ETV Bharat / state

ಕೈಗಾ ಅಣು ವಿದ್ಯುತ್ ಸ್ಥಾವರ ವಿರೋಧಿ ಸಮಾವೇಶಕ್ಕೆ ಪೇಜಾವರ ಶ್ರೀಗಳ ಸಾನಿಧ್ಯ: ಬಾಂದೇಕರ್​

author img

By

Published : Nov 15, 2019, 9:55 AM IST

Updated : Nov 15, 2019, 10:08 AM IST

ಕೈಗಾ ಅಣು ವಿದ್ಯುತ್ ಸ್ಥಾವರದ 5 ಹಾಗೂ 6ನೇ ಘಟಕ ವಿರೋಧಿಸಿ, ಬೃಹತ್ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಾಮವೇಶದ ಸಾನಿಧ್ಯವನ್ನು ಉಡುಪಿಯ ವಿಶ್ವೇಶ ತೀರ್ಥ ಪೇಜಾವರ ಶ್ರೀಗಳು ವಹಿಸಿಕೊಳ್ಳಲಿದ್ದಾರೆ.

ಕೈಗಾ ಅಣು ವಿದ್ಯುತ್ ಸ್ಥಾವರ ವಿರುದ್ಧ ಸಮಾವೇಶ

ಕಾರವಾರ: ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕ ವಿರೋಧಿಸಿ, ಬೃಹತ್ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಕಾರವಾರ ತಾಲೂಕಿನ ಮಲ್ಲಾಪುರ ಹಿಂದೂವಾಡದ ಕಾಳಿಕಾದೇವಿ ಮೈದಾನದಲ್ಲಿ ನವೆಂಬರ್ 17 ರಂದು ಸಮಾವೇಶವು ನಡೆಯಲಿದೆ.

ಪೇಜಾವರ ಶ್ರೀ, ಶಿರಸಿ ಸೋಂದಾ ಮಠದ ಗಂಗಾಧರೇಂದ್ರ ಶ್ರೀ, ಸೋದೆ ಜಗದ್ಗುರು ವಿಶ್ವವಲ್ಲಭ ತೀರ್ಥರು, ಸೋಂದಾ ಜೈನಮಠದ ಭಟ್ಟಕಳಂಕ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ, ಹಾಗೂ ಶ್ರೀರಾಮಕೃಷ್ಣಾಶ್ರಮದ ಭಾವೇಶಾನಂದ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸಮಾವೇಶವು ನಡೆಯಲಿದೆ.

ಈ ಕುರಿತು ಮಾತನಾಡಿದ ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶಾಂತಾ ಬಾಂದೇಕರ್, ಕೈಗಾದ 5 ಹಾಗೂ 6ನೇ ಘಟಕಕ್ಕೆ ಕೇಂದ್ರ ಸರ್ಕಾರ ಪರವಾನಗಿ ನೀಡಿರುವುದು ಜಿಲ್ಲೆಯ ದುರಾದೃಷ್ಟ ಎಂದರು.

