ETV Bharat / state

ಪೊಲೀಸರ ಮೇಲೆ ಕಲ್ಲು ತೂರಾಟ ಸಮರ್ಥಿಸಿಕೊಂಡ ಎಸ್​ಡಿಪಿಐ, ಆರಕ್ಷಕರ ನಡೆ ಬಗ್ಗೆ ಆಕ್ರೋಶ - Ilias Thumbay press meet at Karwar

ಮಂಗಳೂರು ಸೇರಿದಂತೆ ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿ ಪ್ರತಿಭಟನೆಗೆ ಮುಂದಾದವರ ಮೇಲಿನ ಪೊಲೀಸ್​ ದೌರ್ಜನ್ಯ ಪೂರ್ವನಿಯೋಜಿತ ಕೃತ್ಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್​ಡಿಪಿಐ) ಪಕ್ಷದ ಮುಖಂಡ ಇಲಿಯಾಸ್ ತುಂಬೆ ಆರೋಪಿಸಿದ್ದಾರೆ.

sdpi pressmeet at Karwar
ಇಲಿಯಾಸ್ ತುಂಬೆ, ಎಸ್​ಡಿಪಿಐ ಮುಖಂಡ
author img

By

Published : Jan 2, 2020, 7:08 PM IST

ಕಾರವಾರ: ಮಂಗಳೂರು ಸೇರಿದಂತೆ ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿ ಪ್ರತಿಭಟನೆಗೆ ಮುಂದಾದವರ ಮೇಲಿನ ಪೊಲೀಸ್​ ದೌರ್ಜನ್ಯ ಪೂರ್ವನಿಯೋಜಿತ ಕೃತ್ಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್​ಡಿಪಿಐ) ಪಕ್ಷದ ಮುಖಂಡ ಇಲಿಯಾಸ್ ತುಂಬೆ ಆರೋಪಿಸಿದ್ದಾರೆ.

ಇಲಿಯಾಸ್ ತುಂಬೆ, ಎಸ್​ಡಿಪಿಐ ಮುಖಂಡ

ಕಾರವಾರದಲ್ಲಿ ಮಾತನಾಡಿ, ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಗರಿಕರು ಪ್ರತಿಭಟಿಸುತ್ತಿದ್ದಾರೆ. ಕಳೆದ ಹತ್ತು ದಿನಗಳಿಂದ ದೆಹಲಿಯಲ್ಲಿ ಮಹಿಳೆಯರು ಪ್ರತಿಭಟನೆಯಲ್ಲಿ ಬೀದಿಗಿಳಿದಿದ್ದಾರೆ. ವಿಪರ್ಯಾಸ ಅಂದರೆ ಕೇಂದ್ರ ಸರ್ಕಾರಕ್ಕೆ ಕಣ್ಣು ಕಿವಿ ಎರಡು ಸರಿಯಾಗಿಲ್ಲ. ಹೀಗಾಗಿ ಪ್ರತಿಭಟನಾಕರರ ಕೂಗು ಕೇಳುತ್ತಿಲ್ಲ ಎಂದರು.

ಮಂಗಳೂರಿನಲ್ಲಿ ತರಾತುರಿಯಲ್ಲಿ ರಾತ್ರಿ ವೇಳೆ ಸೆಕ್ಷನ್ 144ನ್ನು ಜಾರಿ ಮಾಡಿದ್ದರು. ಮೊದಲೇ ಅನುಮತಿ ಪಡೆದುಕೊಂಡಿದ್ದರಿಂದ ಹಿಂದಿನ ದಿನ ರಾತ್ರಿ ನಿಷೇಧಾಜ್ಞೆ ಜಾರಿ ಮಾಡಿದ್ದು ಪ್ರತಿಭಟನಾಕಾರರಿಗೆ ಗೊತ್ತಿರಲಿಲ್ಲ. ಹೀಗಾಗಿ ಪ್ರತಿಭಟನೆ ಮಾಡಿದ್ದರು. ಈ ವೇಳೆ ಸಿಂಡಿಕೇಟ್ ಬ್ಯಾಂಕ್ ವೃತ್ತದಲ್ಲಿ ನಿಂತಿದ್ದ ಅಮಾಯಕರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನೆಗೆ ಬಂದವರು ಕಲ್ಲು ತೂರಾಟ ಮಾಡದೇ ಬೇರೆ ದಾರಿ ಇರಲಿಲ್ಲ ಎಂದು ಸಮರ್ಥಿಸಿಕೊಂಡರು. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮಾತ್ರ ಪ್ರತಿಭಟನೆಗಳಲ್ಲಿ ಲಾಠಿಚಾರ್ಜ್, ಗೋಲಿಬಾರ್ ಉಂಟಾಗಿವೆ. ಇದರಿಂದಾಗಿ ಸಾವಿರಾರು ಮಂದಿ ಆಸ್ಪತ್ರೆ ಸೇರುವಂತಾಗಿದೆ. ಇತರ ರಾಜ್ಯಗಳಲ್ಲಿ ಪ್ರತಿಭಟನೆಗಳು ಶಾಂತ ರೀತಿಯಿಂದ ನಡೆದಿವೆ ಎಂದು ಹೇಳಿದರು. ಒಂದು ಸಮುದಾಯದವರನ್ನು ಗುರಿಯಾಗಿಸಿ ಕಾಯ್ದೆ ಜಾರಿಗೆ ತರಲಾಗಿದೆ. ಇದರಿಂದ ನಮ್ಮ ಅಸ್ತಿತ್ವದ ದಾಖಲೆ ತೋರಿಸುವುದು ಸಾಧ್ಯವಿಲ್ಲ. ಕಾಯ್ದೆ ಹಿಂದೆ ಪಡೆಯದೆ ಇದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಕಾರವಾರ: ಮಂಗಳೂರು ಸೇರಿದಂತೆ ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿ ಪ್ರತಿಭಟನೆಗೆ ಮುಂದಾದವರ ಮೇಲಿನ ಪೊಲೀಸ್​ ದೌರ್ಜನ್ಯ ಪೂರ್ವನಿಯೋಜಿತ ಕೃತ್ಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್​ಡಿಪಿಐ) ಪಕ್ಷದ ಮುಖಂಡ ಇಲಿಯಾಸ್ ತುಂಬೆ ಆರೋಪಿಸಿದ್ದಾರೆ.

