ETV Bharat / state

ಕರುನಾಡಿನ ಮತ್ತೊಬ್ಬ ವೃಕ್ಷ ಮಾತೆಗೆ ಲಭಿಸಿತು ಪದ್ಮಶ್ರೀ ಪ್ರಶಸ್ತಿ!

ಗಿಡಗಳನ್ನು ತನ್ನ ಮಕ್ಕಳಂತೆ ಬೆಳಸಿ ವೃಕ್ಷ ಮಾತೆ ಎಂದೇ  ಹೆಸರು ಗಿಟ್ಟಿಸಿಕೊಂಡಿರುವ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳುಸಿ ಗೌಡ ಅವರಿಗೆ ಪದ್ಮಶ್ರೀ ಗರಿ ಲಭಿಸಿದೆ.

author img

By

Published : Jan 25, 2020, 9:23 PM IST

Updated : Jan 25, 2020, 9:33 PM IST

tulasi gowda awarded padmashree
ಕರುನಾಡಿನ ಮತ್ತೊಬ್ಬ ವೃಕ್ಷ ಮಾತೆಗೆ ಲಭಿಸಿತು ಪದ್ಮಶ್ರೀ ಪ್ರಶಸ್ತಿ!

ಕಾರವಾರ: ಚಿಕ್ಕ ವಯಸ್ಸಿನಿಂದಲೇ ಗಿಡಗಳನ್ನು ತನ್ನ ಮಕ್ಕಳಂತೆ ಬೆಳಸಿ ವೃಕ್ಷ ಮಾತೆ ಎಂದೇ ಹೆಸರು ಗಿಟ್ಟಿಸಿಕೊಂಡಿರುವ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳುಸಿ ಗೌಡ ಅವರಿಗೆ ಪದ್ಮಶ್ರೀ ಗರಿ ಲಭಿಸಿದೆ.

tulasi gowda awarded padmashree
ತುಳುಸಿ ಗೌಡ

ಸಾಲುಮರದ ತಿಮ್ಮಕ್ಕನಂತೆ ಚಿಕ್ಕವಯಸ್ಸಿನಿಂದಲೇ ಗಿಡಗಳನ್ನು ಮಕ್ಕಳಂತೆ ಬೆಳಸಿದ ಬಡ ಮಹಿಳೆಗೆ ದೇಶದ ಪ್ರತಿಷ್ಠಿತ ಪದ್ಮಶ್ರಿ ಪ್ರಶಸ್ತಿ ದೊರೆತಿರುವುದು ಜಿಲ್ಲೆಗೆ ಹೆಮ್ಮೆ ತಂದಿದೆ. 1944ರಲ್ಲಿ ಹೊನ್ನಳ್ಳಿಯಲ್ಲಿ ನಾರಾಯಣ ಹಾಗೂ ನೀಲಿ ದಂಪತಿಗೆ ಜನಿಸಿದ ತುಳುಸಿ ಗೌಡ ಹುಟ್ಟಿನಿಂದಲೂ ಬಡತನದಲ್ಲಿಯೇ ಬೆಳೆದರು. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡ ತುಳಸಿ ಗೌಡ, ಶಾಲೆಯ ಮುಖ ನೋಡಿದವರಲ್ಲ. ತಾಯಿಯೊಂದಿಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಈಕೆ, ಬಳಿಕ ಗೋವಿಂದೇ ಗೌಡ ಎಂಬಾತರನ್ನು ವಿವಾಹವಾಗಿ ಚಿಕ್ಕ ವಯಸ್ಸಿನಲ್ಲಿಯೇ ಪತಿಯನ್ನು ಕಳೆದುಕೊಂಡರು.

tulasi gowda awarded padmashree
ತುಳುಸಿ ಗೌಡ

ಹೀಗೆ ಕಷ್ಟದ ಜೀವನ ಎದುರಿಸಿ ಕಟ್ಟಿಗೆ ಮಾರಾಟ ಮಾಡಿ ಜೀವನ ಸಾಗಿಸಿದ್ದಾರೆ. ಕಾಡಿನಲ್ಲಿ ಕಟ್ಟಿಗೆ ತರುವ ವೇಳೆ ಸಿಗುವ ಬೀಜಗಳನ್ನು ತಂದು ಸಸಿ ಮಾಡಿ ತಮ್ಮ ಸುತ್ತ ಮುತ್ತಲ ಪ್ರದೇಶದಲ್ಲಿ ನೆಡುತ್ತಿದ್ದರು. ಇದನ್ನು ಗಮನಿಸಿದ ಅರಣ್ಯ ಇಲಾಖೆ ಬೀಜಗಳನ್ನು ಶೇಖರಣೆ ಮಾಡಿ ಸಸಿಗಳನ್ನು ಮಾಡಿ ಕೊಡುವ ಕೆಲಸವನ್ನು ಇವರಿಗೆ ನೀಡಿತು. ಅದರಂತೆ ತಾನು ಬೆಳೆಸಿದ ಸಸಿಗಳನ್ನು ಹೊನ್ನಳ್ಳಿ ಭಾಗದ ಅರಣ್ಯ ಪ್ರದೇಶದಲ್ಲಿ, ಸರ್ಕಾರಿ ಕಚೇರಿ, ಶಾಲೆ, ಮನೆಗಳ ಆವರಣ, ರಸ್ತೆಗಳ ಪಕ್ಕದಲ್ಲಿ ನೆಡಲು ಪ್ರಾರಂಭಿಸಿದರು. ವರ್ಷಕ್ಕೆ 30 ಸಾವಿರ ಸಸಿಗಳನ್ನು ನೆಡುತ್ತಿದ್ದು, ಇಂದು ಲಕ್ಷಾಂತರ ಮರಗಳು ಹೆಮ್ಮರವಾಗಿ ನಿಂತಿವೆ.

tulasi gowda awarded padmashree
ತುಳುಸಿ ಗೌಡ

ಇವರ ಪರಿಸರದ ಮೇಲಿನ ಕಾಳಜಿ ನೋಡಿ ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಗಿಡಗಳನ್ನು ಪೋಷಿಸುವ ಕೆಲಸ ನೀಡಲಾಗಿತ್ತು. ತುಳಸಿ ಗೌಡರ ಪರಿಸರ ಪ್ರೀತಿಗೆ ಇವರನ್ನು 'ಮರಗಳ ವಿಜ್ಞಾನಿ' ಎಂದೇ ಬಣ್ಣಿಸಲಾಗುತ್ತದೆ. ಯಾವ ಯಾವ ಗಿಡಗಳನ್ನು ಯಾವ ಯಾವ ಖುತುವಿನಲ್ಲಿ ನೆಡಬೇಕು, ಎಷ್ಟು ನೀರು, ಗೊಬ್ಬರ ಕೊಡಬೇಕು, ಯಾವ ಗಿಡಗಳು ಯಾವ ಸಂದರ್ಭದಲ್ಲಿ ಹೂವು ಹಣ್ಣು ಬಿಡುತ್ತದೆ ಎಂಬ ಮಾಹಿತಿ ಇವರ ಜ್ಞಾನ ಭಂಡಾರದಲ್ಲಿದೆ. ಇನ್ನು 300ಕ್ಕೂ ಹೆಚ್ಚು ಪ್ರಬೇಧದ ಮರಗಳು ಇವರಿಗೆ ಚಿರ ಪರಿಚಿತ.

ಕರುನಾಡಿನ ಮತ್ತೊಬ್ಬ ವೃಕ್ಷ ಮಾತೆಗೆ ಲಭಿಸಿತು ಪದ್ಮಶ್ರೀ ಪ್ರಶಸ್ತಿ!

ಇಂತಹ ವೃಕ್ಷಮಾತೆಗೆ ಕೇಂದ್ರ ಸರ್ಕಾರ ನೀಡುವ ಪ್ರತಿಷ್ಟಿತ ಪದ್ಮಶ್ರೀ ಪ್ರಶಸ್ತಿ ದೊರೆತಿದೆ. ಇದು ಕಾರವಾರ ಜಿಲ್ಲೆಗೆ ಮಾತ್ರವಲ್ಲದೆ, ರಾಜ್ಯಕ್ಕೆ ಹೆಮ್ಮೆ ತಂದಿದೆ. ಹಾಲಕ್ಕಿ ಸಮುದಾಯದ ಜಾನಪದ ಕೋಗಿಲೆ ಸುಕ್ರಿ ಬೊಮ್ಮ ಗೌಡರ ಬಳಿಕ ತುಳುಸಿ ಗೌಡಗೆ ಪದ್ಮಶ್ರೀ ಪ್ರಶಸ್ತಿ ದೊರಕುತ್ತಿರುವುದು ಹುಟ್ಟೂರಿನಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.

