ETV Bharat / state

ಮೆಡಿಕಲ್ ಕಾಲೇಜಿನಲ್ಲಿ ಮುಗಿಯದ ಅವಾಂತರ: ಬೀದಿಗೆ ಬೀಳುವ ಸ್ಥಿತಿಯಲ್ಲಿ ಕಾರ್ಮಿಕರ ಬದುಕು

author img

By

Published : Dec 28, 2019, 12:40 PM IST

Updated : Dec 28, 2019, 3:01 PM IST

ಕಾರವಾರದ ಈ ಹಿಂದಿನ ಜಿಲ್ಲಾಸ್ಪತ್ರೆ ಹಾಗೂ ಇದೀಗ ಮೆಡಿಕಲ್ ಕಾಲೇಜಿನಲ್ಲಿ ಹತ್ತಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಗುತ್ತಿಗೆ ಪಡೆದ ಕಂಪನಿಗಳು ಏಕಾಏಕಿ ಕೆಲಸಕ್ಕೆ ಬರದಂತೆ ಸೂಚಿಸಿವೆ. ಇದರಿಂದಾಗಿ ಕಾರ್ಮಿಕರು ಕಂಗಾಲಾಗಿದ್ದಾರೆ.

contract workers job losses in medical college at Karwar
ಬೀದಿಗೆ ಬೀಳುವ ಸ್ಥಿತಿಯಲ್ಲಿ ಕಾರ್ಮಿಕರ ಬದುಕು

ಕಾರವಾರ: ಅವರೆಲ್ಲರೂ ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ಕಳೆದ ಹತ್ತಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರು. ಕೊಡುವುದು ಪುಡಿಗಾಸದರೂ ಅದನ್ನೇ ನಂಬಿ ಜೀವನ ನಡೆಸುತ್ತಿದ್ದ ಅವರಿಗೆ ಇದೀಗ ಗುತ್ತಿಗೆ ಪಡೆದ ಕಂಪನಿಗಳು ಕೆಲಸದಿಂದ ತೆಗೆಯಲು ಮುಂದಾಗಿದ್ದು, ಬದುಕು ಬೀದಿಗೆ ಬೀಳುವ ಸ್ಥಿತಿ ಬಂದೊದಗಿದೆ.

ಸದಾ ಒಂದಲ್ಲೊಂದು ರೀತಿಯಲ್ಲಿ ಸುದ್ದಿಯಲ್ಲಿರುವ ಕಾರವಾರ ಮೆಡಿಕಲ್ ಕಾಲೇಜು ಇದೀಗ ಮತ್ತೆ ಸುದ್ದಿಯಾಗಿದೆ. ಈ ಹಿಂದಿನ ಜಿಲ್ಲಾಸ್ಪತ್ರೆ ಹಾಗೂ ಇದೀಗ ಮೆಡಿಕಲ್ ಕಾಲೇಜಿನಲ್ಲಿ ಹತ್ತಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಗುತ್ತಿಗೆ ಪಡೆದ ಕಂಪನಿಗಳು ಏಕಾಏಕಿ ಕೆಲಸಕ್ಕೆ ಬರದಂತೆ ಸೂಚಿಸಿವೆ. ಇನ್ನು ಕೆಲವರಿಗೆ 3 ತಿಂಗಳ ಹಿಂದೆಯೇ ಕೆಲಸದಿಂದ ತೆಗೆದು ಹಾಕಿರುವುದಾಗಿ ಇದೀಗ ಸೂಚಿಸಿವೆ. ಇದರಿಂದಾಗಿ ಗುತ್ತಿಗೆ ನೌಕರರು ಕಂಗಾಲಾಗಿದ್ದಾರೆ.

