ಉತ್ತರಕನ್ನಡ : ರಾಜ್ಯ ಸರ್ಕಾರ ಇಂದಿನಿಂದ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಆದರೆ, ಭಟ್ಕಳದ ನಗರ ಭಾಗದಲ್ಲಿ ಮದ್ಯ ಮಾರಾಟಕ್ಕೆ ಯಾವುದೇ ಅವಕಾಶ ನೀಡಿಲ್ಲ ಎಂದು ಸಹಾಯಕ ಆಯುಕ್ತ ಭರತ್ ಎಸ್ ನುಡಿಜೇನು ತಿಳಿಸಿದ್ದಾರೆ.
ಭಟ್ಕಳದಲ್ಲಿ 11 ಕೊರೊನಾ ಪ್ರಕರಣ ಕಾಣಿಸಿಕೊಂಡಿವೆ. ಹೀಗಾಗಿ ತಾಲೂಕಿನಲ್ಲಿ ತುರ್ತು ಆರೋಗ್ಯ ಪರಿಸ್ಥಿತಿಯನ್ನ ಘೋಷಿಸಲಾಗಿತ್ತು. ಈ ಆದೇಶ ಇನ್ನೂ ಹಿಂಪಡೆದಿಲ್ಲ. ಹೀಗಾಗಿ ಭಟ್ಕಳ ನಗರದಲ್ಲಿ ಮದ್ಯ ಮಾರಾಟಕ್ಕೆ ಯಾವುದೇ ಅವಕಾಶ ನೀಡಿಲ್ಲ. 3-4 ದಿನಗಳಲ್ಲಿ ಬೇರೆ ಜಿಲ್ಲೆಗಳಲ್ಲಿನ ಪರಿಸ್ಥಿತಿ ಗಮನಿಸಿ ಮದ್ಯ ಮಾರಾಟದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಹಾಯಕ ಆಯುಕ್ತ ಭರತ್ ಎಸ್ ನುಡಿಜೇನು ತಿಳಿದ್ದಾರೆ.
ಗ್ರಾಮೀಣ ಭಾಗದಲ್ಲಿನ ಪರವಾನಿಗೆ ಪಡೆದ ವೈನ್ ಶಾಪ್ಗಳಲ್ಲಿ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶವಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು,ಮಾಸ್ಕ್ ಧರಿಸಿ ಕೇವಲ 5 ಮಂದಿಗೆ ಮಾತ್ರ ವೈನ್ ಶಾಪ್ನೊಳಗೆ ಹೋಗಿ ಪಾರ್ಸಲ್ ಪಡೆದು ಖರೀದಿಸಲು ತಿಳಿಸಲಾಗಿದೆ.