ETV Bharat / state

ಹಳಿ ತಪ್ಪಿದ ಹಳಿಯಾಳದ ಕಬ್ಬು ಬೆಳೆಗಾರರ ಪ್ರತಿಭಟನೆ: ಪೊಲೀಸರಿಂದ ಲಾಠಿ ಪ್ರಯೋಗ​

author img

By

Published : Nov 3, 2022, 9:32 AM IST

Updated : Nov 3, 2022, 2:29 PM IST

ಕಳೆದ 37 ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕಬ್ಬು ಬೆಳೆಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದಾರೆ.

Haliyala Sugarcane growers protest
ಹಳಿ ತಪ್ಪಿದ ಹಳಿಯಾಳದ ಕಬ್ಬು ಬೆಳೆಗಾರರ ಪ್ರತಿಭಟನೆ

ಶಿರಸಿ: ಕಳೆದ ಹಲವು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ಬುಧವಾರ ತಡರಾತ್ರಿ ವಿಕೋಪಕ್ಕೆ ತಿರುಗಿದ್ದು, ಲಾಠಿ ಚಾರ್ಜ್​ ನಡೆದಿದೆ. ಕಳೆದ 37 ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳೆಗಾರರ ಪ್ರತಿಭಟನೆ ನಡೆಯುತ್ತಿದೆ. ಆರು ದಿನಗಳಿಂದ ಅಮರಣಾಂತ ಉಪವಾಸ ಮಾಡಲಾಗುತ್ತಿದೆ. ಆದರೆ ಕೆಲ ಕಬ್ಬು ಬೆಳೆಗಾರರು ಪೊಲೀಸ್ ಕಾವಲಿನೊಂದಿಗೆ ಕಬ್ಬನ್ನು ಸಕ್ಕರೆ ಕಾರ್ಖಾನೆಗೆ ಸಾಗಿಸಿದ್ದು ಕಲ್ಲು ತೂರಾಟಕ್ಕೆ ಕಾರಣವಾಯಿತು.

ಹಳಿಯಾಳದ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಲಾರಿಯೆದುರು ಅಡ್ಡಬಿದ್ದು ಕಬ್ಬು ಸಾಗಿಸದಂತೆ ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಲಾರಿಗೆ ಕಲ್ಲು ಎಸೆದಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಬೀಸಿದ್ದಾರೆ.

ಹಳಿ ತಪ್ಪಿದ ಹಳಿಯಾಳದ ಕಬ್ಬು ಬೆಳೆಗಾರರ ಪ್ರತಿಭಟನೆ

ಇದಾದ ಬಳಿಕ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನೊಂದೆಡೆ, ಹಳಿಯಾಳ ಪೊಲೀಸ್ ಠಾಣೆ ಎದುರು ಬೃಹತ್ ಸಂಖ್ಯೆಯಲ್ಲಿ ಬೆಳೆಗಾರರು ಜಮಾಯಿಸುತ್ತಿದ್ದಾರೆ. ಹಳ್ಳಿ ಹಳ್ಳಿಗಳಿಂದ ರೈತರು ರಾತ್ರಿ ಠಾಣೆಗೆ ಬರುತ್ತಿದ್ದು, ಪ್ರತಿಭಟನೆ ತೀವ್ರಗೊಳ್ಳುವ ಲಕ್ಷಣ ಗೋಚರಿಸುತ್ತಿದೆ.

ಇದನ್ನೂ ಓದಿ: ಧಾರವಾಡದಲ್ಲಿ ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ: ಉರುಳುಸೇವೆ, ಅರೆಬೆತ್ತಲೆ ಪ್ರತಿಭಟನೆ

ಶಿರಸಿ: ಕಳೆದ ಹಲವು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ಬುಧವಾರ ತಡರಾತ್ರಿ ವಿಕೋಪಕ್ಕೆ ತಿರುಗಿದ್ದು, ಲಾಠಿ ಚಾರ್ಜ್​ ನಡೆದಿದೆ. ಕಳೆದ 37 ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳೆಗಾರರ ಪ್ರತಿಭಟನೆ ನಡೆಯುತ್ತಿದೆ. ಆರು ದಿನಗಳಿಂದ ಅಮರಣಾಂತ ಉಪವಾಸ ಮಾಡಲಾಗುತ್ತಿದೆ. ಆದರೆ ಕೆಲ ಕಬ್ಬು ಬೆಳೆಗಾರರು ಪೊಲೀಸ್ ಕಾವಲಿನೊಂದಿಗೆ ಕಬ್ಬನ್ನು ಸಕ್ಕರೆ ಕಾರ್ಖಾನೆಗೆ ಸಾಗಿಸಿದ್ದು ಕಲ್ಲು ತೂರಾಟಕ್ಕೆ ಕಾರಣವಾಯಿತು.

ಹಳಿಯಾಳದ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಲಾರಿಯೆದುರು ಅಡ್ಡಬಿದ್ದು ಕಬ್ಬು ಸಾಗಿಸದಂತೆ ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಲಾರಿಗೆ ಕಲ್ಲು ಎಸೆದಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಬೀಸಿದ್ದಾರೆ.

ಹಳಿ ತಪ್ಪಿದ ಹಳಿಯಾಳದ ಕಬ್ಬು ಬೆಳೆಗಾರರ ಪ್ರತಿಭಟನೆ

ಇದಾದ ಬಳಿಕ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನೊಂದೆಡೆ, ಹಳಿಯಾಳ ಪೊಲೀಸ್ ಠಾಣೆ ಎದುರು ಬೃಹತ್ ಸಂಖ್ಯೆಯಲ್ಲಿ ಬೆಳೆಗಾರರು ಜಮಾಯಿಸುತ್ತಿದ್ದಾರೆ. ಹಳ್ಳಿ ಹಳ್ಳಿಗಳಿಂದ ರೈತರು ರಾತ್ರಿ ಠಾಣೆಗೆ ಬರುತ್ತಿದ್ದು, ಪ್ರತಿಭಟನೆ ತೀವ್ರಗೊಳ್ಳುವ ಲಕ್ಷಣ ಗೋಚರಿಸುತ್ತಿದೆ.

ಇದನ್ನೂ ಓದಿ: ಧಾರವಾಡದಲ್ಲಿ ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ: ಉರುಳುಸೇವೆ, ಅರೆಬೆತ್ತಲೆ ಪ್ರತಿಭಟನೆ

Last Updated : Nov 3, 2022, 2:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.