ಬೀದಿಗೆ ಬೀಳುವ ಸ್ಥಿತಿಯಲ್ಲಿ ಕಾರ್ಮಿಕರ ಬದುಕು

ಮೆಡಿಕಲ್ ಕಾಲೇಜು ಅಧೀನಕ್ಕೆ ಒಳಪಟ್ಟ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಲು 3 ಕಂಪನಿಗಳು 200ಕ್ಕೂ ಅಧಿಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗಿತ್ತು. ಕ್ಲೀನಿಂಗ್, ಕಂಪ್ಯೂಟರ್ ಆಪರೇಟರ್, ಲ್ಯಾಬ್ ಟೆಕ್ನಿಷಿಯನ್, ಗಾರ್ಡ್ ಸೇರಿದಂತೆ ಇನ್ನಿತರ ಕೆಲಸ ನಿರ್ವಹಿಸುತ್ತಿರುವ ಇಷ್ಟೂ ಮಂದಿಗೂ ಪಿಎಫ್, ಇಎಸ್ಐ ಸೌಲಭ್ಯಗಳಿಲ್ಲ. ವೇತನ ಕೇವಲ 8 ಸಾವಿರ ರೂಪಾಯಿ. ಈ ಪರಿಸ್ಥಿತಿಯಲ್ಲಿ ಇದೀಗ ನಮ್ಮನ್ನು ಏಕಾಏಕಿ ಕೆಲಸದಿಂದ ತೆಗೆಯಲು ಮುಂದಾಗಿದ್ದಾರೆ. ಇದನ್ನು ಒಪ್ಪುವುದಿಲ್ಲ ಎಂದು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಸಮಸ್ಯೆ ಆಲಿಸಿ ಗುತ್ತಿಗೆ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು. ಬಳಿಕ ಮೆಡಿಕಲ್ ಕಾಲೇಜಿನ ನಿರ್ದೇಶಕ ಶಿವಾನಂದ ದೊಡ್ಮನಿ ಅವರು ಗುತ್ತಿಗೆ ಕಾರ್ಮಿಕರರೊಂದಿಗೆ ಸಭೆ ನಡೆಸಿದರು. ಕೆಲವರನ್ನು ಅಸಭ್ಯವಾಗಿ ವರ್ತಿಸಿದ ಹಾಗೂ ಸರಿಯಾಗಿ ಕೆಲಸ ಮಾಡದ ಹಿನ್ನೆಲೆಯಲ್ಲಿ ತೆಗೆದು ಹಾಕಲಾಗುತ್ತಿದೆ. ಈವರೆಗೆ ನೀಡಬೇಕಾಗಿರುವ ಬಾಕಿ ವೇತನವನ್ನು ನೀಡಲಾಗುವುದು. ಬಳಿಕ ಆಯಾ ವಿಭಾಗದ ಮುಖ್ಯಸ್ಥರು ಸೂಚಿಸಿದವರನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳುತ್ತೇವೆ. ಉಳಿದವರನ್ನು ಜನವರಿ 1ರಿಂದ ಕೆಲಸದಿಂದ ತೆಗೆದುಹಾಕಲಾಗುತ್ತದೆ ಎಂದಿದ್ದಾರೆ.

ಮೆಡಿಕಲ್ ಕಾಲೇಜು ನಿರ್ದೇಶಕ ಹಾಗೂ ಜಿಲ್ಲಾಸ್ಪತ್ರೆ ಸರ್ಜನ್ ನಡುವಿನ ಒಳಜಗಳದಿಂದಾಗಿ ಹೊಟ್ಟೆಪಾಡಿಗಾಗಿ ದುಡಿಯುತ್ತಿದ್ದ ಈ ಸಿಬ್ಬಂದಿಯನ್ನು ಬಲಿ ಕೊಡಲಾಗುತ್ತಿದೆ. ಇದೀಗ ನಿರ್ದೇಶಕರು ತಮ್ಮ ಪರವಾಗಿದ್ದವರನ್ನು ಉಳಿಸಿಕೊಂಡು, ಉಳಿದವರನ್ನು ತೆಗೆದುಹಾಕಲು ಮುಂದಾಗಿರುವ ಬಗ್ಗೆ ಗಂಭೀರ ಆರೋಪ ಗುತ್ತಿಗೆ ಕಾರ್ಮಿಕರಿಂದ ಕೇಳಿಬಂದಿದೆ. ಹೀಗಾದರೆ ಬೀದಿಗೆ ಬರುತ್ತೇವೆ. ಒಂದೊಮ್ಮೆ ಇಂತಹ‌ ಸ್ಥಿತಿ ಬಂದರೆ ಎಲ್ಲರೂ ಸೇರಿ ಉಗ್ರ ಹೋರಾಟ ನಡೆಸುವುದಾಗಿ ಗುತ್ತಿಗೆ ಕಾರ್ಮಿಕರು ಎಚ್ಚರಿಸಿದ್ದಾರೆ.

