ETV Bharat / state

ಉತ್ತರಕನ್ನಡಕ್ಕೆ ಬರುವ ಪ್ರವಾಸಿಗರಿಗೆ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ನೀಡಲಿದೆ ಈ ವೆಬ್​ಸೈಟ್.. - ಉತ್ತರಕನ್ನಡಕ್ಕೆ ಬರುವ ಪ್ರವಾಸಿಗರಿಗೆ ವೆಬ್​ಸೈಟ್​​

ಇಲ್ಲಿಗೆ ಬರುವ ಪ್ರವಾಸಿಗರಿಗೆ ಅವರ ಅಂಗೈನಲ್ಲೇ ಜಿಲ್ಲೆಯ ಸಂಸ್ಕೃತಿ, ಆಹಾರ ವೈವಿಧ್ಯತೆ, ಸಂಪ್ರದಾಯಗಳ ಕುರಿತು ಮಾಹಿತಿ ಸಿಗುವಂತಾಗಬೇಕೆಂಬ ನಿಟ್ಟಿನಲ್ಲಿ https://uttarakannada.org/ ವೆಬ್‌ಸೈಟ್‌ ಅನ್ನು ಜಿಲ್ಲಾಡಳಿತ ಪ್ರಾರಂಭಿಸಿದೆ. ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ, ಅಲ್ಲಿಗೆ ತಲುಪುವುದು ಹೇಗೆ ಎಂಬ ವಿವರಗಳನ್ನು ಸಂಗ್ರಹಿಸಿ ಈ ವೆಬ್​​ಸೈಟ್​ನಲ್ಲಿ ಅಪ್ಲೋಡ್ ಮಾಡಲಾಗಿದೆ..

new website to tourist from uttara kannada administration which has details of tourism spots
ಉತ್ತರಕನ್ನಡಕ್ಕೆ ಬರುವ ಪ್ರವಾಸಿಗರಿಗೆ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ನೀಡಲಿದೆ ಈ ವೆಬ್​ಸೈಟ್​​
author img

By

Published : Jan 28, 2022, 3:04 PM IST

Updated : Jan 28, 2022, 3:49 PM IST

ಕಾರವಾರ(ಉತ್ತರಕನ್ನಡ) : ಕರಾವಳಿ ಜಿಲ್ಲೆ ಉತ್ತರಕನ್ನಡ ಅಂದಾಕ್ಷಣ ಮೊದಲು ನೆನಪಾಗೋದೇ ಇಲ್ಲಿನ ಹತ್ತು ಹಲವು ಪ್ರವಾಸಿ ತಾಣಗಳು. ಆದರೆ, ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಇಲ್ಲಿನ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ಒಂದೇ ಕಡೆ ಸಿಗುವಂತಿರಲಿಲ್ಲ. ಹೀಗಾಗಿ, ಈ ಸಮಸ್ಯೆಗೆ ಜಿಲ್ಲಾಡಳಿತ ಒಂದು ಪರಿಹಾರವನ್ನು ಕಂಡುಕೊಂಡಿದೆ.

ಉತ್ತರಕನ್ನಡ ಸಾಕಷ್ಟು ಪ್ರವಾಸಿ ತಾಣಗಳ ಆಗರವಾಗಿದೆ. ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಕರಾವಳಿಯಲ್ಲಿ ಓಂ, ಕುಡ್ಲೆ, ಟ್ಯಾಗೋರ್, ತೀಳಮಾತಿಯಂಥಹ ಕಡಲತೀರಗಳು, ಗೋಕರ್ಣ, ಮುರ್ಡೇಶ್ವರ, ಶಿರಸಿಯ ಮಾರಿಕಾಂಬೆಯ ದೇಗುಲದಂಥಹ ಧಾರ್ಮಿಕ ತಾಣಗಳು, ಟಿಬೇಟಿಯನ್ ಕಾಲೋನಿಯೆಂಬ ಸಂಸ್ಕೃತಿಯ ತಾಣ ಸೇರಿ ವಿಭಿನ್ನ ಸಮುದಾಯಗಳನ್ನು ಹೊಂದಿರುವ ಜಿಲ್ಲೆ ವಿವಿಧತೆಯಲ್ಲಿ ಏಕತೆ ಸಾರುತ್ತಿದೆ. ಆದರೆ, ಇಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿನ ತಾಣಗಳ ಕುರಿತು ಒಂದೆಡೆ ಸಂಪೂರ್ಣ ಮಾಹಿತಿ ಒದಗಿಸುವುದು ಇಷ್ಟು ವರ್ಷಗಳ ಕಾಲ ಸಾಧ್ಯವಾಗಿರಲಿಲ್ಲ.

