ETV Bharat / state

5 ಕೋಟಿ ನಿವ್ವಳ ಲಾಭ ಗಳಿಸಿದ ಭಟ್ಕಳ ಅರ್ಬನ್‍ಕೋ-ಅಪರೇಟಿವ್ ಬ್ಯಾಂಕ್​ - ಭಟ್ಕಳ ನ್ಯೂಸ್

ಮಾರ್ಚ್​ 2019 ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ನಮ್ಮ ಬ್ಯಾಂಕು ರೂ.5 ಕೋಟಿ 7 ಲಕ್ಷ ನಿರ್ವಹಣಾ ಲಾಭಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರು ಮಾಹಿತಿ ನೀಡಿದರು.

ಭಟ್ಕಳ ಅರ್ಬನ್‍ಕೋ-ಅಪರೇಟಿವ್ ಬ್ಯಾಂಕ್
author img

By

Published : Sep 22, 2019, 3:16 PM IST

ಕಾರವಾರ: ರಾಜ್ಯದ ಪ್ರತಿಷ್ಠಿತ ಅರ್ಬನ್‍ಕೋ-ಅಪರೇಟಿವ್ ಬ್ಯಾಂಕುಗಳಲ್ಲಿ ಒಂದಾದ ಭಟ್ಕಳ ಅರ್ಬನ್‍ಕೋ-ಅಪರೇಟಿವ್ ಬ್ಯಾಂಕಿನ 55ನೇ ವಾರ್ಷಿಕ ಸರ್ವ ಸಾಧಾರಣಾ ಸಭೆಯು ರಾಮನಾಥ ಸಭಾ ಭವನದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಅಬ್ದುಲ್ ಮಜೀದ್ ಚೌಗುಲೆ ಬ್ಯಾಂಕಿನ ಪ್ರಗತಿಯ ವರದಿಯನ್ನು ಮಂಡಿಸಿ, ಮಾರ್ಚ್​ 2019 ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ನಮ್ಮ ಬ್ಯಾಂಕು ರೂ. 5 ಕೋಟಿ 7 ಲಕ್ಷ ನಿರ್ವಹಣಾ ಲಾಭಗಳಿಸಿದೆ. ರೂ.1 ಕೋಟಿ 47 ಲಕ್ಷ ಆದಾಯಕರ ಪಾವತಿಯ ನಂತರ ವರ್ಷಾಂತ್ಯಕ್ಕೆ ಬ್ಯಾಂಕು ರೂ. 3 ಕೋಟಿ 61 ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ ಎಂದು ಮಾಹಿತಿ ನೀಡಿದರು.

55ನೇ ವಾರ್ಷಿಕ ಸರ್ವಸಾಧಾರಣಾ ಸಭೆ

ಬ್ಯಾಂಕಿನ ಸಹಾಯಕ ಪ್ರಧಾನ ಕಾರ್ಯನಿರ್ವಾಹಕ ಶಂಭು ಎನ್. ಹೆಗಡೆ ಕಳೆದ ಸಾಲಿನ ವಾರ್ಷಿಕ ಮಹಾಸಭೆಯ ನಡಾವಳಿಗಳನ್ನು ಓದಿದರು. ಬ್ಯಾಂಕಿನ ಆಡಳಿತ ಮಂಡಳಿಯ ಉಪಾಧ್ಯಕ್ಷರು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

ಕಾರವಾರ: ರಾಜ್ಯದ ಪ್ರತಿಷ್ಠಿತ ಅರ್ಬನ್‍ಕೋ-ಅಪರೇಟಿವ್ ಬ್ಯಾಂಕುಗಳಲ್ಲಿ ಒಂದಾದ ಭಟ್ಕಳ ಅರ್ಬನ್‍ಕೋ-ಅಪರೇಟಿವ್ ಬ್ಯಾಂಕಿನ 55ನೇ ವಾರ್ಷಿಕ ಸರ್ವ ಸಾಧಾರಣಾ ಸಭೆಯು ರಾಮನಾಥ ಸಭಾ ಭವನದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಅಬ್ದುಲ್ ಮಜೀದ್ ಚೌಗುಲೆ ಬ್ಯಾಂಕಿನ ಪ್ರಗತಿಯ ವರದಿಯನ್ನು ಮಂಡಿಸಿ, ಮಾರ್ಚ್​ 2019 ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ನಮ್ಮ ಬ್ಯಾಂಕು ರೂ. 5 ಕೋಟಿ 7 ಲಕ್ಷ ನಿರ್ವಹಣಾ ಲಾಭಗಳಿಸಿದೆ. ರೂ.1 ಕೋಟಿ 47 ಲಕ್ಷ ಆದಾಯಕರ ಪಾವತಿಯ ನಂತರ ವರ್ಷಾಂತ್ಯಕ್ಕೆ ಬ್ಯಾಂಕು ರೂ. 3 ಕೋಟಿ 61 ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ ಎಂದು ಮಾಹಿತಿ ನೀಡಿದರು.

