ಕಾರವಾರ: ಪ್ರವಾಹದಿಂದ ದೊಡ್ಡ ಪ್ರಮಾಣದಲ್ಲಿ ಹಾನಿಗೊಳಗಾದ ಉತ್ತರಕನ್ನಡ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಪ್ರವಾಸ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ಅವರು ಪರಿಶೀಲನೆ ನಡೆಸುವರು.
![Basavaraja-Bommai-tour-to-uttarakannada-for-flood-inspection](https://etvbharatimages.akamaized.net/etvbharat/prod-images/kn-bng-11-cm-tour-script-7208080_28072021183447_2807f_1627477487_828.jpg)
ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದು 10-45 ಕ್ಕೆ ಯಲ್ಲಾಪುರ ಕಡೆ ರಸ್ತೆ ಮೂಲಕ ಪ್ರಯಾಣ ಬೆಳೆಸಲಿದ್ದಾರೆ. ಬಳಿಕ ಪ್ರವಾಹದಿಂದ ಹಾನಿಗೊಳಗಾದ ಯಲ್ಲಾಪುರ, ಅಂಕೋಲಾ, ಕಾರವಾರ ಭಾಗದಲ್ಲಿ ಪರಿಶೀಲನೆ ನಡೆಸಿ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.