ETV Bharat / state

ವಿಷ್ಣು ಗುಪ್ತ ವಿವಿಯಿಂದ ಮಹತ್ವದ ಹೆಜ್ಜೆ: ಗುರುಕುಲದ ಜತೆಗೆ ಪರಂಪರಾ ವಿವಿ ಸ್ಥಾಪನೆ

ಗೋಕರ್ಣದ ವಿಷ್ಣು ಗುಪ್ತ ವಿದ್ಯಾ ಪೀಠ ಪರಂಪರಾ ವಿವಿ ಸ್ಥಾಪನೆಗೆ ಮುಂದಾಗಿದೆ. ಇಲ್ಲಿ ವಿದ್ಯಾರ್ಥಿಗಳು ಆರು ವರ್ಷದಲ್ಲಿ 18 ಭಾರತೀಯ ವಿದ್ಯೆಗಳ ಪೂರ್ವ ಶಿಕ್ಷಣ ಪಡೆಯಲಿದ್ದಾರೆ.

author img

By

Published : Sep 9, 2022, 2:01 PM IST

Uttara Kannada
ಉತ್ತರ ಕನ್ನಡದಲ್ಲಿ ಪರಂಪರಾ ವಿಶ್ವವಿದ್ಯಾಲಯ ಸ್ಥಾಪನೆ

ಕಾರವಾರ: ಆಧುನಿಕ ಶಿಕ್ಷಣದ ನಡುವೆ ನಮ್ಮ ಭಾರತೀಯ ಸಂಸ್ಕೃತಿ, ಪರಂಪರೆ ನಶಿಸಿ ಹೋಗುತ್ತಿದೆ. ಪಾಶ್ಚಿಮಾತ್ಯ ಸಂಸ್ಕೃತಿಯತ್ತ ಯುವ ಪಿಳಿಗೆ ಆಕರ್ಷಿತವಾದ ಕಾರಣ ವ್ಯವಸ್ಥೆ ಕೂಡ ಅದಕ್ಕೆ ಪೂರಕವಾಗುತ್ತಿದೆ. ಆದರೆ ದೇಶದ ಪರಂಪರೆ ಹಾಗೂ ಹಿಂದೂ ಸಂಸ್ಕೃತಿಯ ಉಳಿವಿಗಾಗಿ ಪಣತೊಟ್ಟು ದೇಶದಲ್ಲಿಯೇ ಎಲ್ಲೂ ಸಿಗದಂತಹ ಗುರುಕುಲ ಶಿಕ್ಷಣ ಪ್ರಾರಂಭಿಸಿದ್ದ ಗೋಕರ್ಣದ ವಿಷ್ಣು ಗುಪ್ತ ವಿದ್ಯಾ ಪೀಠ ಇದೀಗ ಪರಂಪರಾ ವಿವಿ ಸ್ಥಾಪನೆಗೆ ಮುಂದಾಗಿದೆ.

ಗೋಕರ್ಣದ ವಿಷ್ಣುಗುಪ್ತ ವಿದ್ಯಾ ಪೀಠ ಹಿಂದೂ ಸಂಸ್ಕೃತಿಯ ಉಳಿವಿಗೆ ಪಣ ತೊಟ್ಟಿದೆ. ಶ್ರೀ ರಾಘವೇಶ್ವರ ಭಾರತೀ ಶ್ರೀಗಳ ನೇತೃತ್ವದಲ್ಲಿ ವಿಷ್ಣುಗುಪ್ತ ವಿದ್ಯಾಪೀಠದಲ್ಲಿ ಗುರುಕುಲ ಶಿಕ್ಷಣ ನಡೆಯುತ್ತಿದೆ. ಇಲ್ಲಿ 64 ವಿದ್ಯೆಗಳನ್ನು ಕಲಿಸಲಾಗುತ್ತಿದೆ. ಆಧುನಿಕ ಶಿಕ್ಷಣದೊಂದಿಗೆ, ದೇಶದ ಸಂಸ್ಕೃತಿ, ಧಾರ್ಮಿಕ, ಪಾರಂಪರಿಕ ಶಿಕ್ಷಣ ಒದಗಿಸುತ್ತಿದೆ. ಈಗಾಗಲೇ ಕಾರ್ಯಾರಂಭ ಮಾಡಿರುವ ಗುರುಕುಲಗಳು ಕಳೆದ ಎರಡು ವರ್ಷದಿಂದ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ನಾಡಿನ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿದೆ.

