ETV Bharat / state

ನಗರ, ಪಟ್ಟಣ ಪ್ರದೇಶದಲ್ಲಿ ಚೆಕ್​ಪೋಸ್ಟ್, ಸುಮ್ಮನೆ ಓಡಾಡಿದ್ರೆ ಕೇಸ್: ಕಾರವಾರ ಎಸ್​ಪಿ

author img

By

Published : Apr 29, 2021, 7:42 AM IST

Updated : Apr 29, 2021, 12:07 PM IST

ಜಿಲ್ಲೆಯಲ್ಲಿ ಕೊರೊನಾ ಕರ್ಫ್ಯೂ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಅನಗತ್ಯ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಹೇಳಿದ್ದಾರೆ.

karwar-sp
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು

ಕಾರವಾರ: ಸರ್ಕಾರ ಕೊರೊನಾ ನಿಯಂತ್ರಣ ಸಂಬಂಧ 14 ದಿನಗಳ ಕಾಲ ವಿಧಿಸಿರುವ ಕೊರೊನಾ ಕರ್ಫ್ಯೂ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಅನಗತ್ಯವಾಗಿ ಓಡಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಎಚ್ಚರಿಸಿದ್ದಾರೆ.

ನಗರ ಪ್ರವೇಶಿಸುವ ಪ್ರದೇಶಗಳಲ್ಲಿ ಚೆಕ್​ಪೋಸ್ಟ್ ಹಾಕಿ ಪ್ಯಾಟ್ರೋಲಿಂಗ್ ಮಾಡಲಾಗುತ್ತದೆ. ಮೆಡಿಕಲ್‌ ಸಿಬ್ಬಂದಿ, ಗುರುತಿಸಿದ ಸರ್ಕಾರಿ ಸಿಬ್ಬಂದಿ, ಅನಾರೋಗ್ಯ ಸಂಬಂಧ ಆಸ್ಪತ್ರೆಗೆ ತೆರಳುವವರು ಸೇರಿದಂತೆ ಅಗತ್ಯ ಇದ್ದವರು ಮಾತ್ರ ಸೂಕ್ತ ಕಾರಣ ಇಲ್ಲವೇ ಪಾಸ್, ಗುರುತಿನ ಚೀಟಿಯನ್ನು ಪೊಲೀಸರಿಗೆ ತೋರಿಸಬೇಕು. ಜನರು ಕಷ್ಟ ಆದರೂ ಕೂಡ ಸಹಕಾರ ನೀಡಬೇಕು. ಒಂದೊಮ್ಮೆ ಯಾರೇ ಅನಾವಶ್ಯಕವಾಗಿ ಓಡಾಡಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ‌ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು

ಮಾರುಕಟ್ಟೆಗಳಲ್ಲಿ ಬೆಳಗ್ಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಜನಸಂದಣಿ ನಿರ್ಮಾಣವಾಗುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ವ್ಯಾಪಾರಸ್ಥರಿಗೆ ದೂರ ಕುಳಿತು ವ್ಯಾಪಾರ ಮಾಡುವಂತೆ ಸೂಚಿಸಲಾಗಿದೆ. ಆದಾಗ್ಯೂ ಮುಂದುವರಿದಲ್ಲಿ ಮಾರುಕಟ್ಟೆಗಳನ್ನು ಮೈದಾನಗಳಿಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಸೇರಿದಂತೆ ಇತರೆ ಭಾಗಗಳಿಂದ ಬಂದವರ ಮೇಲೆ ಆಯಾ ಸ್ಥಳೀಯ ಸಂಸ್ಥೆಗಳ ಮೂಲಕ ನಿಗಾ ಇಡಲು ಈಗಾಗಲೇ ಸೂಚಿಸಲಾಗಿದೆ. ಹೊರಗಡೆಯಿಂದ ಬಂದವರು ಸ್ವಯಂಪ್ರೇರಿತರಾಗಿ ಕ್ವಾರಂಟೈನ್ ಆಗಬೇಕು. ಆ ಮೂಲಕ ಕೊರೊನಾ ತಡೆಗಟ್ಟಲು ಎಲ್ಲರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಕಾರವಾರ: ಸರ್ಕಾರ ಕೊರೊನಾ ನಿಯಂತ್ರಣ ಸಂಬಂಧ 14 ದಿನಗಳ ಕಾಲ ವಿಧಿಸಿರುವ ಕೊರೊನಾ ಕರ್ಫ್ಯೂ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಅನಗತ್ಯವಾಗಿ ಓಡಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಎಚ್ಚರಿಸಿದ್ದಾರೆ.

ನಗರ ಪ್ರವೇಶಿಸುವ ಪ್ರದೇಶಗಳಲ್ಲಿ ಚೆಕ್​ಪೋಸ್ಟ್ ಹಾಕಿ ಪ್ಯಾಟ್ರೋಲಿಂಗ್ ಮಾಡಲಾಗುತ್ತದೆ. ಮೆಡಿಕಲ್‌ ಸಿಬ್ಬಂದಿ, ಗುರುತಿಸಿದ ಸರ್ಕಾರಿ ಸಿಬ್ಬಂದಿ, ಅನಾರೋಗ್ಯ ಸಂಬಂಧ ಆಸ್ಪತ್ರೆಗೆ ತೆರಳುವವರು ಸೇರಿದಂತೆ ಅಗತ್ಯ ಇದ್ದವರು ಮಾತ್ರ ಸೂಕ್ತ ಕಾರಣ ಇಲ್ಲವೇ ಪಾಸ್, ಗುರುತಿನ ಚೀಟಿಯನ್ನು ಪೊಲೀಸರಿಗೆ ತೋರಿಸಬೇಕು. ಜನರು ಕಷ್ಟ ಆದರೂ ಕೂಡ ಸಹಕಾರ ನೀಡಬೇಕು. ಒಂದೊಮ್ಮೆ ಯಾರೇ ಅನಾವಶ್ಯಕವಾಗಿ ಓಡಾಡಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ‌ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು

ಮಾರುಕಟ್ಟೆಗಳಲ್ಲಿ ಬೆಳಗ್ಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಜನಸಂದಣಿ ನಿರ್ಮಾಣವಾಗುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ವ್ಯಾಪಾರಸ್ಥರಿಗೆ ದೂರ ಕುಳಿತು ವ್ಯಾಪಾರ ಮಾಡುವಂತೆ ಸೂಚಿಸಲಾಗಿದೆ. ಆದಾಗ್ಯೂ ಮುಂದುವರಿದಲ್ಲಿ ಮಾರುಕಟ್ಟೆಗಳನ್ನು ಮೈದಾನಗಳಿಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಸೇರಿದಂತೆ ಇತರೆ ಭಾಗಗಳಿಂದ ಬಂದವರ ಮೇಲೆ ಆಯಾ ಸ್ಥಳೀಯ ಸಂಸ್ಥೆಗಳ ಮೂಲಕ ನಿಗಾ ಇಡಲು ಈಗಾಗಲೇ ಸೂಚಿಸಲಾಗಿದೆ. ಹೊರಗಡೆಯಿಂದ ಬಂದವರು ಸ್ವಯಂಪ್ರೇರಿತರಾಗಿ ಕ್ವಾರಂಟೈನ್ ಆಗಬೇಕು. ಆ ಮೂಲಕ ಕೊರೊನಾ ತಡೆಗಟ್ಟಲು ಎಲ್ಲರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

Last Updated : Apr 29, 2021, 12:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.