ETV Bharat / state

ನೂತನ ರೈಲಿಗೆ ಹಸಿರು ನಿಶಾನೆ: ವೇದಿಕೆಯಲ್ಲಿದ್ದವರಿಗೆ ಮುಜುಗರ ತರಿಸಿದ ಕಾರ್ಯಕರ್ತರು - inaugurate to New train at karwar

ದಾಂಡೇಲಿಯ ಅಂಬೇವಾಡಿಯಿಂದ -ಅಳ್ನಾವರ ಮೂಲಕ ಸಂಚರಿಸುವ ನೂತನ ರೈಲಿಗೆ ಇಂದು ಅಂಬೇವಾಡದ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಲಾಯಿತು. ಈ ವೇಳೆ ಕಾರ್ಯಕರ್ತರು ತಮ್ಮ ತಮ್ಮ ನಾಯಕರ ಪರ ಘೋಷಣೆ ಕೂಗಿದ್ದರಿಂದ ವೇದಿಕೆಯಲ್ಲಿದ್ದವರು ಮುಜುಗರ ಅನುಭವಿಸಿದ್ದಾರೆ.

ನೂತನ ರೈಲಿಗೆ ಹಸಿರು ನಿಶಾನೆ:
author img

By

Published : Nov 3, 2019, 6:02 PM IST

ಕಾರವಾರ: ನೂತನ ರೈಲಿಗೆ ಹಸಿರು ನಿಶಾನೆ ತೋರಲು ಬಂದ ರೈಲ್ವೆ ಸಚಿವರ ಎದುರೇ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಮ್ಮ ತಮ್ಮ ನಾಯಕರ ಪರ ಘೋಷಣೆಗಳನ್ನು ಕೂಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಜಕೀಯ ಮುಖಂಡರಿಗೆ ಮುಜುಗರ ಉಂಟುಮಾಡಿದ್ದಾರೆ.

ದಾಂಡೇಲಿಯ ಅಂಬೇವಾಡಿಯಿಂದ -ಅಳ್ನಾವರ ಮೂಲಕ ಸಂಚರಿಸುವ ನೂತನ ರೈಲಿಗೆ ಇಂದು ಅಂಬೇವಾಡದ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಲಾಯಿತು. ಈ ಸಂದರ್ಭ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ, ಮಾಜಿ ಸಚಿವ ಆರ್.ವಿ. ದೇಶಪಾಂಡೆ ಸೇರಿದಂತೆ ಇನ್ನಿತರ ನಾಯಕರು ವೇದಿಕೆ ಏರಿದ್ದರು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಆರ್.ವಿ. ದೇಶಪಾಂಡೆ ಪರ ಘೋಷಣೆ ಕೂಗಿದರು. ಆದರೆ, ಇನ್ನೊಂದು ಬದಿಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಪರ ಘೋಷಣೆ ಕೂಗಿದ್ರು.

ನೂತನ ರೈಲಿಗೆ ಹಸಿರು ನಿಶಾನೆ

ಇನ್ನು ವಿಧಾನಪರಿಷತ್ ಸದಸ್ಯ ಎಸ್.ಎಲ್ ಗೋಟ್ನೇಕರ್ ತಮ್ಮ ಭಾಷಣದಲ್ಲಿ ರೈಲ್ವೆ ತರಲು ಪ್ರಯತ್ನಿಸಿದ ದೇಶಪಾಂಡೆ ಅವರ ಪರ ಬ್ಯಾಟಿಂಗ್​ ಮಾಡಿದರು. ಆದ್ರೆ, ಈ ವೇಳೆ ಮತ್ತೆ ಬಿಜೆಪಿ ಕಾರ್ಯಕರ್ತರು ಬಿಜೆಪಿ ಪರ ಘೋಷಣೆ ಕೂಗಿದರು. ಇದು ಹೀಗೆ ಕೆಲ ಕಾಲ ಮುಂದುವರಿದಾಗ ಪ್ರಹ್ಲಾದ್ ಜೋಶಿ ಮಧ್ಯ ಪ್ರವೇಶಿಸಿ, ಎಲ್ಲರೂ ರೈಲು ತರಲು ಶ್ರಮಿಸಿದ್ದಾರೆ‌. ಇದು ಒಬ್ಬರಿಂದಾದ ಕೆಲಸ ಅಲ್ಲ. ಇದಕ್ಕೆ ಎಲ್ಲ ಪಕ್ಷದ ನಾಯಕರು ಶ್ರಮಿಸಿದ್ದಾರೆ. ಜನಪ್ರತಿನಿಧಿಗಳಾದವರು ಕೆಲಸ ಮಾಡಿದರೆ ಮಾತ್ರ ಜನ ನಮ್ಮನ್ನು ಈ ಸ್ಥಾನದಲ್ಲಿ ಉಳಿಸುತ್ತಾರೆ. ಯಾರು ಈ ಕುರಿತು ಜಗಳವಾಡಬಾರದು ಎಂದು ಪರಿಸ್ಥಿತಿ ತಿಳಿಗೊಳಿಸಿದರು.