ಕಾರವಾರ: ಅವರೆಲ್ಲರೂ ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ಕಳೆದ ಹತ್ತಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರು. ಕೊಡುವುದು ಪುಡಿಗಾಸದರೂ ಅದನ್ನೇ ನಂಬಿ ಜೀವನ ನಡೆಸುತ್ತಿದ್ದ ಅವರಿಗೆ ಇದೀಗ ಗುತ್ತಿಗೆ ಪಡೆದ ಕಂಪನಿಗಳು ಕೆಲಸದಿಂದ ತೆಗೆಯಲು ಮುಂದಾಗಿದ್ದು, ಬದುಕು ಬೀದಿಗೆ ಬೀಳುವ ಸ್ಥಿತಿ ಬಂದೊದಗಿದೆ.

ಸದಾ ಒಂದಲ್ಲೊಂದು ರೀತಿಯಲ್ಲಿ ಸುದ್ದಿಯಲ್ಲಿರುವ ಕಾರವಾರ ಮೆಡಿಕಲ್ ಕಾಲೇಜು ಇದೀಗ ಮತ್ತೆ ಸುದ್ದಿಯಾಗಿದೆ. ಈ ಹಿಂದಿನ ಜಿಲ್ಲಾಸ್ಪತ್ರೆ ಹಾಗೂ ಇದೀಗ ಮೆಡಿಕಲ್ ಕಾಲೇಜಿನಲ್ಲಿ ಹತ್ತಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಗುತ್ತಿಗೆ ಪಡೆದ ಕಂಪನಿಗಳು ಏಕಾಏಕಿ ಕೆಲಸಕ್ಕೆ ಬರದಂತೆ ಸೂಚಿಸಿವೆ. ಇನ್ನು ಕೆಲವರಿಗೆ 3 ತಿಂಗಳ ಹಿಂದೆಯೇ ಕೆಲಸದಿಂದ ತೆಗೆದು ಹಾಕಿರುವುದಾಗಿ ಇದೀಗ ಸೂಚಿಸಿವೆ. ಇದರಿಂದಾಗಿ ಗುತ್ತಿಗೆ ನೌಕರರು ಕಂಗಾಲಾಗಿದ್ದಾರೆ.

