ETV Bharat / state

'ಸಿದ್ದರಾಮಯ್ಯ ಮೈನಾರಿಟಿ ವೋಟಿಗೆ ಜೊಲ್ಲು ಸುರಿಸುತ್ತಿರೋದು ಬಿಟ್ರೆ ಬೇರೇನಿಲ್ಲ': ಗೃಹ ಸಚಿವ

author img

By

Published : Oct 26, 2021, 11:02 PM IST

ಕೇಸರಿ ಬ್ಯಾನ್ ಆಗಿದ್ಯಾ? ಅಥವಾ ಯಾವುದೋ ಪಕ್ಷಕ್ಕೆ ಸೀಮಿತವಾಗಿದ್ಯಾ? ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ.

Home Minister Aaraga jnanendra
ಗೃಹ ಸಚಿವ ಆರಗ ಜ್ಞಾನೇಂದ್ರ

ಕಾರವಾರ: ಸಿದ್ದರಾಮಯ್ಯ ಅವರು ಮೈನಾರಿಟಿ ವೋಟಿಗಾಗಿ ಜೊಲ್ಲು ಸುರಿಸುತ್ತಿರೋದು ಬಿಟ್ರೆ ಬೇರೇನಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಚಾಟಿ ಬೀಸಿದ್ದಾರೆ.

ಕುಮಟಾ ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದ ಅವರು ದೇವರಿಗೆ ಪೂಜೆ ಸಲ್ಲಿಸಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದರು. ಆರ್‌ಎಸ್ಎಸ್ ಬಗ್ಗೆ ಎಷ್ಟು ಕೆಳಮಟ್ಟದಲ್ಲಿ ಮಾತನಾಡುತ್ತಾರೋ, ಅಷ್ಟು ಅಲ್ಪಸಂಖ್ಯಾತರ ವೋಟು ಬೀಳುತ್ತವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭಾವಿಸಿದ್ದಾರೆ. ಆದರೆ, ಅದ್ಯಾವುದೂ ಸಿಗೋದಿಲ್ಲ. ಇದೆಲ್ಲಾ ಅವರ ಭ್ರಮೆ ಅಷ್ಟೇ. ಆರ್‌ಎಸ್‌ಎಸ್‌ ಅನ್ನು ದೂರಿದಷ್ಟು ಅವರೇ ಕಳೆದು ಹೋಗುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಸ್ವಯಂ ಯೋಗ್ಯತೆ ಇಲ್ಲದೇ ಇದ್ರೂ ಕಾಂಗ್ರೆಸ್ ಅಧ್ಯಕ್ಷರಾಗಿ ಬಂದವರಿದ್ದಾರೆ. ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ಅವರ ಪುತ್ರನಿಗೆ ಏನೂ ಅರ್ಹತೆ ಇಲ್ಲದಿದ್ದರೂ ಬಂದು ಬಿಡ್ತಾರೆ. ಮಗ ಎನ್ನುವ ಕಾರಣಕ್ಕೆ ಅರ್ಹತೆ, ಯೋಗ್ಯತೆ ಇದ್ದವರು ಮೂಲೆಗುಂಪು ಸಹ ಆಗಬಾರದು. ಸೇವಾ ಮನೋಭಾವ, ರಾಜಕೀಯ ಆಸಕ್ತಿ ಹಾಗೂ ಜ್ಞಾನ ಇರೋರಿಗೆ ಉತ್ತಮ ಸ್ಥಾನ ನೀಡಲಿ ಎಂದರು.

ಸೈದ್ಧಾಂತಿಕವಾಗಿ ಯಾರಿಗೆ ಪಕ್ಷ ಕಟ್ಟಲು ಯೋಗ್ಯತೆ ಇಲ್ಲವೋ ಅವರು ಜಾತಿಯನ್ನು ಬಂಡವಾಳ ಮಾಡಿಕೊಳ್ಳುತ್ತಾರೆ. ಆದರೆ, ನಮ್ಮ ಬಗ್ಗೆ ಮಾತನಾಡುತ್ತಾರೆ. ಜಾತಿವಾದ ಮಾಡುವುದೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು. ಹೀಗಾಗಿ, ಜನರು ಇವರನ್ನು ತಿರಸ್ಕಾರ ಮಾಡುತ್ತಾರೆ ಎಂದು ತಿರುಗೇಟು ನೀಡಿದರು.