ತುಳಸಿಗೌಡರಿಗೆ ಈ ಹಿಂದೆ ಇಂದಿರಾ ಪ್ರೀಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ ಲಭಿಸಿತ್ತು. ಅಂದಿನ ಪ್ರಧಾನಿ ವಿ.ಪಿ. ಸಿಂಗ್ ರಿಂದ ಪ್ರಶಸ್ತಿ ಪಡೆಯುವ ಮೂಲಕ ಹಾಲಕ್ಕಿ ಸಮುದಾಯದ ಮಹಿಳೆ ದೇಶದ ಗಮನ ಸೆಳೆದಿದ್ದರು.

ಕಾರವಾರ: ಚಿಕ್ಕ ವಯಸ್ಸಿನಿಂದಲೇ ಗಿಡಗಳನ್ನು ತನ್ನ ಮಕ್ಕಳಂತೆ ಬೆಳಸಿ ವೃಕ್ಷ ಮಾತೆ ಎಂದೇ ಹೆಸರು ಗಿಟ್ಟಿಸಿಕೊಂಡಿರುವ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳುಸಿ ಗೌಡ ಅವರಿಗೆ ಪದ್ಮಶ್ರೀ ಗರಿ ಲಭಿಸಿದೆ.

tulasi gowda awarded padmashree
ತುಳುಸಿ ಗೌಡ

ಸಾಲುಮರದ ತಿಮ್ಮಕ್ಕನಂತೆ ಚಿಕ್ಕವಯಸ್ಸಿನಿಂದಲೇ ಗಿಡಗಳನ್ನು ಮಕ್ಕಳಂತೆ ಬೆಳಸಿದ ಬಡ ಮಹಿಳೆಗೆ ದೇಶದ ಪ್ರತಿಷ್ಠಿತ ಪದ್ಮಶ್ರಿ ಪ್ರಶಸ್ತಿ ದೊರೆತಿರುವುದು ಜಿಲ್ಲೆಗೆ ಹೆಮ್ಮೆ ತಂದಿದೆ. 1944ರಲ್ಲಿ ಹೊನ್ನಳ್ಳಿಯಲ್ಲಿ ನಾರಾಯಣ ಹಾಗೂ ನೀಲಿ ದಂಪತಿಗೆ ಜನಿಸಿದ ತುಳುಸಿ ಗೌಡ ಹುಟ್ಟಿನಿಂದಲೂ ಬಡತನದಲ್ಲಿಯೇ ಬೆಳೆದರು. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡ ತುಳಸಿ ಗೌಡ, ಶಾಲೆಯ ಮುಖ ನೋಡಿದವರಲ್ಲ. ತಾಯಿಯೊಂದಿಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಈಕೆ, ಬಳಿಕ ಗೋವಿಂದೇ ಗೌಡ ಎಂಬಾತರನ್ನು ವಿವಾಹವಾಗಿ ಚಿಕ್ಕ ವಯಸ್ಸಿನಲ್ಲಿಯೇ ಪತಿಯನ್ನು ಕಳೆದುಕೊಂಡರು.

