ETV Bharat / state

ನಿಂತ ಲಾರಿ ಮೇಲೆ ಕುಸಿದ ಗುಡ್ಡ.... ಚಾಲಕ ಪ್ರಾಣಪಾಯದಿಂದ ಪಾರು - undefined

ಉತ್ತರಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನದಿಂದ ಎಡ ಬಿಡದೆ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ನಿಲ್ಲಿಸಿದ್ದ ಲಾರಿಯ ಮೇಲೆ ಭಾರಿ ಪ್ರಮಾಣದ ಮಣ್ಣು ಹಾಗೂ ಮರಗಳು ಕುಸಿದು ಬಿದ್ದ ಕಾರಣ ಲಾರಿ ಪಲ್ಟಿಯಾಗಿದ್ದು, ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ.

ಲಾರಿ ಮೇಲೆ ಕುಸಿದ ಗುಡ್ಡ
author img

By

Published : Jul 11, 2019, 12:13 PM IST

ಕಾರವಾರ: ನಿಂತ ಲಾರಿ ಮೇಲೆ ಗುಡ್ಡ ಕುಸಿದು ಲಾರಿ ಚಾಲಕ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ನಡೆದಿದೆ.

ಲಾರಿ ಮೇಲೆ ಕುಸಿದ ಗುಡ್ಡ

ಹುಬ್ಬಳ್ಳಿಯಿಂದ ಅಂಕೋಲಾ ಕಡೆ ಬರುತ್ತಿದ್ದ ಲಾರಿಯೊಂದನ್ನು ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ಆದರೆ ಗುಡ್ಡದಿಂದ ಭಾರಿ ಪ್ರಮಾಣದ ಮಣ್ಣು ಹಾಗೂ ಮರಗಳು ಲಾರಿ ಮೇಲೆಯೇ ಕುಸಿದು ಬಿದ್ದ ಕಾರಣ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಚಾಲಕ ಗಾಯಗೊಂಡಿದ್ದು, ತಕ್ಷಣ ಆತನನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಗಾಗಲೇ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ಗುಡ್ಡ ತೆರವಿಗೆ ಕ್ರಮ ಕೈಗೊಂಡಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಉದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿವೆ. ಉತ್ತರಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನದಿಂದ ಎಡಬಿಡದೆ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66 ಮತ್ತು 63 ರ ಕೆಲ ಭಾಗಗಳಲ್ಲಿ ಗುಡ್ಡ ಕುಸಿತ ಮುಂದುವರಿಯಲಿದೆ ಎನ್ನಲಾಗಿದೆ.

ಕಾರವಾರ: ನಿಂತ ಲಾರಿ ಮೇಲೆ ಗುಡ್ಡ ಕುಸಿದು ಲಾರಿ ಚಾಲಕ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ನಡೆದಿದೆ.

ಲಾರಿ ಮೇಲೆ ಕುಸಿದ ಗುಡ್ಡ

ಹುಬ್ಬಳ್ಳಿಯಿಂದ ಅಂಕೋಲಾ ಕಡೆ ಬರುತ್ತಿದ್ದ ಲಾರಿಯೊಂದನ್ನು ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ಆದರೆ ಗುಡ್ಡದಿಂದ ಭಾರಿ ಪ್ರಮಾಣದ ಮಣ್ಣು ಹಾಗೂ ಮರಗಳು ಲಾರಿ ಮೇಲೆಯೇ ಕುಸಿದು ಬಿದ್ದ ಕಾರಣ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಚಾಲಕ ಗಾಯಗೊಂಡಿದ್ದು, ತಕ್ಷಣ ಆತನನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಗಾಗಲೇ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ಗುಡ್ಡ ತೆರವಿಗೆ ಕ್ರಮ ಕೈಗೊಂಡಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಉದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿವೆ. ಉತ್ತರಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನದಿಂದ ಎಡಬಿಡದೆ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66 ಮತ್ತು 63 ರ ಕೆಲ ಭಾಗಗಳಲ್ಲಿ ಗುಡ್ಡ ಕುಸಿತ ಮುಂದುವರಿಯಲಿದೆ ಎನ್ನಲಾಗಿದೆ.

Intro:ಅಂಕೋಲಾ ಬಳಿ ನಿಂತಿದ್ದ ಲಾರಿ ಮೇಲೆಯೇ ಗುಡ್ಡ ಕುಸಿತ.... ಚಾಲಕ ಪ್ರಾಣಪಾಯದಿಂದ ಪಾರು
ಕಾರವಾರ: ನಿಂತಿದ್ದ ಲಾರಿ ಮೇಲೆ ಗುಡ್ಡ ಕುಸಿದು ಲಾರಿ ಚಾಲಕನೋರ್ವ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ರಾಮನಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ ೬೩ ರಲ್ಲಿ ನಡೆದಿದೆ.
ಹುಬ್ಬಳ್ಳಿ ಯಿಂದ ಅಂಕೋಲಾ ಕಡೆ ಬರುತ್ತಿದ್ದ ಲಾರಿಯೊಂದು ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ಆದರೆ ಗುಡ್ಡದಿಂದ ಭಾರಿ ಪ್ರಮಾಣದಲ್ಲಿ ಮಣ್ಣು ಹಾಗೂ ಮರಗಳು ಲಾರಿ ಮೇಲೆಯೇ ಕುಸಿದು ಬಿದ್ದ ಕಾರಣ ಪಲ್ಟಿಯಾಗಿದೆ. ಇದರಲ್ಲಿದ್ದ ಚಾಲಕ ಗಾಯಗೊಂಡಿದ್ದು, ತಕ್ಷಣ ಆತನನ್ನು ಅಂಕೋಲಾ ತಾಲೂಕಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈಗಾಗಲೇ ಸ್ಥಳಕ್ಕೆ ದೌಡಾಯಿಸಿರುವ ಅಧಿಕಾರಿಗಳು ಗುಡ್ಡತೆರವಿಗೆ ಕ್ರಮ ಕೈಗೊಂಡಿದ್ದು, ಹೆದ್ದಾರಿಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿವೆ.
ಉತ್ತರಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನದಿಂದ ಎಡಬಿಡದೆ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ೬೬ ಮತ್ತು ೬೩ರ ಕೆಲ ಭಾಗಗಳಲ್ಲಿ ಗುಡ್ಡ ಕುಸಿತದ ಆತಂಕ ಮುಂದುವರಿದಿದೆ. Body:KConclusion:K

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.