ಭಟ್ಕಳ: ವೈದ್ಯರ ನಿಷ್ಕಾಳಜಿಯಿಂದ ರೋಗಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಮೃತನ ಸಂಬಂಧಿಕರು ಹಾಗೂ ಸ್ಥಳೀಯರು ಮುರುಡೇಶ್ವರ ತಾಲೂಕಾಸ್ಪತ್ರೆಯ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಸ್ಥಾನದ ಮೂಲದ ವ್ಯಕ್ತಿ, ಮುರುಡೇಶ್ವರದಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದ ಉಕ್ಮಾರಾಮ್ ಬೋರಾನ್ (65) ಮೃತ ರೋಗಿ. ಇಂದು ಬೆಳಗ್ಗೆ ಎದೆನೋವಿನಿಂದ ಅಸ್ವಸ್ಥಗೊಂಡಿದ್ದ ಇವರು ಖಾಸಗಿ ಕ್ಲಿನಿಕ್ಗೆ ತೆರಳಿದ್ದರು. ಅಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮರಳುತ್ತಿರುವುವಾಗ ಮೂರ್ಚೆ ಹೋಗಿದ್ದಾರೆ. ನಂತರ ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ, ಚಿಕಿತ್ಸೆ ನೀಡಲು ಅಲ್ಲಿನ ವೈದ್ಯರು ನಿರಾಕರಿಸಿದ್ದಾರೆ. ಅಲ್ಲದೆ ಇಲ್ಲಿಂದ ಕರೆದುಕೊಂಡು ಹೋಗದಿದ್ದರೆ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಇದರಿಂದ ಮುರುಡೇಶ್ವರ ಆಸ್ಪತ್ರೆಯ ವೈದ್ಯರ ನಡೆಗೆ ಕಿಡಿಕಾರಿರುವ ಮೃತನ ಕುಟುಂಬಸ್ಥರು, ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿದ್ದರೆ ಉಕ್ಮಾರಾಮ್ ಬದುಕುಳಿಯುತ್ತಿದ್ದರು ಎಂದು ಆಸಮಾಧಾನ ಹೊರಹಾಕಿದ್ದಾರೆ.