ETV Bharat / state

ಶಾಸಕ ಶಿವರಾಮ ಹೆಬ್ಬಾರ್ ರಾಜೀನಾಮೆ: ಉ.ಕ ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ತಲ್ಲಣ

ಉತ್ತರ ಕನ್ನಡ ಜಿಲ್ಲೆಯಲ್ಲಿನ ಇಬ್ಬರು ಕಾಂಗ್ರೆಸ್ ಶಾಸಕರಲ್ಲಿ ಒಬ್ಬರು ರಾಜೀನಾಮೆ ನೀಡಿದ್ದಾರೆ. ಇದು ಜಿಲ್ಲಾ ಕಾಂಗ್ರೆಸ್​ಗೆ ದಿಗಿಲು ಬಡಿಸಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

author img

By

Published : Jul 9, 2019, 6:16 AM IST

ಕಾಂಗ್ರೆಸ್​ ಅಧಃಪತನ

ಶಿರಸಿ: ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ್ ರಾಜೀನಾಮೆ ನೀಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿದ್ದ ಇಬ್ಬರು ಕೈ ಶಾಸಕರ ಸಂಖ್ಯೆ ಒಂದಕ್ಕೆ ಇಳಿದಿದೆ. ಪರಿಣಾಮ ಜಿಲ್ಲಾ ಕಾಂಗ್ರೆಸ್​ನಲ್ಲಿ ತಲ್ಲಣ ಉಂಟಾಗಿದೆ ಎಂಬ ಮಾತುಗಳು ಜಿಲ್ಲೆಯಾದ್ಯಂತ ಕೇಳಿ ಬರುತ್ತಿವೆ.

ರಾಜ್ಯದಲ್ಲಿ ಹಿಂದೆಂದೂ ಕಾಣದ ರೀತಿಯ ನಾಟಕೀಯ ಬೆಳವಣಿಗೆಯಲ್ಲಿ 14 ಜನ ಮೈತ್ರಿ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಅದರಲ್ಲಿ ಜಿಲ್ಲೆಯ ಪ್ರಭಾವಿ ಶಾಸಕ ಶಿವರಾಮ ಹೆಬ್ಬಾರ್ ಇದ್ದಾರೆ. ಅವರ ರಾಜೀನಾಮೆಯಿಂದ ಕಾಂಗ್ರೆಸ್ ಭದ್ರ ಕೋಟೆಯಾಗಿದ್ದ ಉತ್ತರ ಜಿಲ್ಲೆಯಲ್ಲಿ ಕೈ ಶಾಸಕರಾಗಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಒಬ್ಬರೇ ಉಳಿದುಕೊಂಡಂತಾಗಿದೆ. ಇದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ತಲ್ಲಣ

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ಮಾಡುತ್ತಿದೆ. ಆಪರೇಶನ್ ಕಮಲ ಮಾಡಲು ಹೋಗಿ ವಿಫಲವಾಗಿದ್ದೂ ಇದೆ. ಆ ವೇಳೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರ ಹೆಸರು ಪ್ರಸ್ತಾಪವಾಗಿತ್ತು. ಆಗ ಅಲ್ಲಗಳೆದಿದ್ದ ಅವರು ಪಕ್ಷವನ್ನು ಯಾವುದೇ ಕಾರಣಕ್ಕೂ ತೊರೆಯುವುದಿಲ್ಲ ಎಂದಿದ್ದರು. ಆದರೆ ಶನಿವಾರ ಉಳಿದ ಶಾಸಕರೊಂದಿಗೆ ತೆರಳಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಇದರಿಂದ ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ತಲ್ಲಣ ಉಂಟಾಗಿದ್ದು, ಇರುವ ಎರಡು ಶಾಸಕರಲ್ಲಿ ಒಬ್ಬರನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ.

ಶಿರಸಿ: ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ್ ರಾಜೀನಾಮೆ ನೀಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿದ್ದ ಇಬ್ಬರು ಕೈ ಶಾಸಕರ ಸಂಖ್ಯೆ ಒಂದಕ್ಕೆ ಇಳಿದಿದೆ. ಪರಿಣಾಮ ಜಿಲ್ಲಾ ಕಾಂಗ್ರೆಸ್​ನಲ್ಲಿ ತಲ್ಲಣ ಉಂಟಾಗಿದೆ ಎಂಬ ಮಾತುಗಳು ಜಿಲ್ಲೆಯಾದ್ಯಂತ ಕೇಳಿ ಬರುತ್ತಿವೆ.

