ETV Bharat / state

ಅನಂತ್ ಕುಮಾರ್ ಹೆಗಡೆ ಗ್ರಾಮ‌ ಪಂಚಾಯತ್ ಮೆಂಬರ್ ಆಗೋದಕ್ಕೂ ನಾಲಾಯಕ್: ಸಿದ್ದರಾಮಯ್ಯ

author img

By

Published : Nov 26, 2019, 9:32 AM IST

ಅನಂತ್ ಕುಮಾರ್ ಏನ್ ಮಾತಾಡ್ತಾರೆ ಅನ್ನುವುದು ಅವರಿಗೆ ಗೊತ್ತಿರುವುದಿಲ್ಲ. ನಾನು ಅಧಿಕಾರಕ್ಕೆ ಬಂದಿರುವುದೆ ಸಂವಿಧಾನ ಬದಲಿಸಲು ಎನ್ನುತ್ತಾರೆ. ನಾನೇನಾದ್ರು ಪಿ‌ಎಂ ಆಗಿದ್ದರೆ ಸಚಿವ ಸ್ಥಾನದಿಂದ ಅವರನ್ನು ಕಿತ್ತು ಹಾಕುತ್ತಿದ್ದೆ ಎಂದ ಸಿದ್ದರಾಮಯ್ಯ .

Siddaramaiah campaign
ಯಲ್ಲಾಪುರ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಪರ ಸಿದ್ದರಾಮಯ್ಯ ಪ್ರಚಾರ

ಶಿರಸಿ: ಆಪರೇಷನ್ ಕಮಲದ ಪಿತಾಮಹ ಮಿಸ್ಟರ್ ಯಡಿಯೂರಪ್ಪ ಅನರ್ಹ ಶಾಸಕರಿಗೆ ₹ 20 ಕೋಟಿ ನೀಡಿದ್ದಾರೆ. ಲಂಚದ ಹಣ ತಂದು ಶಾಸಕರಿಗೆ ಕೊಟ್ಟು ಸಮ್ಮಿಶ್ರ ಸರ್ಕಾರ ಕೆಡವಿ ಹಾಕಿದ್ದರು. ಮಹಾರಾಷ್ಟ್ರದಲ್ಲಿ ಕಳ್ಳರ ‌ರೀತಿ ರಾತ್ರೋರಾತ್ರಿ ರಾಷ್ಟ್ರಪತಿ ಆಳ್ವಿಕೆ ಕೊನೆ ಮಾಡಿ ಅಧಿಕಾರಕ್ಕೆ ಬರ್ತಾರೆ. ಇದು ಪ್ರಜಾಪ್ರಭುತ್ವದ ಕಗ್ಗೋಲೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಯಲ್ಲಾಪುರ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಪರ ಸಿದ್ದರಾಮಯ್ಯ ಪ್ರಚಾರ

ಯಲ್ಲಾಪುರ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಅನಂತ್ ಕುಮಾರ್ ಹೆಗಡೆ ಗ್ರಾಮ‌ ಪಂಚಾಯತ್ ಮೆಂಬರ್ ಆಗೋದಕ್ಕೂ ನಾಲಾಯಕ್, ಸಂವಿಧಾನವೇ ಅವನಿಗೆ ಗೊತ್ತಿಲ್ಲ. ನನ್ನ ಹೋರಾಟವೇ ಕೋಮುವಾದಿ ಜಾತಿವಾದಿಗಳ ವಿರುದ್ಧ ಎಂದರು.