ಉತ್ತರ ಕನ್ನಡದಲ್ಲಿ ಪರಂಪರಾ ವಿಶ್ವವಿದ್ಯಾಲಯ ಸ್ಥಾಪನೆ: ರಾಘವೇಶ್ವರ ಶ್ರೀ

18 ಭಾರತೀಯ ವಿದ್ಯೆಗಳ ಪೂರ್ವ ಶಿಕ್ಷಣ: ಋಷಿಯುಗ ಮತ್ತು ನವಯುಗ ಶಿಕ್ಷಣದ ಸಮನ್ವಯದೊಂದಿಗೆ ಗುರುಕುಲಗಳು ಕಾರ್ಯ ನಿರ್ವಹಿಸುತ್ತಿವೆ. ಪರಂಪರಾ ಗುರುಕುಲದಲ್ಲಿ ವಿದ್ಯಾರ್ಥಿಗಳು ಆರು ವರ್ಷದಲ್ಲಿ 18 ಭಾರತೀಯ ವಿದ್ಯೆಗಳ ಪೂರ್ವ ಶಿಕ್ಷಣ ಪಡೆಯಲಿದ್ದಾರೆ. ಪರಂಪರಾ ವಿಶ್ವವಿದ್ಯಾನಿಲಯಲ್ಲಿ ಇವುಗಳ ಉನ್ನತ ಅಧ್ಯಯನಕ್ಕೆ ಅವಕಾಶ ಇರುತ್ತದೆ. ಇದರ ಪಠ್ಯಕ್ರಮ ಸೇರಿದಂತೆ ಸಮಗ್ರ ರೂಪುರೇಷೆ ಅಭಿವೃದ್ಧಿಪಡಿಸಿ ಕೇಂದ್ರ ಸರ್ಕಾರಕ್ಕೆ ವಿಸ್ತ್ರತ ಯೋಜನಾ ವರದಿ ಸಲ್ಲಿಸಲಾಗಿದೆ.

150 ಕೋಟಿ ರೂ.ವೆಚ್ಚದಲ್ಲಿ ಮೂಲಸೌಕರ್ಯ: ಮಹತ್ವಾಕಾಂಕ್ಷಿ ವಿಶ್ವವಿದ್ಯಾಪೀಠ 15 ವರ್ಷಗಳ ವಿಸ್ತ್ರತ ಯೋಜನೆಯಾಗಿದ್ದು, ಇದು ಪೂರ್ಣವಾಗಿ ಕಾರ್ಯಗತಗೊಂಡಾಗ ಭಾರತೀಯ ಪದ್ಧತಿಯ ಸಮಗ್ರ ಶಿಕ್ಷಣವನ್ನು 25 ಸಾವಿರ ವಿದ್ಯಾರ್ಥಿಗಳು ಕಲಿಯಲು ಅವಕಾಶ ಮಾಡಿಕೊಡಲಾಗುತ್ತದೆ. ಈಗಾಗಲೇ 150 ಕೋಟಿ ರೂ.ವೆಚ್ಚದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ರಾಘವೇಶ್ವರ ಭಾರತೀ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.

