ETV Bharat / state

ಕಾರವಾರ ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ 8ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ...

author img

By

Published : Jan 20, 2020, 3:29 PM IST

ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಉತ್ತರಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಮೀನುಗಾರರು ನಡೆಸುತ್ತಿರುವ ಹೋರಾಟ ಎಂಟನೇ ದಿನಕ್ಕೆ ಕಾಲಿಟ್ಟಿದೆ.

Fisherman protest against state and central government
ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಪ್ರತಿಭಟನೆ

ಕಾರವಾರ: ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮೀನುಗಾರರು ನಡೆಸುತ್ತಿರುವ ಹೋರಾಟ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಈ ಪ್ರತಿಭಟನೆಗೆ ಇಂದು ಕರ್ನಾಟಕ ರೈತ ಸಂಘ, ಜಯ ಕರ್ನಾಟಕ ಸಂಘಟನೆಗಳ ಜೊತೆಗೆ ಆಟೋ, ಟೆಂಪೋ ಚಾಲಕರು ಸಾಥ್ ನೀಡಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಸಾಗರಮಾಲಾ ಯೋಜನೆ ಬೇಡ. ಕಡಲತೀರ ಉಳಿಸಿ ಎಂದು ಒತ್ತಾಯಿಸಿದರು. ಮೀನುಗಾರಿಕೆ ಹಾಗೂ ಮೀನು ಮಾರಾಟ ಸ್ಥಗಿತಗೊಳಿಸಿ ಮೀನುಗಾರರು ಧರಣಿ ನಡೆಸುತ್ತಿದ್ದಾರೆ.

ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಪ್ರತಿಭಟನೆ

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಹರೀಶ್​ಕುಮಾರ್, ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆಯಿಂದ ಮೀನುಗಾರರಿಗೆ ಆಗುವ ತೊಂದರೆ ಕುರಿತು ಸಂಬಂಧಪಟ್ಟ ಸಚಿವರಿಗೆ ಮನವರಿಕೆ ಮಾಡಲಾಗಿದೆ. ಅದರಂತೆ ಕಾಮಗಾರಿ ನಿಲ್ಲಿಸಿದ್ದೇವೆ. ಸಚಿವರು ಮೀನುಗಾರರ ಮುಖಂಡರೊಂದಿಗೆ ಸಭೆ ನಡೆಸಲು ಮುಂದಾಗಿದ್ದಾರೆ. ನೀವು ಒಪ್ಪಿದ ತಕ್ಷಣವೇ ಸಭೆ ಆಯೋಜಿಸಲಾಗುವುದು ಎಂದು ಭರವಸೆ ನೀಡಿದ ಅವರು, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.

ಕಾರವಾರ: ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮೀನುಗಾರರು ನಡೆಸುತ್ತಿರುವ ಹೋರಾಟ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಈ ಪ್ರತಿಭಟನೆಗೆ ಇಂದು ಕರ್ನಾಟಕ ರೈತ ಸಂಘ, ಜಯ ಕರ್ನಾಟಕ ಸಂಘಟನೆಗಳ ಜೊತೆಗೆ ಆಟೋ, ಟೆಂಪೋ ಚಾಲಕರು ಸಾಥ್ ನೀಡಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಸಾಗರಮಾಲಾ ಯೋಜನೆ ಬೇಡ. ಕಡಲತೀರ ಉಳಿಸಿ ಎಂದು ಒತ್ತಾಯಿಸಿದರು. ಮೀನುಗಾರಿಕೆ ಹಾಗೂ ಮೀನು ಮಾರಾಟ ಸ್ಥಗಿತಗೊಳಿಸಿ ಮೀನುಗಾರರು ಧರಣಿ ನಡೆಸುತ್ತಿದ್ದಾರೆ.

ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಪ್ರತಿಭಟನೆ

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಹರೀಶ್​ಕುಮಾರ್, ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆಯಿಂದ ಮೀನುಗಾರರಿಗೆ ಆಗುವ ತೊಂದರೆ ಕುರಿತು ಸಂಬಂಧಪಟ್ಟ ಸಚಿವರಿಗೆ ಮನವರಿಕೆ ಮಾಡಲಾಗಿದೆ. ಅದರಂತೆ ಕಾಮಗಾರಿ ನಿಲ್ಲಿಸಿದ್ದೇವೆ. ಸಚಿವರು ಮೀನುಗಾರರ ಮುಖಂಡರೊಂದಿಗೆ ಸಭೆ ನಡೆಸಲು ಮುಂದಾಗಿದ್ದಾರೆ. ನೀವು ಒಪ್ಪಿದ ತಕ್ಷಣವೇ ಸಭೆ ಆಯೋಜಿಸಲಾಗುವುದು ಎಂದು ಭರವಸೆ ನೀಡಿದ ಅವರು, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.