ಇಲಿಯಾಸ್ ತುಂಬೆ, ಎಸ್​ಡಿಪಿಐ ಮುಖಂಡ

ಕಾರವಾರದಲ್ಲಿ ಮಾತನಾಡಿ, ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಗರಿಕರು ಪ್ರತಿಭಟಿಸುತ್ತಿದ್ದಾರೆ. ಕಳೆದ ಹತ್ತು ದಿನಗಳಿಂದ ದೆಹಲಿಯಲ್ಲಿ ಮಹಿಳೆಯರು ಪ್ರತಿಭಟನೆಯಲ್ಲಿ ಬೀದಿಗಿಳಿದಿದ್ದಾರೆ. ವಿಪರ್ಯಾಸ ಅಂದರೆ ಕೇಂದ್ರ ಸರ್ಕಾರಕ್ಕೆ ಕಣ್ಣು ಕಿವಿ ಎರಡು ಸರಿಯಾಗಿಲ್ಲ. ಹೀಗಾಗಿ ಪ್ರತಿಭಟನಾಕರರ ಕೂಗು ಕೇಳುತ್ತಿಲ್ಲ ಎಂದರು.

ಮಂಗಳೂರಿನಲ್ಲಿ ತರಾತುರಿಯಲ್ಲಿ ರಾತ್ರಿ ವೇಳೆ ಸೆಕ್ಷನ್ 144ನ್ನು ಜಾರಿ ಮಾಡಿದ್ದರು. ಮೊದಲೇ ಅನುಮತಿ ಪಡೆದುಕೊಂಡಿದ್ದರಿಂದ ಹಿಂದಿನ ದಿನ ರಾತ್ರಿ ನಿಷೇಧಾಜ್ಞೆ ಜಾರಿ ಮಾಡಿದ್ದು ಪ್ರತಿಭಟನಾಕಾರರಿಗೆ ಗೊತ್ತಿರಲಿಲ್ಲ. ಹೀಗಾಗಿ ಪ್ರತಿಭಟನೆ ಮಾಡಿದ್ದರು. ಈ ವೇಳೆ ಸಿಂಡಿಕೇಟ್ ಬ್ಯಾಂಕ್ ವೃತ್ತದಲ್ಲಿ ನಿಂತಿದ್ದ ಅಮಾಯಕರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನೆಗೆ ಬಂದವರು ಕಲ್ಲು ತೂರಾಟ ಮಾಡದೇ ಬೇರೆ ದಾರಿ ಇರಲಿಲ್ಲ ಎಂದು ಸಮರ್ಥಿಸಿಕೊಂಡರು. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮಾತ್ರ ಪ್ರತಿಭಟನೆಗಳಲ್ಲಿ ಲಾಠಿಚಾರ್ಜ್, ಗೋಲಿಬಾರ್ ಉಂಟಾಗಿವೆ. ಇದರಿಂದಾಗಿ ಸಾವಿರಾರು ಮಂದಿ ಆಸ್ಪತ್ರೆ ಸೇರುವಂತಾಗಿದೆ. ಇತರ ರಾಜ್ಯಗಳಲ್ಲಿ ಪ್ರತಿಭಟನೆಗಳು ಶಾಂತ ರೀತಿಯಿಂದ ನಡೆದಿವೆ ಎಂದು ಹೇಳಿದರು. ಒಂದು ಸಮುದಾಯದವರನ್ನು ಗುರಿಯಾಗಿಸಿ ಕಾಯ್ದೆ ಜಾರಿಗೆ ತರಲಾಗಿದೆ. ಇದರಿಂದ ನಮ್ಮ ಅಸ್ತಿತ್ವದ ದಾಖಲೆ ತೋರಿಸುವುದು ಸಾಧ್ಯವಿಲ್ಲ. ಕಾಯ್ದೆ ಹಿಂದೆ ಪಡೆಯದೆ ಇದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

