ಶಿರಸಿ : ಅರಣ್ಯದಲ್ಲಿ ಅಕ್ರಮವಾಗಿ ಕತ್ತರಿಸಿಟ್ಟಿದ್ದ ಶ್ರೀಗಂಧದ ಕಟ್ಟಿಗೆಯನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡ ಘಟನೆ ಉತ್ತರ ಕನ್ನಡದ ಜೊಯಿಡಾ ತಾಲೂಕಿನ ನಾಗೋಡಾದಲ್ಲಿ ನಡೆದಿದೆ.
ಸುಮಾರು 2 ಲಕ್ಷ ರೂ. ಮೌಲ್ಯದ ಗಂಧದ ಕಟ್ಟಿಗೆಯನ್ನು ಜಪ್ತಿ ಮಾಡಲಾಗಿದೆ. ನಾಗೋಡಾ ಅರಣ್ಯದಲ್ಲಿ ಎರಡು ಗಂಧದ ಮರಗಳನ್ನು ಬುಡದ ಸಮೇತ ಕತ್ತರಿಸಿ, ಅಲ್ಲೇ ಒಣಗಲು ಬಿಟ್ಟು ಆರೋಪಿಗಳು ಸ್ಥಳದಿಂದ ತೆರಳಿದ್ದರು. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿ ಕಟ್ಟಿಗೆಯನ್ನು ವಶಪಡಿಸಿಕೊಂಡಿದ್ದಾರೆ.
ಜೊಯಿಡಾ ವಲಯ ಅರಣ್ಯಾಧಿಕಾರಿ ಮಹೀಮ್ ಜನ್ನು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ.