ETV Bharat / state

ಕಾರವಾರದಲ್ಲಿ ಸಾಮಾಜಿಕ ಅಂತರ ಮರೆತು ಕಾರ್ಮಿಕ ಕಚೇರಿ ಮುಂದೆ ಮುಗಿಬಿದ್ದ ಜನ

author img

By

Published : Jun 29, 2020, 3:41 PM IST

ಸರ್ಕಾರದ ಪರಿಹಾರ ಹಣಕ್ಕಾಗಿ ಅರ್ಜಿ ಸಲ್ಲಿಸಲು ಬಂದಿದ್ದ ಜನ ಸಾಮಾಜಿಕ ಅಂತರ ಮರೆತು ಮುಗಿಬಿದ್ದ ದೃಶ್ಯ ಕಾರವಾರದ ಕಾರ್ಮಿಕ ಇಲಾಖೆ ಕಚೇರಿ ಮುಂದೆ ಕಂಡು ಬಂತು.

Violated Social Distance
ಸಾಮಾಜಿಕ ಅಂತರ ಮರೆತು ಮುಗಿಬಿದ್ದ ಜನ

ಕಾರವಾರ: ಕೊರೊನಾ ಲಾಕ್​​ಡೌನ್​​ನಿಂದಾಗಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸರ್ಕಾರ ವಿತರಿಸುತ್ತಿರುವ ಪರಿಹಾರ ಹಣಕ್ಕಾಗಿ ಅರ್ಜಿ ಸಲ್ಲಿಸಲು ಜನ ಸಾಮಾಜಿಕ ಅಂತರ ಮರೆತು ಕಾರ್ಮಿಕ ಇಲಾಖೆ ಕಚೇರಿ ಎದುರು ಮುಗಿಬಿದ್ದಿದ್ದರು.

ನಗರದ ಹಬ್ಬುವಾಡ ರಸ್ತೆಯಲ್ಲಿರುವ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಟೈಲರಿಂಗ್ ಹಾಗೂ ಅಗಸ ವೃತ್ತಿ ಮಾಡುತ್ತಿರುವವರಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ. ಅರ್ಜಿ ಸಲ್ಲಿಸಲು ನೂರಾರು ಜನರು ಕಚೇರಿ ಬಳಿ ಆಗಮಿಸಿದ್ದರು. ಈ ವೇಳೆ ಸಾಮಾಜಿಕ ಅಂತರದ ನಿಯಮ ಮರೆತು ಗುಂಪು ಗುಂಪಾಗಿ ನಿಂತಿದ್ದ ದೃಶ್ಯ ಕಂಡು ಬಂತು.

ಸಾಮಾಜಿಕ ಅಂತರ ಮರೆತು ಮುಗಿಬಿದ್ದ ಜನ

ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನವಾಗಿದೆ. ಕಳೆದ ಒಂದು ವಾರದಿಂದಲೂ ಜನ ಇದೇ ರಿತಿ ನಿರ್ಲಕ್ಷ್ಯ ವಹಿಸಿ ಗುಂಪು ಸೇರುತ್ತಿದ್ದಾರೆ. ಜನರನ್ನು ನಿಯಂತ್ರಿಸಲು ಸ್ಥಳದಲ್ಲಿ ಪೊಲೀಸರನ್ನೂ ನೇಮಿಸಿಲ್ಲ ಎನ್ನಲಾಗಿದೆ.

ಕಾರವಾರ: ಕೊರೊನಾ ಲಾಕ್​​ಡೌನ್​​ನಿಂದಾಗಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸರ್ಕಾರ ವಿತರಿಸುತ್ತಿರುವ ಪರಿಹಾರ ಹಣಕ್ಕಾಗಿ ಅರ್ಜಿ ಸಲ್ಲಿಸಲು ಜನ ಸಾಮಾಜಿಕ ಅಂತರ ಮರೆತು ಕಾರ್ಮಿಕ ಇಲಾಖೆ ಕಚೇರಿ ಎದುರು ಮುಗಿಬಿದ್ದಿದ್ದರು.

ನಗರದ ಹಬ್ಬುವಾಡ ರಸ್ತೆಯಲ್ಲಿರುವ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಟೈಲರಿಂಗ್ ಹಾಗೂ ಅಗಸ ವೃತ್ತಿ ಮಾಡುತ್ತಿರುವವರಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ. ಅರ್ಜಿ ಸಲ್ಲಿಸಲು ನೂರಾರು ಜನರು ಕಚೇರಿ ಬಳಿ ಆಗಮಿಸಿದ್ದರು. ಈ ವೇಳೆ ಸಾಮಾಜಿಕ ಅಂತರದ ನಿಯಮ ಮರೆತು ಗುಂಪು ಗುಂಪಾಗಿ ನಿಂತಿದ್ದ ದೃಶ್ಯ ಕಂಡು ಬಂತು.

ಸಾಮಾಜಿಕ ಅಂತರ ಮರೆತು ಮುಗಿಬಿದ್ದ ಜನ

ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನವಾಗಿದೆ. ಕಳೆದ ಒಂದು ವಾರದಿಂದಲೂ ಜನ ಇದೇ ರಿತಿ ನಿರ್ಲಕ್ಷ್ಯ ವಹಿಸಿ ಗುಂಪು ಸೇರುತ್ತಿದ್ದಾರೆ. ಜನರನ್ನು ನಿಯಂತ್ರಿಸಲು ಸ್ಥಳದಲ್ಲಿ ಪೊಲೀಸರನ್ನೂ ನೇಮಿಸಿಲ್ಲ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.