ETV Bharat / state

ಲಾಕ್​​ಡೌನ್​ನಿಂದ ಕೃಷಿ, ಮೀನುಗಾರಿಕೆಗೆ ವಿನಾಯಿತಿ: ಸಚಿವ ಶಿವರಾಮ್​ ಹೆಬ್ಬಾರ್

author img

By

Published : Apr 11, 2020, 7:43 PM IST

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಇಂದು ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೊರೊನಾ ತಡೆ ಬಗ್ಗೆ ಸಭೆ ನಡೆಸಿದರು.

Shivaram hebbar
ಸಚಿವ ಶಿವರಾಮ್ ಹೆಬ್ಬಾರ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳ ಮುಂಜಾಗ್ರತಾ ಕ್ರಮದಿಂದ ಕೊರೊನಾ ವೈರಸ್ ನಿಯಂತ್ರಣದಲ್ಲಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ, ಮೀನುಗಾರರಿಗೆ ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.

ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೊರೊನಾ ತಡೆ ಬಗ್ಗೆ ಸಭೆ ನಡೆಸಿದ ಅವರು, ಕೃಷಿ ಚಟುವಟಿಕೆಗೆ ಯಾವುದೇ ತೊಂದರೆ ಆಗದಂತೆ ಮುಕ್ತವಾಗಿ ಅವಕಾಶ ನೀಡಲಾಗಿದೆ. ಇನ್ನು ಮೀನುಗಾರಿಕೆಗೂ ಸಹ ಕೇಂದ್ರ ಸರ್ಕಾರದ ನಿರ್ಣಯದಂತೆ ಜಿಲ್ಲೆಯಲ್ಲಿಯೂ ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸಲು ಅವಕಾಶ ನೀಡಲಾಗಿದೆ. ಅಡಿಕೆ ಸೇರಿದಂತೆ ಇತರೆ ಬೆಳೆಗಳನ್ನು ರೈತರು ದೇಶದ ಯಾವುದೇ ಭಾಗಗಳಿಗೆ ಸಾಗಿಸಲು ಅನುಮತಿಗಾಗಿ ಕಾಯಬೇಕಾಗಿಲ್ಲ. ಜಿಲ್ಲಾಧಿಕಾರಿ ಮೂಲಕ ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆ ಮೂಲಕವೂ ಅನುಮತಿ ಪಡೆದುಕೊಳ್ಳಬಹುದು ಎಂದರು.

ಇನ್ನು ಘಟ್ಟದ ಕೆಳಗೆ ಕಲ್ಲಂಗಡಿ, ಘಟ್ಟದ ಮೇಲ್ಭಾಗದಲ್ಲಿ ಅನಾನಸ್, ಬಾಳೆಹಣ್ಣು, ಪಪ್ಪಾಯ ಸಾಕಷ್ಟು ಪ್ರಮಾಣದಲ್ಲಿದೆ. ಆದರೆ ಕೊಳ್ಳುವವರು ಇಲ್ಲದ ಕಾರಣ ಸುಮಾರು 12 ಸಾವಿರ ಟನ್ ಅನಾನಸ್ ಹಾಗೆಯೇ ಇದೆ. ಈ ಬಗ್ಗೆ ಅಧಿಕಾರಿಗಳ ಜೊತೆ ಮಾತಾಡಿದ್ದು, ಈ ವಾರದಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಯಾವುದೇ ತೊಂದರೆಯಾಗಿಲ್ಲ. ಒಟಿಪಿ ಬದಲು ಈ ಮೂರು ತಿಂಗಳು ಸಹಿ ಪಡೆದು ಪಡಿತರ ವಿತರಣೆ ಮಾಡಲು ಸೂಚಿಸಲಾಗಿದ್ದು, ಈಗಾಗಲೇ ಶೇ. 80ರಷ್ಟು ಪಡಿತರ ನೀಡಲಾಗಿದೆ. ಜತೆಗೆ ಬಿಪಿಎಲ್​ಗಾಗಿ ಜಿಲ್ಲೆಯಲ್ಲಿ 3,427 ಜನರು ಅರ್ಜಿ ಸಲ್ಲಿಸಿದ್ದು, ಅವರಿಗೂ ಮೂರು ತಿಂಗಳು ವಿತರಣೆ ಮಾಡುವುದಾಗಿ ತಿಳಿಸಿದರು.

