ETV Bharat / state

ಕಾರವಾರ: ಬಾಕಿ ಹಣವನ್ನೆಲ್ಲ ಮರು ಪಾವತಿಸಿ ಆತ್ಮಹತ್ಯೆಗೆ ಶರಣಾದ ಪೇದೆ - ಕಾರವಾರ ಕ್ರೈಮ್​ ನ್ಯೂಸ್

ಕಾರವಾರದ ಡಿಎಆರ್​​ ಕಚೇರಿಯಲ್ಲಿ ಪೊಲೀಸ್​ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕಾರವಾರ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Police constable committed suicide
ಕಾರವಾರದಲ್ಲಿ ಪೊಲೀಸ್​ ಪೇದೆ ಆತ್ಮಹತ್ಯೆ
author img

By

Published : Dec 8, 2021, 2:59 PM IST

ಕಾರವಾರ: ಕರ್ತವ್ಯಕ್ಕೆ ಹಾಜರಾಗಿದ್ದ ಪೊಲೀಸ್ ಪೇದೆಯೊಬ್ಬರು ಕಚೇರಿಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಡಿಎಆರ್​​ನಲ್ಲಿ ನಡೆದಿದೆ.

ಕಾರವಾರ ಡಿಎಆರ್ ಕಚೇರಿಯಲ್ಲಿ ಪೊಲೀಸ್​ ಪೇದೆ ಆತ್ಮಹತ್ಯೆ

ಹೊನ್ನಾವರದ ಹಳದೀಪುರದ ನಿವಾಸಿ ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆಗೆ ಶರಣಾದ ಪೇದೆ ಎಂದು ತಿಳಿದು ಬಂದಿದೆ. ಮಹಿಳಾ ಕ್ಲರ್ಕ್​​ ​ ಕೆಲಸಕ್ಕೆ ಆಗಮಿಸಿದ್ದ ವೇಳೆ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಇನ್ನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನಾ ಗುರುಪ್ರಸಾದ್, ಗೆಳೆಯರಿಗೆ ಬಾಕಿಯಿದ್ದ ಹಣವನ್ನು ಮರು ಪಾವತಿಸಿದ್ದರು ಎನ್ನಲಾಗುತ್ತಿದೆ. ಈ ಸಂಬಂಧ ಕಾರವಾರ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಜರ್ಮನಿಯಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೋವಿಡ್​​ ಸೋಂಕು

ಕಾರವಾರ: ಕರ್ತವ್ಯಕ್ಕೆ ಹಾಜರಾಗಿದ್ದ ಪೊಲೀಸ್ ಪೇದೆಯೊಬ್ಬರು ಕಚೇರಿಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಡಿಎಆರ್​​ನಲ್ಲಿ ನಡೆದಿದೆ.

ಕಾರವಾರ ಡಿಎಆರ್ ಕಚೇರಿಯಲ್ಲಿ ಪೊಲೀಸ್​ ಪೇದೆ ಆತ್ಮಹತ್ಯೆ

ಹೊನ್ನಾವರದ ಹಳದೀಪುರದ ನಿವಾಸಿ ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆಗೆ ಶರಣಾದ ಪೇದೆ ಎಂದು ತಿಳಿದು ಬಂದಿದೆ. ಮಹಿಳಾ ಕ್ಲರ್ಕ್​​ ​ ಕೆಲಸಕ್ಕೆ ಆಗಮಿಸಿದ್ದ ವೇಳೆ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಇನ್ನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನಾ ಗುರುಪ್ರಸಾದ್, ಗೆಳೆಯರಿಗೆ ಬಾಕಿಯಿದ್ದ ಹಣವನ್ನು ಮರು ಪಾವತಿಸಿದ್ದರು ಎನ್ನಲಾಗುತ್ತಿದೆ. ಈ ಸಂಬಂಧ ಕಾರವಾರ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಜರ್ಮನಿಯಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೋವಿಡ್​​ ಸೋಂಕು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.