ETV Bharat / state

ವಾರ್ತಾ ಇಲಾಖೆಯಿಂದ ನೇರ ಫೋನ್ ಇನ್:  ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ

author img

By

Published : Jan 10, 2020, 9:00 AM IST

ಕಾರವಾರದಲ್ಲಿ ಇದೇ ಮೊದಲ ಬಾರಿಗೆ ವಾರ್ತಾ ಇಲಾಖೆಯಿಂದ ಆಯೋಜಿಸಿದ್ದ ನೇರ ಫೋನ್​ ಇನ್​ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಸಾರ್ವಜನಿಕರು ಅಧಿಕಾರಿಗಳೊಂದಿಗೆ ತಮ್ಮ ಅಹವಾಲು ತೋಡಿಕೊಂಡು ಪರಿಹಾರ ಕಂಡುಕೊಂಡರು.

Phone in Program from health authorities in Karwar
ವಾರ್ತಾ ಇಲಾಖೆಯಿಂದ ನೇರ ಫೋನ್ ಇನ್

ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಇದೇ ಮೊದಲ ಭಾರಿಗೆ ಆಯೋಜಿಸಿದ್ದ "ವಾರ್ತಾ ಸ್ಪಂದನ" ನೇರ ಪೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಾರ್ತಾ ಇಲಾಖೆಯಿಂದ ನೇರ ಫೋನ್ ಇನ್

ನೇರವಾಗಿ ಪೋನ್ ಮೂಲಕ ಸಮಸ್ಯೆ ಹೇಳಿ ಪರಿಹಾರ ಕಂಡುಕೊಳ್ಳುವ ಕುರಿತು ಆಯೋಜಿಸಿದ್ದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಉದ್ಘಾಟಿಸಿದರು. ಬಳಿಕ ಜಿಲ್ಲೆಯ ವಿವಿಧ ಭಾಗಗಳಿಂದ ಸಾರ್ವಜನಿಕರು ನೇರ ಫೋನ್‍ಇನ್ ನಲ್ಲಿ ಪಾಲ್ಗೊಂಡು ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಇಲಾಖಾ ಅಧಿಕಾರಿಗಳ ಗಮನಕ್ಕೆ ತಂದರು. ಈ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು. ಒಟ್ಟು 12 ಮಂದಿ ದೂರವಾಣಿ ಕರೆ ಮಾಡಿ ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಅಧಿಕಾರಿಗ ಗಮನ ಸೆಳೆದರು. ಇದಕ್ಕೆ ಪೂರಕವಾಗಿ ಆರೋಗ್ಯಾಧಿಕಾರಿಗಳು ಪ್ರತಿಕ್ರಿಯಿಸಿದರು.

ಆರೋಗ್ಯ ಇಲಾಖೆಯ ವಿವಿಧ ವಿಭಾಗದ ಮುಖ್ಯಸ್ಥರಾದ ಡಾ.ರಮೇಶ್ ರಾವ್, ಡಾ.ಶಂಕರ ರವ್, ಡಾ.ಮಹಾಬಲೇಶ್ವರ ಹೆಗಡೆ, ಡಾ.ವಿನೋದ ಭೂತೆ, ಡಾ.ಸತೀಶ್ ಶೇಟ್, ಡಾ.ಲಲಿತಾ ಶೆಟ್ಟಿ, ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಜಿ. ಉಪಸ್ಥಿತರಿದ್ದರು.

ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಇದೇ ಮೊದಲ ಭಾರಿಗೆ ಆಯೋಜಿಸಿದ್ದ "ವಾರ್ತಾ ಸ್ಪಂದನ" ನೇರ ಪೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಾರ್ತಾ ಇಲಾಖೆಯಿಂದ ನೇರ ಫೋನ್ ಇನ್

ನೇರವಾಗಿ ಪೋನ್ ಮೂಲಕ ಸಮಸ್ಯೆ ಹೇಳಿ ಪರಿಹಾರ ಕಂಡುಕೊಳ್ಳುವ ಕುರಿತು ಆಯೋಜಿಸಿದ್ದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಉದ್ಘಾಟಿಸಿದರು. ಬಳಿಕ ಜಿಲ್ಲೆಯ ವಿವಿಧ ಭಾಗಗಳಿಂದ ಸಾರ್ವಜನಿಕರು ನೇರ ಫೋನ್‍ಇನ್ ನಲ್ಲಿ ಪಾಲ್ಗೊಂಡು ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಇಲಾಖಾ ಅಧಿಕಾರಿಗಳ ಗಮನಕ್ಕೆ ತಂದರು. ಈ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು. ಒಟ್ಟು 12 ಮಂದಿ ದೂರವಾಣಿ ಕರೆ ಮಾಡಿ ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಅಧಿಕಾರಿಗ ಗಮನ ಸೆಳೆದರು. ಇದಕ್ಕೆ ಪೂರಕವಾಗಿ ಆರೋಗ್ಯಾಧಿಕಾರಿಗಳು ಪ್ರತಿಕ್ರಿಯಿಸಿದರು.

ಆರೋಗ್ಯ ಇಲಾಖೆಯ ವಿವಿಧ ವಿಭಾಗದ ಮುಖ್ಯಸ್ಥರಾದ ಡಾ.ರಮೇಶ್ ರಾವ್, ಡಾ.ಶಂಕರ ರವ್, ಡಾ.ಮಹಾಬಲೇಶ್ವರ ಹೆಗಡೆ, ಡಾ.ವಿನೋದ ಭೂತೆ, ಡಾ.ಸತೀಶ್ ಶೇಟ್, ಡಾ.ಲಲಿತಾ ಶೆಟ್ಟಿ, ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಜಿ. ಉಪಸ್ಥಿತರಿದ್ದರು.

