ETV Bharat / state

ಸಂಪುಟದಲ್ಲಿ ಚರ್ಚಿಸಿ ಮೀಸಲಾತಿ ಬಗ್ಗೆ ನಿರ್ಧಾರ: ಡಿಸಿಎಂ ಲಕ್ಷ್ಮಣ ಸವದಿ

author img

By

Published : Feb 12, 2021, 9:44 PM IST

ಸಂಪುಟದಲ್ಲಿ ಚರ್ಚಿಸಿ ಮೀಸಲಾತಿ ಕುರಿತು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದ್ದಾರೆ.

DCM Laxman Savadi reaction about reservation fight
ಡಿಸಿಎಂ ಲಕ್ಷ್ಮಣ ಸವದಿ

ಶಿರಸಿ: ಮೀಸಲಾತಿ ಸೂಕ್ಷ್ಮ ವಿಚಾರವಾಗಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳಲಿದ್ದಾರೆ. ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಬೇಡ್ತಿ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಸವಕಲ್ಯಾಣ ಉಪಚುನಾವಣೆಗೆ ಸ್ಪರ್ಧಿಸುವುದಿಲ್ಲ, ಇದು ಗಾಳಿ ಸುದ್ದಿ. ಕೇವಲ ಉಸ್ತುವಾರಿ ಮಾತ್ರ, ನಾವು ಉಪಚುನಾವಣೆ ಗೆಲ್ಲುತ್ತೇವೆ ಎಂದರು.

ಡಿಸಿಎಂ ಲಕ್ಷ್ಮಣ ಸವದಿ

ಓದಿ : ದೇಶ ಕಟ್ಟುವಲ್ಲಿ ಶಿಕ್ಷಣದ ಪಾತ್ರ ನಿರ್ಣಾಯಕ: ಡಿಸಿಎಂ ಅಶ್ವತ್ಥ​ ನಾರಾಯಣ

ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಅಲ್ಲಿನ ಸರ್ಕಾರ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಮಹಾರಾಷ್ಟ್ರ ಸರ್ಕಾರದ್ದು ಮನೆಯೊಂದು ಮೂರು ಬಾಗಿಲು, ಅವರಲ್ಲೇ ಸಹಮತವಿಲ್ಲ ಎಂದರು. ಕೆಎಸ್​​​ಆರ್​​ಟಿಸಿ ನೌಕರರ ಹತ್ತು ಬೇಡಿಕೆಯಲ್ಲಿ 8 ಈಡೇರಿಸಿದ್ದೇವೆ. ನಾಲ್ಕು ಬೇಡಿಕೆ ಈಡೇರಿಸಲು ಸಮಯಾವಕಾಶ ಬೇಕು. ನೌಕರರೊಂದಿಗೆ ಇನ್ನೆರಡು ಸಭೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ನಾವು ಒಪ್ಪಿಕೊಂಡ ಬೇಡಿಕೆ ಈಡೇರಿಸುತ್ತೇವೆ ಎಂದರು.

ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕೊರೊನಾ ಬಂದ ನಂತರ ಹಣಕಾಸಿನ ವ್ಯವಹಾರದಲ್ಲಿ ಏರುಪೇರಾಗಿರುವುದು ನಿಜ.
ಸಿದ್ದರಾಮಯ್ಯ ನಮ್ಮನ್ನು ಟೀಕೆ ಮಾಡ್ತಾನೆ ಇರ್ತಾರೆ. ಅವರು ಇರೋದೆ ಟೀಕೆ ಮಾಡೋಕೆ, ಮತ್ತೇನು ಹೊಗಳ್ತಾರಾ ಎಂದರು.

ಶಿರಸಿ: ಮೀಸಲಾತಿ ಸೂಕ್ಷ್ಮ ವಿಚಾರವಾಗಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳಲಿದ್ದಾರೆ. ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಬೇಡ್ತಿ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಸವಕಲ್ಯಾಣ ಉಪಚುನಾವಣೆಗೆ ಸ್ಪರ್ಧಿಸುವುದಿಲ್ಲ, ಇದು ಗಾಳಿ ಸುದ್ದಿ. ಕೇವಲ ಉಸ್ತುವಾರಿ ಮಾತ್ರ, ನಾವು ಉಪಚುನಾವಣೆ ಗೆಲ್ಲುತ್ತೇವೆ ಎಂದರು.

ಡಿಸಿಎಂ ಲಕ್ಷ್ಮಣ ಸವದಿ

ಓದಿ : ದೇಶ ಕಟ್ಟುವಲ್ಲಿ ಶಿಕ್ಷಣದ ಪಾತ್ರ ನಿರ್ಣಾಯಕ: ಡಿಸಿಎಂ ಅಶ್ವತ್ಥ​ ನಾರಾಯಣ

ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಅಲ್ಲಿನ ಸರ್ಕಾರ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಮಹಾರಾಷ್ಟ್ರ ಸರ್ಕಾರದ್ದು ಮನೆಯೊಂದು ಮೂರು ಬಾಗಿಲು, ಅವರಲ್ಲೇ ಸಹಮತವಿಲ್ಲ ಎಂದರು. ಕೆಎಸ್​​​ಆರ್​​ಟಿಸಿ ನೌಕರರ ಹತ್ತು ಬೇಡಿಕೆಯಲ್ಲಿ 8 ಈಡೇರಿಸಿದ್ದೇವೆ. ನಾಲ್ಕು ಬೇಡಿಕೆ ಈಡೇರಿಸಲು ಸಮಯಾವಕಾಶ ಬೇಕು. ನೌಕರರೊಂದಿಗೆ ಇನ್ನೆರಡು ಸಭೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ನಾವು ಒಪ್ಪಿಕೊಂಡ ಬೇಡಿಕೆ ಈಡೇರಿಸುತ್ತೇವೆ ಎಂದರು.

ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕೊರೊನಾ ಬಂದ ನಂತರ ಹಣಕಾಸಿನ ವ್ಯವಹಾರದಲ್ಲಿ ಏರುಪೇರಾಗಿರುವುದು ನಿಜ.
ಸಿದ್ದರಾಮಯ್ಯ ನಮ್ಮನ್ನು ಟೀಕೆ ಮಾಡ್ತಾನೆ ಇರ್ತಾರೆ. ಅವರು ಇರೋದೆ ಟೀಕೆ ಮಾಡೋಕೆ, ಮತ್ತೇನು ಹೊಗಳ್ತಾರಾ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.