ETV Bharat / state

ಯಕ್ಷ ನೃತ್ಯದ ಮೂಲಕ ವಿಶ್ವಶಾಂತಿ ಸಂದೇಶ ಸಾರುವ ಶಿರಸಿಯ ಬಾಲಕಿ - ಯಕ್ಷಗಾನಕ್ಕೆ ಲಭಿಸಿತು ಮೊದಲ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್

ಯಕ್ಷ ನೃತ್ಯದ ಮೂಲಕವೇ ವಿಶ್ವಶಾಂತಿಯ ಸಂದೇಶ ಸಾರುವ ಈ ಬಾಲಕಿ ಕೇವಲ ಆರು ವರ್ಷದಲ್ಲೇ ಜನರಿಗೆ ಪರಿಚಿತಳಾಗಿದ್ದಳು. ಇದೀಗ ಈಕೆಯ ಸಾಧನೆ ಇಂಡಿಯ ಬುಕ್ ಆಫ್ ರೆಕಾರ್ಡ್‌ ಸೇರಿದೆ.

First India Book of Records for the yakshagana
ಶಿರಸಿಯ ಬಾಲೆ ತುಳಸಿಯ ಅದ್ಭುತ ಸಾಧನೆ
author img

By

Published : Jun 26, 2022, 12:40 PM IST

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಟಕೊಪ್ಪದ ತುಳಸಿ ಹೆಗಡೆ ಎಂಬ ಬಾಲಕಿ ಕಳೆದ ಏಳು ವರ್ಷದಿಂದ ನಿರಂತರವಾಗಿ ವಿಶ್ವಶಾಂತಿ ಸಂದೇಶ ಸಾರುವ ಯಕ್ಷ ನೃತ್ಯ ಮಾಡುತ್ತಿದ್ದರು. ಈ ನೃತ್ಯದ ಮೂಲಕ ಇದೀಗ ಇವರು ಪ್ರತಿಷ್ಟಿತ ಇಂಡಿಯನ್ ಬುಕ್ ಆಫ್ ರೆಕಾರ್ಡ್​ ದಾಖಲೆ ಮಾಡಿದ್ದಾರೆ. ಈ ಮೂಲಕ ದೇಶದ ಅತೀ ಕಿರಿಯ ವಯಸ್ಸಿ‌ನ ವಿಶ್ವಶಾಂತಿ ಸಂದೇಶ ಸಾರುವ ಏಕೈಕ ಬಾಲಕಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದಾರೆ.


ಮಾರಿಕಾಂಬ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಈಕೆಯ ಸಾಧನೆಗೆ ಇಂಟರ್​​ನ್ಯಾಶನಲ್ ಬುಕ್ ಆಫ್ ರೆಕಾರ್ಡ್​ ಲಭಿಸಿದೆ. ಪೂನಾದ ಸಂಸ್ಥೆಯೊಂದು ನೀಡುವ ಇಂಡಿಯನ್ ಸ್ಟಾರ್ ಐಕಾನ್ ಅವಾರ್ಡ್​ ಕೂಡ ಲಭಿಸಿದ್ದು, ಹಲವು ಪ್ರಶಸ್ತಿಗಳಿಗೆ ಬಾಲಕಿ ಬಾಜನಳಾಗಿದ್ದಾಳೆ. ತುಳಸಿ ಹೆಗಡೆಯು ಒಂದು ಗಂಟೆಗೂ ಅಧಿಕ ಕಾಲದ ಯಕ್ಷನೃತ್ಯ ರೂಪಕವನ್ನು ಪ್ರಸ್ತುತಗೊಳಿಸುತ್ತಿದ್ದಾಳೆ.

ಶಿರಸಿಯ ಬಾಲೆ ತುಳಸಿಯ ಅದ್ಭುತ ಸಾಧನೆ

13 ವರ್ಷದ ತುಳಸಿ ಕಳೆದ ಏಳು ವರ್ಷಗಳಿಂದ ಸತತ ವಿವಿಧ ಪೌರಾಣಿಕ ಕಥೆ ಒಳಗೊಂಡ ವಿಶ್ವಶಾಂತಿ ಸರಣಿ ಪ್ರಸ್ತುತಗೊಳಿಸುತ್ತಿದ್ದು, ಯಕ್ಷಗಾನದ ಬಡಗುತಿಟ್ಟು ಪ್ರಕಾರದಲ್ಲಿ ಮುಮ್ಮೇಳದ ಏಕವ್ಯಕ್ತಿ ರೂಪಕ ಇದಾಗಿದೆ. ಹಿಮ್ಮೇಳದಲ್ಲಿ ಪ್ರಸಿದ್ಧ ಕಲಾವಿದರ, ನಿರ್ದೇಶಕರ, ಸಾಹಿತಿಗಳ, ಪರಿಣಿತರ ಒಂಬತ್ತು ಜನರ ತಂಡ ಕೆಲಸ ಮಾಡುತ್ತಿದೆ. ಒಂದು ಗಂಟೆಗೂ ಮಿಕ್ಕಿದ ವಿಶ್ವಶಾಂತಿ ಸಂದೇಶ, ವಿಶ್ವಶಂಕರಾಕ್ಷರ, ಶ್ರೀಕೃಷ್ಣಂ ವಂದೇ, ವಂದೇ ಪರಮಾನಂದಂ, ಪಂಚಪಾವನ ಕಥಾ, ಪರಿವರ್ತನೆ ಜಗದ ನಿಯಮ, ವಂಶೀವಿಲಾಸ ಯಕ್ಷನೃತ್ಯ ರೂಪಕಗಳನ್ನು ಈಕೆ ಪ್ರದರ್ಶಿಸುತ್ತಾಳೆ.

