ETV Bharat / state

ಅಕ್ರಮಗಳಿಗೆ ಸಿಂಹಸ್ವಪ್ನವಾದ ಉ.ಕನ್ನಡ ಎಸ್‌ಪಿ; ಅಧಿಕಾರಿಯ ವರ್ಗಾವಣೆಗೆ ದಂಧೆಕೋರರ ಹರಕೆ - ಪೊಲೀಸ್ ವರಿಷ್ಠಾಧಿಕಾರಿ ಡಾ ಸುಮನ್ ಡಿ ಪೆನ್ನೇಕರ್ ವರ್ಗಾವಣೆಗೆ ದೇವರ ಮೊರೆ

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ಅವರು ವರ್ಗಾವಣೆಯಾಗಲಿ ಎಂದು ದಂಧೆಕೋರರು ದೇವರಿಗೆ ಕುರಿ ಬಲಿ ಕೊಡುವುದಾಗಿ ಹರಕೆ ಕಟ್ಟಿಕೊಂಡಿದ್ದಾರೆ ಎನ್ನಲಾಗ್ತಿದೆ.

Dr. Suman D. Pennekar
ಡಾ.ಸುಮನ್ ಡಿ.ಪೆನ್ನೇಕರ್
author img

By

Published : Jul 18, 2022, 7:36 AM IST

ಕಾರವಾರ: ಇಷ್ಟಾರ್ಥ ಸಿದ್ದಿಗಾಗಿ ದೇವರ ಮೊರೆ ಹೋಗುವುದು ಸಾಮಾನ್ಯ. ತಮಗೆ ಬಂದಿರುವ ಕಷ್ಟಗಳು ದೂರಾಗಲಿ ಎಂಬ ಕಾರಣಕ್ಕೆ ದೇವರಿಗೆ ವಿಶೇಷ ಪೂಜೆ, ಹರಕೆ ಸಲ್ಲಿಸುವುದುಂಟು. ಆದರೆ ಇಲ್ಲೊಂದು ಕಡೆ ಅಕ್ರಮಗಳಿಗೆ ಸಿಂಹಸ್ವಪ್ನವಾಗಿರುವ ಅಧಿಕಾರಿಯೊಬ್ಬರು ವರ್ಗಾವಣೆಯಾಗಲಿ ಎಂದು ದಂಧೆಕೋರರು ದೇವರಿಗೆ ವಿಶೇಷ ಹರಕೆ ಕಟ್ಟಿಕೊಂಡಿದ್ದಾರೆ.

ಉತ್ತರ ಕನ್ನಡಕ್ಕೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸುಮನ್ ಪೆನ್ನೇಕರ್ ಕಾಲಿಟ್ಟ ದಿನದಿಂದಲೂ ಅಕ್ರಮ ದಂಧೆಕೋರರನ್ನು ದುಸ್ವಪ್ನವಾಗಿ ಕಾಡುತ್ತಿದ್ದಾರೆ. ಅಕ್ರಮ ಮರಳುಗಾರಿಕೆ, ಗಾಂಜಾ, ಇಸ್ಪೀಟ್, ಓಸಿ, ಮಟ್ಕಾದಂತಹ ಅಕ್ರಮ ಚಟುವಟಿಕೆಗಳಿಗೆ ಒಂದೊಂದಾಗಿಯೇ ಕಡಿವಾಣ ಹಾಕುತ್ತಾ ಬಂದಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದೆ ದಂಧೆಕೋರರ ಅಡ್ಡೆಗಳ ಮೇಲೆ ದಾಳಿ ನಡೆಸಿ ಅವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಯಾರಿಗೂ ಜಗ್ಗದೇ 'ಲೇಡಿ ಸಿಂಗಂ'ಮಾದರಿಯಲ್ಲಿ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿದ್ದಾರೆ.


