆ ವಿದೇಶಿಯರು ಯಾರು ಎಂಬುದು ತಿಳಿದು ಬರುತ್ತದೆ ಎಂದರು. ಇದೇ ಸಂದರ್ಭದಲ್ಲಿ ಭಾರತ ಬಂದ್​ಗೆ ಸಂಬಂಧಿಸಿದ ಪೋಸ್ಟರ್ ಸಹ ಬಿಡುಗಡೆ ಮಾಡಿದರು.

ಭಾರತ್ ಬಂದ್ ಯಶಸ್ವಿಗೆ ಬಹುಜನ ಕ್ರಾಂತಿ ಮೋರ್ಚಾ ಕರೆ

ಈ ಸಂದರ್ಭದಲ್ಲಿ ಮುಖಂಡರಾದ ಶೌಕತ್ ಕತೀಬ್, ಯೂನೂಸ್ ರುಕ್ನುದ್ದೀನ್, ಮುನೀರ್ ಎಂ.ಹೆಚ್. ವಸೀಮ್ ಮನೆಗಾರ ಮುಂತಾದವರು ಉಪಸ್ಥಿತರಿದ್ದರು.

ಭಟ್ಕಳ : ಡಿಎನ್​ಎ ಆಧಾರಿತ ಎನ್​ಆರ್​ಸಿ ಮಾಡಬೇಕು ಎಂದು ಬಹುಜನ ಕ್ರಾಂತಿ ಮೋರ್ಚಾ ಸಂಘಟನೆ ದೇಶದಾದ್ಯಂತ ಜ.29ರಂದು ಬಂದ್​ಗೆ ಕರೆ ನೀಡಿದೆ. ಭಟ್ಕಳದಲ್ಲಿ ಇದನ್ನು ಯಶಸ್ವಿಗೊಳಿಸಬೇಕೆಂದು ಬಹುಜನ ಕ್ರಾಂತಿ ಮೋರ್ಚಾದ ಮುಖಂಡ ಆದಂ ಪಣಂಬೂರು ಕರೆ ನೀಡಿದರು.

ಹೊಟೇಲ್ ಶ್ರೀನಿವಾಸ ಡಿಲಕ್ಸ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಹುಜನ ಕ್ರಾಂತಿ ಮೋರ್ಚಾ ಮೂರು ಹಂತದಲ್ಲಿ ರಾಷ್ಟ್ರವ್ಯಾಪಿ ಆಂದೋಲನ ನಡೆಸಲಿದ್ದು ಬುಧವಾರ ನಡೆಯುತ್ತಿರುವುದು ಮೂರನೇ ಹಂತದ ಹೋರಾಟ, ನಾವು ಡಿಎನ್​ಎ ಆಧಾರಿತ ಎನ್ಆ​ರ್​ಸಿ ಮಾಡಬೇಕೆಂದು ಆಗ್ರಹಿಸುತ್ತೇವೆ. ದೇಶದ ಮೂಲ ನಿವಾಸಿಗಳು ಯಾರೆಂದು ಆಗ ತಿಳಿದು ಬರುತ್ತದೆ. ಇದರಿಂದಾಗಿ ಇಡೀ ದೇಶದ ಮುಂದೆ ವಿದೇಶಿಯರು ಯಾರು ಎಂಬುದು ತಿಳಿದು ಬರುತ್ತದೆ ಎಂದರು. ಇದೇ ಸಂದರ್ಭದಲ್ಲಿ ಭಾರತ ಬಂದ್​ಗೆ ಸಂಬಂಧಿಸಿದ ಪೋಸ್ಟರ್ ಸಹ ಬಿಡುಗಡೆ ಮಾಡಿದರು.

ಭಾರತ್ ಬಂದ್ ಯಶಸ್ವಿಗೆ ಬಹುಜನ ಕ್ರಾಂತಿ ಮೋರ್ಚಾ ಕರೆ

ಈ ಸಂದರ್ಭದಲ್ಲಿ ಮುಖಂಡರಾದ ಶೌಕತ್ ಕತೀಬ್, ಯೂನೂಸ್ ರುಕ್ನುದ್ದೀನ್, ಮುನೀರ್ ಎಂ.ಹೆಚ್. ವಸೀಮ್ ಮನೆಗಾರ ಮುಂತಾದವರು ಉಪಸ್ಥಿತರಿದ್ದರು.

Intro:ಭಟ್ಕಳ: ಡಿ.ಎನ್.ಎ ಆಧಾರಿತ ಎನ್.ಆರ್.ಸಿ ಮಾಡಬೇಕು ಹಾಗೂ ಸಂವಿಧನ ವಿರೋಧಿ ಸಿಎಎ ಕಾನೂನು ವಿರೋಧಿಸಿ ದೇಶದಾದ್ಯಂತ ಬಹುಜನ ಕ್ರಾಂತಿ ಮೋರ್ಚಾ ಜ.29ರಂದು ಬಂದ್ ಗೆ ಕರೆ ನೀಡಿದ್ದು ಭಟ್ಕಳದಲ್ಲಿ ಇದನ್ನು ಯಶಸ್ವಿಗೊಳಿಸಬೇಕೆಂದು ಬಹುಜನ ಕ್ರಾಂತಿ ಮೋರ್ಚಾದ ಮುಖಂಡ ಆದಂ ಪಣಂಬೂರು ಕರೆ ನೀಡಿದರು.Body:ಅವರು ಮಂಗಳವಾರದಂದು ಇಲ್ಲಿನ ಹೊಟೆಲ್ ಶ್ರೀನಿವಾಸ ಡೀಲಕ್ಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

'ಬಹುಜನ ಕ್ರಾಂತಿ ಮೋರ್ಚಾ ಮೂರು ಹಂತದಲ್ಲಿ ರಾಷ್ಟ್ರ ವ್ಯಾಪಿ ಆಂದೋಲನ ನಡೆಸಿದ್ದು ಬುಧವಾರ ನಡೆಯುತ್ತಿರುವ ರಾಷ್ಟ್ರವ್ಯಾಪಿ ಇದು ಮೂರನೇ ಹಂತದ ಹೋರಾಟವಾಗಿದೆ ಎಂದು ತಿಳಿಸಿದ ಅವರು, ನಾವು ಡಿ.ಎನ್.ಎ ಆಧಾರಿತ ಎನ್.ಆರ್.ಸಿ ಯನ್ನು ಮಾಡಬೇಕೆಂದು ಆಗ್ರಹಿಸುತ್ತಿದ್ದೇವೆ. ದೇಶದ ಅಸಲಿ ಮೂಲ ನೀವಾಸಿಗಳು ಯಾರೆಂದು ಆಗ ತಿಳಿಬರುತ್ತದೆ. ಇದರಿಂದಾಗಿ ಇಡೀ ದೇಶದ ಮುಂದೆ ವಿದೇಶಿಯರು ಯಾರು ಎಂಬುದು ತಿಳಿದು ಬರುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶೌಕತ್ ಕತೀಬ್, ಯೂನೂಸ್ ರುಕ್ನುದ್ದೀನ್, ಮುನೀರ್ ಎಂ.ಎಚ್. ವಸೀಮ್ ಮನೆಗಾರ ಮುಂತಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಭಾರತ್ ಬಂದ್ ನಿಮಿತ್ತ ಪೋಸ್ಟರ್ ಬಿಡುಗಡೆ ಮಾಡಲಾಯಿತು.Conclusion:ಉದಯ ನಾಯ್ಕ ಭಟ್ಕಳ
Last Updated : Jan 28, 2020, 11:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.