ಅನಂತ್ ಕುಮಾರ್ ಏನ್ ಮಾತಾಡ್ತಾರೆ ಅನ್ನುವುದು ಅವರಿಗೆ ಗೊತ್ತಿರುವುದಿಲ್ಲ. ನಾನು ಅಧಿಕಾರಕ್ಕೆ ಬಂದಿರುವುದೆ ಸಂವಿಧಾನ ಬದಲಿಸಲು ಎನ್ನುತ್ತಾರೆ. ನಾನೇನಾದ್ರು ಪಿ‌ಎಂ ಆಗಿದ್ದರೆ ಸಚಿವ ಸ್ಥಾನದಿಂದ ಅವರನ್ನು ಕಿತ್ತು ಹಾಕುತ್ತಿದ್ದೆ ಎಂದರು. ಚುನಾವಣೆ ಆದ ಮೇಲೆ ಯಡಿಯೂರಪ್ಪ ಸರ್ಕಾರ ಹೋಗುತ್ತದೆ. ಚುನಾವಣೆ‌ ನಂತರ ಯಡಿಯೂರಪ್ಪ ರಾಜೀನಾಮೆ ಕೊಡ್ತಾರೆ. ಮಧ್ಯಂತರ ಚುನಾವಣೆ ಬರುತ್ತದೆ ನಾವೇ ಆಡಳಿತ ನಡೆಸುತ್ತೇವೆ. ಏಳು ಕೆಜಿ ಅಕ್ಕಿ ಬದಲು ಹತ್ತು ಕೆಜಿ ಅಕ್ಕಿಯನ್ನು ಬಡವರಿಗೆ ನೀಡುತ್ತೇವೆ ಎಂದರು. ಇನ್ನು ಹೆಬ್ಬಾರ್ ಬಿಜೆಪಿ ಯಿಂದ ಕಾಂಗ್ರೆಸ್​ಗೆ ಕರೆತಂದ ದೇಶಪಾಂಡೆಗೆ ಚೂರಿ ಹಾಕಿದ್ದಾರೆ. ಹಾಗೆಯೇ ಮತ ನೀಡಿದವರಿಗೂ ಚೂರಿ ಹಾಕಿದ್ದಾರೆ ಇವರಿಗೆ ತಕ್ಕ ಪಾಠ ಕಲಿಸಿ ಎಂದರು.

ಹೆಬ್ಬಾರ್ ಬಿಜೆಪಿಯಲ್ಲಿ ಈ ಹಿಂದೆ ಜಿಲ್ಲಾಧ್ಯಕ್ಷರಾಗಿದ್ದ ವೇಳೆ ಅನಂತಕುಮಾರ್ ಹಗ್ಡೆ ಬಳಿ ಬೂಟಿನಿಂದ ಹೊಡೆತ ತಿಂದು ಬಿಜೆಪಿ ಬಿಟ್ಟು ಹೊರಬಂದು ಕಾಂಗ್ರೆಸ್ ಸೇರಿದ್ರು ಈಗ ಪುನಹ ಬಿಜೆಪಿಗೆ ಸೇರಿದ್ದಾರೆ. ನಾಚಿಗೆಯಾಗಬೇಕು, ಅವರ ಬಂಡವಾಳ ಹೊರಹಾಕಿದ್ರೆ ಬೆಟ್ಟದಷ್ಟಿದೆ ಎಂದು ಜೆಡಿಎಸ್​ ನಿಂದ ಕಾಂಗ್ರೆಸ್​ಗೆ ಮರಳಿ ಬಂದ ಯಲ್ಲಾಪುರದ ಮುಖಂಡ ರವೀಂದ್ರ ನಾಯ್ಕರವರು ಆರೋಪಿಸಿದರು.

ಶಿರಸಿ: ಆಪರೇಷನ್ ಕಮಲದ ಪಿತಾಮಹ ಮಿಸ್ಟರ್ ಯಡಿಯೂರಪ್ಪ ಅನರ್ಹ ಶಾಸಕರಿಗೆ ₹ 20 ಕೋಟಿ ನೀಡಿದ್ದಾರೆ. ಲಂಚದ ಹಣ ತಂದು ಶಾಸಕರಿಗೆ ಕೊಟ್ಟು ಸಮ್ಮಿಶ್ರ ಸರ್ಕಾರ ಕೆಡವಿ ಹಾಕಿದ್ದರು. ಮಹಾರಾಷ್ಟ್ರದಲ್ಲಿ ಕಳ್ಳರ ‌ರೀತಿ ರಾತ್ರೋರಾತ್ರಿ ರಾಷ್ಟ್ರಪತಿ ಆಳ್ವಿಕೆ ಕೊನೆ ಮಾಡಿ ಅಧಿಕಾರಕ್ಕೆ ಬರ್ತಾರೆ. ಇದು ಪ್ರಜಾಪ್ರಭುತ್ವದ ಕಗ್ಗೋಲೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಯಲ್ಲಾಪುರ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಪರ ಸಿದ್ದರಾಮಯ್ಯ ಪ್ರಚಾರ