tulasi gowda awarded padmashree
ತುಳುಸಿ ಗೌಡ

ಹೀಗೆ ಕಷ್ಟದ ಜೀವನ ಎದುರಿಸಿ ಕಟ್ಟಿಗೆ ಮಾರಾಟ ಮಾಡಿ ಜೀವನ ಸಾಗಿಸಿದ್ದಾರೆ. ಕಾಡಿನಲ್ಲಿ ಕಟ್ಟಿಗೆ ತರುವ ವೇಳೆ ಸಿಗುವ ಬೀಜಗಳನ್ನು ತಂದು ಸಸಿ ಮಾಡಿ ತಮ್ಮ ಸುತ್ತ ಮುತ್ತಲ ಪ್ರದೇಶದಲ್ಲಿ ನೆಡುತ್ತಿದ್ದರು. ಇದನ್ನು ಗಮನಿಸಿದ ಅರಣ್ಯ ಇಲಾಖೆ ಬೀಜಗಳನ್ನು ಶೇಖರಣೆ ಮಾಡಿ ಸಸಿಗಳನ್ನು ಮಾಡಿ ಕೊಡುವ ಕೆಲಸವನ್ನು ಇವರಿಗೆ ನೀಡಿತು. ಅದರಂತೆ ತಾನು ಬೆಳೆಸಿದ ಸಸಿಗಳನ್ನು ಹೊನ್ನಳ್ಳಿ ಭಾಗದ ಅರಣ್ಯ ಪ್ರದೇಶದಲ್ಲಿ, ಸರ್ಕಾರಿ ಕಚೇರಿ, ಶಾಲೆ, ಮನೆಗಳ ಆವರಣ, ರಸ್ತೆಗಳ ಪಕ್ಕದಲ್ಲಿ ನೆಡಲು ಪ್ರಾರಂಭಿಸಿದರು. ವರ್ಷಕ್ಕೆ 30 ಸಾವಿರ ಸಸಿಗಳನ್ನು ನೆಡುತ್ತಿದ್ದು, ಇಂದು ಲಕ್ಷಾಂತರ ಮರಗಳು ಹೆಮ್ಮರವಾಗಿ ನಿಂತಿವೆ.

tulasi gowda awarded padmashree
ತುಳುಸಿ ಗೌಡ

ಇವರ ಪರಿಸರದ ಮೇಲಿನ ಕಾಳಜಿ ನೋಡಿ ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಗಿಡಗಳನ್ನು ಪೋಷಿಸುವ ಕೆಲಸ ನೀಡಲಾಗಿತ್ತು. ತುಳಸಿ ಗೌಡರ ಪರಿಸರ ಪ್ರೀತಿಗೆ ಇವರನ್ನು 'ಮರಗಳ ವಿಜ್ಞಾನಿ' ಎಂದೇ ಬಣ್ಣಿಸಲಾಗುತ್ತದೆ. ಯಾವ ಯಾವ ಗಿಡಗಳನ್ನು ಯಾವ ಯಾವ ಖುತುವಿನಲ್ಲಿ ನೆಡಬೇಕು, ಎಷ್ಟು ನೀರು, ಗೊಬ್ಬರ ಕೊಡಬೇಕು, ಯಾವ ಗಿಡಗಳು ಯಾವ ಸಂದರ್ಭದಲ್ಲಿ ಹೂವು ಹಣ್ಣು ಬಿಡುತ್ತದೆ ಎಂಬ ಮಾಹಿತಿ ಇವರ ಜ್ಞಾನ ಭಂಡಾರದಲ್ಲಿದೆ. ಇನ್ನು 300ಕ್ಕೂ ಹೆಚ್ಚು ಪ್ರಬೇಧದ ಮರಗಳು ಇವರಿಗೆ ಚಿರ ಪರಿಚಿತ.

ಕರುನಾಡಿನ ಮತ್ತೊಬ್ಬ ವೃಕ್ಷ ಮಾತೆಗೆ ಲಭಿಸಿತು ಪದ್ಮಶ್ರೀ ಪ್ರಶಸ್ತಿ!

ಇಂತಹ ವೃಕ್ಷಮಾತೆಗೆ ಕೇಂದ್ರ ಸರ್ಕಾರ ನೀಡುವ ಪ್ರತಿಷ್ಟಿತ ಪದ್ಮಶ್ರೀ ಪ್ರಶಸ್ತಿ ದೊರೆತಿದೆ. ಇದು ಕಾರವಾರ ಜಿಲ್ಲೆಗೆ ಮಾತ್ರವಲ್ಲದೆ, ರಾಜ್ಯಕ್ಕೆ ಹೆಮ್ಮೆ ತಂದಿದೆ. ಹಾಲಕ್ಕಿ ಸಮುದಾಯದ ಜಾನಪದ ಕೋಗಿಲೆ ಸುಕ್ರಿ ಬೊಮ್ಮ ಗೌಡರ ಬಳಿಕ ತುಳುಸಿ ಗೌಡಗೆ ಪದ್ಮಶ್ರೀ ಪ್ರಶಸ್ತಿ ದೊರಕುತ್ತಿರುವುದು ಹುಟ್ಟೂರಿನಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.

