ETV Bharat / state

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ: ಚಾಲಕ ಸ್ಥಳದಲ್ಲೇ ಸಾವು

ಶಿರಸಿ ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿಯ ಶಿರಲೆ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

author img

By

Published : Jun 1, 2020, 10:27 PM IST

Sirs accident
Sirs accident

ಶಿರಸಿ: ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿಯ ಶಿರಲೆ ಕ್ರಾಸ್ ಬಳಿ ನಡೆದಿದೆ.

ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಛಾಪುರ ತಾಲೂಕಿನ ಸಚಿನ್ ಶಿವಾಜಿ ಸಿಂಧೆ (27) ಮೃತಪಟ್ಟ ಲಾರಿ ಚಾಲಕ. ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೋಗುತ್ತಿದ್ದ ಲಾರಿ ಇದಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.

ಘಟನೆಯಲ್ಲಿ ಗಾಯಗೊಂಡಿರುವ ಲಾರಿ ಕ್ಲೀನರ್ ಈಶ್ವರ ಬಾಲಾಜಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರಸಿ: ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿಯ ಶಿರಲೆ ಕ್ರಾಸ್ ಬಳಿ ನಡೆದಿದೆ.

ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಛಾಪುರ ತಾಲೂಕಿನ ಸಚಿನ್ ಶಿವಾಜಿ ಸಿಂಧೆ (27) ಮೃತಪಟ್ಟ ಲಾರಿ ಚಾಲಕ. ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೋಗುತ್ತಿದ್ದ ಲಾರಿ ಇದಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.

ಘಟನೆಯಲ್ಲಿ ಗಾಯಗೊಂಡಿರುವ ಲಾರಿ ಕ್ಲೀನರ್ ಈಶ್ವರ ಬಾಲಾಜಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.