ಯಲ್ಲಾಪುರ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಅನಂತ್ ಕುಮಾರ್ ಹೆಗಡೆ ಗ್ರಾಮ‌ ಪಂಚಾಯತ್ ಮೆಂಬರ್ ಆಗೋದಕ್ಕೂ ನಾಲಾಯಕ್, ಸಂವಿಧಾನವೇ ಅವನಿಗೆ ಗೊತ್ತಿಲ್ಲ. ನನ್ನ ಹೋರಾಟವೇ ಕೋಮುವಾದಿ ಜಾತಿವಾದಿಗಳ ವಿರುದ್ಧ ಎಂದರು.

ಅನಂತ್ ಕುಮಾರ್ ಏನ್ ಮಾತಾಡ್ತಾರೆ ಅನ್ನುವುದು ಅವರಿಗೆ ಗೊತ್ತಿರುವುದಿಲ್ಲ. ನಾನು ಅಧಿಕಾರಕ್ಕೆ ಬಂದಿರುವುದೆ ಸಂವಿಧಾನ ಬದಲಿಸಲು ಎನ್ನುತ್ತಾರೆ. ನಾನೇನಾದ್ರು ಪಿ‌ಎಂ ಆಗಿದ್ದರೆ ಸಚಿವ ಸ್ಥಾನದಿಂದ ಅವರನ್ನು ಕಿತ್ತು ಹಾಕುತ್ತಿದ್ದೆ ಎಂದರು. ಚುನಾವಣೆ ಆದ ಮೇಲೆ ಯಡಿಯೂರಪ್ಪ ಸರ್ಕಾರ ಹೋಗುತ್ತದೆ. ಚುನಾವಣೆ‌ ನಂತರ ಯಡಿಯೂರಪ್ಪ ರಾಜೀನಾಮೆ ಕೊಡ್ತಾರೆ. ಮಧ್ಯಂತರ ಚುನಾವಣೆ ಬರುತ್ತದೆ ನಾವೇ ಆಡಳಿತ ನಡೆಸುತ್ತೇವೆ. ಏಳು ಕೆಜಿ ಅಕ್ಕಿ ಬದಲು ಹತ್ತು ಕೆಜಿ ಅಕ್ಕಿಯನ್ನು ಬಡವರಿಗೆ ನೀಡುತ್ತೇವೆ ಎಂದರು. ಇನ್ನು ಹೆಬ್ಬಾರ್ ಬಿಜೆಪಿ ಯಿಂದ ಕಾಂಗ್ರೆಸ್​ಗೆ ಕರೆತಂದ ದೇಶಪಾಂಡೆಗೆ ಚೂರಿ ಹಾಕಿದ್ದಾರೆ. ಹಾಗೆಯೇ ಮತ ನೀಡಿದವರಿಗೂ ಚೂರಿ ಹಾಕಿದ್ದಾರೆ ಇವರಿಗೆ ತಕ್ಕ ಪಾಠ ಕಲಿಸಿ ಎಂದರು.

ಹೆಬ್ಬಾರ್ ಬಿಜೆಪಿಯಲ್ಲಿ ಈ ಹಿಂದೆ ಜಿಲ್ಲಾಧ್ಯಕ್ಷರಾಗಿದ್ದ ವೇಳೆ ಅನಂತಕುಮಾರ್ ಹಗ್ಡೆ ಬಳಿ ಬೂಟಿನಿಂದ ಹೊಡೆತ ತಿಂದು ಬಿಜೆಪಿ ಬಿಟ್ಟು ಹೊರಬಂದು ಕಾಂಗ್ರೆಸ್ ಸೇರಿದ್ರು ಈಗ ಪುನಹ ಬಿಜೆಪಿಗೆ ಸೇರಿದ್ದಾರೆ. ನಾಚಿಗೆಯಾಗಬೇಕು, ಅವರ ಬಂಡವಾಳ ಹೊರಹಾಕಿದ್ರೆ ಬೆಟ್ಟದಷ್ಟಿದೆ ಎಂದು ಜೆಡಿಎಸ್​ ನಿಂದ ಕಾಂಗ್ರೆಸ್​ಗೆ ಮರಳಿ ಬಂದ ಯಲ್ಲಾಪುರದ ಮುಖಂಡ ರವೀಂದ್ರ ನಾಯ್ಕರವರು ಆರೋಪಿಸಿದರು.