ಕೈಗಾ ಅಣು ವಿದ್ಯುತ್ ಸ್ಥಾವರ ವಿರುದ್ಧ ಸಮಾವೇಶದ ಕುರಿತು ಸುದ್ದಿಗೋಷ್ಟಿ

ಈ ಯೋಜನೆಯಿಂದಾಗಿ ಸುತ್ತಲಿನ ಹಳ್ಳಿಗಳಲ್ಲಿ ವಾಸಿಸುವ ಜನರಲ್ಲಿ ಕ್ಯಾನ್ಸರ್‌ ಹಾಗೂ ಮೂತ್ರಪಿಂಡ ವೈಫಲ್ಯದಂತಹ ಭೀಕರ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಆರೋಪಿಸಿದರು. ಇದರಿಂದಾಗಿ ಸ್ಥಳೀಯ ಜನರಲ್ಲಿ ಆತಂಕವುಂಟಾಗಿದೆ. ಹೀಗಾಗಿ ಅಣು ವಿಕಿರಣದಿಂದ ಜಿಲ್ಲೆಯ ಪರಿಸರವನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು. ಹಾಗಾಗಿ ಸಾರ್ವಜನಿಕರು, ಪರಿಸರವಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಕಾರವಾರ: ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕ ವಿರೋಧಿಸಿ, ಬೃಹತ್ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಕಾರವಾರ ತಾಲೂಕಿನ ಮಲ್ಲಾಪುರ ಹಿಂದೂವಾಡದ ಕಾಳಿಕಾದೇವಿ ಮೈದಾನದಲ್ಲಿ ನವೆಂಬರ್ 17 ರಂದು ಸಮಾವೇಶವು ನಡೆಯಲಿದೆ.

ಪೇಜಾವರ ಶ್ರೀ, ಶಿರಸಿ ಸೋಂದಾ ಮಠದ ಗಂಗಾಧರೇಂದ್ರ ಶ್ರೀ, ಸೋದೆ ಜಗದ್ಗುರು ವಿಶ್ವವಲ್ಲಭ ತೀರ್ಥರು, ಸೋಂದಾ ಜೈನಮಠದ ಭಟ್ಟಕಳಂಕ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ, ಹಾಗೂ ಶ್ರೀರಾಮಕೃಷ್ಣಾಶ್ರಮದ ಭಾವೇಶಾನಂದ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸಮಾವೇಶವು ನಡೆಯಲಿದೆ.

ಈ ಕುರಿತು ಮಾತನಾಡಿದ ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶಾಂತಾ ಬಾಂದೇಕರ್, ಕೈಗಾದ 5 ಹಾಗೂ 6ನೇ ಘಟಕಕ್ಕೆ ಕೇಂದ್ರ ಸರ್ಕಾರ ಪರವಾನಗಿ ನೀಡಿರುವುದು ಜಿಲ್ಲೆಯ ದುರಾದೃಷ್ಟ ಎಂದರು.

ಕೈಗಾ ಅಣು ವಿದ್ಯುತ್ ಸ್ಥಾವರ ವಿರುದ್ಧ ಸಮಾವೇಶದ ಕುರಿತು ಸುದ್ದಿಗೋಷ್ಟಿ

ಈ ಯೋಜನೆಯಿಂದಾಗಿ ಸುತ್ತಲಿನ ಹಳ್ಳಿಗಳಲ್ಲಿ ವಾಸಿಸುವ ಜನರಲ್ಲಿ ಕ್ಯಾನ್ಸರ್‌ ಹಾಗೂ ಮೂತ್ರಪಿಂಡ ವೈಫಲ್ಯದಂತಹ ಭೀಕರ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಆರೋಪಿಸಿದರು. ಇದರಿಂದಾಗಿ ಸ್ಥಳೀಯ ಜನರಲ್ಲಿ ಆತಂಕವುಂಟಾಗಿದೆ. ಹೀಗಾಗಿ ಅಣು ವಿಕಿರಣದಿಂದ ಜಿಲ್ಲೆಯ ಪರಿಸರವನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು. ಹಾಗಾಗಿ ಸಾರ್ವಜನಿಕರು, ಪರಿಸರವಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

Intro:Body:

