ETV Bharat / state

ನೌಕರಿ ಕಳೆದುಕೊಂಡರೂ ಬುದ್ದಿ ಕಲಿಯದ ಪೊಲೀಸಪ್ಪ: ಉದ್ಯೋಗ ಕೊಡಿಸೋದಾಗಿ 12 ಮಂದಿಗೆ ವಂಚನೆ

author img

By

Published : Sep 5, 2021, 11:49 AM IST

ನಿರುದ್ಯೋಗವನ್ನು ಬಂಡವಾಳ ಮಾಡಿಕೊಂಡ ಪೊಲೀಸ್​ ಕಾನ್ಸ್​ಟೇಬಲ್​ವೊಬ್ಬ ಉದ್ಯೋಗ ಕೊಡಿಸೋದಾಗಿ ನಂಬಿಸಿ 12 ಮಂದಿಗೆ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.

Police Constable arrested for fraud case
ಆರೋಪಿ ಸಂತೋಷ್ ಗುದಗಿ

ಕಾರವಾರ: ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಅನೇಕರಿಗೆ ವಂಚಿಸಲು ಮುಂದಾಗಿದ್ದ ಖತರ್ನಾಕ್ ಅಸಾಮಿಯೊಬ್ಬನನ್ನು ಜಿಲ್ಲೆಯ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ನಿರುದ್ಯೋಗವನ್ನು ಬಂಡವಾಳ ಮಾಡಿಕೊಂಡ ಹಾವೇರಿ ಜಿಲ್ಲೆಯ ಬ್ಯಾಡಗಿಯ ಸಂತೋಷ ತಿಪ್ಪಣ್ಣ ಗುದಗಿ ಎಂಬಾತ ಪೊಲೀಸ್ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಧಾರವಾಡ, ಬೆಳಗಾವಿ ಉತ್ತರಕನ್ನಡ ಮತ್ತು ಹಾವೇರಿ ಸೇರಿದಂತೆ ಬರೋಬ್ಬರಿ 12 ಅಭ್ಯರ್ಥಿಗಳಿಗೆ ವಂಚಿಸಿರುವ ಆರೋಪ ಕೇಳಿಬಂದಿದೆ. ಒಬ್ಬ ಅಭ್ಯರ್ಥಿಯಿಂದ 2 ಲಕ್ಷ ರೂ. ಹಣ ಮುಂಗಡವಾಗಿ ಪಡೆದುಕೊಂಡಿದ್ದಾನೆ ಎನ್ನಲಾಗ್ತಿದೆ.

ಸಂತೋಷ ವಿವಿಧ ಜಿಲ್ಲೆಯ ಪೊಲೀಸ್ ಅಧೀಕ್ಷಕರ ಸಹಿ ಇರುವ ಸುಳ್ಳು ನೇಮಕಾತಿ ಆದೇಶ ಪತ್ರವನ್ನು ಕೊಟ್ಟು ವಂಚಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಕುರಿತು ಆರೋಪಿಯಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.

ಆರೋಪಿ ಬಂಧನದ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು

ಆರೋಪಿ ಹಿನ್ನೆಲೆ:

ಆರೋಪಿ ಸಂತೋಷ್ ಗುದಗಿ 2007 ರಲ್ಲಿ ಪೊಲೀಸ್ ಕಾನ್ಸ್​ಟೇಬಲ್​ ಆಗಿ ನೇಮಕಗೊಂಡು ಬೆಂಗಳೂರು ನಗರದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ. ಸರ್ಕಾರಿ ನೌಕರಿ ಸಿಕ್ಕರೂ ಕೂಡ ಹಣ ಮಾಡಲು ಅಡ್ಡದಾರಿ ಹಿಡಿದಿದ್ದ. ಅಂಚೆ ಇಲಾಖೆಯಲ್ಲಿ ವಿಶೇಷ ಖೋಟಾದಡಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚಿಸಿ ಈ ಹಿಂದೆ ಸಸ್ಪೆಂಡ್ ಕೂಡ ಆಗಿದ್ದ ಎಂದು ತಿಳಿದುಬಂದಿದೆ.

ವಂಚನೆ ಆರೋಪದ ಕುರಿತು ಮುಂಡಗೋಡ ಪಟ್ಟಣದ ಗುರುರಾಜ್ ರಾಯ್ಕರ್ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರವಾರ: ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಅನೇಕರಿಗೆ ವಂಚಿಸಲು ಮುಂದಾಗಿದ್ದ ಖತರ್ನಾಕ್ ಅಸಾಮಿಯೊಬ್ಬನನ್ನು ಜಿಲ್ಲೆಯ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ನಿರುದ್ಯೋಗವನ್ನು ಬಂಡವಾಳ ಮಾಡಿಕೊಂಡ ಹಾವೇರಿ ಜಿಲ್ಲೆಯ ಬ್ಯಾಡಗಿಯ ಸಂತೋಷ ತಿಪ್ಪಣ್ಣ ಗುದಗಿ ಎಂಬಾತ ಪೊಲೀಸ್ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಧಾರವಾಡ, ಬೆಳಗಾವಿ ಉತ್ತರಕನ್ನಡ ಮತ್ತು ಹಾವೇರಿ ಸೇರಿದಂತೆ ಬರೋಬ್ಬರಿ 12 ಅಭ್ಯರ್ಥಿಗಳಿಗೆ ವಂಚಿಸಿರುವ ಆರೋಪ ಕೇಳಿಬಂದಿದೆ. ಒಬ್ಬ ಅಭ್ಯರ್ಥಿಯಿಂದ 2 ಲಕ್ಷ ರೂ. ಹಣ ಮುಂಗಡವಾಗಿ ಪಡೆದುಕೊಂಡಿದ್ದಾನೆ ಎನ್ನಲಾಗ್ತಿದೆ.

ಸಂತೋಷ ವಿವಿಧ ಜಿಲ್ಲೆಯ ಪೊಲೀಸ್ ಅಧೀಕ್ಷಕರ ಸಹಿ ಇರುವ ಸುಳ್ಳು ನೇಮಕಾತಿ ಆದೇಶ ಪತ್ರವನ್ನು ಕೊಟ್ಟು ವಂಚಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಕುರಿತು ಆರೋಪಿಯಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.

ಆರೋಪಿ ಬಂಧನದ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು

ಆರೋಪಿ ಹಿನ್ನೆಲೆ:

ಆರೋಪಿ ಸಂತೋಷ್ ಗುದಗಿ 2007 ರಲ್ಲಿ ಪೊಲೀಸ್ ಕಾನ್ಸ್​ಟೇಬಲ್​ ಆಗಿ ನೇಮಕಗೊಂಡು ಬೆಂಗಳೂರು ನಗರದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ. ಸರ್ಕಾರಿ ನೌಕರಿ ಸಿಕ್ಕರೂ ಕೂಡ ಹಣ ಮಾಡಲು ಅಡ್ಡದಾರಿ ಹಿಡಿದಿದ್ದ. ಅಂಚೆ ಇಲಾಖೆಯಲ್ಲಿ ವಿಶೇಷ ಖೋಟಾದಡಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚಿಸಿ ಈ ಹಿಂದೆ ಸಸ್ಪೆಂಡ್ ಕೂಡ ಆಗಿದ್ದ ಎಂದು ತಿಳಿದುಬಂದಿದೆ.

ವಂಚನೆ ಆರೋಪದ ಕುರಿತು ಮುಂಡಗೋಡ ಪಟ್ಟಣದ ಗುರುರಾಜ್ ರಾಯ್ಕರ್ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.