ETV Bharat / state

ಜಲಾಶಯಗಳಿಂದ ಕೃತಕ ಪ್ರವಾಹ ಉಂಟಾದರೆ ಅಧಿಕಾರಿಗಳೇ ನೇರ ಹೊಣೆಗಾರರು: ಡಿಸಿ ಎಚ್ಚರಿಕೆ

ಕೊನೆಯ ಕ್ಷಣದಲ್ಲಿ ಅವೈಜ್ಞಾನಿಕವಾಗಿ ಜಲಾಶಯಗಳಿಂದ  ನೀರನ್ನು ಹೊರ ಬಿಟ್ಟು ಜಿಲ್ಲೆಯ ಜನರಿಗೆ ತೊಂದರೆಯುಂಟಾದಲ್ಲಿ ಕೆಪಿಸಿ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವದು ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಖಡಕ್ ಎಚ್ಚರಿಕೆ ನೀಡಿದರು.

author img

By

Published : Aug 6, 2020, 8:13 PM IST

Meeting by DC Dr harisha Kumar k
Meeting by DC Dr harisha Kumar k

ಕಾರವಾರ: ಜಲಾಶಯಗಳ ಹೆಚ್ಚುವರಿ ನೀರಿನಿಂದಾಗಿ ಕೃತಕ ಪ್ರವಾಹ ಉಂಟಾದಲ್ಲಿ ಕೆ.ಪಿ.ಸಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಲಿಂಗನಮಕ್ಕಿ, ಗೇರುಸೊಪ್ಪ, ಕದ್ರಾ, ಕೊಡಸಳ್ಳಿ ಹಾಗೂ ಸೂಪಾ ಜಲಾಶಯಗಳ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯನ್ನು ನಡೆಸಿದರು. ಅಧಿಕಾರಿಗಳೊಂದಿಗೆ ಚರ್ಚಿಸಿ, ಕಳೆದ ಮೂರು-ನಾಲ್ಕು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಎಲ್ಲಾ ಜಲಾಶಯಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದಾಗಿ ಜಲಾಶಯಗಳ ಕೆಳ ಭಾಗದಲ್ಲಿ ವಾಸಿಸುವ ಗ್ರಾಮಗಳ ಜನರಲ್ಲಿ ಆತಂಕದ ಪರಿಸ್ಥಿತಿ ಉಂಟಾಗಿದೆ.