Intro:


Body:

ಕಾರವಾರ: ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ನಡೆಸುತ್ತಿರುವ ಹೋರಾಟ ಮುಂದುವರಿದಿದ್ದು, ಧರಣಿಗೆ ಇಂದು ಕರ್ನಾಟಕ ರೈತ ಸಂಘ ಹಾಗೂ ಜಯಕರ್ನಾಟಕ ಸಂಘಟನೆ ಸಾತ್ ನೀಡಿದೆ.
ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ಏಳು ದಿನಗಳಿಂದ ನಡೆಸುತ್ತಿರುವ ಮೀನುಗಾರರ ಹೋರಾಟ ಇಂದು ಏಂಟನೇ ದಿನಕ್ಕೆ ಕಾಲಿಟ್ಟಿದೆ. ಮೀನುಗಾರಿಕೆ ಹಾಗೂ ಮೀನುಮಾರಾಟ ಸ್ಥಗಿತಗೊಳಿಸಿ ಧರಣಿ ನಡೆಸುತ್ತಿರುವ ಮೀನುಗಾರರಿಗೆ ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಜಯಕರ್ನಾಟಕ ಸಂಘಟನೆ ಮತ್ತು ಆಟೊ, ಟೆಂಪೊ ಡ್ರೈವರ್ ಗಳು ಸಾತ್ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಂಡು ರಾಜ್ಯ ಸರ್ಕಾರದ ಹಾಗೂ ಕೇಂದ್ರ ಸರ್ಕಾರದ ಘೋಷಣೆ ಕೂಗಿದರು. ಸಾಗರಮಾಲಾ ಯೋಜನೆ ಬೇಡ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು ಕಡಲತೀರ ಉಳಿಸುವಂತೆ ಒತ್ತಾಯಿಸಿದ್ದಾರೆ. ಗೆಟ್ ಬಂದ್ ಮಾಡಿ ಪ್ರತಿಭಟನಾಕಾರರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ಈ ವೇಳೆ ಸ್ಥಳಕ್ಕಾಗಿಮಿಸಿ ಪ್ರತಿಭಟನಾಕಾರರ ಮನವಿ ಆಲಿಸಿದ ಜಿಲ್ಲಾಧಿಕಾರಿ ಡಾ. ಹರೀಶಕುಮಾರ್, ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆಯಿಂದ ಮೀನುಗಾರರ ಆತಂಕದ ಬಗ್ಗೆ ಮೊದಲೇ ಹೇಳಿದಂತೆ ಸಚಿವರಿಗೆ ಮನವರಿಕೆ ಮಾಡಲಾಗಿದೆ. ಅದರಂತೆ ಕಾಮಗಾರಿಯನ್ನು ನಿಲ್ಲಿಸಲಾಗಿದೆ. ಸಮಸ್ಯೆ ಕುರಿತು ಸಚಿವರು ಮೀನುಗಾರ ಮುಖಂಡರೊಂದಿಗೆ ಸಭೆ ನಡೆಸಲು ಮುಂದಾಗಿದ್ದು ನೀವು ಒಪ್ಪಿದ ತಕ್ಷಣ ಸರ್ಕಾರದಿಂದ ಈ ಬಗ್ಗೆ ಸಭೆ ಆಯೋಜಿಸಲಾಗುವುದು ಎಂದು ಹೇಳಿದರು.
ಕಾಮಗಾರಿ ಪ್ರದೇಶದಲ್ಲಿ ಕಲ್ಲು ಮಣ್ಣು ಸುರಿಯುತ್ತಿರುವುದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಚಾರ ಸುಗಮಗೊಳಿಸುವ ಸಂಬಂಧ. ಈಗಾಗಲೇ ಗುತ್ತಿಗೆ ಪಡೆದವರು ಅಲ್ಲಿಗೆ ಹಾಕುತ್ತಿದ್ದು ಈ ಬಗ್ಗೆಯು ಈ ಸ್ಥಳದಲ್ಲಿ ಕಲ್ಲು ಹಾಕದಂತೆ ಮನವಿ ಮಾಡಿದ್ದಾರೆ. ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಅಲ್ಲಿವರೆಗೆ ಪ್ರತಿಭಟನೆಯನ್ನು ಕೈ ಬಿಡುವಂತೆ ಒತ್ತಾಯಿಸಿದರು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.