ಕಾರವಾರ: ಕಳೆದ ಮೂರ್ನಾಲ್ಕು ದಿನಗಳಿಂದ ನಿತ್ಯವೂ ಕೊರೊನಾ ಸೋಂಕಿತರು ಪತ್ತೆಯಾಗುವ ಮೂಲಕ ಆತಂಕಕ್ಕೆ ಕಾರಣವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಜನರು ಯಾವುದೇ ಪ್ರಕರಣ ಪತ್ತೆಯಾಗದಿರುವುದಕ್ಕೆ ಇಂದು ನಿರಾಳರಾಗಿದ್ದಾರೆ.

ನಿತ್ಯವೂ ಬೆಳಿಗ್ಗೆ ಮತ್ತು ಸಂಜೆ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಬರುತ್ತಿದ್ದಂತೆ ಆತಂಕಗೊಳ್ಳುತ್ತಿದ್ದ ಜಿಲ್ಲೆಯ ಜನರಿಗೆ ಇಂದು ತುಸು ನೆಮ್ಮದಿ ನೀಡಿದೆ. ಈಗಾಗಲೇ ಜಿಲ್ಲೆಯ ಭಟ್ಕಳದಲ್ಲಿ 28 ಪ್ರಕರಣಗಳು ಸಕ್ರಿಯವಾಗಿದ್ದು, ಇನ್ನಷ್ಟು ಗಂಟಲು ದ್ರವದ ವರದಿಗಳು ಬರುವುದು ಬಾಕಿ ಇದೆ. ಆದರೆ 11 ಜನರು ಗುಣಮುಖರಾದ 21 ದಿನಗಳ ಬಳಿಕ ಏಕಾಏಕಿ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗಿದ್ದು, ಇನ್ನಷ್ಟು ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇದೆ.