ETV Bharat / state

ಒತ್ತಾಯಪೂರ್ವಕ ಬಂದ್ ಮಾಡಿಸಿದ್ರೆ ಕ್ರಮ: ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ

ಒತ್ತಾಯ ಪೂರ್ವಕ ಬಂದ್ ಮಾಡಿಸುವವರ ವಿರುದ್ಧ ಕ್ರಮ‌ ಕೈಗೊಳ್ಳಲು ಸುಪ್ರೀಂ ಕೋರ್ಟ್ ಆದೇಶ ಇದೆ‌. ಬಂದ್ ಮಾಡಿ ಜನಜೀವನ ಅಸ್ತವ್ಯಸ್ತ ಮಾಡುವುದು ಸರಿಯಲ್ಲ. ಈಗಲೂ ಕೂಡ ಬಂದ್ ವಾಪಸ್​ ಪಡೆಯಲು ಮನವಿ ಮಾಡುತ್ತೇನೆ. ಒಂದು ವೇಳೆ ಯಾರಾದರು ಒತ್ತಾಯದಿಂದ ಬಂದ್ ಮಾಡಿದ್ರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಬಸವರಾಜ್ ಬೊಮ್ಮಾಯಿ ಖಡಕ್​​ ಎಚ್ಚರಿಕೆ ನೀಡಿದ್ದಾರೆ.

author img

By

Published : Dec 4, 2020, 2:12 PM IST

Updated : Dec 4, 2020, 2:22 PM IST

basavaraj bommai
ಸಚಿವ ಬಸವರಾಜ್ ಬೊಮ್ಮಾಯಿ

ಕಾರವಾರ: ಮರಾಠ ಅಭಿವೃದ್ಧಿ ‌ನಿಗಮ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಾಳೆ‌ ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಆದ್ರೆ ಬಂದ್ ಮಾಡಿ ಜನಜೀವನ ಅಸ್ತವ್ಯಸ್ತ ಮಾಡುವುದು ಸರಿಯಲ್ಲ. ಯಾರಾದರು ಒತ್ತಾಯದಿಂದ ಬಂದ್ ಮಾಡಿಸಿದ್ರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಬಸವರಾಜ್ ಬೊಮ್ಮಾಯಿ ಖಡಕ್​​ ಎಚ್ಚರಿಕೆ ರವಾನಿಸಿದ್ದಾರೆ.

ರಾಜ್ಯ ಬಂದ್​ ಮಾಡುವವರಿಗೆ ಸಚಿವ ಬೊಮ್ಮಾಯಿ ಎಚ್ಚರಿಕೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒತ್ತಾಯಪೂರ್ವಕ ಬಂದ್ ಮಾಡುವವರ ಬಗ್ಗೆ ಕ್ರಮ‌ ಕೈಗೊಳ್ಳಲು ಸುಪ್ರೀಂ ಕೋರ್ಟ್ ಆದೇಶ ಇದೆ‌. ಬಂದ್ ಮಾಡಿ ಜನಜೀವನ ಅಸ್ತವ್ಯಸ್ತ ಮಾಡುವುದು ಸರಿಯಲ್ಲ. ಇದರಿಂದ ವ್ಯಾಪಾರ-ವಹಿವಾಟು, ಅನಾರೋಗ್ಯ ಪೀಡಿತರಿಗೆ ಸಾಕಷ್ಟು ಸಮಸ್ಯೆಯಾಗಲಿದೆ. ಈಗಲೂ ಕೂಡ ಬಂದ್ ವಾಪಸ್​ ಪಡೆಯಲು ಮನವಿ ಮಾಡುತ್ತೇನೆ ಎಂದರು.

