ETV Bharat / state

ಕಾರವಾರ: ಚರಸ್ ಮಾರಾಟ ಮಾಡುತ್ತಿದ್ದ ಮೂವರು, ಅಡಿಕೆ ಕದ್ದ 6 ಮಂದಿ ಬಂಧನ

author img

By

Published : Mar 17, 2023, 11:18 AM IST

ಮಾದಕ ವಸ್ತು ಚರಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳು ಹಾಗೂ ಅಡಿಕೆ ಕದ್ದ ಆರೋಪದಡಿ 6 ಜನರನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ.

Karwar
ಗೋಕರ್ಣ ಪೊಲೀಸ್​​ ಠಾಣೆ

ಕಾರವಾರ: ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಗೋಕರ್ಣದಲ್ಲಿ ನಡೆದಿದೆ. ಇಲ್ಲಿನ ಬೇಲೆಹಿತ್ತಲ ನಿವಾಸಿ ತುಳುಸು ಗೌಡ, ಮೂಲೇಕೇರಿ ನಿವಾಸಿ ಶ್ರೀಧರ ಗೌಡ ಹಾಗೂ ಮೂಲತಃ ನೇಪಾಳದ ಸದ್ಯ ಕುಡ್ಲೆ ನಿವಾಸಿ ಸಂತ ಬದ್ದೂರ್ ಬಂಧಿತರು.

ಈ ಮೂವರು ಓಂ ಬೀಚ್ ರಸ್ತೆಯಲ್ಲಿ ಮಾದಕ ವಸ್ತು ಚರಸ್ ಇರಿಸಿಕೊಂಡು ವಿದೇಶಿಗರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಸಿಪಿಐ ಮಂಜುನಾಥ ಎಂ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದೆ. ಆರೋಪಿಗಳಿಂದ ಸುಮಾರು 10 ಲಕ್ಷ ಮೌಲ್ಯದ 1 ಕೆ.ಜಿ 648 ಗ್ರಾಂ ಚರಸ್‌ ವಶಕ್ಕೆ ಪಡೆಯಲಾಗಿದೆ. ಕುಡ್ಲೆ ನಿವಾಸಿ ಸಂತ ಬದ್ದೂರ್ ಕಳೆದ 17 ವರ್ಷಗಳ ಹಿಂದೆ ನೇಪಾಳದಿಂದ ಆಗಮಿಸಿ ಕುಡ್ಲೆಯಲ್ಲಿ ವಾಸವಿದ್ದಾನೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿಚಾರಣೆ ಮುಂದುವರೆದಿದೆ.

Karwar
ಬಂಧಿತ ಆರೋಪಿಗಳು

ಅಡಿಕೆ ಕಳ್ಳರ ಬಂಧನ: ಯಲ್ಲಾಪುರ ಪಟ್ಟಣದ ಹೊರವಲಯದಲ್ಲಿರುವ ಸವಣಗೇರಿಯ ದುರ್ಗಾಂಬಾ ಸೇಲ್ಸ್ ವಕಾರಿಯಿಂದ ಅಡಕೆ ಕದ್ದ ಆರೋಪದಡಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕುಮಟಾ ತಾಲೂಕಿನ ಮಾಸೂರಿನ ಮಹೇಶ ಈರಾ ಗೌಡ, ಯಲ್ಲಾಪುರದ ಇಸ್ಲಾಂ ಗಲ್ಲಿಯ ಸಫ್ರಾಜ್ ಅಬ್ದುಲ್‌ ಸಾಬ ಬಡಗಿ, ಉದ್ಯಮ ನಗರದ ಪರಶುರಾಮ ಬಾಬು ಕಾಂಬಳೆ, ಕುಮಟಾ ತಾಲೂಕಿನ ಹೊಸೇರಿಯ ಶಶಿಧರ ಲಿಂಗಪ್ಪ ಪಟಗಾರ, ಹರೀಶ ಮಾರಪ್ಪ ಪಟಗಾರ, ನವೀನ ಶ್ರೀಪಾದ ಪಟಗಾರ ಬಂಧಿತರಾಗಿದ್ದಾರೆ.