ಬೀದಿಗೆ ಬೀಳುವ ಸ್ಥಿತಿಯಲ್ಲಿ ಕಾರ್ಮಿಕರ ಬದುಕು

ಮೆಡಿಕಲ್ ಕಾಲೇಜು ಅಧೀನಕ್ಕೆ ಒಳಪಟ್ಟ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಲು 3 ಕಂಪನಿಗಳು 200ಕ್ಕೂ ಅಧಿಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗಿತ್ತು. ಕ್ಲೀನಿಂಗ್, ಕಂಪ್ಯೂಟರ್ ಆಪರೇಟರ್, ಲ್ಯಾಬ್ ಟೆಕ್ನಿಷಿಯನ್, ಗಾರ್ಡ್ ಸೇರಿದಂತೆ ಇನ್ನಿತರ ಕೆಲಸ ನಿರ್ವಹಿಸುತ್ತಿರುವ ಇಷ್ಟೂ ಮಂದಿಗೂ ಪಿಎಫ್, ಇಎಸ್ಐ ಸೌಲಭ್ಯಗಳಿಲ್ಲ. ವೇತನ ಕೇವಲ 8 ಸಾವಿರ ರೂಪಾಯಿ. ಈ ಪರಿಸ್ಥಿತಿಯಲ್ಲಿ ಇದೀಗ ನಮ್ಮನ್ನು ಏಕಾಏಕಿ ಕೆಲಸದಿಂದ ತೆಗೆಯಲು ಮುಂದಾಗಿದ್ದಾರೆ. ಇದನ್ನು ಒಪ್ಪುವುದಿಲ್ಲ ಎಂದು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಸಮಸ್ಯೆ ಆಲಿಸಿ ಗುತ್ತಿಗೆ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು. ಬಳಿಕ ಮೆಡಿಕಲ್ ಕಾಲೇಜಿನ ನಿರ್ದೇಶಕ ಶಿವಾನಂದ ದೊಡ್ಮನಿ ಅವರು ಗುತ್ತಿಗೆ ಕಾರ್ಮಿಕರರೊಂದಿಗೆ ಸಭೆ ನಡೆಸಿದರು. ಕೆಲವರನ್ನು ಅಸಭ್ಯವಾಗಿ ವರ್ತಿಸಿದ ಹಾಗೂ ಸರಿಯಾಗಿ ಕೆಲಸ ಮಾಡದ ಹಿನ್ನೆಲೆಯಲ್ಲಿ ತೆಗೆದು ಹಾಕಲಾಗುತ್ತಿದೆ. ಈವರೆಗೆ ನೀಡಬೇಕಾಗಿರುವ ಬಾಕಿ ವೇತನವನ್ನು ನೀಡಲಾಗುವುದು. ಬಳಿಕ ಆಯಾ ವಿಭಾಗದ ಮುಖ್ಯಸ್ಥರು ಸೂಚಿಸಿದವರನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳುತ್ತೇವೆ. ಉಳಿದವರನ್ನು ಜನವರಿ 1ರಿಂದ ಕೆಲಸದಿಂದ ತೆಗೆದುಹಾಕಲಾಗುತ್ತದೆ ಎಂದಿದ್ದಾರೆ.

ಮೆಡಿಕಲ್ ಕಾಲೇಜು ನಿರ್ದೇಶಕ ಹಾಗೂ ಜಿಲ್ಲಾಸ್ಪತ್ರೆ ಸರ್ಜನ್ ನಡುವಿನ ಒಳಜಗಳದಿಂದಾಗಿ ಹೊಟ್ಟೆಪಾಡಿಗಾಗಿ ದುಡಿಯುತ್ತಿದ್ದ ಈ ಸಿಬ್ಬಂದಿಯನ್ನು ಬಲಿ ಕೊಡಲಾಗುತ್ತಿದೆ. ಇದೀಗ ನಿರ್ದೇಶಕರು ತಮ್ಮ ಪರವಾಗಿದ್ದವರನ್ನು ಉಳಿಸಿಕೊಂಡು, ಉಳಿದವರನ್ನು ತೆಗೆದುಹಾಕಲು ಮುಂದಾಗಿರುವ ಬಗ್ಗೆ ಗಂಭೀರ ಆರೋಪ ಗುತ್ತಿಗೆ ಕಾರ್ಮಿಕರಿಂದ ಕೇಳಿಬಂದಿದೆ. ಹೀಗಾದರೆ ಬೀದಿಗೆ ಬರುತ್ತೇವೆ. ಒಂದೊಮ್ಮೆ ಇಂತಹ‌ ಸ್ಥಿತಿ ಬಂದರೆ ಎಲ್ಲರೂ ಸೇರಿ ಉಗ್ರ ಹೋರಾಟ ನಡೆಸುವುದಾಗಿ ಗುತ್ತಿಗೆ ಕಾರ್ಮಿಕರು ಎಚ್ಚರಿಸಿದ್ದಾರೆ.

Intro:Body:ಮೆಡಿಕಲ್ ಕಾಲೇಜಿನಲ್ಲಿ ಮುಗಿಯದ ಅವಾಂತರ... ಬೀದಿಗೆ ಬಿಳ್ಳುವ ಸ್ಥಿತಿಯಲ್ಲಿ ಗುತ್ತಿಗೆ ಕಾರ್ಮಿಕರು !

