ETV Bharat / state

ಬಿಜೆಪಿಯವರು ಹೆಣದ ಮೇಲೆ ಹಣ ಮಾಡುತ್ತಿದ್ದಾರೆ: ಬಿ.ಕೆ.ಹರಿಪ್ರಸಾದ್

author img

By

Published : Jul 31, 2020, 4:02 PM IST

ಕೊರೊನಾ ಸಂದರ್ಭದಲ್ಲಿ ಸ್ಯಾನಿಟೈಸರ್, ವೆಂಟಿಲೇಟರ್ ಸೇರಿದಂತೆ ವಿವಿಧ ಸುರಕ್ಷತಾ ಸಾಮಗ್ರಿಗಳ ಖರೀದಿಯಲ್ಲಿ ಸುಮಾರು 2 ಸಾವಿರ ಕೋಟಿ ರೂ. ಹಗರಣ ನಡೆಸಲಾಗಿದೆ. ಬಿಜೆಪಿಯ ಮಾಜಿ ಶಾಸಕರೇ ವೆಂಟಿಲೇಟರ್ ಸೆಕೆಂಡ್ ಹ್ಯಾಂಡ್ ಎಂದು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸರ್ಕಾರದ ಹಗರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲು ಈಗಾಗಲೇ ಒತ್ತಾಯಿಸಿದ್ದೇವೆ ಎಂದು ಬಿ.ಕೆ.ಹರಿಪ್ರಸಾದ್​ ಹೇಳಿದರು.

Those who are accused of corruption should resign immediately: BK Hariprasad
ಭ್ರಷ್ಟಾಚಾರ ಆರೋಪ ಹೊತ್ತವರು ತಕ್ಷಣ ರಾಜೀನಾಮೆ ನೀಡಬೇಕು: ಬಿ.ಕೆ.ಹರಿಪ್ರಸಾದ್ ಆಗ್ರಹ

ಕಾರವಾರ (ಉತ್ತರಕನ್ನಡ): ಕೊರೊನಾ ಚಿಕಿತ್ಸೆ ಹೆಸರಿನಲ್ಲಿ ಬಿಜೆಪಿಯವರು ಹೆಣದ ಮೇಲೆ ಹಣ ಮಾಡುತ್ತಿದ್ದು, ಶವದ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.

ಕಾರವಾರದಲ್ಲಿ ಮಾತನಾಡಿದ ಅವರು, ಕೋವಿಡ್-19 ರೋಗ ತಡೆಗಟ್ಟುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಪ್ರಧಾನಿ ಮೋದಿ ಕೇವಲ ಮಾತಿನಲ್ಲಿಯೇ ಜನರನ್ನು ಮರಳು ಮಾಡಿದ್ದಾರೆ ಎಂದು ಆರೋಪಿಸಿದರು.

ಭ್ರಷ್ಟಾಚಾರ ಆರೋಪ ಹೊತ್ತವರು ತಕ್ಷಣ ರಾಜೀನಾಮೆ ನೀಡಬೇಕು: ಬಿ.ಕೆ.ಹರಿಪ್ರಸಾದ್ ಆಗ್ರಹ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಕೊರೊನಾ ಸಂದರ್ಭದಲ್ಲೂ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದೆ. ಇದು ಕೇವಲ ಕಾಂಗ್ರೆಸ್​ನ ಆರೋಪವಲ್ಲ,‌ ಬದಲಾಗಿ ಹೈಕೋರ್ಟ್​ ಕೂಡ ಹೇಳಿದೆ. ಕೊರೊನಾ ಸಂದರ್ಭದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು (ಎಸ್ಒಪಿ) ಪಾಲಿಸಿಲ್ಲ ಎಂದು ಹೈಕೋರ್ಟ್​​ ಆಕ್ಷೇಪಿಸಿತ್ತು. ಬಳಿಕ ಸರ್ಕಾರ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯ ಪೌರಾಯುಕ್ತರನ್ನು ಬದಲಿಸಿದೆ ಎಂದರು.

