ETV Bharat / state

ಶ್ರೀಗಂಧ ಮರದ ತುಂಡುಗಳ ಅಕ್ರಮ ಸಾಗಾಟ : ಇಬ್ಬರು ಆರೋಪಿಗಳ ಬಂಧನ

ಅಕ್ರಮವಾಗಿ ಶ್ರೀಗಂಧ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

author img

By

Published : Sep 10, 2020, 6:48 PM IST

Accused
Accused

ಶಿರಸಿ :ಶ್ರೀ ಗಂಧದ ಮರದ ತುಂಡುಗಳನ್ನು ಕಳ್ಳತನದಿಂದ ಮಾರಾಟ ಮಾಡಲು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಸ್ತೂರ ಬಾ ನಗರದ ಇರ್ಷಾದ್ ಖಾದರ್ ಸಾಬ ಹಾಗೂ ಬಸಳೆಕೊಪ್ಪದ ಯಾಸೀನ್ ಅಲಿಯಾಸ್ ಮುನ್ನಾ ಹಸನಸಾಬ ಬಂಧಿತ ಆರೋಪಿಗಳು. ಇವರು ಶಿರಸಿ - ಕರಿಗುಂಡಿ ರಸ್ತೆಯ ಲಿಡ್ಕರ್ ಕಾಲೋನಿ ಕ್ರಾಸ್ ಬಳಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಂಧದ ತುಂಡುಗಳನ್ನು ಸಾಗಿಸುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು, ಮಾಲು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು 26 ಸಾವಿರ ಬೆಲೆ ಬಾಳುವ 1 ಕೆಜಿ 300 ಗ್ರಾಂ ತೂಕದ ಗಂಧದ ತುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಇನ್ನೋರ್ವ ಆರೋಪಿ ಕಸ್ತೂರ ಬಾ ನಗರದ ಅಕ್ಬರ್ ಇಬ್ರಾಹಿಂ ಶೇಖ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪಿ.ಎಸ್.ಐ ನಾಗಪ್ಪ ನೇತೃತ್ವದಲ್ಲಿ ಎಎಸ್ಐ ಶಿವಕುಮಾರ ಸಿಬ್ಬಂದಿಗಳಾದ ಚಿದಾನಂದ ನಾಯ್ಕ, ಇಸ್ಮಾಯೀಲ್ ಕೋಣನಕೇರಿ, ಹನಮಂತ ಮಾಕಾಪುರ ಮೋಹನ ನಾಯ್ಕರವರನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.

ಶಿರಸಿ :ಶ್ರೀ ಗಂಧದ ಮರದ ತುಂಡುಗಳನ್ನು ಕಳ್ಳತನದಿಂದ ಮಾರಾಟ ಮಾಡಲು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಸ್ತೂರ ಬಾ ನಗರದ ಇರ್ಷಾದ್ ಖಾದರ್ ಸಾಬ ಹಾಗೂ ಬಸಳೆಕೊಪ್ಪದ ಯಾಸೀನ್ ಅಲಿಯಾಸ್ ಮುನ್ನಾ ಹಸನಸಾಬ ಬಂಧಿತ ಆರೋಪಿಗಳು. ಇವರು ಶಿರಸಿ - ಕರಿಗುಂಡಿ ರಸ್ತೆಯ ಲಿಡ್ಕರ್ ಕಾಲೋನಿ ಕ್ರಾಸ್ ಬಳಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಂಧದ ತುಂಡುಗಳನ್ನು ಸಾಗಿಸುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು, ಮಾಲು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು 26 ಸಾವಿರ ಬೆಲೆ ಬಾಳುವ 1 ಕೆಜಿ 300 ಗ್ರಾಂ ತೂಕದ ಗಂಧದ ತುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಇನ್ನೋರ್ವ ಆರೋಪಿ ಕಸ್ತೂರ ಬಾ ನಗರದ ಅಕ್ಬರ್ ಇಬ್ರಾಹಿಂ ಶೇಖ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪಿ.ಎಸ್.ಐ ನಾಗಪ್ಪ ನೇತೃತ್ವದಲ್ಲಿ ಎಎಸ್ಐ ಶಿವಕುಮಾರ ಸಿಬ್ಬಂದಿಗಳಾದ ಚಿದಾನಂದ ನಾಯ್ಕ, ಇಸ್ಮಾಯೀಲ್ ಕೋಣನಕೇರಿ, ಹನಮಂತ ಮಾಕಾಪುರ ಮೋಹನ ನಾಯ್ಕರವರನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.