Intro:Body:ಕಾರವಾರ: ಮಂಗಳೂರು ಸೇರಿದಂತೆ ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್‌ಸಿ ಹಾಗೂ ಎನ್‌ಪಿಆರ್ ವಿರೋಧಿಸಿ ಪ್ರತಿಭಟನೆಗೆ ಮುಂದಾದವರ ಮೇಲಿನ ದೌರ್ಜನ್ಯ ಪೊಲೀಸರ ಪೂರ್ವನಿಯೋಜಿತ ಕೃತ್ಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಮುಖಂಡ ಇಲಿಯಾಸ್ ತುಂಬೆ ಆರೋಪಿಸಿದೆ.
ಕಾರವಾರದಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಗರಿಕರು ವಿರೋಧಿಸುತ್ತಿದ್ದಾರೆ. ಕಳೆದ ಹತ್ತು ದಿನಗಳಿಂದ ದೆಹಲಿಯಲ್ಲಿ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ವಿಪರ್ಯಾಸ ಅಂದ್ರೆ ಕೇಂದ್ರ ಸರ್ಕಾರಕ್ಕೆ ಕಣ್ಣು ಕಿವಿ ಸರಿಯಾಗಿಲ್ಲ. ಕೇವಲ ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಮಾತ್ರ ಹಿಂಸಾಚಾರಗಳು ನಡೆಯುತ್ತಿವೆ ಎಂದು ಆರೋಪಿಸಿದರು.
ಮಂಗಳೂರಿನಲ್ಲಿ ಸೆಕ್ಷನ್ 144ನ್ನು ತರಾತುರಿಯಲ್ಲಿ ರಾತ್ರಿ ವೇಳೆ ಜಾರಿ ಮಾಡಿದ್ದರು. ಮೊದಲೇ ಅನುಮತಿ ಪಡೆದುಕೊಂಡಿದ್ದರಿಂದ ಹಿಂದಿನ ರಾತ್ರಿ ನಿಷೇಧಾಜ್ಞೆ ಜಾರಿ ಮಾಡಿದ್ದು ಸಾಕಷ್ಟು ಪ್ರತಿಭಟನಾಕಾರರಿಗೆ ಗೊತ್ತಿರಲಿಲ್ಲ.
ಈ ವೇಳೆ ಸಿಂಡಿಕೇಟ್ ಬ್ಯಾಂಕ್ ವೃತ್ತದಲ್ಲಿ ಏನೂ ಅರಿಯದೇ ನಿಂತಿದ್ದವರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನೆಗೆ ಬಂದವರು ಕಲ್ಲು ತೂರಾಟ ಮಾಡದೇ ಬೇರೆ ದಾರಿ ಇರಲಿಲ್ಲ ಎಂದು ಸಮರ್ಥಿಸಿಕೊಂಡರು.
ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮಾತ್ರ ಪ್ರತಿಭಟನೆಗಳಲ್ಲಿ ಲಾಠಿಚಾರ್ಜ್, ಗೋಲಿಬಾರ್ ಉಂಟಾಗಿವೆ. ಇದರಿಂದಾಗಿ ಸಾವಿರಾರು ಮಂದಿ ಆಸ್ಪತ್ರೆ ಸೇರುವಂತಾಗಿದೆ. ಬಿಜೆಪಿ ಅಧಿಕಾರದಲ್ಲಿಲ್ಲದ ರಾಜ್ಯಗಳಲ್ಲಿ ಪ್ರತಿಭಟನೆಗಳು ಶಾಂತ ರೀತಿಯಿಂದ ನಡೆದಿವೆ ಎಂದು ಹೇಳಿದರು.
ಒಂದು ಸಮುದಾಯದವರನ್ನು ಗುರಿಯಾಗಿಸಿ ಕಾಯ್ದೆ ಜಾರಿಗೆ ತರಲಾಗಿದೆ. ಇದರಿಂದ ನಮ್ಮ ಅಸ್ತಿತ್ವದ ದಾಖಲೆ ತೋರಿಸುವುದು ಸಾಧ್ಯವಿಲ್ಲ. ಕಾಯ್ದೆ ಹಿಂದೆ ಪಡೆಯದೆ ಇದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.