ಕಳೆದ‌ ಎರಡು ವರ್ಷದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ ಮಕ್ಕಳ ಪೈಕಿ 450 ವಿದ್ಯಾರ್ಥಿಗಳಿಗಷ್ಟೆ ಅವಕಾಶ ಸಿಕ್ಕಿದೆ. ಆದರೆ ಈಗ ದಾಖಲಾಗಿರುವ ವಿದ್ಯಾರ್ಥಿಗಳಿಗಿಂತ ಎರಡು ಪಟ್ಟು ವಿದ್ಯಾರ್ಥಿಗಳು ಅವಕಾಶ ಸಿಗದೆ ವಾಪಸ್ ಆಗಿದ್ದಾರೆ. ಅಂತವರಿಗೆ ಮುಂದಿನ ದಿನಗಳಲ್ಲಿ ಇದೇ ಪ್ರದೇಶದಲ್ಲಿ ಶಿಕ್ಷಣ ನೀಡಲು ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ದೇಶದ ಪರಂಪರೆಯನ್ನು ಈ ರಾಮಾಯಣ, ಮಹಾಭಾರತದ ಕಾಲದ ವಿದ್ಯೆಯ ಜೊತೆಗೆ ಕುದುರೆ ಸವಾರಿ ಸೇರಿದಂತೆ ಈ ಹಿಂದಿನ ಗುರುಕುಲ‌ ಮಾದರಿಯ ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಸ್ವಾಮೀಜಿಯವರ ಮುಂದಾಲೋಚನೆಯಿಂದಾಗಿ ನಶಿಸಿಹೋಗುತ್ತಿದ್ದ ಶಿಕ್ಷಣವನ್ನು ಮರಳಿ ಪಡೆಯುವಂತಾಗಿದೆ ಎನ್ನುತ್ತಾರೆ ಸ್ಥಳೀಯರು.

ಒಟ್ಟಾರೆ ಆಧುನಿಕತೆ ಭರಾಟೆಯಲ್ಲಿ ಮಾಯವಾಗುತ್ತಿದ್ದ ಗುರುಕುಲ ಶಿಕ್ಷಣಕ್ಕೆ ಒತ್ತು ನೀಡುವುದರ ಜೊತೆ ವಿಶ್ವ ವಿದ್ಯಾಲಯ ಪ್ರಾರಂಭವಾಗುತ್ತಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಮುಂದಿನ ದಿನಗಳಲ್ಲಿ ವಿದ್ಯಾಪೀಠದಲ್ಲಿ ಹೆಚ್ಚಿನ ಮಕ್ಕಳು ಕಲಿತು ದೇಶದ ಸಂಸ್ಕೃತಿ ಪರಂಪರೆ ಉಳಿಸಿ ಬೆಳೆಸುವ ಕಾರ್ಯವಾಗಬೇಕಿದೆ.

ಇದನ್ನೂ ಓದಿ: ಸುಪ್ರೀಂ ತೀರ್ಪಿನಿಂದ ವ್ಯಥೆ ಇಲ್ಲ, ಕಾನೂನು ಹೋರಾಟ ಮುಂದುವರಿಸುತ್ತೇವೆ: ರಾಘವೇಶ್ವರ ಭಾರತೀ ಸ್ವಾಮೀಜಿ

ಕಾರವಾರ: ಆಧುನಿಕ ಶಿಕ್ಷಣದ ನಡುವೆ ನಮ್ಮ ಭಾರತೀಯ ಸಂಸ್ಕೃತಿ, ಪರಂಪರೆ ನಶಿಸಿ ಹೋಗುತ್ತಿದೆ. ಪಾಶ್ಚಿಮಾತ್ಯ ಸಂಸ್ಕೃತಿಯತ್ತ ಯುವ ಪಿಳಿಗೆ ಆಕರ್ಷಿತವಾದ ಕಾರಣ ವ್ಯವಸ್ಥೆ ಕೂಡ ಅದಕ್ಕೆ ಪೂರಕವಾಗುತ್ತಿದೆ. ಆದರೆ ದೇಶದ ಪರಂಪರೆ ಹಾಗೂ ಹಿಂದೂ ಸಂಸ್ಕೃತಿಯ ಉಳಿವಿಗಾಗಿ ಪಣತೊಟ್ಟು ದೇಶದಲ್ಲಿಯೇ ಎಲ್ಲೂ ಸಿಗದಂತಹ ಗುರುಕುಲ ಶಿಕ್ಷಣ ಪ್ರಾರಂಭಿಸಿದ್ದ ಗೋಕರ್ಣದ ವಿಷ್ಣು ಗುಪ್ತ ವಿದ್ಯಾ ಪೀಠ ಇದೀಗ ಪರಂಪರಾ ವಿವಿ ಸ್ಥಾಪನೆಗೆ ಮುಂದಾಗಿದೆ.