Intro:Body:ನೇರ ಪೋನ್ ಇನ್ ಕಾರ್ಯಕ್ರಮ... ಸಮಸ್ಯೆ ಮುಂದಿಟ್ಟ ಜನ

ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಇದೇ ಮೊದಲ ಭಾರಿಗೆ ಆಯೋಜಿಸಿದ್ದ ವಾರ್ತಾ ಸ್ಪಂದನ ನೇರ ಪೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನೇರವಾಗಿ ಪೋನ್ ಮೂಲಕ ಸಮಸ್ಯೆ ಹೇಳಿ ಪರಿಹಾರ ಕಂಡುಕೊಳ್ಳುವ ಕುರಿತು ಆಯೋಜಿಸಿದ್ದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಉದ್ಘಾಟಿಸಿದರು. ಬಳಿಕ ಆರೋಗ್ಯ ಇಲಾಖೆಗೆ ಸಂಬಂಧಿಸಿದ ದೂರು ಅಥವಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಸಾರ್ವಜನಿಕರು ನೇರ ಫೋನ್‍ಇನ್ ನಲ್ಲಿ ಪಾಲ್ಗೊಂಡು ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು.
ಒಟ್ಟು 12 ಮಂದಿ ದೂರವಾಣಿ ಕರೆ ಮಾಡಿ ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ತಮ್ಮ ಅಹವಾಲು ತೋಡಿಕೊಂಡರು. ಇದಕ್ಕೆ ಪೂರಕವಾಗಿ ಆರೋಗ್ಯಾಧಿಕಾರಿಗಳ ತಾಳ್ಮೆಯ ಸ್ಪಂದನೆ ನೇರ ಫೋನ್ ಇನ್ ಕಾರ್ಯಕ್ರಮದ ಚಾಲನೆಗೆ ಅನುವಾಯಿತು.
ಶಿರಸಿ ಪಟ್ಟಣದಲ್ಲಿ ಹಂದಿ ಹಾವಳಿ ಹೆಚ್ಚಾಗಿದ್ದು ಎಚ್1ಎನ್1 ಭೀತಿಯ ಬಗ್ಗೆ ಗಣಪತಿ ಭಟ್ ಕರೆ ಮಾಡಿದರೆ, ಸಿದ್ದಾಪುರ ತಾಲೂಕು ದೊಡ್ಮನೆಯ ವಸಂತ ಹೆಗಡೆ ಅವರು ಮಂಗನ ಕಾಯಿಲೆ ಪೀಡಿತ ಪ್ರದೇಶವಾಗಿದ್ದು ಇಲ್ಲಿನ ಅಸ್ಪತ್ರೆಗೆ ಸೂಕ್ತ ವೈದ್ಯಕೀಯ ಸಿಬ್ಬಂದಿ ನಿಯೋಜಿಸುವಂತೆ ಕೋರಿದರು.
ಯಲ್ಲಾಪುರ ತಾಲೂಕು ಕಳಚಿಯ ಸಂದೀಪ್ ಭಟ್ ಅವರು ತಮ್ಮೂರಿನಲ್ಲಿ ಆಸ್ಪತ್ರೆಯನ್ನು ಹೊಸದಾಗಿ ನಿರ್ಮಿಸಲಾಗಿದೆ ಆದರೆ ವೈದ್ಯರು ಇಲ್ಲ ಎಂದು ಕೇಳಿದರೆ, ಶಿರಸಿಯ ತೇಜಸ್ ರಸ್ತೋಗಿ ಅವರೂ ಆಸ್ಪತ್ರೆಗಳನ್ನು ವೈದ್ಯಕೀಯ ಸಿಬ್ಬಂದಿ ನಿಯೋಜಿಸುವಂತೆ ಕೋರಿದರು. ಹೀಗೆ ಹಲವರು ಕರೆ ಮಾಡಿ ಆರೋಗ್ಯ ಇಲಾಖೆ ಸಂಬಂಧಿಸಿದಂತೆ ತಮ್ಮ ಸಮಸ್ಯೆಗಳನ್ನು ಇಲಾಖೆ ಅಧಿಕಾರಿಗಳ ಮುಂದೆ ತೋಡಿಕೊಂಡರು. ಅಷ್ಟೆ ಸಮಪರ್ಕಕವಾಗಿ ಇಲಾಖೆ ಅಧಿಕಾರಿಗಳು ಸಾರ್ವಜನಿಕ ಅಹವಾಲುಗಳಿಗೆ ತಾಳ್ಮೆಯ ಸ್ಪಂದನೆ ನೀಡಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು.
ಆರೋಗ್ಯ ಇಲಾಖೆಯ ವಿವಿಧ ವಿಭಾಗದ ಮುಖ್ಯಸ್ಥರಾದ ಡಾ.ರಮೇಶ್ ರಾವ್, ಡಾ.ಶಂಕರ ರವ್, ಡಾ.ಮಹಾಬಲೇಶ್ವರ ಹೆಗಡೆ, ಡಾ.ವಿನೋದ ಭೂತೆ, ಡಾ.ಸತೀಶ್ ಶೇಟ್, ಡಾ.ಲಲಿತಾ ಶೆಟ್ಟಿ, ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಜಿ. ಉಪಸ್ಥಿತರಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.