ಕಾರವಾರ: ನೂತನ ರೈಲಿಗೆ ಹಸಿರು ನಿಶಾನೆ ತೋರಲು ಬಂದ ರೈಲ್ವೆ ಸಚಿವರ ಎದುರೇ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಮ್ಮ ತಮ್ಮ ನಾಯಕರ ಪರ ಘೋಷಣೆಗಳನ್ನು ಕೂಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಜಕೀಯ ಮುಖಂಡರಿಗೆ ಮುಜುಗರ ಉಂಟುಮಾಡಿದ್ದಾರೆ.

ದಾಂಡೇಲಿಯ ಅಂಬೇವಾಡಿಯಿಂದ -ಅಳ್ನಾವರ ಮೂಲಕ ಸಂಚರಿಸುವ ನೂತನ ರೈಲಿಗೆ ಇಂದು ಅಂಬೇವಾಡದ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಲಾಯಿತು. ಈ ಸಂದರ್ಭ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ, ಮಾಜಿ ಸಚಿವ ಆರ್.ವಿ. ದೇಶಪಾಂಡೆ ಸೇರಿದಂತೆ ಇನ್ನಿತರ ನಾಯಕರು ವೇದಿಕೆ ಏರಿದ್ದರು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಆರ್.ವಿ. ದೇಶಪಾಂಡೆ ಪರ ಘೋಷಣೆ ಕೂಗಿದರು. ಆದರೆ, ಇನ್ನೊಂದು ಬದಿಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಪರ ಘೋಷಣೆ ಕೂಗಿದ್ರು.

ನೂತನ ರೈಲಿಗೆ ಹಸಿರು ನಿಶಾನೆ

ಇನ್ನು ವಿಧಾನಪರಿಷತ್ ಸದಸ್ಯ ಎಸ್.ಎಲ್ ಗೋಟ್ನೇಕರ್ ತಮ್ಮ ಭಾಷಣದಲ್ಲಿ ರೈಲ್ವೆ ತರಲು ಪ್ರಯತ್ನಿಸಿದ ದೇಶಪಾಂಡೆ ಅವರ ಪರ ಬ್ಯಾಟಿಂಗ್​ ಮಾಡಿದರು. ಆದ್ರೆ, ಈ ವೇಳೆ ಮತ್ತೆ ಬಿಜೆಪಿ ಕಾರ್ಯಕರ್ತರು ಬಿಜೆಪಿ ಪರ ಘೋಷಣೆ ಕೂಗಿದರು. ಇದು ಹೀಗೆ ಕೆಲ ಕಾಲ ಮುಂದುವರಿದಾಗ ಪ್ರಹ್ಲಾದ್ ಜೋಶಿ ಮಧ್ಯ ಪ್ರವೇಶಿಸಿ, ಎಲ್ಲರೂ ರೈಲು ತರಲು ಶ್ರಮಿಸಿದ್ದಾರೆ‌. ಇದು ಒಬ್ಬರಿಂದಾದ ಕೆಲಸ ಅಲ್ಲ. ಇದಕ್ಕೆ ಎಲ್ಲ ಪಕ್ಷದ ನಾಯಕರು ಶ್ರಮಿಸಿದ್ದಾರೆ. ಜನಪ್ರತಿನಿಧಿಗಳಾದವರು ಕೆಲಸ ಮಾಡಿದರೆ ಮಾತ್ರ ಜನ ನಮ್ಮನ್ನು ಈ ಸ್ಥಾನದಲ್ಲಿ ಉಳಿಸುತ್ತಾರೆ. ಯಾರು ಈ ಕುರಿತು ಜಗಳವಾಡಬಾರದು ಎಂದು ಪರಿಸ್ಥಿತಿ ತಿಳಿಗೊಳಿಸಿದರು.

