ಕಾರವಾರ: ಆರ್ ಎನ್ ಎಸ್ ಸಮೂಹ ಸಂಸ್ಥೆಗಳ ಸ್ಥಾಪಕ, ಮುರುಡೇಶ್ವರದ ನಿರ್ಮಾತೃ ಆರ್.ಎನ್. ಶೆಟ್ಟಿ (92) ಇಂದು ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಡಾ. ರಾಮ ನಾಗಪ್ಪ ಶೆಟ್ಟಿ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ್ದಾರೆ. ಮುರುಡೇಶ್ವರ ದೇವಸ್ಥಾನದ ಆನುವಂಶಿಕ ಆಡಳಿತಾಧಿಯಾಗಿ ಈ ಸ್ಥಳವನ್ನು ಪ್ರೇಕ್ಷಣೀಯ ಕ್ಷೇತ್ರವನ್ನಾಗಿ ಪರಿವರ್ತಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
ಆರ್ಎನ್ಎಸ್ ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕರಾಗಿ, ಸಮಾಜಮುಖಿ ಚಿಂತಕರಾಗಿ ಗುರುತಿಸಿಕೊಂಡಿದ್ದ ಅವರು ಉತ್ತರ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರ ಮುರುಡೇಶ್ವರ ಅಭಿವೃದ್ಧಿ ಪಡಿಸಿದ್ದಾರೆ. ಅಷ್ಟೇ ಅಲ್ಲದೆ 249 ಅಡಿ ಎತ್ತರದ ಭವ್ಯ ಗೋಪುರ ಮತ್ತು ಬೆಟ್ಟದ ಮೇಲೆ 123 ಅಡಿ ಎತ್ತರದ ಶಿವನ ಮೂರ್ತಿಯನ್ನು ಸ್ಥಾಪಿಸಿ ಕ್ಷೇತ್ರವನ್ನು ಪುಣ್ಯ ಕ್ಷೇತ್ರ ಹಾಗೂ ಪ್ರವಾಸೋದ್ಯಮ ಕೇಂದ್ರವಾಗಿಯೂ ಪರಿವರ್ತಿಸಿದ್ದಾರೆ.

ಅನೇಕ ನಿರ್ಮಾಣ ಕಾರ್ಯಗಳು :
ಆರ್ಎನ್ ಶೆಟ್ಟಿ ಅವರು ಉದ್ಯಮಿಯಾಗಿ ಬಹುದೊಡ್ಡ ಹೆಸರು ಮಾಡಿದ್ದಾರೆ. 1961ರಲ್ಲಿ ಪಾಲುದಾರ ಕಂಪೆನಿಯಾದ ಆರ್ಎನ್ ಶೆಟ್ಟಿ ಆಂಡ್ ಕಂಪೆನಿ ಆರಂಭಿಸಿದ್ದರು. ಕಂಪೆನಿ ಮೂಲಕ ಅನೇಕ ಸೇತುವೆ, ಅಣೆಕಟ್ಟುಗಳು, ಕಟ್ಟಡಗಳ ನಿರ್ಮಾಣ ಕಾರ್ಯ ಮಾಡಿದ್ದಾರೆ.
ಜಲಾಶಯ, ಸುರಂಗ, ಹೆದ್ದಾರಿ ನಿರ್ಮಾಣ :
ವಾರಾಹಿ ಜಲವಿದ್ಯುತ್ ಯೋಜನೆ, ಮಾಣಿ ಅಣೆಕಟ್ಟು, ಗೇರುಸೊಪ್ಪ ಜಲಾಶಯ, ಸೂಪ ಜಲಾಶಯ, ಹಿಡಕಲ್ ಜಲಾಶಯ, ತಟ್ಟಿಹಳ್ಳ ಜಲಾಶಯ, ಕೊಂಕಣ ರೈಲು ಸುರಂಗ, ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಅವರು ತಮ್ಮ ಮೂಲಸೌಕರ್ಯ ಕಂಪನಿಯ ಮೂಲಕ ಅನೇಕ ನಿರ್ಮಾಣ ಕಾರ್ಯಗಳನ್ನು ನಡೆಸಿದ್ದರು.
ಶಿಕ್ಷಣೋದ್ಯಮಿಯೂ ಹೌದು :
ಮೋಟಾರ್ಸ್ ಕಂಪನಿ, ಫೈನಾನ್ಸ್ ಕಂಪನಿ, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳನ್ನು ಅವರು ಸ್ಥಾಪಿಸಿದ್ದಾರೆ. ಅವರ ಆರ್ ಎನ್ ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಕರ್ನಾಟಕದ ಅತಿ ದೊಡ್ಡ ಕ್ಯಾಂಪಸ್ ಎನಿಸಿಕೊಂಡಿದೆ. ಶೆಟ್ಟಿ ಟ್ರಸ್ಟ್ ವತಿಯಿಂದ ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಶಿಕ್ಷಣದವರೆಗೆ ವಿದ್ಯಾದಾನ ಮಾಡುತ್ತಿದ್ದಾರೆ. ಅವರ ಈ ಅಸಾಧಾರಣ ಸೇವೆಗೆ ಸರ್.ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ, ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕಾಸಿಯಾದ ಕೈಗಾರಿಕಾ ರತ್ನ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಗೌರವಗಳು ಸಂದಿವೆ.