ಆದರೆ ಈ ಕಟ್ಟುನಿಟ್ಟಿನ ಕ್ರಮಗಳು ಜಿಲ್ಲೆಯಲ್ಲಿನ ದಂಧೆಕೋರರಿಗೆ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣ ಮಾಡಿದೆ. ಅವರು ಅಕ್ರಮ ದಂಧೆಗಳನ್ನು ನಡೆಸಲಾಗದ ಸ್ಥಿತಿ ತಲುಪಿದ್ದಾರೆ. ಇದರಿಂದ ಕಂಗೆಟ್ಟಿರುವ ಕೆಲ ದಂಧೆಕೋರರು ಎಸ್​​ಪಿ ಸುಮನ್ ಅವರನ್ನ ವರ್ಗಾವಣೆ ಮಾಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ರಾಜಕೀಯವಾಗಿ ಒತ್ತಡ ಹೇರುವ ಪ್ರಯತ್ನ ನಡೆಸಿದರೂ, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಕೊನೆಯದಾಗಿ ದೇವರ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ಅಂಕೋಲಾ ತಾಲೂಕಿನ ಮುರ್ಕುಂಡೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ಜಿಲ್ಲೆಯಿಂದ ಎಸ್​ಪಿ ವರ್ಗಾವಣೆಯಾದರೆ ಕುರಿ ಬಲಿ ಕೊಡುವುದಾಗಿ ಹರಕೆ ಕಟ್ಟಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದು ಜನ ಸಾಮಾನ್ಯರಲ್ಲಿ ಅಚ್ಚರಿ ಮೂಡಿಸಿದೆ. ಜಿಲ್ಲೆಯಲ್ಲಿ ಉತ್ತಮ ಕಾರ್ಯ ಮಾಡುತ್ತಿರುವ ಪೊಲೀಸ್ ವರಿಷ್ಠಾಧಿಕಾರಿಗೆ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಅಕ್ರಮ ಗಾಂಜಾ ದಂಧೆಗೆ ಬ್ರೇಕ್ ಹಾಕಲು ಶತಾಯಗತಾಯ ಪ್ರಯತ್ನ ನಡೆಸಿರುವ ಎಸ್​ಪಿ ತಿಂಗಳೊಂದರಲ್ಲೇ 14 ಕೇಸ್‌ಗಳನ್ನ ದಾಖಲು ಮಾಡಿ ದಂಧೆಕೋರರನ್ನು ಕಂಬಿ ಹಿಂದೆ ತಳ್ಳಿದ್ದಾರೆ. ಜೊತೆಗೆ ಅಕ್ರಮ ಸಾರಾಯಿ, ಖೋಟಾ ನೋಟು ದಂಧೆ, ಓಸಿ-ಮಟ್ಕಾ ಹೀಗೆ ಸಮಾಜಕ್ಕೆ ಮಾರಕವಾದ ಹಲವು ದಂಧೆಗಳಿಗೆ ಬ್ರೇಕ್ ಹಾಕಲು ಜಿಲ್ಲೆಯಲ್ಲಿ ಆ್ಯಕ್ಟಿವ್ ಆಗಿ ವರಿಷ್ಠಾಧಿಕಾರಿ ಹಾಗೂ ತಂಡ ಕೆಲಸ ಮಾಡುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ವರಿಷ್ಠಾಧಿಕಾರಿ, "ಇದೆಲ್ಲ ನಮಗೆ ಸಾಮಾನ್ಯ. ಇದಕ್ಕೆಲ್ಲ ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ಕೆಲಸವನ್ನು ನಾವು ಮಾಡುತ್ತೇವೆ" ಎಂದರು.

ಇದನ್ನೂ ಓದಿ: ಕಟ್ಟಡದ ಮೇಲ್ಛಾವಣಿಯಿಂದ ಮಗು ಎಸೆದ ಕೋತಿ: 4 ತಿಂಗಳ ಕಂದಮ್ಮ ಸಾವು

ಕಾರವಾರ: ಇಷ್ಟಾರ್ಥ ಸಿದ್ದಿಗಾಗಿ ದೇವರ ಮೊರೆ ಹೋಗುವುದು ಸಾಮಾನ್ಯ. ತಮಗೆ ಬಂದಿರುವ ಕಷ್ಟಗಳು ದೂರಾಗಲಿ ಎಂಬ ಕಾರಣಕ್ಕೆ ದೇವರಿಗೆ ವಿಶೇಷ ಪೂಜೆ, ಹರಕೆ ಸಲ್ಲಿಸುವುದುಂಟು. ಆದರೆ ಇಲ್ಲೊಂದು ಕಡೆ ಅಕ್ರಮಗಳಿಗೆ ಸಿಂಹಸ್ವಪ್ನವಾಗಿರುವ ಅಧಿಕಾರಿಯೊಬ್ಬರು ವರ್ಗಾವಣೆಯಾಗಲಿ ಎಂದು ದಂಧೆಕೋರರು ದೇವರಿಗೆ ವಿಶೇಷ ಹರಕೆ ಕಟ್ಟಿಕೊಂಡಿದ್ದಾರೆ.