ತುಳಸಿಗೌಡರಿಗೆ ಈ ಹಿಂದೆ ಇಂದಿರಾ ಪ್ರೀಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ ಲಭಿಸಿತ್ತು. ಅಂದಿನ ಪ್ರಧಾನಿ ವಿ.ಪಿ. ಸಿಂಗ್ ರಿಂದ ಪ್ರಶಸ್ತಿ ಪಡೆಯುವ ಮೂಲಕ ಹಾಲಕ್ಕಿ ಸಮುದಾಯದ ಮಹಿಳೆ ದೇಶದ ಗಮನ ಸೆಳೆದಿದ್ದರು.

Intro:Body:
ಕಾರವಾರ: ಚಿಕ್ಕ ವಯಸ್ಸಿನಿಂದಲೇ ಗಿಡಗಳನ್ನು ಮಕ್ಕಳಂತೆ ಬೆಳಸಿ ವೃಕ್ಷ ಮಾತೆಯಾಗಿದ್ದ ಉತ್ತರಕನ್ನಡ ಜಿಲ್ಲೆಯ ಬಡ ಮಹಿಳೆಯೋರ್ವಳಿಗೆ ಪದ್ಮಶ್ರೀ ಗರಿ ಲಭಿಸಿದೆ.
ಹೌದು, ಅಂಕೋಲಾ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ ಹಾಲಕ್ಕಿ ಸಮುದಾಯದ ತುಳುಸಿ ಗೌಡ ದೇಶದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಪಾತ್ರವಾದ ಮಹಿಳೆ. ಸಾಲುಮರದ ತಿಮ್ಮಕ್ಕನಂತೆ ಚಿಕ್ಕವಯಸ್ಸಿನಿಂದಲೇ ಗಿಡಗಳನ್ನು ಮಕ್ಕಳಂತೆ ಬೆಳಸಿದ ಬಡ ಮಹಿಳೆಗೆ ದೇಶದ ಪ್ರತಿಷ್ಠಿತ ಪದ್ಮಶ್ರಿ ಪ್ರಶಸ್ತಿ ದೊರೆತಿರಯವುದು ಜಿಲ್ಲೆಗೆ ಹೆಮ್ಮೆ ತಂದಿದೆ.
೧೯೪೪ ರಲ್ಲಿ ಹೊನ್ನಳ್ಳಿಯಲ್ಲಿ ನಾರಾಯಣ ಹಾಗೂ ನೀಲಿ ದಂಪತಿಗಳಿಗೆ ಜನಿಸಿದ ತುಳುಸಿ ಗೌಡ ಬಡ ಕುಟುಂಬದವರು. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡು ಶಾಲೆಯನ್ನು ನೋಡದೆ ತಾಯಿಯೊಂದಿಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಬಳಿಕ ಗೋವಿಂದೇ ಗೌಡ ಎಂಬಾತರನ್ನು ವಿವಾಹವಾಗಿ ಚಿಕ್ಕ ವಯಸ್ಸಿನಲ್ಲಿಯೇ ಪತಿಯನ್ನು ಕಳೆದುಕೊಂಡರು. ಹೀಗೆ ಕಷ್ಟದ ಮೇಲೆ ಕಷ್ಟ ಎದುರಾದರೂ ಕಟ್ಟಿಗೆ ತಂದು ಮಾರಾಟ ಮಾಡಿ ಜೀವನ ನಡೆಸುತ್ತಿದ್ದರು. ಈ ವೇಳೆ ಕಾಡಿನಲ್ಲಿ ಸಿಗುವ ಬೀಜಗಳನ್ನು ತಂದು ಶಶಿ ಮಾಡುತ್ತಿದ್ದ ಈಕೆ ಸುತ್ತಮುತ್ತಲಿನ ಪರಿಸರದಲ್ಲಿ ಅವುಗಳನ್ನು ಬೆಳಸತೊಡಗಿದ್ದಳು.