ಈ ಹಿಂದಿನ ವರ್ಷ ಜಿಲ್ಲೆಯ ವಿವಿಧ ಜಲಾಶಯಗಳಿಂದ ಕೊನೆಯ ಕ್ಷಣದಲ್ಲಿ ಹೆಚ್ಚುವರಿ ನೀರನ್ನು ಬಿಡುಗಡೆಗೊಳಿಸಿದ್ದರಿಂದ ಜಲಾಶಯದ ಕೆಳಭಾಗದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಜನ ಜೀವನ ಅಸ್ತವ್ಯಸ್ತವಾಗಿತ್ತು. ಈ ಸಂಬಂಧ ಎರಡು ತಿಂಗಳುಗಳ ಹಿಂದೆ ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಂಡವನ್ನು ರಚಿಸಿ ಜಲಾಶಯಗಳಲ್ಲಿ ಅಪಾಯ ತಪ್ಪಿಸಲು ಸೂಕ್ತ ಕ್ರಮ‌ ಕೈಗೊಳ್ಳಲು ತಿಳಿಸಲಾಗಿದೆ. ಎಡಿಸಿ ನೇತೃತ್ವದ ತಂಡದಲ್ಲಿ ನಿರ್ಣಯಿಸಿದಂತೆ ಜಲಾಶಯಗಳಲ್ಲಿ ಅಗತ್ಯ ನೀರಿನ ಪ್ರಮಾಣ ಕಾಯ್ದುಕೊಂಡು, ಹವಾಮಾನ ಇಲಾಖೆ ಬಿಡುಗಡೆಗೊಳಿಸುವ ಮುಂದಿನ ಮಳೆ ಪ್ರಮಾಣ ವರದಿಯನ್ನು ಆಧರಿಸಿ ನಿರಂತರವಾಗಿ ನೀರನ್ನು ನದಿಗೆ ಬಿಡುಗಡೆಗೊಳಿಸುವದರಿಂದ ಜಲಾಶಯದ ಕೆಳ ಭಾಗದಲ್ಲಿರುವ ಗ್ರಾಮಗಳಲ್ಲಿ ಕೃತಕ ಪ್ರವಾಹ ಮತ್ತು ಜನ–ಜಾನುವಾರುಗಳಿಗೆ ಉಂಟಾಗುವ ಹಾನಿಯನ್ನು ತಪ್ಪಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಇನ್ನೂ ಜಲಾಶಯ ಪಾತ್ರದಲ್ಲಿ ಹಾಗೂ ನದಿ ಪಾತ್ರದಲ್ಲಾಗುತ್ತಿರುವ ಮಳೆಯ ಪ್ರಮಾಣವನ್ನು ಹಾಗೂ ಜಲಾಶಯ ಕೆಳಭಾಗದಲ್ಲಿನ ಇತರೆ ಹಳ್ಳ-ಕೊಳ್ಳಗಳಿಂದ ನದಿಗೆ ಸೇರಬಹುದಾದ ನೀರಿನ ಪ್ರಮಾಣವನ್ನು ಕೂಡ ಗಣನೆಗೆ ತೆಗೆದುಕೊಂಡು ಜಲಾಶಯದಿಂದ ನೀರನ್ನು ಬಿಡುಗಡೆಗೊಳಿಸಿ, ನದಿ ಮಟ್ಟವನ್ನು ಕೂಡಾ ಕಾಯ್ದುಕೊಳ್ಳುವ ಯೋಜನೆಯನ್ನು ರೂಪಿಸಿ ಕೂಡಲೇ ಕಾರ್ಯರೂಪಕ್ಕೆ ತರಲು ಕೆಪಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಕೊನೆಯ ಕ್ಷಣದಲ್ಲಿ ಅವೈಜ್ಞಾನಿಕವಾಗಿ ಜಲಾಶಯಗಳಿಂದ ನೀರನ್ನು ಹೊರ ಬಿಟ್ಟು ಜಿಲ್ಲೆಯ ಜನರಿಗೆ ತೊಂದರೆಯುಂಟಾದಲ್ಲಿ ಕೆಪಿಸಿ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಕಾರವಾರ: ಜಲಾಶಯಗಳ ಹೆಚ್ಚುವರಿ ನೀರಿನಿಂದಾಗಿ ಕೃತಕ ಪ್ರವಾಹ ಉಂಟಾದಲ್ಲಿ ಕೆ.ಪಿ.ಸಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಲಿಂಗನಮಕ್ಕಿ, ಗೇರುಸೊಪ್ಪ, ಕದ್ರಾ, ಕೊಡಸಳ್ಳಿ ಹಾಗೂ ಸೂಪಾ ಜಲಾಶಯಗಳ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯನ್ನು ನಡೆಸಿದರು. ಅಧಿಕಾರಿಗಳೊಂದಿಗೆ ಚರ್ಚಿಸಿ, ಕಳೆದ ಮೂರು-ನಾಲ್ಕು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಎಲ್ಲಾ ಜಲಾಶಯಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದಾಗಿ ಜಲಾಶಯಗಳ ಕೆಳ ಭಾಗದಲ್ಲಿ ವಾಸಿಸುವ ಗ್ರಾಮಗಳ ಜನರಲ್ಲಿ ಆತಂಕದ ಪರಿಸ್ಥಿತಿ ಉಂಟಾಗಿದೆ.