ಉತ್ತರ ಕನ್ನಡಕ್ಕೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸುಮನ್ ಪೆನ್ನೇಕರ್ ಕಾಲಿಟ್ಟ ದಿನದಿಂದಲೂ ಅಕ್ರಮ ದಂಧೆಕೋರರನ್ನು ದುಸ್ವಪ್ನವಾಗಿ ಕಾಡುತ್ತಿದ್ದಾರೆ. ಅಕ್ರಮ ಮರಳುಗಾರಿಕೆ, ಗಾಂಜಾ, ಇಸ್ಪೀಟ್, ಓಸಿ, ಮಟ್ಕಾದಂತಹ ಅಕ್ರಮ ಚಟುವಟಿಕೆಗಳಿಗೆ ಒಂದೊಂದಾಗಿಯೇ ಕಡಿವಾಣ ಹಾಕುತ್ತಾ ಬಂದಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದೆ ದಂಧೆಕೋರರ ಅಡ್ಡೆಗಳ ಮೇಲೆ ದಾಳಿ ನಡೆಸಿ ಅವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಯಾರಿಗೂ ಜಗ್ಗದೇ 'ಲೇಡಿ ಸಿಂಗಂ'ಮಾದರಿಯಲ್ಲಿ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿದ್ದಾರೆ.


ಆದರೆ ಈ ಕಟ್ಟುನಿಟ್ಟಿನ ಕ್ರಮಗಳು ಜಿಲ್ಲೆಯಲ್ಲಿನ ದಂಧೆಕೋರರಿಗೆ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣ ಮಾಡಿದೆ. ಅವರು ಅಕ್ರಮ ದಂಧೆಗಳನ್ನು ನಡೆಸಲಾಗದ ಸ್ಥಿತಿ ತಲುಪಿದ್ದಾರೆ. ಇದರಿಂದ ಕಂಗೆಟ್ಟಿರುವ ಕೆಲ ದಂಧೆಕೋರರು ಎಸ್​​ಪಿ ಸುಮನ್ ಅವರನ್ನ ವರ್ಗಾವಣೆ ಮಾಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ರಾಜಕೀಯವಾಗಿ ಒತ್ತಡ ಹೇರುವ ಪ್ರಯತ್ನ ನಡೆಸಿದರೂ, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಕೊನೆಯದಾಗಿ ದೇವರ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ಅಂಕೋಲಾ ತಾಲೂಕಿನ ಮುರ್ಕುಂಡೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ಜಿಲ್ಲೆಯಿಂದ ಎಸ್​ಪಿ ವರ್ಗಾವಣೆಯಾದರೆ ಕುರಿ ಬಲಿ ಕೊಡುವುದಾಗಿ ಹರಕೆ ಕಟ್ಟಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದು ಜನ ಸಾಮಾನ್ಯರಲ್ಲಿ ಅಚ್ಚರಿ ಮೂಡಿಸಿದೆ. ಜಿಲ್ಲೆಯಲ್ಲಿ ಉತ್ತಮ ಕಾರ್ಯ ಮಾಡುತ್ತಿರುವ ಪೊಲೀಸ್ ವರಿಷ್ಠಾಧಿಕಾರಿಗೆ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಅಕ್ರಮ ಗಾಂಜಾ ದಂಧೆಗೆ ಬ್ರೇಕ್ ಹಾಕಲು ಶತಾಯಗತಾಯ ಪ್ರಯತ್ನ ನಡೆಸಿರುವ ಎಸ್​ಪಿ ತಿಂಗಳೊಂದರಲ್ಲೇ 14 ಕೇಸ್‌ಗಳನ್ನ ದಾಖಲು ಮಾಡಿ ದಂಧೆಕೋರರನ್ನು ಕಂಬಿ ಹಿಂದೆ ತಳ್ಳಿದ್ದಾರೆ. ಜೊತೆಗೆ ಅಕ್ರಮ ಸಾರಾಯಿ, ಖೋಟಾ ನೋಟು ದಂಧೆ, ಓಸಿ-ಮಟ್ಕಾ ಹೀಗೆ ಸಮಾಜಕ್ಕೆ ಮಾರಕವಾದ ಹಲವು ದಂಧೆಗಳಿಗೆ ಬ್ರೇಕ್ ಹಾಕಲು ಜಿಲ್ಲೆಯಲ್ಲಿ ಆ್ಯಕ್ಟಿವ್ ಆಗಿ ವರಿಷ್ಠಾಧಿಕಾರಿ ಹಾಗೂ ತಂಡ ಕೆಲಸ ಮಾಡುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ವರಿಷ್ಠಾಧಿಕಾರಿ, "ಇದೆಲ್ಲ ನಮಗೆ ಸಾಮಾನ್ಯ. ಇದಕ್ಕೆಲ್ಲ ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ಕೆಲಸವನ್ನು ನಾವು ಮಾಡುತ್ತೇವೆ" ಎಂದರು.

ಇದನ್ನೂ ಓದಿ: ಕಟ್ಟಡದ ಮೇಲ್ಛಾವಣಿಯಿಂದ ಮಗು ಎಸೆದ ಕೋತಿ: 4 ತಿಂಗಳ ಕಂದಮ್ಮ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.