ಇವರು ಮಾ.13 ರಂದು ರಾತ್ರಿ ಸವಣಗೇರಿಯ ದುರ್ಗಾಂಬಾ ಸೇಲ್ ವಕಾರಿಯ ಮೇಲ್ಛಾವಣಿಯನ್ನು ತೆಗೆದು ಒಳನುಗ್ಗಿ 4 ಕ್ವಿಂಟಲ್ ಚಾಲಿ ಅಡಕೆ ಹಾಗೂ 80 ಕೆ.ಜಿ ಕೆಂಪು ಅಡಕೆ ಸೇರಿ ಒಟ್ಟು 1.45 ಲಕ್ಷ ರೂ ಮೌಲ್ಯದ ಅಡಕೆ ಕಳವು ಮಾಡಿದ್ದರು. ಈ ಕುರಿತು ವಕಾರಿಯ ಮಾಲೀಕ ಗಣೇಶ ಭಟ್​ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಕಳ್ಳತನ ಮಾಡಿದ 4 ಕ್ವಿಂಟಲ್ ಅಡಿಕೆ, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಕಳ್ಳತನ ಮಾಡಿರುವುದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ವಿದ್ಯಾರ್ಥಿನಿ ಆತ್ಮಹತ್ಯೆ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಕೋಲಾ ತಾಲೂಕಿನ ಬೆಳಂಬಾರದಲ್ಲಿ ನಡೆದಿದೆ. ತಾಳೇಬೈಲಿನ ನಿವಾಸಿ ಶಿಲ್ಪಾ ಗೌಡ (17) ಮೃತ ವಿದ್ಯಾರ್ಥಿನಿ. ಈಕೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮಾ.9 ರಿಂದ ಆರಂಭವಾಗಿರುವ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಆರಂಭದ ಎರಡು ವಿಷಯಗಳ ಪರೀಕ್ಷೆ ಎದುರಿಸಿದ್ದ ಈಕೆ, ಬುಧವಾರ ಬೆಳಗ್ಗೆ ಪಾಲಕರು ಎಂದಿನಂತೆ ಕೂಲಿ ಕೆಲಸಕ್ಕೆ ಮನೆಯಿಂದ ಹೊರಗಡೆ ಹೋಗಿದ್ದ ವೇಳೆ ವಿಷ ಸೇವಿಸಿದ್ದಾಳೆ.

ಕೆಲ ಹೊತ್ತಿನ ಬಳಿಕ ವಾಂತಿ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಬರುತ್ತಿರುವ ವೇಳೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾನಮತ್ತ ಲಾರಿ ಚಾಲಕನಿಗೆ ಶಿಕ್ಷೆ: ಪಾನಮತ್ತನಾಗಿ ಲಾರಿ ಚಾಲನೆ ಮಾಡಿ ಅಪಘಾತಕ್ಕೆ ಕಾರಣನಾಗಿದ್ದ ಆರೋಪಿ ಚಾಲಕನಿಗೆ ಅಂಕೋಲಾ ನ್ಯಾಯಾಲಯ 6 ಸಾವಿರ ರೂ. ದಂಡ ವಿಧಿಸಿದೆ. ಅಂಕೋಲಾ ತಾಲೂಕಿನ ಅಗಸೂರು ಬಳಿ ಲಾರಿ-ಲಾರಿಗಳ ನಡುವೆ ಅಪಘಾತ ಸಂಭವಿಸಲು ಪಾನಮತ್ತನಾಗಿ ಲಾರಿ ಚಲಾಯಿಸಿದ್ದ ನಾಮದೇವ ಗೋವಿಂದ ಎಂಬಾತ ಕಾರಣನಾಗಿದ್ದ. ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ. ಅಲ್ಲದೆ ಮದ್ಯಪಾನ ಮಾಡಿ ಚಾಲನೆ ಮಾಡಿದ್ದಕ್ಕಾಗಿ ಆರೋಪಿಯ ಚಾಲನಾ ಪರವಾನಿಗೆ (ಡಿಎಲ್)ಯನ್ನು ಅಮಾನತು ಮಾಡಲು ಆರ್‌ಟಿಓ ಅವರಿಗೆ ಶಿಫಾರಸ್ಸು ಮಾಡಿದೆ ಎಂದು ಪೊಲೀಸ್ ನಿರೀಕ್ಷಕ ಜಾಕ್ಸನ್ ಡಿಸೋಜಾ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಲ್ಲಿ ಎರಡು ಪ್ರತ್ಯೇಕ ಪ್ರಕರಣ: ಗಾಂಜಾ ಚರಸ್ ಮಾರಾಟದಲ್ಲಿ ತೊಡಗಿದ್ದ ನಾಲ್ವರ ಬಂಧನ: ಅಪಾರ ಮೌಲ್ಯದ ವಸ್ತು ವಶ