ಈ ಹಿಂದಿನ ವರ್ಷ ಜಿಲ್ಲೆಯ ವಿವಿಧ ಜಲಾಶಯಗಳಿಂದ ಕೊನೆಯ ಕ್ಷಣದಲ್ಲಿ ಹೆಚ್ಚುವರಿ ನೀರನ್ನು ಬಿಡುಗಡೆಗೊಳಿಸಿದ್ದರಿಂದ ಜಲಾಶಯದ ಕೆಳಭಾಗದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಜನ ಜೀವನ ಅಸ್ತವ್ಯಸ್ತವಾಗಿತ್ತು. ಈ ಸಂಬಂಧ ಎರಡು ತಿಂಗಳುಗಳ ಹಿಂದೆ ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಂಡವನ್ನು ರಚಿಸಿ ಜಲಾಶಯಗಳಲ್ಲಿ ಅಪಾಯ ತಪ್ಪಿಸಲು ಸೂಕ್ತ ಕ್ರಮ‌ ಕೈಗೊಳ್ಳಲು ತಿಳಿಸಲಾಗಿದೆ. ಎಡಿಸಿ ನೇತೃತ್ವದ ತಂಡದಲ್ಲಿ ನಿರ್ಣಯಿಸಿದಂತೆ ಜಲಾಶಯಗಳಲ್ಲಿ ಅಗತ್ಯ ನೀರಿನ ಪ್ರಮಾಣ ಕಾಯ್ದುಕೊಂಡು, ಹವಾಮಾನ ಇಲಾಖೆ ಬಿಡುಗಡೆಗೊಳಿಸುವ ಮುಂದಿನ ಮಳೆ ಪ್ರಮಾಣ ವರದಿಯನ್ನು ಆಧರಿಸಿ ನಿರಂತರವಾಗಿ ನೀರನ್ನು ನದಿಗೆ ಬಿಡುಗಡೆಗೊಳಿಸುವದರಿಂದ ಜಲಾಶಯದ ಕೆಳ ಭಾಗದಲ್ಲಿರುವ ಗ್ರಾಮಗಳಲ್ಲಿ ಕೃತಕ ಪ್ರವಾಹ ಮತ್ತು ಜನ–ಜಾನುವಾರುಗಳಿಗೆ ಉಂಟಾಗುವ ಹಾನಿಯನ್ನು ತಪ್ಪಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಇನ್ನೂ ಜಲಾಶಯ ಪಾತ್ರದಲ್ಲಿ ಹಾಗೂ ನದಿ ಪಾತ್ರದಲ್ಲಾಗುತ್ತಿರುವ ಮಳೆಯ ಪ್ರಮಾಣವನ್ನು ಹಾಗೂ ಜಲಾಶಯ ಕೆಳಭಾಗದಲ್ಲಿನ ಇತರೆ ಹಳ್ಳ-ಕೊಳ್ಳಗಳಿಂದ ನದಿಗೆ ಸೇರಬಹುದಾದ ನೀರಿನ ಪ್ರಮಾಣವನ್ನು ಕೂಡ ಗಣನೆಗೆ ತೆಗೆದುಕೊಂಡು ಜಲಾಶಯದಿಂದ ನೀರನ್ನು ಬಿಡುಗಡೆಗೊಳಿಸಿ, ನದಿ ಮಟ್ಟವನ್ನು ಕೂಡಾ ಕಾಯ್ದುಕೊಳ್ಳುವ ಯೋಜನೆಯನ್ನು ರೂಪಿಸಿ ಕೂಡಲೇ ಕಾರ್ಯರೂಪಕ್ಕೆ ತರಲು ಕೆಪಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಕೊನೆಯ ಕ್ಷಣದಲ್ಲಿ ಅವೈಜ್ಞಾನಿಕವಾಗಿ ಜಲಾಶಯಗಳಿಂದ ನೀರನ್ನು ಹೊರ ಬಿಟ್ಟು ಜಿಲ್ಲೆಯ ಜನರಿಗೆ ತೊಂದರೆಯುಂಟಾದಲ್ಲಿ ಕೆಪಿಸಿ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವದು ಎಂದು ಖಡಕ್ ಎಚ್ಚರಿಕೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.