55ನೇ ವಾರ್ಷಿಕ ಸರ್ವಸಾಧಾರಣಾ ಸಭೆ

ಬ್ಯಾಂಕಿನ ಸಹಾಯಕ ಪ್ರಧಾನ ಕಾರ್ಯನಿರ್ವಾಹಕ ಶಂಭು ಎನ್. ಹೆಗಡೆ ಕಳೆದ ಸಾಲಿನ ವಾರ್ಷಿಕ ಮಹಾಸಭೆಯ ನಡಾವಳಿಗಳನ್ನು ಓದಿದರು. ಬ್ಯಾಂಕಿನ ಆಡಳಿತ ಮಂಡಳಿಯ ಉಪಾಧ್ಯಕ್ಷರು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

Intro:ಭಟ್ಕಳ:ರಾಜ್ಯದ ಪ್ರತಿಷ್ಠಿತ ಅರ್ಬನ್‍ಕೋ-ಅಪರೇಟಿವ್ ಬ್ಯಾಂಕುಗಳಲ್ಲಿ ಒಂದಾದ ಭಟ್ಕಳ ಅರ್ಬನ್‍ಕೋ-ಅಪರೇಟಿವ್ ಬ್ಯಾಂಕಿನ 55ನೇ ವಾರ್ಷಿಕ ಸರ್ವಸಾಧಾರಣಾ ಸಭೆಯು ಭಟಕಳದ ನ್ಯೂಇಂಗ್ಲೀಷ್ ಶಾಲೆಯ ಕಮಲಾವತಿ ರಾಮನಾಥ ಸಭಾ ಭವನದಲ್ಲಿ ನಡೆಯಿತು.Body:ಭಟ್ಕಳ:ರಾಜ್ಯದ ಪ್ರತಿಷ್ಠಿತ ಅರ್ಬನ್‍ಕೋ-ಅಪರೇಟಿವ್ ಬ್ಯಾಂಕುಗಳಲ್ಲಿ ಒಂದಾದ ಭಟ್ಕಳ ಅರ್ಬನ್‍ಕೋ-ಅಪರೇಟಿವ್ ಬ್ಯಾಂಕಿನ 55ನೇ ವಾರ್ಷಿಕ ಸರ್ವಸಾಧಾರಣಾ ಸಭೆಯು ಭಟಕಳದ ನ್ಯೂಇಂಗ್ಲೀಷ್ ಶಾಲೆಯ ಕಮಲಾವತಿ ರಾಮನಾಥ ಸಭಾ ಭವನದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಅಬ್ದುಲ್ ಮಜೀದ್ ಚೌಗುಲೆ ಬ್ಯಾಂಕಿನ ಪ್ರಗತಿಯ ವರದಿಯನ್ನು ಮಂಡಿಸಿ, ಮಾರ್ಚ 2019 ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ನಮ್ಮ ಬ್ಯಾಂಕು ರೂ.5ಕೋಟಿ7 ಲಕ್ಷ ನಿರ್ವಹಣಾ ಲಾಭಗಳಿಸಿದೆ. ರೂ.1ಕೋಟಿ47 ಲಕ್ಷ ಆದಾಯಕರ ಪಾವತಿಯ ನಂತರ ವರ್ಷಾಂತ್ಯಕ್ಕೆ ಬ್ಯಾಂಕು ರೂ.3 ಕೋಟಿ61 ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ. 2018-19ನೇ ಸಾಲಿನಲ್ಲಿ ಬ್ಯಾಂಕಿನ ಷೇರು ಬಂಡವಾಳವು ರೂ.13ಕೋಟಿ81 ಲಕ್ಷಇದ್ದು, ಸದಸ್ಯರ ಸಂಖ್ಯೆಯು 25183ರಷ್ಟಾಗಿದೆ. ಬ್ಯಾಂಕಿನ ಠೇವಣಿ ಸಂಗ್ರಹವು ರೂ.464ಕೋಟಿ ತಲುಪಿದ್ದು, ಸಾಲ ಮುಂಗಡವು ರೂ.240ಕೋಟಿಯಷ್ಟಾಗಿದೆ. ಬ್ಯಾಂಕಿನ ಒಟ್ಟೂ ಅನುತ್ಪಾದಕ ಆಸ್ತಿಯ ಪ್ರಮಾಣವು 