ಕಾರವಾರ: ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಗೋಕರ್ಣದಲ್ಲಿ ನಡೆದಿದೆ. ಇಲ್ಲಿನ ಬೇಲೆಹಿತ್ತಲ ನಿವಾಸಿ ತುಳುಸು ಗೌಡ, ಮೂಲೇಕೇರಿ ನಿವಾಸಿ ಶ್ರೀಧರ ಗೌಡ ಹಾಗೂ ಮೂಲತಃ ನೇಪಾಳದ ಸದ್ಯ ಕುಡ್ಲೆ ನಿವಾಸಿ ಸಂತ ಬದ್ದೂರ್ ಬಂಧಿತರು.

ಈ ಮೂವರು ಓಂ ಬೀಚ್ ರಸ್ತೆಯಲ್ಲಿ ಮಾದಕ ವಸ್ತು ಚರಸ್ ಇರಿಸಿಕೊಂಡು ವಿದೇಶಿಗರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಸಿಪಿಐ ಮಂಜುನಾಥ ಎಂ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದೆ. ಆರೋಪಿಗಳಿಂದ ಸುಮಾರು 10 ಲಕ್ಷ ಮೌಲ್ಯದ 1 ಕೆ.ಜಿ 648 ಗ್ರಾಂ ಚರಸ್‌ ವಶಕ್ಕೆ ಪಡೆಯಲಾಗಿದೆ. ಕುಡ್ಲೆ ನಿವಾಸಿ ಸಂತ ಬದ್ದೂರ್ ಕಳೆದ 17 ವರ್ಷಗಳ ಹಿಂದೆ ನೇಪಾಳದಿಂದ ಆಗಮಿಸಿ ಕುಡ್ಲೆಯಲ್ಲಿ ವಾಸವಿದ್ದಾನೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿಚಾರಣೆ ಮುಂದುವರೆದಿದೆ.

Karwar
ಬಂಧಿತ ಆರೋಪಿಗಳು

ಅಡಿಕೆ ಕಳ್ಳರ ಬಂಧನ: ಯಲ್ಲಾಪುರ ಪಟ್ಟಣದ ಹೊರವಲಯದಲ್ಲಿರುವ ಸವಣಗೇರಿಯ ದುರ್ಗಾಂಬಾ ಸೇಲ್ಸ್ ವಕಾರಿಯಿಂದ ಅಡಕೆ ಕದ್ದ ಆರೋಪದಡಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕುಮಟಾ ತಾಲೂಕಿನ ಮಾಸೂರಿನ ಮಹೇಶ ಈರಾ ಗೌಡ, ಯಲ್ಲಾಪುರದ ಇಸ್ಲಾಂ ಗಲ್ಲಿಯ ಸಫ್ರಾಜ್ ಅಬ್ದುಲ್‌ ಸಾಬ ಬಡಗಿ, ಉದ್ಯಮ ನಗರದ ಪರಶುರಾಮ ಬಾಬು ಕಾಂಬಳೆ, ಕುಮಟಾ ತಾಲೂಕಿನ ಹೊಸೇರಿಯ ಶಶಿಧರ ಲಿಂಗಪ್ಪ ಪಟಗಾರ, ಹರೀಶ ಮಾರಪ್ಪ ಪಟಗಾರ, ನವೀನ ಶ್ರೀಪಾದ ಪಟಗಾರ ಬಂಧಿತರಾಗಿದ್ದಾರೆ.