ಇನ್ನು ಶಿರಸಿ, ಸಿದ್ದಾಪುರದಲ್ಲಿ ನಾಲ್ಕು ಜನರಲ್ಲಿ ಮಂಗನ ಕಾಯಿಲೆ ಕಂಡು ಬಂದಿದೆ. ಈಗಾಗಲೇ ಆರೋಗ್ಯ ಇಲಾಖೆ ಕಾರ್ಯೋನ್ಮುಖವಾಗಿದ್ದು, ಶಿರಸಿ ಉಪ ವಿಭಾಗಾಧಿಕಾರಿ ಪ್ರತಿ ಎರಡು ದಿನಕ್ಕೊಮ್ಮೆ ಸ್ಥಳಕ್ಕೆ ತೆರಳಿ ಜನರಲ್ಲಿ ಧೈರ್ಯ ತುಂಬಲು ಸೂಚಿಸಲಾಗಿದೆ ಎಂದು ಹೇಳಿದರು.

ಅಲ್ಲದೇ ಗ್ರಾಮೀಣ ಪ್ರದೇಶಗಳಲ್ಲಿ ಔಷಧಿ ಪಡೆಯಲು ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದ್ದು, ಪಿಡಿಒಗಳಿಗೆ ಆಯಾ ಭಾಗದ ಜನರು ಯಾವ ಔಷಧಿಗಳು ಬೇಕು ಎಂಬುದನ್ನು ತಿಳಿಸಿದಲ್ಲಿ ಅವರ ಮೂಲಕ ಪೂರೈಸಲು ಸೂಚಿಸಲಾಗಿದೆ. ಅಲ್ಲದೆ ಕೃಷಿ ಚಟುವಟಿಕೆಗಳಿಗೆ ಬಳಕೆಯಾಗುವ ವಾಹನಗಳಿಗೆ ಡೀಸೆಲ್ ವ್ಯವಸ್ಥೆ ಕೂಡ ಪಿಡಿಒ ಮೂಲಕ ಮಾಡಲಾಗಿದೆ ಎಂದು ಹೇಳಿದರು.

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳ ಮುಂಜಾಗ್ರತಾ ಕ್ರಮದಿಂದ ಕೊರೊನಾ ವೈರಸ್ ನಿಯಂತ್ರಣದಲ್ಲಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ, ಮೀನುಗಾರರಿಗೆ ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.

ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೊರೊನಾ ತಡೆ ಬಗ್ಗೆ ಸಭೆ ನಡೆಸಿದ ಅವರು, ಕೃಷಿ ಚಟುವಟಿಕೆಗೆ ಯಾವುದೇ ತೊಂದರೆ ಆಗದಂತೆ ಮುಕ್ತವಾಗಿ ಅವಕಾಶ ನೀಡಲಾಗಿದೆ. ಇನ್ನು ಮೀನುಗಾರಿಕೆಗೂ ಸಹ ಕೇಂದ್ರ ಸರ್ಕಾರದ ನಿರ್ಣಯದಂತೆ ಜಿಲ್ಲೆಯಲ್ಲಿಯೂ ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸಲು ಅವಕಾಶ ನೀಡಲಾಗಿದೆ. ಅಡಿಕೆ ಸೇರಿದಂತೆ ಇತರೆ ಬೆಳೆಗಳನ್ನು ರೈತರು ದೇಶದ ಯಾವುದೇ ಭಾಗಗಳಿಗೆ ಸಾಗಿಸಲು ಅನುಮತಿಗಾಗಿ ಕಾಯಬೇಕಾಗಿಲ್ಲ. ಜಿಲ್ಲಾಧಿಕಾರಿ ಮೂಲಕ ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆ ಮೂಲಕವೂ ಅನುಮತಿ ಪಡೆದುಕೊಳ್ಳಬಹುದು ಎಂದರು.