5.66ಆಗಿದೆ. ಬ್ಯಾಂಕಿನ ಒಟ್ಟೂ ಗುಂತಾವಣಿಯು ರೂ.215ಕೋಟಿ ಆಗಿದ್ದು, ವಷಾಂತ್ಯಕ್ಕೆ ಬ್ಯಾಂಕಿನ ಕಾಯ್ದಿಟ್ಟ ನಿಧಿಯು ರೂ.51ಕೋಟಿ ಯಷ್ಟಾಗಿದೆ. ಬ್ಯಾಂಕಿನ ದುಡಿಯುವ ಬಂಡವಾಳವು ರೂ.529 ಕೋಟಿ 14 ಲಕ್ಷವಾಗಿದ್ದು, ಬ್ಯಾಂಕಿನ ಒಟ್ಟೂ ವ್ಯವಹಾರವು ವರ್ಷಾಂತ್ಯಕ್ಕೆ ರೂ.705ಕೋಟಿಯಷ್ಟಾಗಿದೆ. 2018-19ನೇ ಸಾಲಿನಲ್ಲಿ ಬ್ಯಾಂಕು ಸದಸ್ಯರಿಗೆ ಶೇಕಡಾ 12ಡಿವಿಡೆಂಡ್‍ನ್ನು ಘೋಷಿಸಿದೆ ಎಂದು ಹೇಳಿದರು. ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಬ್ಯಾಂಕಿನ ಪ್ರಧಾನ ಕಾರ್ಯನಿರ್ವಾಹಕ ಸುಭಾಷ ಎಮ್. ಶೆಟ್ಟಿ, ಬ್ಯಾಂಕಿನ ಗ್ರಾಹಕರಿಗೆ ಹೆಚ್ಚಿನ ಸೇವೆಯನ್ನು ನೀಡುವ ಅಭಿಲಾಷೆಯಿಂದ ಬ್ಯಾಂಕು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದು, ವಿಭಿನ್ನ ರೀತಿಯ ಸೇವೆಗಳನ್ನು ನಮ್ಮ ಗ್ರಾಹಕರು ಪಡೆಯುತ್ತಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು. ಬ್ಯಾಂಕಿನ ಮುಖ್ಯ ಶಾಖೆಯಲ್ಲಿ ರಿಸೈಕ್ಲರ್ ಮೆಶಿನ್‍ನನ್ನು ಹೊಸದಾಗಿ ಅಳವಡಿಸಿದ್ದು, ಈ ಮೆಶಿನ್ ಮೂಲಕ ಗ್ರಾಹಕರು ಹಣವನ್ನು ಪಡೆಯುವುದಲ್ಲದೇ, ಹಣವನ್ನು ತಮ್ಮ ಖಾತೆಗೆ ತಾವೇ ಜಮಾ ಮಾಡುವ ಸೌಲಭ್ಯವೂ ಸಹ ಇದರಲ್ಲಿದೆ ಎಂದು ಮಾಹಿತಿಯನ್ನು ನೀಡಿದರು. .

ಬ್ಯಾಂಕಿನ ಸಹಾಯಕ ಪ್ರಧಾನ ಕಾರ್ಯನಿರ್ವಾಹಕ ಶಂಭು ಎನ್. ಹೆಗಡೆ ಕಳೆದ ಸಾಲಿನ ವಾರ್ಷಿಕ ಮಹಾಸಭೆಯ ನಡವಳಿಗಳನ್ನು ಓದಿದರು. ಬ್ಯಾಂಕಿನ ಆಡಳಿತ ಮಂಡಳಿಯ ಉಪಾಧ್ಯಕ್ಷರು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.ಬ್ಯಾಂಕಿನಆಡಳಿತ ಮಂಡಳಿಯ ನಿರ್ದೇಶಕ ಶ್ರೀಧರ ನಾಯ್ಕ ವಂದಿಸಿದರು.
Conclusion:ಉದಯ ನಾಯ್ಕ ಭಟ್ಕಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.