ಗೋಕರ್ಣದ ವಿಷ್ಣುಗುಪ್ತ ವಿದ್ಯಾ ಪೀಠ ಹಿಂದೂ ಸಂಸ್ಕೃತಿಯ ಉಳಿವಿಗೆ ಪಣ ತೊಟ್ಟಿದೆ. ಶ್ರೀ ರಾಘವೇಶ್ವರ ಭಾರತೀ ಶ್ರೀಗಳ ನೇತೃತ್ವದಲ್ಲಿ ವಿಷ್ಣುಗುಪ್ತ ವಿದ್ಯಾಪೀಠದಲ್ಲಿ ಗುರುಕುಲ ಶಿಕ್ಷಣ ನಡೆಯುತ್ತಿದೆ. ಇಲ್ಲಿ 64 ವಿದ್ಯೆಗಳನ್ನು ಕಲಿಸಲಾಗುತ್ತಿದೆ. ಆಧುನಿಕ ಶಿಕ್ಷಣದೊಂದಿಗೆ, ದೇಶದ ಸಂಸ್ಕೃತಿ, ಧಾರ್ಮಿಕ, ಪಾರಂಪರಿಕ ಶಿಕ್ಷಣ ಒದಗಿಸುತ್ತಿದೆ. ಈಗಾಗಲೇ ಕಾರ್ಯಾರಂಭ ಮಾಡಿರುವ ಗುರುಕುಲಗಳು ಕಳೆದ ಎರಡು ವರ್ಷದಿಂದ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ನಾಡಿನ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿದೆ.

ಉತ್ತರ ಕನ್ನಡದಲ್ಲಿ ಪರಂಪರಾ ವಿಶ್ವವಿದ್ಯಾಲಯ ಸ್ಥಾಪನೆ: ರಾಘವೇಶ್ವರ ಶ್ರೀ

18 ಭಾರತೀಯ ವಿದ್ಯೆಗಳ ಪೂರ್ವ ಶಿಕ್ಷಣ: ಋಷಿಯುಗ ಮತ್ತು ನವಯುಗ ಶಿಕ್ಷಣದ ಸಮನ್ವಯದೊಂದಿಗೆ ಗುರುಕುಲಗಳು ಕಾರ್ಯ ನಿರ್ವಹಿಸುತ್ತಿವೆ. ಪರಂಪರಾ ಗುರುಕುಲದಲ್ಲಿ ವಿದ್ಯಾರ್ಥಿಗಳು ಆರು ವರ್ಷದಲ್ಲಿ 18 ಭಾರತೀಯ ವಿದ್ಯೆಗಳ ಪೂರ್ವ ಶಿಕ್ಷಣ ಪಡೆಯಲಿದ್ದಾರೆ. ಪರಂಪರಾ ವಿಶ್ವವಿದ್ಯಾನಿಲಯಲ್ಲಿ ಇವುಗಳ ಉನ್ನತ ಅಧ್ಯಯನಕ್ಕೆ ಅವಕಾಶ ಇರುತ್ತದೆ. ಇದರ ಪಠ್ಯಕ್ರಮ ಸೇರಿದಂತೆ ಸಮಗ್ರ ರೂಪುರೇಷೆ ಅಭಿವೃದ್ಧಿಪಡಿಸಿ ಕೇಂದ್ರ ಸರ್ಕಾರಕ್ಕೆ ವಿಸ್ತ್ರತ ಯೋಜನಾ ವರದಿ ಸಲ್ಲಿಸಲಾಗಿದೆ.