ಇವರು ಮಾ.13 ರಂದು ರಾತ್ರಿ ಸವಣಗೇರಿಯ ದುರ್ಗಾಂಬಾ ಸೇಲ್ ವಕಾರಿಯ ಮೇಲ್ಛಾವಣಿಯನ್ನು ತೆಗೆದು ಒಳನುಗ್ಗಿ 4 ಕ್ವಿಂಟಲ್ ಚಾಲಿ ಅಡಕೆ ಹಾಗೂ 80 ಕೆ.ಜಿ ಕೆಂಪು ಅಡಕೆ ಸೇರಿ ಒಟ್ಟು 1.45 ಲಕ್ಷ ರೂ ಮೌಲ್ಯದ ಅಡಕೆ ಕಳವು ಮಾಡಿದ್ದರು. ಈ ಕುರಿತು ವಕಾರಿಯ ಮಾಲೀಕ ಗಣೇಶ ಭಟ್​ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಕಳ್ಳತನ ಮಾಡಿದ 4 ಕ್ವಿಂಟಲ್ ಅಡಿಕೆ, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಕಳ್ಳತನ ಮಾಡಿರುವುದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ವಿದ್ಯಾರ್ಥಿನಿ ಆತ್ಮಹತ್ಯೆ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಕೋಲಾ ತಾಲೂಕಿನ ಬೆಳಂಬಾರದಲ್ಲಿ ನಡೆದಿದೆ. ತಾಳೇಬೈಲಿನ ನಿವಾಸಿ ಶಿಲ್ಪಾ ಗೌಡ (17) ಮೃತ ವಿದ್ಯಾರ್ಥಿನಿ. ಈಕೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮಾ.9 ರಿಂದ ಆರಂಭವಾಗಿರುವ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಆರಂಭದ ಎರಡು ವಿಷಯಗಳ ಪರೀಕ್ಷೆ ಎದುರಿಸಿದ್ದ ಈಕೆ, ಬುಧವಾರ ಬೆಳಗ್ಗೆ ಪಾಲಕರು ಎಂದಿನಂತೆ ಕೂಲಿ ಕೆಲಸಕ್ಕೆ ಮನೆಯಿಂದ ಹೊರಗಡೆ ಹೋಗಿದ್ದ ವೇಳೆ ವಿಷ ಸೇವಿಸಿದ್ದಾಳೆ.

ಕೆಲ ಹೊತ್ತಿನ ಬಳಿಕ ವಾಂತಿ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಬರುತ್ತಿರುವ ವೇಳೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾನಮತ್ತ ಲಾರಿ ಚಾಲಕನಿಗೆ ಶಿಕ್ಷೆ: ಪಾನಮತ್ತನಾಗಿ ಲಾರಿ ಚಾಲನೆ ಮಾಡಿ ಅಪಘಾತಕ್ಕೆ ಕಾರಣನಾಗಿದ್ದ ಆರೋಪಿ ಚಾಲಕನಿಗೆ ಅಂಕೋಲಾ ನ್ಯಾಯಾಲಯ 6 ಸಾವಿರ ರೂ. ದಂಡ ವಿಧಿಸಿದೆ. ಅಂಕೋಲಾ ತಾಲೂಕಿನ ಅಗಸೂರು ಬಳಿ ಲಾರಿ-ಲಾರಿಗಳ ನಡುವೆ ಅಪಘಾತ ಸಂಭವಿಸಲು ಪಾನಮತ್ತನಾಗಿ ಲಾರಿ ಚಲಾಯಿಸಿದ್ದ ನಾಮದೇವ ಗೋವಿಂದ ಎಂಬಾತ ಕಾರಣನಾಗಿದ್ದ. ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ. ಅಲ್ಲದೆ ಮದ್ಯಪಾನ ಮಾಡಿ ಚಾಲನೆ ಮಾಡಿದ್ದಕ್ಕಾಗಿ ಆರೋಪಿಯ ಚಾಲನಾ ಪರವಾನಿಗೆ (ಡಿಎಲ್)ಯನ್ನು ಅಮಾನತು ಮಾಡಲು ಆರ್‌ಟಿಓ ಅವರಿಗೆ ಶಿಫಾರಸ್ಸು ಮಾಡಿದೆ ಎಂದು ಪೊಲೀಸ್ ನಿರೀಕ್ಷಕ ಜಾಕ್ಸನ್ ಡಿಸೋಜಾ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಲ್ಲಿ ಎರಡು ಪ್ರತ್ಯೇಕ ಪ್ರಕರಣ: ಗಾಂಜಾ ಚರಸ್ ಮಾರಾಟದಲ್ಲಿ ತೊಡಗಿದ್ದ ನಾಲ್ವರ ಬಂಧನ: ಅಪಾರ ಮೌಲ್ಯದ ವಸ್ತು ವಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.