ETV Bharat / state

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಅಬ್ಬರ: ಇನ್ನೂ ಮೂರ್ನಾಲ್ಕು ದಿನ ವರ್ಷಧಾರೆ ಸಾಧ್ಯತೆ!

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಭಾಗಗಳಲ್ಲಿ ಮಳೆ ಜೋರಾಗಿದ್ದು, ಘಟ್ಟದ ಮೇಲ್ಭಾಗದ ತಾಲೂಕುಗಳಲ್ಲಿ ಕೊಂಚ ಕಡಿಮೆಯಿದೆ. ಕರಾವಳಿ ತಾಲೂಕುಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

author img

By

Published : Jul 27, 2020, 4:34 PM IST

Heavy rain continues in Uttara Kannada

ಕಾರವಾರ: ಕಳೆದ ಮೂರ್ನಾಲ್ಕು ದಿನಗಳಿಂದ ಮಾಯವಾಗಿದ್ದ ಮಳೆ ಅಬ್ಬರ ಕರಾವಳಿಯಲ್ಲಿ ಮತ್ತೆ ಜೋರಾಗಿದ್ದು, ಇಂದು ಬೆಳಗ್ಗೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿದೆ.

ಉತ್ತರ ಕನ್ನಡ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಸುರಿಯಲಾರಂಭಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಆಗಾಗ ಸುರಿಯುತ್ತಿದ್ದ ಮಳೆ ಇಂದು ಧಾರಾಕಾರವಾಗಿ ಸುರಿಯುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಕರಾವಳಿಯಲ್ಲಿ ಮಳೆ ಅಬ್ಬರ

ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಭಾಗಗಳಲ್ಲಿ ಮಳೆ ಜೋರಾಗಿದ್ದು, ಘಟ್ಟದ ಮೇಲ್ಭಾಗದ ತಾಲೂಕುಗಳಲ್ಲಿ ಕೊಂಚ ಕಡಿಮೆಯಿದೆ. ಕರಾವಳಿ ತಾಲೂಕುಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಾರವಾರ: ಕಳೆದ ಮೂರ್ನಾಲ್ಕು ದಿನಗಳಿಂದ ಮಾಯವಾಗಿದ್ದ ಮಳೆ ಅಬ್ಬರ ಕರಾವಳಿಯಲ್ಲಿ ಮತ್ತೆ ಜೋರಾಗಿದ್ದು, ಇಂದು ಬೆಳಗ್ಗೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿದೆ.

ಉತ್ತರ ಕನ್ನಡ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಸುರಿಯಲಾರಂಭಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಆಗಾಗ ಸುರಿಯುತ್ತಿದ್ದ ಮಳೆ ಇಂದು ಧಾರಾಕಾರವಾಗಿ ಸುರಿಯುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಕರಾವಳಿಯಲ್ಲಿ ಮಳೆ ಅಬ್ಬರ

ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಭಾಗಗಳಲ್ಲಿ ಮಳೆ ಜೋರಾಗಿದ್ದು, ಘಟ್ಟದ ಮೇಲ್ಭಾಗದ ತಾಲೂಕುಗಳಲ್ಲಿ ಕೊಂಚ ಕಡಿಮೆಯಿದೆ. ಕರಾವಳಿ ತಾಲೂಕುಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.