ನೂತನ ವೆಬ್​ಸೈಟ್ ​: ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೂತನ ಕ್ರಮಕ್ಕೆ ಮುಂದಾಗಿದ್ದಾರೆ. ದಾಂಡೇಲಿ, ಜೋಯಿಡಾದ ಅರಣ್ಯ ಪರಿಸರ ವೀಕ್ಷಿಸಿದವರು ಅನತಿ ದೂರದ ಕಾರವಾರ, ಹೊನ್ನಾವರ ಭಾಗದ ಪ್ರವಾಸಿ ತಾಣಗಳಿಗೂ ಭೇಟಿ ನೀಡುವಂತಾಗಬೇಕು.

ಪ್ರವಾಸಿಗರ ಸಹಾಯಕ್ಕೆ ಮುಂದಾದ ಜಿಲ್ಲಾಡಳಿತ

ಇಲ್ಲಿಗೆ ಬರುವ ಪ್ರವಾಸಿಗರಿಗೆ ಅವರ ಅಂಗೈನಲ್ಲೇ ಜಿಲ್ಲೆಯ ಸಂಸ್ಕೃತಿ, ಆಹಾರ ವೈವಿಧ್ಯತೆ, ಸಂಪ್ರದಾಯಗಳ ಕುರಿತು ಮಾಹಿತಿ ಸಿಗುವಂತಾಗಬೇಕೆಂಬ ನಿಟ್ಟಿನಲ್ಲಿ https://uttarakannada.org/ ವೆಬ್‌ಸೈಟ್‌ ಅನ್ನು ಜಿಲ್ಲಾಡಳಿತ ಪ್ರಾರಂಭಿಸಿದೆ. ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ, ಅಲ್ಲಿಗೆ ತಲುಪುವುದು ಹೇಗೆ ಎಂಬ ವಿವರಗಳನ್ನು ಸಂಗ್ರಹಿಸಿ ಈ ವೆಬ್​​ಸೈಟ್​ನಲ್ಲಿ ಅಪ್ಲೋಡ್ ಮಾಡಲಾಗಿದೆ.

ವಾಸೋದ್ಯಮ ಇಲಾಖೆಯಡಿ ವೆಬ್​ಸೈಟ್ : ಈ ವೆಬ್‌ಸೈಟ್ ಪ್ರವಾಸೋದ್ಯಮ ಇಲಾಖೆಯ ಅಡಿಯಲ್ಲಿದೆ. ಇದು ರೂಪುಗೊಳ್ಳುವಲ್ಲಿ ಮೂವರು ಯುವಕರ ತಂಡ ಶ್ರಮವಹಿಸಿದೆ. ಉರಗ ತಜ್ಞರಾದ ಓಂಕಾರ್ ಪೈ ವೆಬ್‌ಸೈಟ್‌ನಲ್ಲಿ ವೈಲ್ಡ್‌ಲೈಫ್‌ಗೆ ಸಂಬಂಧಿಸಿದ ಮಾಹಿತಿಗಳನ್ನು ನೀಡಿದರೆ, ಸಾತ್ವಿಕ್ ಭಟ್ ವೆಬ್‌ಸೈಟ್‌ ಡಿಸೈನ್ ಮಾಡಿದ್ದಾರೆ. ಗೋಪಿ ಜೋಲಿ ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದ ಅತ್ಯುತ್ತಮ ಫೋಟೋಗಳನ್ನು ನೀಡಿ ವೆಬ್‌ಸೈಟ್‌ನ ಇನ್ನಷ್ಟು ಅಂದಗೊಳಿಸಿದ್ದಾರೆ.

ವೆಬ್​ಸೈಟ್​ನೊಂದಿಗೆ ಈಗಾಗಲೇ ಜಿಲ್ಲೆಯ ಎಲ್ಲ ರೆಸಾರ್ಟ್ ಮಾಲೀಕರುಗಳಿಗೂ ಕಾರ್ಯಾಗಾರವನ್ನು ನಡೆಸಲಾಗಿದೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ಕುರಿತು ತಿಳಿಸಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಒಂದೇ ವೆಬ್‌ಸೈಟ್ ಮೂಲಕ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳ ಭೇಟಿಗೆ ಅನುಕೂಲವಾಗುವಂತೆ ಮಾಡುವುದು ನಮ್ಮ ಗುರಿ ಅಂತಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸು: ಜೆಡಿಎಸ್‍ ಕದ ತಟ್ಟುವರೇ ಸಿಎಂ ಇಬ್ರಾಹಿಂ?

