ETV Bharat / state

ಸಾಗರಮಾಲಾ ಯೋಜನೆಗೆ ವಿರೋಧ... ಮೂರನೇ ದಿನವೂ ಮುಂದುವರಿದ ಪ್ರತಿಭಟನೆ

author img

By

Published : Jan 15, 2020, 1:53 PM IST

ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ನಡೆಸುತ್ತಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ ಪ್ರತಿಭಟನಾಕಾರರು ಕಾರವಾರದ ಮುಖ್ಯ ಕಡಲತೀರದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ತಡೆಯಲು ಮುಂದಾದರು.

protest against expansion of commercial port in Karwar
ಬಂದರು ವಿಸ್ತರಣೆ ಕಾರವಾರದಲ್ಲಿ ಪ್ರತಿಭಟನೆ

ಕಾರವಾರ: ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ನಡೆಸುತ್ತಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ ಪ್ರತಿಭಟನಾಕಾರರು ಕಾರವಾರದ ಮುಖ್ಯ ಕಡಲತೀರದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ತಡೆಯಲು ಮುಂದಾದರು.

ಮೀನುಗಾರರಿಂದ ಕಾಮಗಾರಿಗೆ ವಿರೋಧ

ಸಾಗರಮಾಲಾ ಯೋಜನೆಯಡಿ ಎರಡನೇ ಹಂತದ ಬಂದರು ಅಭಿವೃದ್ಧಿ ಪಡಿಸಲು 126 ಕೋಟಿ ರೂಪಾಯಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯಿಂದ ಸಾಂಪ್ರದಾಯಿಕ ಮೀನುಗಾರಿಕೆಗೆ ಧಕ್ಕೆಯಾಗುವುದರ ಜತೆಗೆ ಕಡಲತಡಿಯ ನೂರಾರು ಮೀನುಗಾರ ಕುಟುಂಬಗಳು ನೆಲೆ ಕಳೆದುಕೊಳ್ಳುವ ಆತಂಕ ಮೀನುಗಾರರದ್ದಾಗಿದೆ. ಹಾಗಾಗಿ ಮೂರು ದಿನಗಳಿಂದ ಮೀನುಗಾರರು ಕಾಮಗಾರಿ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ, ಪೊಲೀಸ್ ಬಿಗಿ ಭದ್ರತೆಯಲ್ಲಿ ಕಾಮಗಾರಿ ನಡೆಯುತ್ತಲೇ ಇದೆ.

ಮೀನುಗಾರ ಮಹಿಳೆಯರು ಜಿಲ್ಲಾಧಿಕಾರಿ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಮಗಾರಿ ಹಿಂಪಡೆಯುವವರೆಗೂ ಧರಣಿ ನಿಲ್ಲಿಸಲ್ಲ ಎಂಬ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

ಕಾರವಾರ: ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ನಡೆಸುತ್ತಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ ಪ್ರತಿಭಟನಾಕಾರರು ಕಾರವಾರದ ಮುಖ್ಯ ಕಡಲತೀರದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ತಡೆಯಲು ಮುಂದಾದರು.

ಮೀನುಗಾರರಿಂದ ಕಾಮಗಾರಿಗೆ ವಿರೋಧ

ಸಾಗರಮಾಲಾ ಯೋಜನೆಯಡಿ ಎರಡನೇ ಹಂತದ ಬಂದರು ಅಭಿವೃದ್ಧಿ ಪಡಿಸಲು 126 ಕೋಟಿ ರೂಪಾಯಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯಿಂದ ಸಾಂಪ್ರದಾಯಿಕ ಮೀನುಗಾರಿಕೆಗೆ ಧಕ್ಕೆಯಾಗುವುದರ ಜತೆಗೆ ಕಡಲತಡಿಯ ನೂರಾರು ಮೀನುಗಾರ ಕುಟುಂಬಗಳು ನೆಲೆ ಕಳೆದುಕೊಳ್ಳುವ ಆತಂಕ ಮೀನುಗಾರರದ್ದಾಗಿದೆ. ಹಾಗಾಗಿ ಮೂರು ದಿನಗಳಿಂದ ಮೀನುಗಾರರು ಕಾಮಗಾರಿ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ, ಪೊಲೀಸ್ ಬಿಗಿ ಭದ್ರತೆಯಲ್ಲಿ ಕಾಮಗಾರಿ ನಡೆಯುತ್ತಲೇ ಇದೆ.