Intro:K


Body:
ಕಾರವಾರ: ನೂತನ ರೈಲಿಗೆ ಹಸಿರು ನಿಶಾನೆ ತೋರಲು ಬಂದ ರೈಲ್ವೆ ಸಚಿವರ ಎದುರೇ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರ ಪರ ಘೋಷಣೆಗಳನ್ನು ಕೂಗಿ ರೈಲು ತಂದ ಕ್ರೆಡಿಟ್ ಪಡೆದುಕೊಳ್ಳಲು ಪ್ರಯತ್ನಿಸಿದ ಘಟನೆ ಇಂದು ದಾಂಡೇಲಿಯ ಅಂಬೇವಾಡಿಯಲ್ಲಿ ನಡೆದಿದೆ.
ದಾಂಡೇಲಿಯ ಅಂಬೇವಾಡಿಯಿಂದ -ಅಳ್ನಾವರ ಮೂಲಕ ಸಂಚರಿಸುವ ನೂತನ ರೈಲ್ವೆಗೆ ಇಂದು ಅಂಬೇವಾಡದ ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಕೇಂದ್ರೀಯ ವ್ಯವಹಾರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ, ಮಾಜಿ ಸಚಿವ ಆರ್.ವಿ. ದೇಶಪಾಂಡೆ ಸೇರಿದಂತೆ ಇನ್ನಿತರ ನಾಯಕರು ವೇದಿಕೆ ಏರಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಆರ್.ವಿ. ದೇಶಪಾಂಡೆ ಪರ ಘೋಷಣೆ ಕೂಗಿದರು. ಆದರೆ ಇನ್ನೊಂದು ಬದಿಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಪರ ಘೋಷಣೆ ಕೂಗಿದರು. ಬಳಿಕ ವಿಧಾನಪರಿಷತ್ ಸದಸ್ಯ ಎಸ್.ಎಲ್ ಘೋಟ್ನೆರಕರ್ ಮಾತನಾಡುವಾಗ ರೈಲ್ವೆ ತರಲು ಪ್ರಯತ್ನಿಸಿದ ದೇಶಪಾಂಡೆಯನ್ನು ನೆನೆಸಿಕೊಂಡರು. ಆದರೆ ಈ ವೇಳೆ ಮತ್ತೆ ಬಿಜೆಪಿ ಕಾರ್ಯಕರ್ತರು ಬಿಜೆಪಿ ಪರ ಘೋಷಣೆ ಕೂಗಿದರು. ಇದು ಲ ಹೀಗೆ ಕೆಲ ಕಾಲ ಮುಂದುವರಿದಾಗ ಪ್ರಹ್ಲಾದ್ ಜೋಶಿ ಮಧ್ಯ ಪ್ರವೇಶಿಸಿ ಎಲ್ಲರೂ ರೈಲು ತರಲು ಶ್ರಮಿಸಿದ್ದಾರೆ‌. ಇದು ಒಬ್ಬರಿಂದಾದ ಕೆಲಸ ಅಲ್ಲ. ಇದಕ್ಕೆ ಎಲ್ಲ ಪಕ್ಷದ ನಾಯಕರು ಶ್ರಮಿಸಿದ್ದಾರೆ. ಜನಪ್ರತಿನಿಧಿಗಳಾದವರು ಕೆಲಸ ಮಾಡಿದರೆ ಮಾತ್ರ ಜನ ನಮ್ಮನ್ನು ಈ ಸ್ಥಾನದಲ್ಲಿ ಉಳಿಸುತ್ತಾರೆ. ಯಾರು ಈ ಬಗ್ಗೆ ಜಗಳವಾಡದಂತೆ ಸಮಾಧಾನಪಡಿಸಿದರು.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.