ಜಿಲ್ಲೆಯ ಕಡಲತೀರಗಳಿಗೆ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದ್ರೆ, ಪ್ರವಾಸಿಗರಿಗೆ ಅಕ್ಕಪಕ್ಕದ ಇತರೆ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ಸಿಗದ ಹಿನ್ನೆಲೆ ಸಮೀಪದ ಕೆಲವೇ ತಾಣಗಳಿಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದರು. ಈ ನಿಟ್ಟಿನಲ್ಲಿ ಪ್ರವಾಸಿಗರಿಗೆ ಸೂಕ್ತ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿರೋದು ಉತ್ತಮ ಬೆಳವಣಿಗೆ ಅಂತಾರೆ ಸ್ಥಳೀಯರು.

ಕೊರೊನಾ ಹೊಡೆತದಿಂದ ನಲುಗಿ ಹೋಗಿರುವ ಜಿಲ್ಲೆಯ ಪ್ರವಾಸೋದ್ಯಮವನ್ನು ತಾಂತ್ರಿಕತೆಯೊಂದಿಗೆ ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಮುಂದಾಗಿರೋದು ನಿಜಕ್ಕೂ ಉತ್ತಮ ಬೆಳವಣಿಗೆಯಾಗಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಕಾರವಾರ(ಉತ್ತರಕನ್ನಡ) : ಕರಾವಳಿ ಜಿಲ್ಲೆ ಉತ್ತರಕನ್ನಡ ಅಂದಾಕ್ಷಣ ಮೊದಲು ನೆನಪಾಗೋದೇ ಇಲ್ಲಿನ ಹತ್ತು ಹಲವು ಪ್ರವಾಸಿ ತಾಣಗಳು. ಆದರೆ, ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಇಲ್ಲಿನ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ಒಂದೇ ಕಡೆ ಸಿಗುವಂತಿರಲಿಲ್ಲ. ಹೀಗಾಗಿ, ಈ ಸಮಸ್ಯೆಗೆ ಜಿಲ್ಲಾಡಳಿತ ಒಂದು ಪರಿಹಾರವನ್ನು ಕಂಡುಕೊಂಡಿದೆ.

ಉತ್ತರಕನ್ನಡ ಸಾಕಷ್ಟು ಪ್ರವಾಸಿ ತಾಣಗಳ ಆಗರವಾಗಿದೆ. ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಕರಾವಳಿಯಲ್ಲಿ ಓಂ, ಕುಡ್ಲೆ, ಟ್ಯಾಗೋರ್, ತೀಳಮಾತಿಯಂಥಹ ಕಡಲತೀರಗಳು, ಗೋಕರ್ಣ, ಮುರ್ಡೇಶ್ವರ, ಶಿರಸಿಯ ಮಾರಿಕಾಂಬೆಯ ದೇಗುಲದಂಥಹ ಧಾರ್ಮಿಕ ತಾಣಗಳು, ಟಿಬೇಟಿಯನ್ ಕಾಲೋನಿಯೆಂಬ ಸಂಸ್ಕೃತಿಯ ತಾಣ ಸೇರಿ ವಿಭಿನ್ನ ಸಮುದಾಯಗಳನ್ನು ಹೊಂದಿರುವ ಜಿಲ್ಲೆ ವಿವಿಧತೆಯಲ್ಲಿ ಏಕತೆ ಸಾರುತ್ತಿದೆ. ಆದರೆ, ಇಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿನ ತಾಣಗಳ ಕುರಿತು ಒಂದೆಡೆ ಸಂಪೂರ್ಣ ಮಾಹಿತಿ ಒದಗಿಸುವುದು ಇಷ್ಟು ವರ್ಷಗಳ ಕಾಲ ಸಾಧ್ಯವಾಗಿರಲಿಲ್ಲ.

ನೂತನ ವೆಬ್​ಸೈಟ್ ​: ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೂತನ ಕ್ರಮಕ್ಕೆ ಮುಂದಾಗಿದ್ದಾರೆ. ದಾಂಡೇಲಿ, ಜೋಯಿಡಾದ ಅರಣ್ಯ ಪರಿಸರ ವೀಕ್ಷಿಸಿದವರು ಅನತಿ ದೂರದ ಕಾರವಾರ, ಹೊನ್ನಾವರ ಭಾಗದ ಪ್ರವಾಸಿ ತಾಣಗಳಿಗೂ ಭೇಟಿ ನೀಡುವಂತಾಗಬೇಕು.