ಮೀನುಗಾರ ಮಹಿಳೆಯರು ಜಿಲ್ಲಾಧಿಕಾರಿ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಮಗಾರಿ ಹಿಂಪಡೆಯುವವರೆಗೂ ಧರಣಿ ನಿಲ್ಲಿಸಲ್ಲ ಎಂಬ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

Intro:Body:ಕಾರವಾರ: ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ನಡೆಸುತ್ತಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೂಡ ಮೀನುಗಾರರು ಕಾರವಾರದ ಮುಖ್ಯ ಕಡಲತೀರದಲ್ಲಿ ನಡೆಯುತ್ತಿರುವ ಅಲೆತಡೆಗೋಡೆ ಕಾಮಗಾರಿ ತಡೆಯಲು ಮುಂದಾದ ಘಟನೆ ನಡೆದಿದೆ.
ಸಾಗರಮಾಲಾ ಯೋಜನೆಯಡಿ ಎರಡನೇ ಹಂತದ ಬಂದರು ಅಭಿವೃದ್ಧಿ ಪಡಿಸಲು ೧೨೬ ಕೋಟಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಸಾಂಪ್ರದಾಯಿಕ ಮೀನುಗಾರಿಕೆಗೆ ಧಕ್ಕೆಯಾಗುವುದರ ಜತೆಗೆ ಕಡಲತಡಿಯ ನೂರಾರು ಮೀನುಗಾರ ಕುಟುಂಬಗಳು ನೆಲೆ ಕಳೆದುಕೊಳ್ಳುವ ಆತಂಕ ಇರುವ ಕಾರಣ ಮೀನುಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಈ ಕಾರಣದಿಂದ ಕಳೆದ ಮೂರು ದಿನಗಳಿಂದ ಮೀನುಗಾರರು ನಿರಂತರ ಹೋರಾಟ ನಡೆಸಿದ್ದಾರೆ. ಆದರೂ ಕಡಲತೀರದಲ್ಲಿ ಅಲೆತಡೆಗೋಡೆ ನಿರ್ಮಾಣಕ್ಕೆ ಪೊಲೀಸ್ ಭದ್ರತೆಯಲ್ಲಿ ಮಣ್ಣು ಕಲ್ಲುಗಳನ್ನು ಸುರಿಯಲಾಗುತ್ತಿದೆ. ಇದರಿಂದ ಆಕ್ರೋಶ ವ್ಯಕದತಪಡಿಸಿರುವ ಮೀನುಗಾರರು ಮೂರನೇ ದಿನವಾದ ಇಂದು ಕೂಡ ಕಾಮಗಾರಿ ತಡೆಯೊಡ್ಡಲು ಮುಂದಾಗಿದ್ದರು. ಆದರೆ ಪೊಲೀಸರು ಅವಕಾಶ ನೀಡದೇ ಮೀನುಗಾರ ಮುಖಂಡರನ್ನು ಕಾಮಗಾರಿ ಸ್ಥಳದಿಂದ ವಾಪಸ್ಸ್ ಕಳಿಸಿದ್ದರು.
ಇನ್ನು ಮಿನುಗಾರ ಮಹಿಳೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಮುಂದುವರಿಸಿದ್ದು, ಇಂದು ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸುತ್ತಿದ್ದು ಕಾಮಗಾರಿ ಹಿಂಪಡೆಯುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.