ಕಾರವಾರ: ಅವರೆಲ್ಲರೂ ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ಕಳೆದ ಹತ್ತಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರು. ಕೊಡುವುದು ಪುಡಿಗಾಸದರೂ ಅದನ್ನೆ ನಂಬಿ ಜೀವನ ನಡೆಸುತ್ತಿದ್ದವರಿಗೆ ಇದೀಗ ಗುತ್ತಿಗೆ ಪಡೆದ ಕಂಪನಿಗಳು ಕೆಲಸದಿಂದ ತೆಗೆಯಲು ಮುಂದಾಗಿದ್ದು, ಕಾರ್ಮಿಕರ ಬದುಕು ಬೀದಿಗೆ ಬಿಳ್ಳುವ ಸ್ಥಿತಿ ಬಂದೋದಗಿದೆ.
ಹೌದು, ಸದಾ ಒಂದಲ್ಲ ಒಂದು ಸುದ್ದಿಯಲ್ಲಿರುವ ಕಾರವಾರ ಮೆಡಿಕಲ್ ಕಾಲೇಜು ಇದೀಗ ಮತ್ತೆ ಸುದ್ದಿಯಾಗಿದೆ. ಈ ಹಿಂದಿನ ಜಿಲ್ಲಾಸ್ಪತ್ರೆ ಹಾಗೂ ಇದೀಗ ಮೆಡಿಕಲ್ ಕಾಲೇಜಿನಲ್ಲಿ ಕಳೆದ ಹತ್ತಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರನ್ನು ಗುತ್ತಿಗೆ ಪಡೆದ ಕಂಪನಿಗಳು ಏಕಾಏಕಿ ಇನ್ನು ಮುಂದೆ ಕೆಲಸಕ್ಕೆ ಬರದಂತೆ ಸೂಚಿಸಿವೆ. ಇನ್ನು ಕೆಲವರಿಗೆ ಮೂರು ತಿಂಗಳ ಹಿಂದೆಯೇ ಕೆಲಸಕ್ಕೆ ತೆಗೆದಿರುವುದಾಗಿ ಇದೀಗ ತಿಳಿಸಿದ್ದು, ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳು ಕಂಗಾಲಾಗಿದ್ದಾರೆ. ಈ ಕಾರಣದಿಂದ ಇಂದು ಕೆಲಸವನ್ನು ಸ್ಥಗಿಗೊಳಿಸಿ ಮೆಡಿಕಲ್ ಕಾಲೇಜಿಗೆ ಮುತ್ತಿಗೆ ಪ್ರತಿಭಟನೆ ನಡೆಸಿದರು.
ಮೆಡಿಕಲ್ ಕಾಲೇಜು ಅಧಿನಕ್ಕೊಳಪಟ್ಟಿರುವ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಲು ಮೂರು ಕಂಪನಿಗಳ ಮೂಲಕ ಸುಮಾರು ೨೦೦ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಕ್ಲೀನಿಂಗ್, ಕಂಪ್ಯೂಟರ್ ಆಪರೇಟರ್, ಲ್ಯಾಬ್ ಟೆಕ್ನಿಷಿಯನ್, ಗಾರ್ಡ್ ಸೇರಿದಂತೆ ಇನ್ನಿತರ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಆದರೆ ಯಾರೊಬ್ಬರಿಗೂ ಪಿಎಫ್ ಇಎಸ್ಐ ಸೌಲಭ್ಯಗಳು ಇಲ್ಲ. ಕೇವಲ ೮ ಸಾವಿರ ನೀಡುತ್ತಿದ್ದರು ಕೆಲಸ ಮಾಡುತ್ತಿದ್ದವರಿಗೆ ಇದೀಗ ಏಕಾಏಕಿ ತೆಗೆಯಲು ಮುಂದಾಗಿದ್ದಾರೆ. ಇದನ್ನು ಯಾವೊಬ್ಬ ನೌಕರರು ಕೂಡ ಒಪ್ಪುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೈಟ್ ೧
ವಿಲ್ಸನ್ ಫರ್ನಾಂಡೀಸ್, ಹೊರಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ( ಗೆರೆ ಗೆರೆ ಅಂಗಿ ಹಾಕಿದವರು)