Intro:ಶಿರಸಿ :
Intro :
ಶಿವರಾಮ್ ಹೆಬ್ಬಾರ್ ಬಿಜೆಪಿ ಯಲ್ಲಿ ಅನಂತಕುಮಾರ್ ಹೆಗಡೆ ಬಳಿ ಬೂಟಿನ ಹೊಡೆತ ತಿಂದು ಹೊರಬಂದಿದ್ದಾರೆ ,ಅನಂತಕುಮಾರ್ ಹೆಗಡೆ ಒಬ್ಬ ಹುಚ್ಚ ಹೀಗೆಂದು ಕಾಂಗ್ರೆಸ್ ನಾಯಕರು ಬಿಜೆಪಿ ಟಿಕೇಟ್ ಪಡೆದ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಬಿಜೆಪಿ ನಾಯಕರ ವಿರುದ್ಧ ಮಾತಿನ ಚಾಟಿ ಬೀಸಿದ್ದು ಯಲ್ಲಾಪುರ ಕ್ಷೇತ್ರದಲ್ಲೀಗ ಕಾಂಗ್ರೆಸ್ ಬಿಜೆಪಿ ಸಮರ ರಂಗೇರಿದೆ.

Body:V-1 :
ಆಪರೇಷನ್ ಕಮಲದ ಪಿತಾಮಹ ಮಿಸ್ಟರ್ ಯಡಿಯೂರಪ್ಪ,ಅನರ್ಹ ಶಾಸಕರಿಗೆ ೨೦ ಕೋಟಿ ಕೊಡಲಾಗಿದೆ,ಲಂಚದ ಹಣ ತಂದು ಶಾಸಕರಿಗೆ ಕೊಟ್ಟು ಸಮ್ಮೀಶ್ರ ಸರ್ಕಾರ ಕೆಡವಿ ಹಾಕಿದ್ದರು,ಕಳ್ಳರ ‌ರೀತಿ ರಾತ್ರೋರಾತ್ರಿ ರಾಷ್ಟ್ರಪತಿ ಆಳ್ವಿಕೆ ಕೊನೆ ಮಾಡಿ ಅಧಿಕಾರಕ್ಕೆ ಬರ್ತಾರೆ,
ಇದು ಪ್ರಜಾಪ್ರಭುತ್ವದ ಕಗ್ಗೋಲೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಯಲ್ಲಾಪುರ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಅನಂತ್ ಕುಮಾರ್ ಹೆಗಡೆ ಗ್ರಾಮ‌ಪಂಚಾಯತ್ ಮೆಂಬರ್ ಆಗೋದಕ್ಕೂ ನಾಲಾಯಕ್,ಸಂವಿಧಾನವೇ ಅವನಿಗೆ ಗೊತ್ತಿಲ್ಲ
ನಾನು ಬಿಜೆಪಿ ಸೇರುತ್ತೇನೆ ಎನ್ನುತ್ತಾರೆ,ನನ್ನ ಹೋರಾಟವೇ ಕೋಮುವಾಧಿ ಜಾತಿವಾದಿಗಳ ವಿರುದ್ದ ಹೋರಾಟ.ಅನಂತ್ ಕುಮಾರ್ ಏನ್ ಮಾತಾಡ್ತಾರೆ ಅನ್ನುವುದು ಅವರಿಗೆ ಗೊತ್ತಿರುವುದಿಲ್ಲ,ಸಂವಿಧಾನ ಬದಲಿಸಲು ಅಧಿಕಾರಕ್ಕೆ ಬಂದಿದ್ದೇವೆ ಎನ್ನುತ್ತಾರೆ,ನಾನೇ ಪಿ‌ಎಂ ಆಗಿದ್ದರೆ ಸಚಿವ ಸ್ಥಾನದಿಂದ ಕಿತ್ತು ಹಾಕುತ್ತಿದ್ದೆ.ಚುನಾವಣೆ ಆದ ಮೇಲೆ ಯಡಿಯೂರಪ್ಪ ಸರ್ಕಾರ ಹೋಗುತ್ತದೆ,ಚುನಾವಣೆ‌ ನಂತರ ಯಡಿಯೂರಪ್ಪ ರಾಜೀನಾಮೆ ಕೊಡ್ತಾರೆ.ಮಧ್ಯಂತರ ಚುನಾವಣೆ ಬರುತ್ತದೆ ನಾವೇ ಆಡಳಿತ ನಡೆಸುತ್ತೇವೆ, ಏಳು ಕೇಜಿ ಅಕ್ಕಿ ಬದಲು ಹತ್ತು ಕೆಜಿ ಅಕ್ಕಿಯನ್ನು ಬಡವರಿಗೆ ನೀಡುತ್ತೇವೆ ಎಂದರು.ಇನ್ನು ಹೆಬ್ಬಾರ್ ಬಿಜೆಪಿ ಯಿಂದ ಕಾಂಗ್ರೆಸ್ ಗೆ ಕರೆತಂದ ದೇಶಪಾಂಡೆ ಗೆ ಚೂರಿ ಹಾಕಿದ್ದಾರೆ,ಹಾಗೆಯೇ ಮತ ನೀಡಿದವರಿಗೂ ಚೂರಿ ಹಾಕಿದ್ದಾರೆ ಇವರಿಗೆ ತಕ್ಕ ಪಾಠ ಕಲಿಸಿ ಎಂದರು.