ರಾಜ್ಯದಲ್ಲಿ ಹಿಂದೆಂದೂ ಕಾಣದ ರೀತಿಯ ನಾಟಕೀಯ ಬೆಳವಣಿಗೆಯಲ್ಲಿ 14 ಜನ ಮೈತ್ರಿ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಅದರಲ್ಲಿ ಜಿಲ್ಲೆಯ ಪ್ರಭಾವಿ ಶಾಸಕ ಶಿವರಾಮ ಹೆಬ್ಬಾರ್ ಇದ್ದಾರೆ. ಅವರ ರಾಜೀನಾಮೆಯಿಂದ ಕಾಂಗ್ರೆಸ್ ಭದ್ರ ಕೋಟೆಯಾಗಿದ್ದ ಉತ್ತರ ಜಿಲ್ಲೆಯಲ್ಲಿ ಕೈ ಶಾಸಕರಾಗಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಒಬ್ಬರೇ ಉಳಿದುಕೊಂಡಂತಾಗಿದೆ. ಇದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ತಲ್ಲಣ

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ಮಾಡುತ್ತಿದೆ. ಆಪರೇಶನ್ ಕಮಲ ಮಾಡಲು ಹೋಗಿ ವಿಫಲವಾಗಿದ್ದೂ ಇದೆ. ಆ ವೇಳೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರ ಹೆಸರು ಪ್ರಸ್ತಾಪವಾಗಿತ್ತು. ಆಗ ಅಲ್ಲಗಳೆದಿದ್ದ ಅವರು ಪಕ್ಷವನ್ನು ಯಾವುದೇ ಕಾರಣಕ್ಕೂ ತೊರೆಯುವುದಿಲ್ಲ ಎಂದಿದ್ದರು. ಆದರೆ ಶನಿವಾರ ಉಳಿದ ಶಾಸಕರೊಂದಿಗೆ ತೆರಳಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಇದರಿಂದ ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ತಲ್ಲಣ ಉಂಟಾಗಿದ್ದು, ಇರುವ ಎರಡು ಶಾಸಕರಲ್ಲಿ ಒಬ್ಬರನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ.

Intro:ಶಿರಸಿ :
ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ನಿಲ್ಲಿಸಲೂ ಆಗದೇ ಉತ್ತರ ಕನ್ನಡ ಜಿಲ್ಲೆ ಕಾಂಗ್ರೆಸ್ ಮುಕ್ತ ಜಿಲ್ಲೆಯಾಗಿದೆ ಎಂಬ ಹಣೆ ಪಟ್ಟಿ ಕಟ್ಟಿಕೊಂಡಿದ್ದ ಕೈ ಪಕ್ಷ ಈಗ ರಾಜ್ಯ ರಾಜಕಾರಣದಿಂದ ಜಿಲ್ಲೆಯಲ್ಲಿ ಸಂಪೂರ್ಣ ನಿರ್ನಾಮ ಆಗುವ ಸ್ಥಿತಿಗೆ ಬಂದು ತಲುಪಿದೆ. ಜಿಲ್ಲೆಯಲ್ಲಿ ಇರುವ ಎರಡು ಶಾಸಕರಲ್ಲಿ ಒಬ್ಬರು ರಾಜೀನಾಮೆ ನೀಡಿದ ಪರಿಣಾಮ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೊಮ್ಮೆ ರಾಜನಾಗಿ ಮೆರೆದಿದ್ದ ಕಾಂಗ್ರೆಸ್ ಈಗ ಅಧಃಪತನಕ್ಕೆ ಸಾಗಿದೆ ಎಂಬ ಮಾತುಗಳು ಜಿಲ್ಲೆಯಾದ್ಯಂತ ಕೇಳಿಬರುತ್ತಿದೆ.

ರಾಜ್ಯದಲ್ಲಿ ಹಿಂದೆಂದೂ ಕಾಣದ ರೀತಿಯ ನಾಟಕೀಯ ಬೆಳವಣಿಗೆಯಲ್ಲಿ ೧೪ ಜನ ಜೆಡಿಎಸ್, ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಅದರಲ್ಲಿ ಜಿಲ್ಲೆಯ ಪ್ರಭಾವಿ ಶಾಸಕ ಶಿವರಾಮ ಹೆಬ್ಬಾರ್ ಸಹ ಒಬ್ಬರಾಗಿದ್ದು, ಅವರ ರಾಜೀನಾಮೆಯಿಂದ ಕಾಂಗ್ರೆಸ್ ಭದ್ರ ಕೋಟೆಯಾಗಿದ್ದ ಉತ್ತರ ಜಿಲ್ಲೆಯಲ್ಲಿ ಕೇವಲ ಜಿಲ್ಲಾ ಉಸ್ತುವಾರಿ ಸಚಿವ, ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಒಬ್ಬರೇ ಉಳಿದುಕೊಂಡಂತಾಗಿದೆ. ಇದರಿಂದ ಕಳೆದ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಯನ್ನು ನಿಲ್ಲಿಸಲಾಗದೇ ನಗೆಪಾಟಲಿಗಿಡಾಗಿದ್ದ ಕಾಂಗ್ರೆಸ್ ಜಿಲ್ಲೆಯಲ್ಲಿ ತನ್ನ ಅಸ್ತಿತ್ವವನ್ನೇ ಕಾಪಾಡಿಕೊಳ್ಳಲಾಗದ ಸ್ಥಿತಿಗೆ ಬಂದಿದೆ ಎನ್ನುವುದು ಜನರ ಮಾತಾಗಿದೆ.