ಇನ್ನು ಸ್ಥಳಕ್ಕಾಗಮಿಸಿದ ಪೊಲೀಸರು ಸಮಸ್ಯೆ ಆಲಿಸಿ ಗುತ್ತಿಗೆ ಕಂಪನಿ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು. ಬಳಿಕ ಮೆಡಿಕಲ್ ಕಾಲೇಜಿನ ನಿರ್ದೇಶಕ ಶಿವಾನಂದ ದೊಡ್ಮನಿ ಗುತ್ತಿಗೆ ಕಾರ್ಮಿಕರನ್ನು ಕರೆದು ಸಭೆ ನಡೆಸಿದರು. ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡ ಕೆಲವರನ್ನು ಅಸಭ್ಯ ಹಾಗೂ ಸರಿಯಾಗಿ ಕೆಲಸ ನಿರ್ವಹಿಸದ ಹಿನ್ನೆಲೆಯಲ್ಲಿ ತೆಗೆದು ಹಾಕಲಾಗುತ್ತಿದೆ. ಈವರೆಗೆ ನೀಡಬೇಕಾಗಿರುವ ಬಾಕಿ ಸಂಬಳವನ್ನು ನೀಡಲಾಗುವುದು. ಬಳಿಕ ಆಯಾ ವಿಭಾಗದ ಮುಖ್ಯಸ್ಥರು ಸೂಚಿಸಿರುವವರನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಉಳಿದವರನ್ನು ಜನವರಿ ೧ ರಿಂದ ಕೆಲಸದಿಂದ ತೆಗೆದುಹಾಕುವುದಾಗಿ ಪ್ರತಿಕ್ರಿಯಿಸಿದರು.

ಬೈಟ್ ೨
ಶಿವಾನಂದ ದೊಡ್ಮನಿ, ಕಾರವಾರ ಮೆಡಿಕಲ್ ಕಾಲೇಜು ನಿರ್ದೇಶಕ

ಇನ್ನು ಮೆಡಿಕಲ್ ಕಾಲೇಜು ನಿರ್ದೇಶಕ ಹಾಗೂ ಜಿಲ್ಲಾಸ್ಪತ್ರೆ ಸರ್ಜನ್ ನಡುವಿನ ಒಳಜಗಳದಿಂದಾಗಿ ಹೊಟ್ಟೆಪಾಡಿಗಾಗಿ ದುಡಿಯುತ್ತಿದ್ದವರನ್ನು ಬಲಿಕೊಡಲಾಗುತ್ತಿದೆ. ಇದೀಗ ನಿರ್ದೇಶಕರು ತಮ್ಮ ಪರವಾಗಿ ಇದ್ದವರನ್ನು ಉಳಿಸಿಕೊಂಡು ಉಳಿದವರನ್ನು ತೆಗೆದುಹಾಕಲು ಮುಂದಾಗಿರುವ ಬಗ್ಗೆ ಗಂಭೀರ ಆರೋಪ ಗುತ್ತಿಗೆ ಕಾರ್ಮಿಕರಿಂದ ಕೇಳಿಬಂದಿದ್ದು, ಹೀಗಾದರೇ ನಾವು ಬೀದಿಗೆ ಬರುತ್ತೇವೆ. ಒಂದೊಮ್ಮೆ ಇಂತಹ‌ಸ್ಥಿತಿ ಬಂದರೆ ಎಲ್ಲರೂ ಸೇರಿ ಉಗ್ರ ಹೋರಾಟ ನಡೆಸುವುದಾಗಿ ಗುತ್ತಿಗೆ ಕಾರ್ಮಿಕರು ಎಚ್ಚರಿಸಿದ್ದಾರೆ.
Conclusion:
Last Updated : Dec 28, 2019, 3:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.