ETV Bharat / state

ಭಟ್ಕಳ: ಕೇಂದ್ರದ ಸಿಎಬಿ ಮಸೂದೆ ವಿರುದ್ಧ ಪ್ರತಿಭಟನೆ - Protest against Central govt CAB Bill in uttara kannda

ಭಟ್ಕಳ​ದ ತಹಶೀಲ್ದಾರ್​ ಕಚೇರಿ ಎದುರು ಕೇಂದ್ರದ ಸಿಎಬಿ ಮಸೂದೆ ವಿರೋಧಿಸಿ ಎಸ್​ಡಿಪಿಐ ಸಂಘಟನೆಯಿಂದ ಪ್ರತಿಭಟನೆ ನಡೆಯಿತು.

Protest against Central govt CAB Bill in uttara kannda
ಕೇಂದ್ರದ ಸಿಎಬಿ ಮಸೂದೆ ವಿರುದ್ಧ ಪ್ರತಿಭಟನೆ
author img

By

Published : Dec 13, 2019, 1:55 PM IST

ಭಟ್ಕಳ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯೂ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡು ರಾಷ್ಟ್ರಪತಿಗಳಿಂದ ಅಂಕಿತ ಪಡೆದಿದ್ದು, ಇದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯವರು ಪ್ರತಿಭಟನೆ ನಡೆಸಿದರು.

ಕೇಂದ್ರದ ಸಿಎಬಿ ಮಸೂದೆ ವಿರುದ್ಧ ಪ್ರತಿಭಟನೆ

ಇಲ್ಲಿನ ತಹಶೀಲ್ದಾರ ಕಚೇರಿ ಎದುರು ಪ್ರಧಾನಿ ಮೋದಿ ಹಾಗೂ ಗೃಹ ಮಂತ್ರಿ ಅಮಿತ್​ ಶಾ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕೂಡಲೇ ಮಸೂದೆಯನ್ನು ಕೈಬಿಡುವಂತೆ ಒತ್ತಾಯಸಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ ಭಾರತದ ಸಂವಿಧಾನಕ್ಕೆ ವಿರೋಧಿ ಮಸೂದೆಯಾಗಿದೆ. ದೇಶದಲ್ಲಿ ಕೇವಲ ಮುಸ್ಲಿಮರಷ್ಟೇ ಅಲ್ಲ ಎಲ್ಲಾ ನಾಗರಿಕರು, ಪ್ರಗತಿಪರರು ವಿರೋಧಿಬೇಕಿದೆ ಎಂದು ಎಸ್​ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ತೌಪಿಕ್ ಬ್ಯಾರಿ ಹೇಳಿದರು. ಮಸೂದೆ ಕೈಬಿಡಬೇಕು. ಇದರ ಬಗ್ಗೆ ಜನರಿಗೆ ಅರಿವು ಮೂಡಿಸಿ ಕಾನೂನುಬದ್ಧ ಹೋರಾಟಕ್ಕೆ ಅಣಿಯಾಲಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಟ್ಕಳ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯೂ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡು ರಾಷ್ಟ್ರಪತಿಗಳಿಂದ ಅಂಕಿತ ಪಡೆದಿದ್ದು, ಇದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯವರು ಪ್ರತಿಭಟನೆ ನಡೆಸಿದರು.