ಇನ್ನು ಘಟ್ಟದ ಕೆಳಗೆ ಕಲ್ಲಂಗಡಿ, ಘಟ್ಟದ ಮೇಲ್ಭಾಗದಲ್ಲಿ ಅನಾನಸ್, ಬಾಳೆಹಣ್ಣು, ಪಪ್ಪಾಯ ಸಾಕಷ್ಟು ಪ್ರಮಾಣದಲ್ಲಿದೆ. ಆದರೆ ಕೊಳ್ಳುವವರು ಇಲ್ಲದ ಕಾರಣ ಸುಮಾರು 12 ಸಾವಿರ ಟನ್ ಅನಾನಸ್ ಹಾಗೆಯೇ ಇದೆ. ಈ ಬಗ್ಗೆ ಅಧಿಕಾರಿಗಳ ಜೊತೆ ಮಾತಾಡಿದ್ದು, ಈ ವಾರದಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಯಾವುದೇ ತೊಂದರೆಯಾಗಿಲ್ಲ. ಒಟಿಪಿ ಬದಲು ಈ ಮೂರು ತಿಂಗಳು ಸಹಿ ಪಡೆದು ಪಡಿತರ ವಿತರಣೆ ಮಾಡಲು ಸೂಚಿಸಲಾಗಿದ್ದು, ಈಗಾಗಲೇ ಶೇ. 80ರಷ್ಟು ಪಡಿತರ ನೀಡಲಾಗಿದೆ. ಜತೆಗೆ ಬಿಪಿಎಲ್​ಗಾಗಿ ಜಿಲ್ಲೆಯಲ್ಲಿ 3,427 ಜನರು ಅರ್ಜಿ ಸಲ್ಲಿಸಿದ್ದು, ಅವರಿಗೂ ಮೂರು ತಿಂಗಳು ವಿತರಣೆ ಮಾಡುವುದಾಗಿ ತಿಳಿಸಿದರು.

ಇನ್ನು ಶಿರಸಿ, ಸಿದ್ದಾಪುರದಲ್ಲಿ ನಾಲ್ಕು ಜನರಲ್ಲಿ ಮಂಗನ ಕಾಯಿಲೆ ಕಂಡು ಬಂದಿದೆ. ಈಗಾಗಲೇ ಆರೋಗ್ಯ ಇಲಾಖೆ ಕಾರ್ಯೋನ್ಮುಖವಾಗಿದ್ದು, ಶಿರಸಿ ಉಪ ವಿಭಾಗಾಧಿಕಾರಿ ಪ್ರತಿ ಎರಡು ದಿನಕ್ಕೊಮ್ಮೆ ಸ್ಥಳಕ್ಕೆ ತೆರಳಿ ಜನರಲ್ಲಿ ಧೈರ್ಯ ತುಂಬಲು ಸೂಚಿಸಲಾಗಿದೆ ಎಂದು ಹೇಳಿದರು.

ಅಲ್ಲದೇ ಗ್ರಾಮೀಣ ಪ್ರದೇಶಗಳಲ್ಲಿ ಔಷಧಿ ಪಡೆಯಲು ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದ್ದು, ಪಿಡಿಒಗಳಿಗೆ ಆಯಾ ಭಾಗದ ಜನರು ಯಾವ ಔಷಧಿಗಳು ಬೇಕು ಎಂಬುದನ್ನು ತಿಳಿಸಿದಲ್ಲಿ ಅವರ ಮೂಲಕ ಪೂರೈಸಲು ಸೂಚಿಸಲಾಗಿದೆ. ಅಲ್ಲದೆ ಕೃಷಿ ಚಟುವಟಿಕೆಗಳಿಗೆ ಬಳಕೆಯಾಗುವ ವಾಹನಗಳಿಗೆ ಡೀಸೆಲ್ ವ್ಯವಸ್ಥೆ ಕೂಡ ಪಿಡಿಒ ಮೂಲಕ ಮಾಡಲಾಗಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.