150 ಕೋಟಿ ರೂ.ವೆಚ್ಚದಲ್ಲಿ ಮೂಲಸೌಕರ್ಯ: ಮಹತ್ವಾಕಾಂಕ್ಷಿ ವಿಶ್ವವಿದ್ಯಾಪೀಠ 15 ವರ್ಷಗಳ ವಿಸ್ತ್ರತ ಯೋಜನೆಯಾಗಿದ್ದು, ಇದು ಪೂರ್ಣವಾಗಿ ಕಾರ್ಯಗತಗೊಂಡಾಗ ಭಾರತೀಯ ಪದ್ಧತಿಯ ಸಮಗ್ರ ಶಿಕ್ಷಣವನ್ನು 25 ಸಾವಿರ ವಿದ್ಯಾರ್ಥಿಗಳು ಕಲಿಯಲು ಅವಕಾಶ ಮಾಡಿಕೊಡಲಾಗುತ್ತದೆ. ಈಗಾಗಲೇ 150 ಕೋಟಿ ರೂ.ವೆಚ್ಚದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ರಾಘವೇಶ್ವರ ಭಾರತೀ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.

ಕಳೆದ‌ ಎರಡು ವರ್ಷದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ ಮಕ್ಕಳ ಪೈಕಿ 450 ವಿದ್ಯಾರ್ಥಿಗಳಿಗಷ್ಟೆ ಅವಕಾಶ ಸಿಕ್ಕಿದೆ. ಆದರೆ ಈಗ ದಾಖಲಾಗಿರುವ ವಿದ್ಯಾರ್ಥಿಗಳಿಗಿಂತ ಎರಡು ಪಟ್ಟು ವಿದ್ಯಾರ್ಥಿಗಳು ಅವಕಾಶ ಸಿಗದೆ ವಾಪಸ್ ಆಗಿದ್ದಾರೆ. ಅಂತವರಿಗೆ ಮುಂದಿನ ದಿನಗಳಲ್ಲಿ ಇದೇ ಪ್ರದೇಶದಲ್ಲಿ ಶಿಕ್ಷಣ ನೀಡಲು ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ದೇಶದ ಪರಂಪರೆಯನ್ನು ಈ ರಾಮಾಯಣ, ಮಹಾಭಾರತದ ಕಾಲದ ವಿದ್ಯೆಯ ಜೊತೆಗೆ ಕುದುರೆ ಸವಾರಿ ಸೇರಿದಂತೆ ಈ ಹಿಂದಿನ ಗುರುಕುಲ‌ ಮಾದರಿಯ ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಸ್ವಾಮೀಜಿಯವರ ಮುಂದಾಲೋಚನೆಯಿಂದಾಗಿ ನಶಿಸಿಹೋಗುತ್ತಿದ್ದ ಶಿಕ್ಷಣವನ್ನು ಮರಳಿ ಪಡೆಯುವಂತಾಗಿದೆ ಎನ್ನುತ್ತಾರೆ ಸ್ಥಳೀಯರು.

ಒಟ್ಟಾರೆ ಆಧುನಿಕತೆ ಭರಾಟೆಯಲ್ಲಿ ಮಾಯವಾಗುತ್ತಿದ್ದ ಗುರುಕುಲ ಶಿಕ್ಷಣಕ್ಕೆ ಒತ್ತು ನೀಡುವುದರ ಜೊತೆ ವಿಶ್ವ ವಿದ್ಯಾಲಯ ಪ್ರಾರಂಭವಾಗುತ್ತಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಮುಂದಿನ ದಿನಗಳಲ್ಲಿ ವಿದ್ಯಾಪೀಠದಲ್ಲಿ ಹೆಚ್ಚಿನ ಮಕ್ಕಳು ಕಲಿತು ದೇಶದ ಸಂಸ್ಕೃತಿ ಪರಂಪರೆ ಉಳಿಸಿ ಬೆಳೆಸುವ ಕಾರ್ಯವಾಗಬೇಕಿದೆ.

ಇದನ್ನೂ ಓದಿ: ಸುಪ್ರೀಂ ತೀರ್ಪಿನಿಂದ ವ್ಯಥೆ ಇಲ್ಲ, ಕಾನೂನು ಹೋರಾಟ ಮುಂದುವರಿಸುತ್ತೇವೆ: ರಾಘವೇಶ್ವರ ಭಾರತೀ ಸ್ವಾಮೀಜಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.