ಪ್ರವಾಸಿಗರ ಸಹಾಯಕ್ಕೆ ಮುಂದಾದ ಜಿಲ್ಲಾಡಳಿತ

ಇಲ್ಲಿಗೆ ಬರುವ ಪ್ರವಾಸಿಗರಿಗೆ ಅವರ ಅಂಗೈನಲ್ಲೇ ಜಿಲ್ಲೆಯ ಸಂಸ್ಕೃತಿ, ಆಹಾರ ವೈವಿಧ್ಯತೆ, ಸಂಪ್ರದಾಯಗಳ ಕುರಿತು ಮಾಹಿತಿ ಸಿಗುವಂತಾಗಬೇಕೆಂಬ ನಿಟ್ಟಿನಲ್ಲಿ https://uttarakannada.org/ ವೆಬ್‌ಸೈಟ್‌ ಅನ್ನು ಜಿಲ್ಲಾಡಳಿತ ಪ್ರಾರಂಭಿಸಿದೆ. ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ, ಅಲ್ಲಿಗೆ ತಲುಪುವುದು ಹೇಗೆ ಎಂಬ ವಿವರಗಳನ್ನು ಸಂಗ್ರಹಿಸಿ ಈ ವೆಬ್​​ಸೈಟ್​ನಲ್ಲಿ ಅಪ್ಲೋಡ್ ಮಾಡಲಾಗಿದೆ.

ವಾಸೋದ್ಯಮ ಇಲಾಖೆಯಡಿ ವೆಬ್​ಸೈಟ್ : ಈ ವೆಬ್‌ಸೈಟ್ ಪ್ರವಾಸೋದ್ಯಮ ಇಲಾಖೆಯ ಅಡಿಯಲ್ಲಿದೆ. ಇದು ರೂಪುಗೊಳ್ಳುವಲ್ಲಿ ಮೂವರು ಯುವಕರ ತಂಡ ಶ್ರಮವಹಿಸಿದೆ. ಉರಗ ತಜ್ಞರಾದ ಓಂಕಾರ್ ಪೈ ವೆಬ್‌ಸೈಟ್‌ನಲ್ಲಿ ವೈಲ್ಡ್‌ಲೈಫ್‌ಗೆ ಸಂಬಂಧಿಸಿದ ಮಾಹಿತಿಗಳನ್ನು ನೀಡಿದರೆ, ಸಾತ್ವಿಕ್ ಭಟ್ ವೆಬ್‌ಸೈಟ್‌ ಡಿಸೈನ್ ಮಾಡಿದ್ದಾರೆ. ಗೋಪಿ ಜೋಲಿ ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದ ಅತ್ಯುತ್ತಮ ಫೋಟೋಗಳನ್ನು ನೀಡಿ ವೆಬ್‌ಸೈಟ್‌ನ ಇನ್ನಷ್ಟು ಅಂದಗೊಳಿಸಿದ್ದಾರೆ.

ವೆಬ್​ಸೈಟ್​ನೊಂದಿಗೆ ಈಗಾಗಲೇ ಜಿಲ್ಲೆಯ ಎಲ್ಲ ರೆಸಾರ್ಟ್ ಮಾಲೀಕರುಗಳಿಗೂ ಕಾರ್ಯಾಗಾರವನ್ನು ನಡೆಸಲಾಗಿದೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ಕುರಿತು ತಿಳಿಸಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಒಂದೇ ವೆಬ್‌ಸೈಟ್ ಮೂಲಕ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳ ಭೇಟಿಗೆ ಅನುಕೂಲವಾಗುವಂತೆ ಮಾಡುವುದು ನಮ್ಮ ಗುರಿ ಅಂತಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸು: ಜೆಡಿಎಸ್‍ ಕದ ತಟ್ಟುವರೇ ಸಿಎಂ ಇಬ್ರಾಹಿಂ?

ಜಿಲ್ಲೆಯ ಕಡಲತೀರಗಳಿಗೆ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದ್ರೆ, ಪ್ರವಾಸಿಗರಿಗೆ ಅಕ್ಕಪಕ್ಕದ ಇತರೆ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ಸಿಗದ ಹಿನ್ನೆಲೆ ಸಮೀಪದ ಕೆಲವೇ ತಾಣಗಳಿಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದರು. ಈ ನಿಟ್ಟಿನಲ್ಲಿ ಪ್ರವಾಸಿಗರಿಗೆ ಸೂಕ್ತ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿರೋದು ಉತ್ತಮ ಬೆಳವಣಿಗೆ ಅಂತಾರೆ ಸ್ಥಳೀಯರು.

ಕೊರೊನಾ ಹೊಡೆತದಿಂದ ನಲುಗಿ ಹೋಗಿರುವ ಜಿಲ್ಲೆಯ ಪ್ರವಾಸೋದ್ಯಮವನ್ನು ತಾಂತ್ರಿಕತೆಯೊಂದಿಗೆ ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಮುಂದಾಗಿರೋದು ನಿಜಕ್ಕೂ ಉತ್ತಮ ಬೆಳವಣಿಗೆಯಾಗಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 28, 2022, 3:49 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.