ಪ್ರತಿಭಟನೆ ಮಾಡಲು ಹಲವು ರೀತಿಯಲ್ಲಿ ಅವಕಾಶಗಳಿವೆ. ಬಂದ್ ವೇಳೆ ಸರ್ಕಾರಿ ಕಚೇರಿ, ಬಸ್ ಓಡಾಟ, ಎಂದಿನಂತೆ ಇರುತ್ತದೆ. ಹಾಗಾಗಿ ಒತ್ತಾಯದಿಂದ ಬಂದ್ ಮಾಡಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸುದ್ದಿಯನ್ನೂ ಓದಿ: ಬುರೆವಿ ಚಂಡಮಾರುತ ಎಫೆಕ್ಟ್.. ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಹೊಸ ವರ್ಷಾಚರಣೆ ಸಲುವಾಗಿ ಈಗಾಗಲೇ ಹಲವು ಸಲಹೆ ಸೂಚನೆಗಳು ಬಂದಿವೆ. ಮುಖ್ಯಂಮಂತ್ರಿಗಳು ಎರಡು ದಿನದಲ್ಲಿ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು. ವಿಧಾನ ಪರಿಷತ್​ ಸದಸ್ಯ ಹೆಚ್​ ವಿಶ್ವನಾಥ್​​ ಅಸಮಧಾನ ಹೊರ ಹಾಕುತ್ತಿರುವ ಬಗ್ಗೆ ಕೇಳಿದಾಗ, ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ಕಾರವಾರ: ಮರಾಠ ಅಭಿವೃದ್ಧಿ ‌ನಿಗಮ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಾಳೆ‌ ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಆದ್ರೆ ಬಂದ್ ಮಾಡಿ ಜನಜೀವನ ಅಸ್ತವ್ಯಸ್ತ ಮಾಡುವುದು ಸರಿಯಲ್ಲ. ಯಾರಾದರು ಒತ್ತಾಯದಿಂದ ಬಂದ್ ಮಾಡಿಸಿದ್ರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಬಸವರಾಜ್ ಬೊಮ್ಮಾಯಿ ಖಡಕ್​​ ಎಚ್ಚರಿಕೆ ರವಾನಿಸಿದ್ದಾರೆ.

ರಾಜ್ಯ ಬಂದ್​ ಮಾಡುವವರಿಗೆ ಸಚಿವ ಬೊಮ್ಮಾಯಿ ಎಚ್ಚರಿಕೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒತ್ತಾಯಪೂರ್ವಕ ಬಂದ್ ಮಾಡುವವರ ಬಗ್ಗೆ ಕ್ರಮ‌ ಕೈಗೊಳ್ಳಲು ಸುಪ್ರೀಂ ಕೋರ್ಟ್ ಆದೇಶ ಇದೆ‌. ಬಂದ್ ಮಾಡಿ ಜನಜೀವನ ಅಸ್ತವ್ಯಸ್ತ ಮಾಡುವುದು ಸರಿಯಲ್ಲ. ಇದರಿಂದ ವ್ಯಾಪಾರ-ವಹಿವಾಟು, ಅನಾರೋಗ್ಯ ಪೀಡಿತರಿಗೆ ಸಾಕಷ್ಟು ಸಮಸ್ಯೆಯಾಗಲಿದೆ. ಈಗಲೂ ಕೂಡ ಬಂದ್ ವಾಪಸ್​ ಪಡೆಯಲು ಮನವಿ ಮಾಡುತ್ತೇನೆ ಎಂದರು.

ಪ್ರತಿಭಟನೆ ಮಾಡಲು ಹಲವು ರೀತಿಯಲ್ಲಿ ಅವಕಾಶಗಳಿವೆ. ಬಂದ್ ವೇಳೆ ಸರ್ಕಾರಿ ಕಚೇರಿ, ಬಸ್ ಓಡಾಟ, ಎಂದಿನಂತೆ ಇರುತ್ತದೆ. ಹಾಗಾಗಿ ಒತ್ತಾಯದಿಂದ ಬಂದ್ ಮಾಡಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸುದ್ದಿಯನ್ನೂ ಓದಿ: ಬುರೆವಿ ಚಂಡಮಾರುತ ಎಫೆಕ್ಟ್.. ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಹೊಸ ವರ್ಷಾಚರಣೆ ಸಲುವಾಗಿ ಈಗಾಗಲೇ ಹಲವು ಸಲಹೆ ಸೂಚನೆಗಳು ಬಂದಿವೆ. ಮುಖ್ಯಂಮಂತ್ರಿಗಳು ಎರಡು ದಿನದಲ್ಲಿ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು. ವಿಧಾನ ಪರಿಷತ್​ ಸದಸ್ಯ ಹೆಚ್​ ವಿಶ್ವನಾಥ್​​ ಅಸಮಧಾನ ಹೊರ ಹಾಕುತ್ತಿರುವ ಬಗ್ಗೆ ಕೇಳಿದಾಗ, ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

Last Updated : Dec 4, 2020, 2:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.