ETV Bharat / state

ಮೀಸಲಾತಿಗೆ ಕಾನೂನಾತ್ಮಕ ತೊಡಕು.. ಚರ್ಚಿಸಿ ತಿರ್ಮಾನ ಕೈಗೊಳ್ಳುವುದಾಗಿ ಶ್ರೀರಾಮಲು ಭರವಸೆ

ಮೀಸಲಾತಿ ನೀಡುವಲ್ಲಿ ಕಾನೂನಾತ್ಮಕ, ಸಾಂವಿಧಾನಿಕವಾದ ಕೆಲ ತೊಡಕುಗಳಿವೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದು, ಈ ಬಗ್ಗೆ ಪರಿಶೀಲಿಸಿ ಸರ್ಕಾರ ಮುಂದೆ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

author img

By

Published : Feb 16, 2021, 3:37 PM IST

sriramulu
sriramulu

ಕಾರವಾರ (ಉತ್ತರ ಕನ್ನಡ): ಪಂಚಮಸಾಲಿ ಲಿಂಗಾಯತರ 2A ಮೀಸಲಾತಿ ಹೋರಾಟ ವಿಚಾರವಾಗಿ ರಾಜ್ಯದ 26 ಜಿಲ್ಲೆಗಳಿಂದ ವರದಿ ನೀಡಲು ತಿಳಿಸಿರುವುದಾಗಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಕಾರವಾರದಲ್ಲಿಂದು ಈ ಕುರಿತು ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪಂಚಮಸಾಲಿ ಸಮುದಾಯ ರಾಜ್ಯದಲ್ಲಿ ದೊಡ್ಡ ಸಮುದಾಯವಾಗಿದ್ದು, ಬಸವಜಯ ಮೃತ್ಯುಂಜಯ ಶ್ರೀಗಳು ಪಾದಯಾತ್ರೆ ಮಾಡುತ್ತಿದ್ದಾರೆ. ಮೀಸಲಾತಿ ನೀಡುವಲ್ಲಿ ಕಾನೂನಾತ್ಮಕ, ಸಾಂವಿಧಾನಿಕವಾದ ಕೆಲ ತೊಡಕುಗಳಿವೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದು ಸ್ವಾಮೀಜಿಗಳು ಪರ ವಿರೋಧ ವ್ಯಕ್ತವಾಗಿದ್ದರಿಂದ ಸಾಧಕ ಬಾಧಕ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

ಮೀಸಲಾತಿ ಕುರಿತು ಚರ್ಚಿಸಿ ತಿರ್ಮಾನ ಕೈಗೊಳ್ಳುವುದಾಗಿ ಶ್ರೀರಾಮಲು ಭರವಸೆ

ಕುರುಬ ಸಮುದಾಯದವರು ತಮ್ಮನ್ನ ಎಸ್​ಟಿಗೆ ಸೇರಿಸಬೇಕೆಂಬ ಬೇಡಿಕೆ ಮುಂದಿಟ್ಟಿದ್ದಾರೆ. ಎಸ್​ಸಿ ಎಸ್​ಟಿ ಸಂಬಂಧ ಕುಲಶಾಸ್ತ್ರೀಯ ಅಧ್ಯಯನ ಮುಗಿದಿದ್ದು, ಮೀಸಲಾತಿ ಹೆಚ್ಚು ಮಾಡಬೇಕೆಂಬ ಒತ್ತಾಯ ಇದೆ. ಹೀಗಾಗಿ ಈ ಬಗ್ಗೆ ಪರಿಶೀಲಿಸಿ ಸರ್ಕಾರ ಮುಂದೆ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.

