ETV Bharat / state

ಚಿರತೆ ಶವ ಪತ್ತೆ: ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಶಂಕೆ

author img

By

Published : Feb 16, 2021, 6:13 PM IST

Updated : Feb 16, 2021, 6:23 PM IST

ಭಟ್ಕಳ ತಾಲೂಕಿನ ಬೆಳಕೆ ಪಂಚಾಯಿತಿ ವ್ಯಾಪ್ತಿಯ ಅರುಕಿ ರೋಡ್​ನಲ್ಲಿ ಚಿರತೆ ಶವ ಪತ್ತೆಯಾಗಿದೆ. ಚಿರತೆಯ ಬಾಲಕ್ಕೆ ವಿದ್ಯುತ್ ತಂತಿ ತಗುಲಿರುವ ಗುರುತು ಪತ್ತೆಯಾಗಿದ್ದು, ಎತ್ತರದ ಪ್ರದೇಶದಿಂದ ಧುಮುಕುವ ವೇಳೆ ವಿದ್ಯುತ್ ತಂತಿಯ ಶಾಕ್ ತಗುಲಿರಬಹುದು ಎಂದು ಶಂಕಿಸಲಾಗಿದೆ.

Leopard's corpse found
ಅರುಕಿ ರೋಡ್​ನಲ್ಲಿ ಚಿರತೆಯೊಂದರ ಶವ ಪತ್ತೆ

ಭಟ್ಕಳ: ಭಟ್ಕಳ ತಾಲೂಕಿನ ಬೆಳಕೆ ಪಂಚಾಯಿತಿ ವ್ಯಾಪ್ತಿಯ ಅರುಕಿ ರೋಡ್​ನಲ್ಲಿ ಚಿರತೆಯೊಂದರ ಶವ ಪತ್ತೆಯಾಗಿದೆ.

Leopard's corpse found
ಅರುಕಿ ರೋಡ್​ನಲ್ಲಿ ಚಿರತೆಯೊಂದರ ಶವ ಪತ್ತೆ

ಸುಮಾರು ಹತ್ತು ವರ್ಷ ವಯಸ್ಸಿನ ಚಿರತೆ ಇದಾಗಿರಬಹುದು ಎಂದು ಅಂದಾಜಿಸಲಾಗಿದೆ. ಚಿರತೆಯ ಬಾಲಕ್ಕೆ ವಿದ್ಯುತ್ ತಂತಿ ತಗುಲಿರುವ ಗುರುತು ಪತ್ತೆಯಾಗಿದ್ದು, ಎತ್ತರದ ಪ್ರದೇಶದಿಂದ ಧುಮುಕುವ ವೇಳೆ ವಿದ್ಯುತ್ ತಂತಿಯ ಶಾಕ್ ತಗುಲಿರಬಹುದು ಎಂದು ಶಂಕಿಸಲಾಗಿದೆ. ಆದರೆ ಮೃತ ಚಿರತೆಯ ಉಗುರುಗಳು ನಾಪತ್ತೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದು ನಿಜಕ್ಕೂ ಆಕಸ್ಮಿಕವಾಗಿ ನಡೆದ ಘಟನೆಯೋ ಅಥವಾ ಉಗುರುಗಳಿಗೋಸ್ಕರ ಉದ್ದೇಶಪೂರ್ವಕವಾಗಿ ಚಿರತೆಯನ್ನು ಹತ್ಯೆ ಮಾಡಲಾಗಿದೆಯೋ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಳಿಕ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓದಿ: ಬಂದರು ಕಾಮಗಾರಿ ಪ್ರದೇಶದ ಬಳಿ ನೂರಾರು ಮೊಟ್ಟೆ ಇಟ್ಟ ಕಡಲಾಮೆ

ಪಶುವೈದ್ಯ ಮಿಥುನ ರಾಜ್ ಅವರು ಘಟನಾ ಸ್ಥಳಕ್ಕೆ ತೆರಳಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ಚಿರತೆಯ ದೇಹದ ಕೆಲ ಭಾಗಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈ ಸಂದರ್ಭದಲ್ಲಿ ಎಸಿಎಫ್ ಬಾಲಚಂದ್ರ, ಆರ್‌ಎಫ್‌ಒ ಸವಿತಾ ದೇವಾಡಿಗ ಮತ್ತು ಅರಣ್ಯ ಇಲಾಖೆಯ ಇತರ ಕೆಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.

ಭಟ್ಕಳ: ಭಟ್ಕಳ ತಾಲೂಕಿನ ಬೆಳಕೆ ಪಂಚಾಯಿತಿ ವ್ಯಾಪ್ತಿಯ ಅರುಕಿ ರೋಡ್​ನಲ್ಲಿ ಚಿರತೆಯೊಂದರ ಶವ ಪತ್ತೆಯಾಗಿದೆ.

Leopard's corpse found
ಅರುಕಿ ರೋಡ್​ನಲ್ಲಿ ಚಿರತೆಯೊಂದರ ಶವ ಪತ್ತೆ

ಸುಮಾರು ಹತ್ತು ವರ್ಷ ವಯಸ್ಸಿನ ಚಿರತೆ ಇದಾಗಿರಬಹುದು ಎಂದು ಅಂದಾಜಿಸಲಾಗಿದೆ. ಚಿರತೆಯ ಬಾಲಕ್ಕೆ ವಿದ್ಯುತ್ ತಂತಿ ತಗುಲಿರುವ ಗುರುತು ಪತ್ತೆಯಾಗಿದ್ದು, ಎತ್ತರದ ಪ್ರದೇಶದಿಂದ ಧುಮುಕುವ ವೇಳೆ ವಿದ್ಯುತ್ ತಂತಿಯ ಶಾಕ್ ತಗುಲಿರಬಹುದು ಎಂದು ಶಂಕಿಸಲಾಗಿದೆ. ಆದರೆ ಮೃತ ಚಿರತೆಯ ಉಗುರುಗಳು ನಾಪತ್ತೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದು ನಿಜಕ್ಕೂ ಆಕಸ್ಮಿಕವಾಗಿ ನಡೆದ ಘಟನೆಯೋ ಅಥವಾ ಉಗುರುಗಳಿಗೋಸ್ಕರ ಉದ್ದೇಶಪೂರ್ವಕವಾಗಿ ಚಿರತೆಯನ್ನು ಹತ್ಯೆ ಮಾಡಲಾಗಿದೆಯೋ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಳಿಕ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓದಿ: ಬಂದರು ಕಾಮಗಾರಿ ಪ್ರದೇಶದ ಬಳಿ ನೂರಾರು ಮೊಟ್ಟೆ ಇಟ್ಟ ಕಡಲಾಮೆ

ಪಶುವೈದ್ಯ ಮಿಥುನ ರಾಜ್ ಅವರು ಘಟನಾ ಸ್ಥಳಕ್ಕೆ ತೆರಳಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ಚಿರತೆಯ ದೇಹದ ಕೆಲ ಭಾಗಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈ ಸಂದರ್ಭದಲ್ಲಿ ಎಸಿಎಫ್ ಬಾಲಚಂದ್ರ, ಆರ್‌ಎಫ್‌ಒ ಸವಿತಾ ದೇವಾಡಿಗ ಮತ್ತು ಅರಣ್ಯ ಇಲಾಖೆಯ ಇತರ ಕೆಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.

Last Updated : Feb 16, 2021, 6:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.