ಕೇಂದ್ರದ ಸಿಎಬಿ ಮಸೂದೆ ವಿರುದ್ಧ ಪ್ರತಿಭಟನೆ

ಇಲ್ಲಿನ ತಹಶೀಲ್ದಾರ ಕಚೇರಿ ಎದುರು ಪ್ರಧಾನಿ ಮೋದಿ ಹಾಗೂ ಗೃಹ ಮಂತ್ರಿ ಅಮಿತ್​ ಶಾ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕೂಡಲೇ ಮಸೂದೆಯನ್ನು ಕೈಬಿಡುವಂತೆ ಒತ್ತಾಯಸಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ ಭಾರತದ ಸಂವಿಧಾನಕ್ಕೆ ವಿರೋಧಿ ಮಸೂದೆಯಾಗಿದೆ. ದೇಶದಲ್ಲಿ ಕೇವಲ ಮುಸ್ಲಿಮರಷ್ಟೇ ಅಲ್ಲ ಎಲ್ಲಾ ನಾಗರಿಕರು, ಪ್ರಗತಿಪರರು ವಿರೋಧಿಬೇಕಿದೆ ಎಂದು ಎಸ್​ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ತೌಪಿಕ್ ಬ್ಯಾರಿ ಹೇಳಿದರು. ಮಸೂದೆ ಕೈಬಿಡಬೇಕು. ಇದರ ಬಗ್ಗೆ ಜನರಿಗೆ ಅರಿವು ಮೂಡಿಸಿ ಕಾನೂನುಬದ್ಧ ಹೋರಾಟಕ್ಕೆ ಅಣಿಯಾಲಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Intro:ಭಟ್ಕಳ: ಕೇಂದ್ರ ಸರಕಾರ ಅಂಗೀಕರಿಸಿದ ಪೌರತ್ವ ತಿದ್ದುಪಡಿ ಮಸೂದೆಯೂ ಲೋಕಸಭೆ ಹಾಗೂ ರಾಜ್ಯ ಸಭೆಯಲ್ಲಿ ಅಂಗೀಕಾರಗೊಂಡಿದ್ದನ್ನು ವಿರೋಧಿಸಿ ಸೋಶಿಯಲ್ ಡೆಮೋಕ್ರೇಟಿಕ್ ಪಾರ್ಟಿ ಆಫ್ ಇಂಡಿಯಾ ಭಟ್ಕಳ ಘಟಕವೂ (ಎಸ್.ಡಿ.ಪಿ.ಐ.) ಇಲ್ಲಿನ ತಹಸೀಲ್ದಾರ ಕಛೇರಿ ಎದುರು ಕಾರ್ಯಕರ್ತರನ್ನೊಳಗೊಂಡಂತೆ ಪ್ರಧಾನಿ ಮೋದಿ ಹಾಗೂ ಗೃಹ ಮಂತ್ರಿ ಅಮಿತ ಶಾ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.Body:ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ. ಜಿಲ್ಲಾ ಘಟಕದ ಅಧ್ಯಕ್ಷ ತೌಪಿಕ್ ಬ್ಯಾರಿ ಮಾತನಾಡಿ ‘ಈ ಮಸೂದೆಯ ಜ್ಯಾರಿಗಿಂತ ಪ್ರಧಾನಿ ಮೋದಿ ಹಾಗೂ ಅಮಿತ ಶಾ ಅವರು ಅತ್ಯಾಚಾರಿಗಳ ಮೇಲೆ ಕಠಿಣ ಕಾನುನು ಕ್ರಮಕ್ಕೆ ಮುಂದಾಗಿರಿ. ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅವರು ಸಹಿ ಹಾಕಿ ಸಮ್ಮತಿಸಿದರೆ ನಮ್ಮ ಘಟಕವೂ ಸಂಪೂರ್ಣವಾಗಿ ಬಹಿಷ್ಕರಿಸುತ್ತದೆ. ಇದು ಭಾರತದ ಸಂವಿಧಾನಕ್ಕೆ ವಿರೋಧಿ ಮಸೂದೆಯಾಗಿದೆ. ದೇಶದಲ್ಲಿ ಕೇವಲ ಮುಸ್ಲಿರಷ್ಟೇ ಅಲ್ಲ ಎಲ್ಲಾ ನಾಗರಿಕರು ಈ ಮೂಸಿದೆಗೆ ವಿರೋಧ ವ್ಯಕ್ತಪಡಿಸಿದ್ದರು ಸಹ ಲೋಕಸಭೆ, ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರವಾಗಿದೆ. ಒಂದು ಧರ್ಮಕ್ಕೆ ಮೋಸ ಆಗುವ ರೀತಿಯಲ್ಲಿ ಮಸೂದೆ ರಚನೆಯಾಗಿದೆ. ಕೇಂದ್ರ ಸರಕಾರ ಈ ಮಸೂದೆಯನ್ನು ವಾಪಸ್ಸು ತೆಗೆದುಕೊಳ್ಳಬೇಕು, ಮುಂದಿನ ದಿನದಲ್ಲಿ ಈ ಮಸೂದೆಯಿಂದಾಗುವ ಅನ್ಯಾಯದ ಬಗ್ಗೆ ಜನರಿಗೆ ಎಸ್.ಡಿ.ಪಿ.ಐ. ಅರಿವು ಮೂಡಿಸಲಿದ್ದೇವೆ ಹಾಗೂ ಈ ಮಸೂದೆ ಜ್ಯಾರಿಗೆ ವಿರೋಧಿಸಿ ಕಾನೂನುಬದ್ಧವಾದ ಹೋರಾಟಕ್ಕೆ ಅಣಿಯಾಲಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಎಸ್.ಡಿ.ಪಿ.ಐ. ತಾಲೂಕಾಧ್ಯಕ್ಷ ವಸೀಂ ಮನೆಗಾರ ಮಾತನಾಡಿ ‘ಪ್ರಧಾನಿ ಮೋದಿಯೂ ಸರಕಾರದ ರಚನೆಯ ವೇಳೆ ದೇಶದಲ್ಲಿ ಮೇಕ್ ಇನ್ ಇಂಡಿಯಾ ವನ್ನು ಜ್ಯಾರಿಗೆ ತಂದಿದ್ದು, ಆದರೆ ಇದೀಗ ದೇಶದಲ್ಲಿ ಮೇಕ್ ಇನ್ ಇಂಡಿಯಾ ಬದಲು ರೇಪ್ ಇನ್ ಇಂಡಿಯಾ ನಡೆಯುತ್ತಿದೆ. ಇದು ದೇಶದ ಜನರ ಪ್ರಶ್ನೆಯಾಗಿದ್ದು ಇದಕ್ಕೆ ಕೇಂದ್ರ ಸರಕಾರ ಯಾವುದೇ ಉತ್ತರ ನೀಡುತ್ತಿಲ್ಲ. ಈ ಮಸೂದೆಯ ವಿರುದ್ದ ನಮ್ಮ ಹೋರಾಟ ನಿರಂತರವಾಗಿರಲಿದ್ದು, ಮುಸ್ಲಿಂರ ವಿರುದ್ಧ ಜ್ಯಾರಿ ತಂದ ಮಸೂದೆಯನ್ನು ವಾಪಸ್ಸು ತೆಗೆದುಕೊಳ್ಳಬೇಕು ಎಂದು ಎಚ್ಚರಿಸಿದರು.

ಈ ಸಂಧರ್ಭದಲ್ಲಿ ಮಸೂದೆಯ ಪ್ರತಿಗೆ ಬೆಂಕಿ ಇಟ್ಟು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು. ಹಾಗೂ ಮಸೂದೆ ವಿರೋಧಿ ಭಿತ್ತಿ ಪತ್ರ ಪ್ರದರ್ಶಿಸಿ, ಘೋಷಣೆಯನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಸಂಘಟನೆಯ ಪ್ರಮುಖ ಜಮ್ಮಾನ್, ಸದ್ದಾಂ ಸೇರಿದಂತೆ ಕಾರ್ಯಕರ್ತರು ಇದ್ದರು.
ಬಿಗಿ ಪೋಲೀಸ ಬಂದೋಬಸ್ತನಲ್ಲಿ ಪ್ರತಿಭಟನೆಯೂ ನಡೆಯಿತು.

ಬೈಟ್: ತೌಪಿಕ್ ಬ್ಯಾರಿ ಎಸ್.ಡಿ.ಪಿ.ಐ. ಜಿಲ್ಲಾ ಘಟಕದ ಅಧ್ಯಕ್ಷConclusion:ಉದಯ ನಾಯ್ಕ ಭಟ್ಕಳ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.