ಕಾರವಾರ: ಕೈಗಾ ಅಣು ವಿದ್ಯುತ್ ಸ್ಥಾವರದ 5 ಹಾಗೂ 6ನೇ ಘಟಕ ವಿರೋಧಿಸಿ ತಾಲೂಕಿನ ಮಲ್ಲಾಪುರ ಹಿಂದೂವಾಡದ ಕಾಳಿಕಾದೇವಿ ಮೈದಾನದಲ್ಲಿ ನ.17 ರಂದು ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕೈಗಾ ಅಣು ವಿದ್ಯುತ್ ಸ್ಥಾವರದ 5 ಹಾಗೂ 6ನೇ ಘಟಕ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶಾಂತಾ ಬಾಂದೇಕರ ಮಾತನಾಡಿ, ಜಾಗೃತಿ ಸಮಾವೇಶದಲ್ಲಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀಪಾದಂಗಳು, ಶಿರಸಿ ಸೋಂದಾ ಮಠದ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮಿಗಳು, ಸೋದೆ ಜಗದ್ಗುರು ಶ್ರೀಮನ್ ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನದ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಸೋಂದಾ ಜೈನಮಠದ ಭಟ್ಟಕಳಂಕ ಭಟ್ಟಾರಕ ಪಟ್ಟಾಚಾರ್ಯ ಮಹಾ ಸ್ವಾಮೀಜಿ, ಶ್ರೀರಾಮಕೃಷ್ಣಾಶ್ರಮದ ಭಾವೇಶಾನಂದ ಸ್ವಾಮಿಗಳ ದಿವ್ಯ ಸಾನಿಧ್ಯ ವಹಿಸಿಕೊಳ್ಳಲಿದ್ದಾರೆ' ಎಂದು ತಿಳಿಸಿದರು.
ಭಾರತೀಯ ಅಣು ವಿದ್ಯುತ್ ಇಲಾಖೆ ಕೈಗಾದಲ್ಲಿ ಘಟಕ ವಿಸ್ತರಿಸಲು 5 ಹಾಗೂ 6ನೇ ಘಟಕಕ್ಕೆ ಕೇಂದ್ರ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯ ಪರವಾನಗಿ ನೀಡಿರುವುದು ಈ ಜಿಲ್ಲೆಯ ದುರಾದೃಷ್ಟ. ಕೈಗಾ ಅಣು ವಿದ್ಯುತ್ ಯೋಜನೆ ಆಸುಪಾಸಿನ ತಾಲೂಕುಗಳು ಕಾರವಾರ, ಅಂಕೋಲಾ,
ಯಲ್ಲಾಪುರ, ಹಾಗೂ ಜೊಯಿಡಾದ ಅನೇಕ ಹಳ್ಳಿಗಳಲ್ಲಿ ವಾಸಿಸುವ ಜನರಲ್ಲಿ ಕ್ಯಾನ್ಸರ್‌ ಹಾಗೂ ಮೂತ್ರಪಿಂಡ ವೈಫಲ್ಯದಂಥ ಭೀಕರ ಕಾಯಿಲೆಗಳು ಕಾಣಿಸಿಕೊಂಡಿರುವುದು ಸ್ಥಳೀಯ ಜನರಲ್ಲಿ ಆತಂಕವನ್ನುಂಟು ಮಾಡಿದೆ. ಹೀಗಾಗಿ ಅಣು ವಿಕಿರಣದಿಂದ ಜಿಲ್ಲೆಯ ಪರಿಸರವನ್ನು ರಕ್ಷಿಸಿ ಕೊಳ್ಳಬೇಕಾದ ಅನಿವಾರ್ಯತೆ ಇದ್ದು, ಸಾರ್ವಜನಿಕರು, ಪರಿಸರವಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು' ಎಂದು ಮನವಿ ಮಾಡಿಕೊಂಡರು.
ಸುದ್ದಿಗೋಷ್ಠಿಯಲ್ಲಿ ಗೋಟೆಗಾಳಿ ಗ್ರಾ.ಪಂ ಅಧ್ಯಕ್ಷೆ ಸುಲಕ್ಷಾ ಪೆಡ್ನೇಕರ್, ರಾಮನಾಥ ನಾಯ್ಕ, ಪ್ರಕಾಶ್ ಥಾಮ್ಸೆ, ಸಂತೋಷ ಗೌಡ, ಮಾರುತಿ ನಾಯ್ಕ, ವಿ.ಪಿ.ನಾಯ್ಕ, ಶ್ಯಾಮನಾಥ ನಾಯ್ಕ ಇದ್ದರು.Conclusion:
Last Updated : Nov 15, 2019, 10:08 AM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.