ಸದ್ಯ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್ಎನ್ಎಸ್ ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಇಡಲಾಗುವುದು. ಅಂತ್ಯಸಂಸ್ಕಾರ ಸಂಜೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಶೆಟ್ಟಿ ನಿಧನಕ್ಕೆ ಸಿಎಂ ಸಂತಾಪ :
-
ನಾಡಿನ ಖ್ಯಾತ ಉದ್ಯಮಿ ಆರ್.ಎನ್.ಶೆಟ್ಟಿ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ, ಹೋಟೆಲ್ ಉದ್ಯಮ, ಶಿಕ್ಷಣ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ
— B.S. Yediyurappa (@BSYBJP) December 17, 2020 " class="align-text-top noRightClick twitterSection" data="
">ನಾಡಿನ ಖ್ಯಾತ ಉದ್ಯಮಿ ಆರ್.ಎನ್.ಶೆಟ್ಟಿ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ, ಹೋಟೆಲ್ ಉದ್ಯಮ, ಶಿಕ್ಷಣ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ
— B.S. Yediyurappa (@BSYBJP) December 17, 2020ನಾಡಿನ ಖ್ಯಾತ ಉದ್ಯಮಿ ಆರ್.ಎನ್.ಶೆಟ್ಟಿ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ, ಹೋಟೆಲ್ ಉದ್ಯಮ, ಶಿಕ್ಷಣ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ
— B.S. Yediyurappa (@BSYBJP) December 17, 2020
ಉದ್ಯಮಿ ಆರ್.ಎನ್. ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕೃಷಿಕ ಮನೆತನದಲ್ಲಿ ಜನಿಸಿ, ಉದ್ಯಮದತ್ತ ಮುಖ ಮಾಡಿದ ಆರ್.ಎನ್. ಶೆಟ್ಟಿ ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೋಟೆಲ್ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಶಿಕ್ಷಣ ಕ್ಷೇತ್ರಕ್ಕೂ ತಮ್ಮ ಕೊಡುಗೆ ನೀಡಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಶೆಟ್ಟಿ ನಿಧನಕ್ಕೆ ಸಂತಾಪ ಸೂಚಿಸಿದ ಹೆಚ್.ಡಿ.ದೇವೇಗೌಡ:
-
ಹಲವು ವಿದ್ಯಾಸಂಸ್ಥೆಗಳ ಮೂಲಕ ವಿದ್ಯಾದಾನ ಮಾಡುತ್ತ ಸಮಾಜಮುಖಿ, ಧಾರ್ಮಿಕ ಸಂಸ್ಥೆಗಳ ನಿರ್ಮಾತೃವಾಗಿದ್ದ ಮಹಾದಾನಿ ಉದ್ಯಮಿ ಡಾ|| ಆರ್.ಎನ್. ಶೆಟ್ಟಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ಕರುಣಿಸಲಿ.
— H D Devegowda (@H_D_Devegowda) December 17, 2020 " class="align-text-top noRightClick twitterSection" data="
">ಹಲವು ವಿದ್ಯಾಸಂಸ್ಥೆಗಳ ಮೂಲಕ ವಿದ್ಯಾದಾನ ಮಾಡುತ್ತ ಸಮಾಜಮುಖಿ, ಧಾರ್ಮಿಕ ಸಂಸ್ಥೆಗಳ ನಿರ್ಮಾತೃವಾಗಿದ್ದ ಮಹಾದಾನಿ ಉದ್ಯಮಿ ಡಾ|| ಆರ್.ಎನ್. ಶೆಟ್ಟಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ಕರುಣಿಸಲಿ.
— H D Devegowda (@H_D_Devegowda) December 17, 2020ಹಲವು ವಿದ್ಯಾಸಂಸ್ಥೆಗಳ ಮೂಲಕ ವಿದ್ಯಾದಾನ ಮಾಡುತ್ತ ಸಮಾಜಮುಖಿ, ಧಾರ್ಮಿಕ ಸಂಸ್ಥೆಗಳ ನಿರ್ಮಾತೃವಾಗಿದ್ದ ಮಹಾದಾನಿ ಉದ್ಯಮಿ ಡಾ|| ಆರ್.ಎನ್. ಶೆಟ್ಟಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ಕರುಣಿಸಲಿ.
— H D Devegowda (@H_D_Devegowda) December 17, 2020
ವಿದ್ಯಾದಾನ ಮಾಡುತ್ತ ಸಮಾಜಮುಖಿ, ಧಾರ್ಮಿಕ ಸಂಸ್ಥೆಗಳ ನಿರ್ಮಾತೃವಾಗಿದ್ದ ಮಹಾದಾನಿ ಉದ್ಯಮಿ ಡಾ. ಆರ್.ಎನ್. ಶೆಟ್ಟಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಟ್ವೀಟ್ ಮಾಡಿದ್ದಾರೆ.