ETV Bharat / state

ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಸ್ಪರ್ಧಿಸ್ತಾರಾ? ಸಭೆಯಲ್ಲಿ ಬೆಂಬಲಿಗರ ಘೋಷಣೆ

ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಸ್ಪರ್ಧಿಸುತ್ತಾರಾ? ಎಂಬ ಗುಮಾನಿ ಎದ್ದಿದೆ.

author img

By

Published : Nov 5, 2019, 9:37 PM IST

ಯಲ್ಲಾಪುರದಲ್ಲಿ ನಡೆದ ಶಿವರಾಮ ಹೆಬ್ಬಾರ್ ಬೆಂಬಲಿಗರ ಸಭೆ

ಶಿರಸಿ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ಘೋಷಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ, ಶಾಸಕತ್ವದಿಂದ ಅನರ್ಹಗೊಂಡಿರುವ ಶಿವರಾಮ ಹೆಬ್ಬಾರ್ ಅಭಿಮಾನಿಗಳು ಸಭೆ ಸೇರಿ ಬಿಜೆಪಿಯಿಂದ ತಮ್ಮ ನಾಯಕರು ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿಕೊಂಡರು.

ಅನರ್ಹತೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಅನರ್ಹ ಶಾಸಕರಲ್ಲಿ ಒಬ್ಬರಾಗಿರುವ ಶಿವರಾಮ್ ಹೆಬ್ಬಾರ್, ಕೋರ್ಟ್ ತೀರ್ಪು ಬರುವ ತನಕ ಕಾಯುವುದಾಗಿ ಈ ಹಿಂದೆ ಹೇಳಿಕೊಂಡಿದ್ದರು. ಅಲ್ಲದೇ, ಯಾವುದೇ ಪಕ್ಷದಲ್ಲೂ ಗುರುತಿಸಿಕೊಳ್ಳದೇ ತಟಸ್ಥರಾಗಿದ್ದರು.

ನಾನು ಬಿಜೆಪಿ ಸೇರಿಲ್ಲ, ಕೋರ್ಟ್ ತೀರ್ಪು ಬಂದ ಬಳಿಕ ಎಲ್ಲ 15 ಜನರೂ ಒಟ್ಟಾಗಿ ಸಾಮೂಹಿಕ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ಹೇಳುತ್ತಿದ್ದರು. ಆದರೆ ಕ್ಷೇತ್ರದಲ್ಲಿ ಅವರ ನೇತೃತ್ವದಲ್ಲೇ ನಡೆದ ಸಭೆಯಲ್ಲಿ ಅಭಿಮಾನಿಗಳು ಬಿಜೆಪಿ ಬೆಂಬಲ ಪಡೆದು ಆ ಪಕ್ಷದಡಿಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ.

ಯಲ್ಲಾಪುರದಲ್ಲಿ ಬೆಂಬಲಿಗರ ಸಭೆ ನಡೆಸಿದ ಶಿವರಾಮ ಹೆಬ್ಬಾರ್

ಬನವಾಸಿ ಹೋಬಳಿಯ ಬದನಗೋಡ, ಬಿಸಲಕೊಪ್ಪ, ಅಂಡಗಿ, ಬಂಕನಾಳ, ಉಂಚಳ್ಳಿ, ಹಲಗದ್ದೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆಂಬಲಿಗರ ಸಭೆ ನಡೆಸಿದ ಹೆಬ್ಬಾರ್, ಉಪಚುನಾವಣೆಯ ಕುರಿತು ಚರ್ಚಿಸಿದ್ದಾರೆ. ಈ ಸಭೆಯಲ್ಲಿ ಹೆಬ್ಬಾರ್ ಕಟ್ಟಾ ಬೆಂಬಲಿಗ ದ್ಯಾಮಣ್ಣ ದೊಡ್ಮನಿ ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ, ಸಾಹೇಬ್ರು ಬಿಜೆಪಿಯಿಂದ ಸ್ಪರ್ಧಿಸಲಿದ್ದು, ಅವರಿಗೆ ನಾವೆಲ್ಲರೂ ಬೆಂಬಲ ನೀಡಿ ಗೆಲ್ಲಿಸೋಣ ಎಂದು ಕರೆ ಕೊಟ್ಟರು. ಆದರೆ ಈ ಬಗ್ಗೆ ಪಕ್ಕದಲ್ಲೇ ಕುಳಿತಿದ್ದ ಹೆಬ್ಬಾರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಬಳಿಕ ಮಾತನಾಡಿದ ಹೆಬ್ಬಾರ್, ಕಾಂಗ್ರೆಸ್ ನಾಯಕರು ಜಾತಿ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ರು. ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇನೆ ಎಂದರು.