ನಮ್ಮ ಬಗ್ಗೆ ಮಾತನಾಡುವವರು ಸೈದ್ಧಾಂತಿಕವಾಗಿ ಪಕ್ಷ ಕಟ್ಟಲಿ. ಹೋರಾಟ ಮಾಡಲಿ. ಅದನ್ನು ಬಿಟ್ಟು ಜಾತಿ ಹೆಸರಲ್ಲಿ ಕೇವಲ ಮೇಲೆಬ್ಬಿಸಿ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಜಾತಿಯಲ್ಲಿ ಎಲ್ಲರ ಉದ್ಧಾರನೂ ಮಾಡಲ್ಲ. ಇವರ ಉದ್ಧಾರಕ್ಕೋಸ್ಕರ ಜಾತಿಯನ್ನು ಎಬ್ಬಿಸುತ್ತಾರೆ ಎಂದರು.

ಇತ್ತೀಚೆಗೆ ಪೊಲೀಸ್ ಠಾಣೆಯಲ್ಲಿ ಕೇಸರಿ ಧರಿಸಿದ್ದಕ್ಕೆ ಸಿದ್ದರಾಮಯ್ಯ ಟೀಕೆ ಮಾಡಿದ್ದರು. ಏನು ಕೇಸರಿ ಬ್ಯಾನ್ ಆಗಿದ್ಯಾ? ಅಥವಾ ಯಾವುದೋ ಪಕ್ಷಕ್ಕೆ ಸೀಮಿತವಾಗಿದ್ಯಾ? ಎಂದು ಪ್ರಶ್ನಿಸಿದರು. ಇವರು ನಾಳೆ ರಾಷ್ಟ್ರಧ್ವಜದ ಕೇಸರಿ ತೆಗೆದು ಬರೀ ಹಸಿರು ಇದ್ದರೆ ಸಾಕು ಅನ್ನಬಹುದು ಎಂದು ವಾಗ್ದಾಳಿ ನಡೆಸಿದರು.

ಓದಿ: ಸಿಎಂ ತಾತಾ ರಸ್ತೆ ಸರಿ ಮಾಡ್ಸಿ, ನನ್ನ ಪಾಕೆಟ್​ ಮನಿ ಕೊಡ್ತೇನಿ: ಬೊಮ್ಮಾಯಿಗೆ ಬಾಲಕಿ ಮನವಿ

ಕಾರವಾರ: ಸಿದ್ದರಾಮಯ್ಯ ಅವರು ಮೈನಾರಿಟಿ ವೋಟಿಗಾಗಿ ಜೊಲ್ಲು ಸುರಿಸುತ್ತಿರೋದು ಬಿಟ್ರೆ ಬೇರೇನಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಚಾಟಿ ಬೀಸಿದ್ದಾರೆ.

ಕುಮಟಾ ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದ ಅವರು ದೇವರಿಗೆ ಪೂಜೆ ಸಲ್ಲಿಸಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದರು. ಆರ್‌ಎಸ್ಎಸ್ ಬಗ್ಗೆ ಎಷ್ಟು ಕೆಳಮಟ್ಟದಲ್ಲಿ ಮಾತನಾಡುತ್ತಾರೋ, ಅಷ್ಟು ಅಲ್ಪಸಂಖ್ಯಾತರ ವೋಟು ಬೀಳುತ್ತವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭಾವಿಸಿದ್ದಾರೆ. ಆದರೆ, ಅದ್ಯಾವುದೂ ಸಿಗೋದಿಲ್ಲ. ಇದೆಲ್ಲಾ ಅವರ ಭ್ರಮೆ ಅಷ್ಟೇ. ಆರ್‌ಎಸ್‌ಎಸ್‌ ಅನ್ನು ದೂರಿದಷ್ಟು ಅವರೇ ಕಳೆದು ಹೋಗುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಸ್ವಯಂ ಯೋಗ್ಯತೆ ಇಲ್ಲದೇ ಇದ್ರೂ ಕಾಂಗ್ರೆಸ್ ಅಧ್ಯಕ್ಷರಾಗಿ ಬಂದವರಿದ್ದಾರೆ. ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ಅವರ ಪುತ್ರನಿಗೆ ಏನೂ ಅರ್ಹತೆ ಇಲ್ಲದಿದ್ದರೂ ಬಂದು ಬಿಡ್ತಾರೆ. ಮಗ ಎನ್ನುವ ಕಾರಣಕ್ಕೆ ಅರ್ಹತೆ, ಯೋಗ್ಯತೆ ಇದ್ದವರು ಮೂಲೆಗುಂಪು ಸಹ ಆಗಬಾರದು. ಸೇವಾ ಮನೋಭಾವ, ರಾಜಕೀಯ ಆಸಕ್ತಿ ಹಾಗೂ ಜ್ಞಾನ ಇರೋರಿಗೆ ಉತ್ತಮ ಸ್ಥಾನ ನೀಡಲಿ ಎಂದರು.

