ಭಟ್ಕಳ: ತಾಲೂಕಿನ ನಾಮಧಾರಿ ಸಮಾಜದ ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನದಿಂದ ವೆಂಕಟರಮಣ ದೇವರ ಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ನೆರವೇರಿತು. ಶನಿವಾರ ನಗರದಾದ್ಯಂತ ಸಾವಿರಾರು ಭಕ್ತರು ಈ ಉತ್ಸವಕ್ಕೆ ಸಾಕ್ಷಿಯಾದ್ರು.
ಪಲ್ಲಕ್ಕಿ ಮಹೋತ್ಸವದಲ್ಲಿ ಶಾಸಕ ಸುನೀಲ್ ನಾಯ್ಕ ಸೇರಿದಂತೆ ನಾಮಧಾರಿ ಸಮಾಜದ 5 ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈ ವೇಳೆ ದೇವರಿಗೆ ತುಲಾಭಾರ ಸಮರ್ಪಣೆ ಮಾಡಲಾಯಿತು.
ಸಂಜೆ 5 ಗಂಟೆಯಿಂದ ವೆಂಕಟೇಶ್ವರ ದೇವರ ಪಲ್ಲಕ್ಕಿಯು ಸಹಸ್ರಕ್ಕೂ ಅಧಿಕ ಭಕ್ತರ ಜಯಘೋಷದಲ್ಲಿ ನಗರದಾದ್ಯಂತ ಸಂಚರಿಸಿದ್ದು ಮಧ್ಯ ರಾತ್ರಿ 2 ಗಂಟೆಯ ತನಕ ಉತ್ಸವ ಜರುಗಿತು.
ಪಲ್ಲಕ್ಕಿ ಉತ್ಸವದ ಬಳಿಕ ಮಧ್ಯರಾತ್ರಿ 2 ಗಂಟೆಗೆ ಮಹಾ ಮಂಗಳಾರತಿ, ವೇದಾದಿ ಶಾತ್ತುಮೊರೈ ಹಾಗೂ ತೀರ್ಥ ಪ್ರಸಾದ ನೀಡುವ ಮೂಲಕ ಪಲ್ಲಕ್ಕಿ ಮಹೋತ್ಸವ ಸಂಪನ್ನಗೊಂಡಿತು.