ಇನ್ನು ಬಿಪಿಎಲ್ ಕಾರ್ಡ್ ರದ್ದತಿ ಹೇಳಿಕೆಗೆ ಸಚಿವ ಉಮೇಶ ಕತ್ತಿಯವರೇ ಸ್ಪಷ್ಟನೆ ನೀಡಿದ್ದಾರೆ. ಬಿಪಿಎಲ್ ಕಾರ್ಡ್ ವ್ಯವಸ್ಥೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿದ್ದು, ಜನರು ಯಾರದೋ ಹೇಳಿಕೆಗಳಿಂದ ಆತಂಕಕ್ಕೆ ಒಳಗಾಗಬಾರದು ಎಂದು ಸಚಿವರು ಮನವಿ ಮಾಡಿದ್ದಾರೆ.

ಕಾರವಾರ (ಉತ್ತರ ಕನ್ನಡ): ಪಂಚಮಸಾಲಿ ಲಿಂಗಾಯತರ 2A ಮೀಸಲಾತಿ ಹೋರಾಟ ವಿಚಾರವಾಗಿ ರಾಜ್ಯದ 26 ಜಿಲ್ಲೆಗಳಿಂದ ವರದಿ ನೀಡಲು ತಿಳಿಸಿರುವುದಾಗಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಕಾರವಾರದಲ್ಲಿಂದು ಈ ಕುರಿತು ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪಂಚಮಸಾಲಿ ಸಮುದಾಯ ರಾಜ್ಯದಲ್ಲಿ ದೊಡ್ಡ ಸಮುದಾಯವಾಗಿದ್ದು, ಬಸವಜಯ ಮೃತ್ಯುಂಜಯ ಶ್ರೀಗಳು ಪಾದಯಾತ್ರೆ ಮಾಡುತ್ತಿದ್ದಾರೆ. ಮೀಸಲಾತಿ ನೀಡುವಲ್ಲಿ ಕಾನೂನಾತ್ಮಕ, ಸಾಂವಿಧಾನಿಕವಾದ ಕೆಲ ತೊಡಕುಗಳಿವೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದು ಸ್ವಾಮೀಜಿಗಳು ಪರ ವಿರೋಧ ವ್ಯಕ್ತವಾಗಿದ್ದರಿಂದ ಸಾಧಕ ಬಾಧಕ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

ಮೀಸಲಾತಿ ಕುರಿತು ಚರ್ಚಿಸಿ ತಿರ್ಮಾನ ಕೈಗೊಳ್ಳುವುದಾಗಿ ಶ್ರೀರಾಮಲು ಭರವಸೆ

ಕುರುಬ ಸಮುದಾಯದವರು ತಮ್ಮನ್ನ ಎಸ್​ಟಿಗೆ ಸೇರಿಸಬೇಕೆಂಬ ಬೇಡಿಕೆ ಮುಂದಿಟ್ಟಿದ್ದಾರೆ. ಎಸ್​ಸಿ ಎಸ್​ಟಿ ಸಂಬಂಧ ಕುಲಶಾಸ್ತ್ರೀಯ ಅಧ್ಯಯನ ಮುಗಿದಿದ್ದು, ಮೀಸಲಾತಿ ಹೆಚ್ಚು ಮಾಡಬೇಕೆಂಬ ಒತ್ತಾಯ ಇದೆ. ಹೀಗಾಗಿ ಈ ಬಗ್ಗೆ ಪರಿಶೀಲಿಸಿ ಸರ್ಕಾರ ಮುಂದೆ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.

ಇನ್ನು ಬಿಪಿಎಲ್ ಕಾರ್ಡ್ ರದ್ದತಿ ಹೇಳಿಕೆಗೆ ಸಚಿವ ಉಮೇಶ ಕತ್ತಿಯವರೇ ಸ್ಪಷ್ಟನೆ ನೀಡಿದ್ದಾರೆ. ಬಿಪಿಎಲ್ ಕಾರ್ಡ್ ವ್ಯವಸ್ಥೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿದ್ದು, ಜನರು ಯಾರದೋ ಹೇಳಿಕೆಗಳಿಂದ ಆತಂಕಕ್ಕೆ ಒಳಗಾಗಬಾರದು ಎಂದು ಸಚಿವರು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.