ದಾಸನಕೊಪ್ಪ ಹಾಗೂ ಬನವಾಸಿ ಭಾಗದಲ್ಲಿ ಸಭೆ ನಡೆಸಿ ಚುನಾವಣೆ ತಯಾರಿ ನಡೆಸುವಂತೆಯೂ ಹೆಬ್ಬಾರ್ ತಮ್ಮ ಬೆಂಬಲಿಗರಿಗೆ ಕರೆ ಕೊಟ್ಟಿದ್ದಾರೆ.

ಶಿರಸಿ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ಘೋಷಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ, ಶಾಸಕತ್ವದಿಂದ ಅನರ್ಹಗೊಂಡಿರುವ ಶಿವರಾಮ ಹೆಬ್ಬಾರ್ ಅಭಿಮಾನಿಗಳು ಸಭೆ ಸೇರಿ ಬಿಜೆಪಿಯಿಂದ ತಮ್ಮ ನಾಯಕರು ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿಕೊಂಡರು.

ಅನರ್ಹತೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಅನರ್ಹ ಶಾಸಕರಲ್ಲಿ ಒಬ್ಬರಾಗಿರುವ ಶಿವರಾಮ್ ಹೆಬ್ಬಾರ್, ಕೋರ್ಟ್ ತೀರ್ಪು ಬರುವ ತನಕ ಕಾಯುವುದಾಗಿ ಈ ಹಿಂದೆ ಹೇಳಿಕೊಂಡಿದ್ದರು. ಅಲ್ಲದೇ, ಯಾವುದೇ ಪಕ್ಷದಲ್ಲೂ ಗುರುತಿಸಿಕೊಳ್ಳದೇ ತಟಸ್ಥರಾಗಿದ್ದರು.

ನಾನು ಬಿಜೆಪಿ ಸೇರಿಲ್ಲ, ಕೋರ್ಟ್ ತೀರ್ಪು ಬಂದ ಬಳಿಕ ಎಲ್ಲ 15 ಜನರೂ ಒಟ್ಟಾಗಿ ಸಾಮೂಹಿಕ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ಹೇಳುತ್ತಿದ್ದರು. ಆದರೆ ಕ್ಷೇತ್ರದಲ್ಲಿ ಅವರ ನೇತೃತ್ವದಲ್ಲೇ ನಡೆದ ಸಭೆಯಲ್ಲಿ ಅಭಿಮಾನಿಗಳು ಬಿಜೆಪಿ ಬೆಂಬಲ ಪಡೆದು ಆ ಪಕ್ಷದಡಿಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ.

ಯಲ್ಲಾಪುರದಲ್ಲಿ ಬೆಂಬಲಿಗರ ಸಭೆ ನಡೆಸಿದ ಶಿವರಾಮ ಹೆಬ್ಬಾರ್

ಬನವಾಸಿ ಹೋಬಳಿಯ ಬದನಗೋಡ, ಬಿಸಲಕೊಪ್ಪ, ಅಂಡಗಿ, ಬಂಕನಾಳ, ಉಂಚಳ್ಳಿ, ಹಲಗದ್ದೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆಂಬಲಿಗರ ಸಭೆ ನಡೆಸಿದ ಹೆಬ್ಬಾರ್, ಉಪಚುನಾವಣೆಯ ಕುರಿತು ಚರ್ಚಿಸಿದ್ದಾರೆ. ಈ ಸಭೆಯಲ್ಲಿ ಹೆಬ್ಬಾರ್ ಕಟ್ಟಾ ಬೆಂಬಲಿಗ ದ್ಯಾಮಣ್ಣ ದೊಡ್ಮನಿ ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ, ಸಾಹೇಬ್ರು ಬಿಜೆಪಿಯಿಂದ ಸ್ಪರ್ಧಿಸಲಿದ್ದು, ಅವರಿಗೆ ನಾವೆಲ್ಲರೂ ಬೆಂಬಲ ನೀಡಿ ಗೆಲ್ಲಿಸೋಣ ಎಂದು ಕರೆ ಕೊಟ್ಟರು. ಆದರೆ ಈ ಬಗ್ಗೆ ಪಕ್ಕದಲ್ಲೇ ಕುಳಿತಿದ್ದ ಹೆಬ್ಬಾರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಬಳಿಕ ಮಾತನಾಡಿದ ಹೆಬ್ಬಾರ್, ಕಾಂಗ್ರೆಸ್ ನಾಯಕರು ಜಾತಿ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ರು. ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇನೆ ಎಂದರು.

ದಾಸನಕೊಪ್ಪ ಹಾಗೂ ಬನವಾಸಿ ಭಾಗದಲ್ಲಿ ಸಭೆ ನಡೆಸಿ ಚುನಾವಣೆ ತಯಾರಿ ನಡೆಸುವಂತೆಯೂ ಹೆಬ್ಬಾರ್ ತಮ್ಮ ಬೆಂಬಲಿಗರಿಗೆ ಕರೆ ಕೊಟ್ಟಿದ್ದಾರೆ.