ಇದನ್ನೂ ಓದಿ: ನಿನ್ನೆ ಒಂದೂರು, ಇಂದು ಮತ್ತೊಂದೂರು: ಅರಣ್ಯ ಇಲಾಖೆಗೆ ತಲೆನೋವಾದ ಕಾಡಾನೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಟಕೊಪ್ಪದ ತುಳಸಿ ಹೆಗಡೆ ಎಂಬ ಬಾಲಕಿ ಕಳೆದ ಏಳು ವರ್ಷದಿಂದ ನಿರಂತರವಾಗಿ ವಿಶ್ವಶಾಂತಿ ಸಂದೇಶ ಸಾರುವ ಯಕ್ಷ ನೃತ್ಯ ಮಾಡುತ್ತಿದ್ದರು. ಈ ನೃತ್ಯದ ಮೂಲಕ ಇದೀಗ ಇವರು ಪ್ರತಿಷ್ಟಿತ ಇಂಡಿಯನ್ ಬುಕ್ ಆಫ್ ರೆಕಾರ್ಡ್​ ದಾಖಲೆ ಮಾಡಿದ್ದಾರೆ. ಈ ಮೂಲಕ ದೇಶದ ಅತೀ ಕಿರಿಯ ವಯಸ್ಸಿ‌ನ ವಿಶ್ವಶಾಂತಿ ಸಂದೇಶ ಸಾರುವ ಏಕೈಕ ಬಾಲಕಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದಾರೆ.


ಮಾರಿಕಾಂಬ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಈಕೆಯ ಸಾಧನೆಗೆ ಇಂಟರ್​​ನ್ಯಾಶನಲ್ ಬುಕ್ ಆಫ್ ರೆಕಾರ್ಡ್​ ಲಭಿಸಿದೆ. ಪೂನಾದ ಸಂಸ್ಥೆಯೊಂದು ನೀಡುವ ಇಂಡಿಯನ್ ಸ್ಟಾರ್ ಐಕಾನ್ ಅವಾರ್ಡ್​ ಕೂಡ ಲಭಿಸಿದ್ದು, ಹಲವು ಪ್ರಶಸ್ತಿಗಳಿಗೆ ಬಾಲಕಿ ಬಾಜನಳಾಗಿದ್ದಾಳೆ. ತುಳಸಿ ಹೆಗಡೆಯು ಒಂದು ಗಂಟೆಗೂ ಅಧಿಕ ಕಾಲದ ಯಕ್ಷನೃತ್ಯ ರೂಪಕವನ್ನು ಪ್ರಸ್ತುತಗೊಳಿಸುತ್ತಿದ್ದಾಳೆ.

ಶಿರಸಿಯ ಬಾಲೆ ತುಳಸಿಯ ಅದ್ಭುತ ಸಾಧನೆ

13 ವರ್ಷದ ತುಳಸಿ ಕಳೆದ ಏಳು ವರ್ಷಗಳಿಂದ ಸತತ ವಿವಿಧ ಪೌರಾಣಿಕ ಕಥೆ ಒಳಗೊಂಡ ವಿಶ್ವಶಾಂತಿ ಸರಣಿ ಪ್ರಸ್ತುತಗೊಳಿಸುತ್ತಿದ್ದು, ಯಕ್ಷಗಾನದ ಬಡಗುತಿಟ್ಟು ಪ್ರಕಾರದಲ್ಲಿ ಮುಮ್ಮೇಳದ ಏಕವ್ಯಕ್ತಿ ರೂಪಕ ಇದಾಗಿದೆ. ಹಿಮ್ಮೇಳದಲ್ಲಿ ಪ್ರಸಿದ್ಧ ಕಲಾವಿದರ, ನಿರ್ದೇಶಕರ, ಸಾಹಿತಿಗಳ, ಪರಿಣಿತರ ಒಂಬತ್ತು ಜನರ ತಂಡ ಕೆಲಸ ಮಾಡುತ್ತಿದೆ. ಒಂದು ಗಂಟೆಗೂ ಮಿಕ್ಕಿದ ವಿಶ್ವಶಾಂತಿ ಸಂದೇಶ, ವಿಶ್ವಶಂಕರಾಕ್ಷರ, ಶ್ರೀಕೃಷ್ಣಂ ವಂದೇ, ವಂದೇ ಪರಮಾನಂದಂ, ಪಂಚಪಾವನ ಕಥಾ, ಪರಿವರ್ತನೆ ಜಗದ ನಿಯಮ, ವಂಶೀವಿಲಾಸ ಯಕ್ಷನೃತ್ಯ ರೂಪಕಗಳನ್ನು ಈಕೆ ಪ್ರದರ್ಶಿಸುತ್ತಾಳೆ.

ಇದನ್ನೂ ಓದಿ: ನಿನ್ನೆ ಒಂದೂರು, ಇಂದು ಮತ್ತೊಂದೂರು: ಅರಣ್ಯ ಇಲಾಖೆಗೆ ತಲೆನೋವಾದ ಕಾಡಾನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.