Body:ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ಮಾಡುತ್ತಿದೆ. ಆಪರೇಶಮ್ ಕಮಲ ಮಾಡಲು ಹೋಗಿ ವಿಫಲವಾಗಿದ್ದೂ ಇದೆ. ಆಗೆಲ್ಲಾ ಸಂದರ್ಭದಲ್ಲಿ ಯಲ್ಲಾಪುರ ಶಾಸಕ, ಮೂಲ ಬಿಜೆಪಿಗ ಶಿವರಾಮ ಹೆಬ್ಬಾರ್ ಅವರ ಹೆಸರು ಪ್ರಸ್ತಾಪವಾಗಿತ್ತು. ಆಗ ಅಲ್ಲಗಳೆದಿದ್ದ ಅವರು ಪಕ್ಷವನ್ನು ಯಾವುದೇ ಕಾರಣಕ್ಕೂ ತೊರೆಯುವುದಿಲ್ಲ ಎಂದಿದ್ದರು. ಆದರೆ ಶನಿವಾರ ಉಳಿದ ಶಾಸಕರೊಂದಿಗೆ ತೆರಳಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಇದರಿಂದ ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದ್ದು, ಇರುವ ಎರಡು ಶಾಸಕರಲ್ಲಿ ಒಬ್ಬರನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ.

ಜಿಲ್ಲೆಯ ಪ್ರಶ್ನಾತೀತ ನಾಯಕ ಆರ್.ವಿ.ದೇಶಪಾಂಡೆ ಕಾಂಗ್ರೆಸ್ ನಲ್ಲಿ ಹಲವಾರು ವರ್ಷಗಳಿಂದ ಇದ್ದು, ಅವರ ರಾಜಕೀಯ ಜೀವನ ಬಹುತೇಕ ಅಲ್ಲಿಯೇ ಮುಗಿಯುವ ಲಕ್ಷಣಗಳಿದೆ. ಈ ಅವಧಿ ಹೊರತು ಪಡಿಸಿ ಇನ್ನೊಂದು ಅವಧಿಗೆ ಸ್ಪರ್ಧಿಸಿದರೂ ನಂತರ ದಿನಗಳಲ್ಲಿ ಕಾಂಗ್ರೆಸ್ ಗೆ ನಾಯಕರಾರು ಎಂಬ ಪ್ರಶ್ನೆ ಎಲ್ಲಾ ಕಾರ್ಯಕರ್ತರು, ನಾಯರಲ್ಲಿದೆ. ದೇಶಪಾಂಡೆ ಮಗ ಪ್ರಶಾಂತ್ ರಾಜಕೀಯ ಪ್ರವೇಶಿಸಿದ್ದರೂ ಗೆದ್ದು ಬರುವ ವರ್ಚಸ್ಸನ್ನು ಹೊಂದಿಲ್ಲ. ಅಲ್ಲದೇ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ಗೂ ವಯಸ್ಸಾದ ಕಾರಣ ಅವರ ಮುಂದೇನು ಎಂಬ ಚಿಂತೆ ಒಂದು ಎಲ್ಲರಲ್ಲಿದೆ. ಇದರಿಂದ ಇದ್ದಿದ್ದ ಎರಡು ಶಾಸಕರಲ್ಲಿ ಒಂದನ್ನು ಕಳೆದುಕೊಂಡು ಪಕ್ಷ ಬೆಳೆಸುವುದು ಹೇಗೆ ಎಂಬ ಸ್ಥಿತಿ ಜಿಲ್ಲಾ ಕಾಂಗ್ರೆಸ್ ಗೆ ನಿರ್ಮಾಣವಾಗಿದೆ.

ಇನ್ನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಹೆಬ್ಬಾರ್ ಬಿಜೆಪಿ ಸೇರುತ್ತಾರೆ ಎಂಬ ಮಾತುಗಳು ಕೇಳಿಬಂದಿದೆ. ಬಿಜೆಪಿ ಸರ್ಕಾರ ರಚನೆ ಮಾಡಿದಲ್ಲಿ ಶಾಸಕ ಹೆಬ್ಬಾರ್ ಗೆ ಮಂತ್ರಿ ಸ್ಥಾನ ಸಿಗಲಿದ್ದು, ಬಿಜೆಪಿಯಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬಂದಿದೆ.‌ ಆದರೆ‌ ಶಾಸಕರ ನಡೆ ಏನು ಯಾವುದು ಎಂಬುದು ಮುಂದಿನ ನಾಲ್ಕಾರು ದಿನಗಳಲ್ಲಿ ತಿಳಿಯಲಿದೆ. ಆದರೆ ಶಾಸಕರ ರಾಜಿನಾಮೆ ಬೆಳಗಣಿಗೆಯಿಂದ ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಡುಗಿ ಹೋಗಿರುವುದಂತೂ ದಿಟವಾಗಿದೆ.
.........
ಸಂದೇಶ ಭಟ್ ಶಿರಸಿ.
Conclusion:null

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.