ಸೈದ್ಧಾಂತಿಕವಾಗಿ ಯಾರಿಗೆ ಪಕ್ಷ ಕಟ್ಟಲು ಯೋಗ್ಯತೆ ಇಲ್ಲವೋ ಅವರು ಜಾತಿಯನ್ನು ಬಂಡವಾಳ ಮಾಡಿಕೊಳ್ಳುತ್ತಾರೆ. ಆದರೆ, ನಮ್ಮ ಬಗ್ಗೆ ಮಾತನಾಡುತ್ತಾರೆ. ಜಾತಿವಾದ ಮಾಡುವುದೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು. ಹೀಗಾಗಿ, ಜನರು ಇವರನ್ನು ತಿರಸ್ಕಾರ ಮಾಡುತ್ತಾರೆ ಎಂದು ತಿರುಗೇಟು ನೀಡಿದರು.

ನಮ್ಮ ಬಗ್ಗೆ ಮಾತನಾಡುವವರು ಸೈದ್ಧಾಂತಿಕವಾಗಿ ಪಕ್ಷ ಕಟ್ಟಲಿ. ಹೋರಾಟ ಮಾಡಲಿ. ಅದನ್ನು ಬಿಟ್ಟು ಜಾತಿ ಹೆಸರಲ್ಲಿ ಕೇವಲ ಮೇಲೆಬ್ಬಿಸಿ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಜಾತಿಯಲ್ಲಿ ಎಲ್ಲರ ಉದ್ಧಾರನೂ ಮಾಡಲ್ಲ. ಇವರ ಉದ್ಧಾರಕ್ಕೋಸ್ಕರ ಜಾತಿಯನ್ನು ಎಬ್ಬಿಸುತ್ತಾರೆ ಎಂದರು.

ಇತ್ತೀಚೆಗೆ ಪೊಲೀಸ್ ಠಾಣೆಯಲ್ಲಿ ಕೇಸರಿ ಧರಿಸಿದ್ದಕ್ಕೆ ಸಿದ್ದರಾಮಯ್ಯ ಟೀಕೆ ಮಾಡಿದ್ದರು. ಏನು ಕೇಸರಿ ಬ್ಯಾನ್ ಆಗಿದ್ಯಾ? ಅಥವಾ ಯಾವುದೋ ಪಕ್ಷಕ್ಕೆ ಸೀಮಿತವಾಗಿದ್ಯಾ? ಎಂದು ಪ್ರಶ್ನಿಸಿದರು. ಇವರು ನಾಳೆ ರಾಷ್ಟ್ರಧ್ವಜದ ಕೇಸರಿ ತೆಗೆದು ಬರೀ ಹಸಿರು ಇದ್ದರೆ ಸಾಕು ಅನ್ನಬಹುದು ಎಂದು ವಾಗ್ದಾಳಿ ನಡೆಸಿದರು.

ಓದಿ: ಸಿಎಂ ತಾತಾ ರಸ್ತೆ ಸರಿ ಮಾಡ್ಸಿ, ನನ್ನ ಪಾಕೆಟ್​ ಮನಿ ಕೊಡ್ತೇನಿ: ಬೊಮ್ಮಾಯಿಗೆ ಬಾಲಕಿ ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.