ಕೊರೊನಾ ಸಂದರ್ಭದಲ್ಲಿ ಸ್ಯಾನಿಟೈಸರ್, ವೆಂಟಿಲೇಟರ್ ಸೇರಿದಂತೆ ವಿವಿಧ ಸುರಕ್ಷತಾ ಸಾಮಗ್ರಿಗಳ ಖರೀದಿಯಲ್ಲಿ ಸುಮಾರು 2 ಸಾವಿರ ಕೋಟಿ ರೂ. ಹಗರಣ ನಡೆಸಲಾಗಿದೆ. ಬಿಜೆಪಿಯ ಮಾಜಿ ಶಾಸಕ ಬಗಲಿಯವರು ವೆಂಟಿಲೇಟರ್ ಸೆಕೆಂಡ್ ಹ್ಯಾಂಡ್ ಎಂದು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ. ಸರ್ಕಾರದ ಹಗರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲು ಈಗಾಗಲೇ ಒತ್ತಾಯಿಸಿದ್ದೇವೆ. ಸರ್ಕಾರ ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕಲ್ಲದೆ, ಭ್ರಷ್ಟಾಚಾರ ಆರೋಪ ಹೊತ್ತವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಕಾರವಾರ (ಉತ್ತರಕನ್ನಡ): ಕೊರೊನಾ ಚಿಕಿತ್ಸೆ ಹೆಸರಿನಲ್ಲಿ ಬಿಜೆಪಿಯವರು ಹೆಣದ ಮೇಲೆ ಹಣ ಮಾಡುತ್ತಿದ್ದು, ಶವದ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.

ಕಾರವಾರದಲ್ಲಿ ಮಾತನಾಡಿದ ಅವರು, ಕೋವಿಡ್-19 ರೋಗ ತಡೆಗಟ್ಟುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಪ್ರಧಾನಿ ಮೋದಿ ಕೇವಲ ಮಾತಿನಲ್ಲಿಯೇ ಜನರನ್ನು ಮರಳು ಮಾಡಿದ್ದಾರೆ ಎಂದು ಆರೋಪಿಸಿದರು.

ಭ್ರಷ್ಟಾಚಾರ ಆರೋಪ ಹೊತ್ತವರು ತಕ್ಷಣ ರಾಜೀನಾಮೆ ನೀಡಬೇಕು: ಬಿ.ಕೆ.ಹರಿಪ್ರಸಾದ್ ಆಗ್ರಹ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಕೊರೊನಾ ಸಂದರ್ಭದಲ್ಲೂ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದೆ. ಇದು ಕೇವಲ ಕಾಂಗ್ರೆಸ್​ನ ಆರೋಪವಲ್ಲ,‌ ಬದಲಾಗಿ ಹೈಕೋರ್ಟ್​ ಕೂಡ ಹೇಳಿದೆ. ಕೊರೊನಾ ಸಂದರ್ಭದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು (ಎಸ್ಒಪಿ) ಪಾಲಿಸಿಲ್ಲ ಎಂದು ಹೈಕೋರ್ಟ್​​ ಆಕ್ಷೇಪಿಸಿತ್ತು. ಬಳಿಕ ಸರ್ಕಾರ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯ ಪೌರಾಯುಕ್ತರನ್ನು ಬದಲಿಸಿದೆ ಎಂದರು.

ಕೊರೊನಾ ಸಂದರ್ಭದಲ್ಲಿ ಸ್ಯಾನಿಟೈಸರ್, ವೆಂಟಿಲೇಟರ್ ಸೇರಿದಂತೆ ವಿವಿಧ ಸುರಕ್ಷತಾ ಸಾಮಗ್ರಿಗಳ ಖರೀದಿಯಲ್ಲಿ ಸುಮಾರು 2 ಸಾವಿರ ಕೋಟಿ ರೂ. ಹಗರಣ ನಡೆಸಲಾಗಿದೆ. ಬಿಜೆಪಿಯ ಮಾಜಿ ಶಾಸಕ ಬಗಲಿಯವರು ವೆಂಟಿಲೇಟರ್ ಸೆಕೆಂಡ್ ಹ್ಯಾಂಡ್ ಎಂದು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ. ಸರ್ಕಾರದ ಹಗರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲು ಈಗಾಗಲೇ ಒತ್ತಾಯಿಸಿದ್ದೇವೆ. ಸರ್ಕಾರ ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕಲ್ಲದೆ, ಭ್ರಷ್ಟಾಚಾರ ಆರೋಪ ಹೊತ್ತವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.