ETV Bharat / state

ಕೊನೆಗೂ ಬೋನಿಗೆ ಬಿದ್ದ ಹುಲಿ: ನಿಟ್ಟುಸಿರು ಬಿಟ್ಟ ಜೋಯಿಡಾ ಜನ!

author img

By

Published : Dec 20, 2022, 6:45 AM IST

ಕಳೆದ ಒಂದು ವಾರದಲ್ಲಿ ಜೋಯಿಡಾ ತಾಲೂಕಿನ ಉಳವಿ ಗ್ರಾಮ ವ್ಯಾಪ್ತಿಯಲ್ಲಿ 10 ದನಗಳನ್ನು ಬೇಟೆಯಾಡಿದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.

tiger trapped in cage
10 ದನಗಳನ್ನು ಬೇಟೆಯಾಡಿದ ಹುಲಿ ಸೆರೆ

ಕಾರವಾರ(ಉತ್ತರ ಕನ್ನಡ): ಜೋಯಿಡಾ ತಾಲೂಕಿನ ಉಳವಿ ಗ್ರಾಮದ ವ್ಯಾಪ್ತಿಯಲ್ಲಿ 10 ದನಗಳನ್ನು ಬೇಟೆಯಾಡಿ ಆತಂಕ ಸೃಷ್ಟಿಸಿದ್ದ ಹುಲಿಯನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದು, ಹಂಪಿ ಮೃಗಾಲಯಕ್ಕೆ ಸ್ಥಳಾಂತರ ಮಾಡಿದ್ದಾರೆ. ಕಳೆದ ಒಂದು ವಾರದಿಂದ ಹುಲಿ ದಾಳಿಯಿಂದ ತತ್ತರಿಸಿದ್ದ ಜನತೆ ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಪ್ರತಿ ದಿನವೂ ಎರಡು ಮೂರು ದನ ಕರುಗಳನ್ನು ಬೇಟೆಯಾಡುತ್ತಿದ್ದ ಹುಲಿ ಸದ್ಯ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.

ಚಂದ್ರಾಳಿ, ಹೆಣಕೋಳ ಬಳಿ 3 ದನಗಳನ್ನು ಮತ್ತು ಮೆಳೆಯಲ್ಲಿ ಮೂರು ಎತ್ತುಗಳನ್ನು ಹುಲಿ ಬೇಟೆಯಾಡಿತ್ತು. ಸೆರೆ ಹಿಡಿದ ಹುಲಿಗೆ ವಯಸ್ಸಾದ ಕಾರಣ ಕೊಟ್ಟಿಗೆಯೊಳಗೆ ಕಟ್ಟಿದ ದನಗಳನ್ನೇ ಬಂದು ಹಿಡಿಯುತ್ತಿತ್ತು ಎನ್ನಲಾಗಿದೆ. ಹುಲಿ ದಾಳಿಯಿಂದ ದನಗಳನ್ನು ಸಾಯುತ್ತಿದ್ದ ಕಾರಣ ಸ್ಥಳೀಯರು ಅರಣ್ಯ ಇಲಾಖೆ ಮೇಲೆ ಕಿಡಿಕಾರುತ್ತಿದ್ದರು. ಶಾಸಕ ಆರ್.ವಿ.ದೇಶಪಾಂಡೆ, ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೂ ಹುಲಿ ಸೆರೆಹಿಡಿದು ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದರು.

ಕೂಡಲೇ ಈ ಬಗ್ಗೆ ಕಾರ್ಯಪ್ರರ್ವತರಾದ ಅರಣ್ಯ ಇಲಾಖೆ ಅಧಿಕಾರಿಗಳು ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಡಿಸಿಎಪ್ ಮಾರಿಯೋ ಕ್ರಿಸ್ತರಾಜ ಮಾರ್ಗದರ್ಶನದಲ್ಲಿ ಹುಲಿಗೆ ಆಹಾರವನ್ನು ಬೋನಿನೊಳಗೆ ಇಟ್ಟು ಕೊನೆಗೂ ಹುಲಿಯನ್ನು ಸೆರೆ ಹಿಡಿದಿದ್ದಾರೆ. ಸದ್ಯ ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಾಯದಿಂದ ಹುಲಿಯನ್ನು ಸೆರೆಹಿಡಿದು ಸ್ಥಳಾಂತರ ಮಾಡಿದ್ದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಉಳುವಿ ಗ್ರಾ.ಪಂ ಉಪಾಧ್ಯಕ್ಷ ಮಂಜುನಾಥ ಮೊಕಾಶಿ ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಜನತೆ

ಕಾರವಾರ(ಉತ್ತರ ಕನ್ನಡ): ಜೋಯಿಡಾ ತಾಲೂಕಿನ ಉಳವಿ ಗ್ರಾಮದ ವ್ಯಾಪ್ತಿಯಲ್ಲಿ 10 ದನಗಳನ್ನು ಬೇಟೆಯಾಡಿ ಆತಂಕ ಸೃಷ್ಟಿಸಿದ್ದ ಹುಲಿಯನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದು, ಹಂಪಿ ಮೃಗಾಲಯಕ್ಕೆ ಸ್ಥಳಾಂತರ ಮಾಡಿದ್ದಾರೆ. ಕಳೆದ ಒಂದು ವಾರದಿಂದ ಹುಲಿ ದಾಳಿಯಿಂದ ತತ್ತರಿಸಿದ್ದ ಜನತೆ ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಪ್ರತಿ ದಿನವೂ ಎರಡು ಮೂರು ದನ ಕರುಗಳನ್ನು ಬೇಟೆಯಾಡುತ್ತಿದ್ದ ಹುಲಿ ಸದ್ಯ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.

ಚಂದ್ರಾಳಿ, ಹೆಣಕೋಳ ಬಳಿ 3 ದನಗಳನ್ನು ಮತ್ತು ಮೆಳೆಯಲ್ಲಿ ಮೂರು ಎತ್ತುಗಳನ್ನು ಹುಲಿ ಬೇಟೆಯಾಡಿತ್ತು. ಸೆರೆ ಹಿಡಿದ ಹುಲಿಗೆ ವಯಸ್ಸಾದ ಕಾರಣ ಕೊಟ್ಟಿಗೆಯೊಳಗೆ ಕಟ್ಟಿದ ದನಗಳನ್ನೇ ಬಂದು ಹಿಡಿಯುತ್ತಿತ್ತು ಎನ್ನಲಾಗಿದೆ. ಹುಲಿ ದಾಳಿಯಿಂದ ದನಗಳನ್ನು ಸಾಯುತ್ತಿದ್ದ ಕಾರಣ ಸ್ಥಳೀಯರು ಅರಣ್ಯ ಇಲಾಖೆ ಮೇಲೆ ಕಿಡಿಕಾರುತ್ತಿದ್ದರು. ಶಾಸಕ ಆರ್.ವಿ.ದೇಶಪಾಂಡೆ, ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೂ ಹುಲಿ ಸೆರೆಹಿಡಿದು ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದರು.

ಕೂಡಲೇ ಈ ಬಗ್ಗೆ ಕಾರ್ಯಪ್ರರ್ವತರಾದ ಅರಣ್ಯ ಇಲಾಖೆ ಅಧಿಕಾರಿಗಳು ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಡಿಸಿಎಪ್ ಮಾರಿಯೋ ಕ್ರಿಸ್ತರಾಜ ಮಾರ್ಗದರ್ಶನದಲ್ಲಿ ಹುಲಿಗೆ ಆಹಾರವನ್ನು ಬೋನಿನೊಳಗೆ ಇಟ್ಟು ಕೊನೆಗೂ ಹುಲಿಯನ್ನು ಸೆರೆ ಹಿಡಿದಿದ್ದಾರೆ. ಸದ್ಯ ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಾಯದಿಂದ ಹುಲಿಯನ್ನು ಸೆರೆಹಿಡಿದು ಸ್ಥಳಾಂತರ ಮಾಡಿದ್ದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಉಳುವಿ ಗ್ರಾ.ಪಂ ಉಪಾಧ್ಯಕ್ಷ ಮಂಜುನಾಥ ಮೊಕಾಶಿ ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಜನತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.