ಬೈಟ್ (1) : ಸಿದ್ದರಾಮಯ್ಯ, ವಿಪಕ್ಷ ನಾಯಕ.

V-2 :
ಹೆಬ್ಬಾರ್ ಬಿಜೆಪಿ ಯಲ್ಲಿ ಈ ಹಿಂದೆ ಜಿಲ್ಲಾಧ್ಯಕ್ಷರಾಗಿದ್ದ ವೇಳೆ ಅನಂತಕುಮಾರ್ ಹಗ್ಡೆ ಬಳಿ ಬೂಟಿನಿಂದ ಹೊಡೆತ ತಿಂದು ಬಿಜೆಪಿ ಬಿಟ್ಟು ಹೊರಬಂದು ಕಾಂಗ್ರೆಸ್ ಸೇರಿದ್ರು ಈಗ ಪುನಹಾ ಬಿಜೆಪಿಗೆ ಸೇರಿದ್ದಾರೆ,ನಾಚಿಗೆಯಾಗಬೇಕು, ಅವರ ಬಂಡವಾಳ ಹೊರಹಾಕಿದ್ರೆ ಬೆಟ್ಟದಷ್ಟಿದೆ ಎಂದು ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಮರಳಿ ಬಂದ ಯಲ್ಲಾಪುರದ ಮುಖಂಡ ರವೀಂದ್ರ ನಾಯ್ಕ ರವರು ಆರೋಪಿಸಿದರು.

ಬೈಟ್ (2) : ರವೀಂದ್ರ ನಾಯ್ಕ. ಕಾಂಗ್ರೆಸ್ ಮುಖಂಡ.

Conclusion:V-3 :
ಯಲ್ಲಾಪುರ ದಲ್ಲಿ ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹೆಬ್ಬಾರ್ ವಿರುದ್ಧ ಕಾಂಗ್ರೆಸ್ ನಾಯಕರು ಮಾತಿನ ಚಾಟಿ ಬೀಸುತಿದ್ದಾರೆ.ಇತ್ತ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ರನ್ನು ಗೆಲ್ಲಿಸಲು ಆರ್.ವಿ ದೇಶಪಾಂಡೆ ಶಥ ಪ್ರಯತ್ನ ನಡೆಸುತಿದ್ದು ,ಯಲ್ಲಾಪುರ ಚುನಾವಣಾ ಕದನ ರಂಗೇರಿದ್ದು ಹೆಬ್ಬಾರ್ ವಿರುದ್ಧ ಆರೋಪಗಳ ಸುರುಮಳೆ ಗೈಯುತಿದ್ದಾರೆ.
.............
ಸಂದೇಶ ಭಟ್ ಶಿರಸಿ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.