Intro:ಶಿರಸಿ :
Intro :
ಡಿಸೆಂಬರ್‌ನಲ್ಲಿ ನಡೆಯಲಿರುವ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಘೋಷಣೆ ಮಾಡಿರುವ ಬೆನ್ನಲ್ಲೇ, ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಶಿವರಾಮ ಹೆಬ್ಬಾರ್ ಅಭಿಮಾನಿಗಳು ಸಭೆ ಸೇರಿ ಬಿಜೆಪಿಯಿಂದ ತಮ್ಮ ನಾಯಕರು ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದ್ದಾರೆ.
V-1 :
ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ 15 ಜನರಲ್ಲಿ ಒಬ್ಬರಾಗಿರುವ ಅವರು, ಕೋರ್ಟ್ ತೀರ್ಪು ಬರುವ ತನಕ ಕಾಯುವುದಾಗಿ ಹೇಳಿಕೊಂಡಿದ್ದರು. ಅಲ್ಲದೇ, ಯಾವುದೇ ಪಕ್ಷದಲ್ಲೂ ಗುರುತಿಸಿಕೊಳ್ಳದೇ ತಟಸ್ಥರಾಗಿದ್ದರು. ‘ನಾನು ಬಿಜೆಪಿ ಸೇರಿಲ್ಲ, ಕೋರ್ಟ್ ತೀರ್ಪು ಬಂದ ಮೇಲೆ ಎಲ್ಲ 15 ಜನರು ಒಟ್ಟಾಗಿ ಸಾಮೂಹಿಕ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಕೂಡ ಹೇಳುತ್ತಿದ್ದರು. ಆದರೆ ಕ್ಷೇತ್ರದಲ್ಲಿ ಅವರ ನೇತೃತ್ವದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಅವರ ಬೆಂಬಲಿಗರು ಬಿಜೆಪಿ ಬೆಂಬಲ ಪಡೆದು ಆ ಪಕ್ಷದ ಅಡಿಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬೈಟ್ (೧) : ದ್ಯಾಮಣ್ಣ ದೊಡ್ಮನಿ, ಹೆಬ್ಬಾರ್ ಬೆಂಬಲಿಗ

Body:V-2 :
ಸೋಮವಾರ ಬನವಾಸಿ ಹೋಬಳಿಯ ಬದನಗೋಡ, ಬಿಸಲಕೊಪ್ಪ, ಅಂಡಗಿ, ಬಂಕನಾಳ, ಉಂಚಳ್ಳಿ, ಹಲಗದ್ದೆ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ಬೆಂಬಲಿಗರ ಸಭೆ ನಡೆಸಿದ ಹೆಬ್ಬಾರ್, ಉಪಚುನಾವಣೆಯ ಕುರಿತು ಚರ್ಚಿಸಿದ್ದಾರೆ. ಸಭೆಯಲ್ಲಿ ಹೆಬ್ಬಾರ್ ಕಟ್ಟಾ ಬೆಂಬಲಿಗ ದ್ಯಾಮಣ್ಣ ದೊಡ್ಮನಿ ಪ್ರಾಸ್ತಾವಿಕ ಮಾತುಗಳಲ್ಲಿ 'ಸಾಹೇಬರು ಬಿಜೆಪಿಯಿಂದ ಸ್ಪರ್ಧಿಸಲಿದ್ದು, ಅವರಿಗೆ ನಾವೆಲ್ಲರೂ ಬೆಂಬಲ ನೀಡಿ ಗೆಲ್ಲಿಸೋಣ ' ಎಂದು ಕರೆ ನೀಡಿದ್ದಾರೆ. ಆದರೆ ಈ ಬಗ್ಗೆ ಪಕ್ಕದಲ್ಲೇ ಕುಳಿತಿದ್ದ ಹೆಬ್ಬಾರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
V-3 :
ದಾಸನಕೊಪ್ಪ ಹಾಗೂ ಬನವಾಸಿ ಭಾಗದಲ್ಲಿ ಸಭೆ ನಡೆಸಿ ಚುನಾವಣೆ ತಯಾರಿ ನಡೆಸುವಂತೆ ಹೆಬ್ಬಾರ್ ಕರೆ ಕೊಟ್ಟಿದ್ದಾರೆ. ಕಾಂಗ್ರೆಸ್ ನಾಯಕರ ಮೇಲೆ ವಾಗ್ದಾಳಿ ನಡೆಸಿದ ಅವರು, ಜಾತಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಎಲ್ಲಾ ಸರ್ಕಾರ ಇದ್ದಾಗ ಅಭಿವೃದ್ಧಿ ಮಾಡಿದ್ದು, ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ‌

ಬೈಟ್ (೨) : ಶಿವರಾಮ್ ಹೆಬ್ಬಾರ್, ಅನರ್ಹ ಶಾಸಕ.
..........
ಸಂದೇಶ ಭಟ್ ಶಿರಸಿ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.