ಬಳಿಕ ಇದನ್ನು ಗಮನಿಸಿದ ಅರಣ್ಯ ಇಲಾಖೆಯವರು ಬೀಜಗಳನ್ನು ಶೇಖರಣೆ ಮಾಡಿ ಸಸಿಗಳನ್ನಾಗಿ ಮಾಡಿಕೊಡುವ ಕೆಲಸವನ್ನು ನೀಡಿದ್ದರು. ಅದರಂತೆ ತಾನು ಬೆಳೆಸಿದ ಸಸಿಗಳನ್ನು ಹೊನ್ನಳ್ಳಿ ಭಾಗದ ಅರಣ್ಯ ಪ್ರದೇಶದಲ್ಲಿ, ಸರ್ಕಾರಿ ಕಚೇರಿ, ಶಾಲೆ, ಮನೆಗಳ ಆವರಣ, ರಸ್ತೆಗಳ ಪಕ್ಕದಲ್ಲಿ ನೆಡಲು ಪ್ರಾರಂಭಿಸಿದರು. ವರ್ಷಕ್ಕೆ ೩೦ ಸಾವಿರ ಸಸಿಗಳನ್ನು ನೆಡುತ್ತಿದ್ದು ಇಂದು ಲಕ್ಷಾಂತರ ಮರಗಳು ಹೆಮ್ಮರವಾಗಿ ನಿಂತಿವೆ.
ಬಳಿಕ ಇವರ ಪರಿಸರದ ಮೇಲಿನ ಕಾಳಜಿ ನೋಡಿ ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಗಿಡಗಳನ್ನು ಪೋಷಿಸುವ ಕೆಲಸ ನೀಡಲಾಗಿತ್ತು. ತುಳಸಿ ಗೌಡರ ಪರಿಸರ ಪ್ರೀತಿಗೆ ಮರಗಳ ವಿಜ್ಞಾನಿ ಎಂದೇ ಬಣ್ಣಿಸಲಾಗುತ್ತದೆ. ಯಾವ ಯಾವ ಗಿಡಗಳನ್ನು ಯಾವ ಯಾವ ಖುತುವಿನಲ್ಲಿ ನೆಡಬೇಕು, ಎಷ್ಟು ನೀರು ಗೊಬ್ಬರ ಬೇಕು, ಯಾವ ಗಿಡಗಳು ಯಾವ ಸಂದರ್ಭದಲ್ಲಿ ಹೂವು ಹಣ್ಣು ಬಿಡುತ್ತದೆ ಎಂಬ ಮಾಹಿತಿಯನ್ನು ಸೇರಿ ೩೦೦ಕ್ಕೂ ಹೆಚ್ಚು ಪ್ರಬೇಧದ ಮರಗಳು ಇವರಿಗೆ ಚಿರ ಪರಿಚಿತವಾಗಿದೆ.
ಇಂತಹ ವೃಕ್ಷಮಾತೆಗೆ ಕೇಂದ್ರ ಸರ್ಕಾರ ನೀಡುವ ಪ್ರತಿಷ್ಟಿತ ಪದ್ಮಶ್ರೀ ಪ್ರಶಸ್ತಿ ದೊರೆತಿದೆ. ಇದು ಜಿಲ್ಲೆಗೆ ಮಾತ್ರವಲ್ಲದೆ ರಾಜ್ಯಕ್ಕೆ ಹೆಮ್ಮೆ ತಂದಿದೆ. ಅಲ್ಲದೆ ಜಿಲ್ಲೆಯಲ್ಲಿ ಹಾಲಕ್ಕಿ ಸಮುದಾಯದ ಜಾನಪದ ಕೋಗಿಲೆ ಸುಕ್ರಿ ಬೊಮ್ಮ ಗೌಡ ಬಳಿಕ ಇದೀಗ ತುಳುಸಿ ಗೌಡಗೆ ಪದ್ಮಶ್ರೀ ಪ್ರಶಸ್ತಿ ದೊರಕುತ್ತಿರುವುದು ಹುಟ್ಟೂರಿನಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.
ಈ ಹಿಂದೆ ಇಂದಿರಾ ಪ್ರೀಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ ಲಭಿಸಿತ್ತು. ಅಂದಿನ ಪ್ರಧಾನಿ ವಿ.ಪಿ. ಸಿಂಗ್ ರಿಂದ ಪ್ರಶಸ್ತಿ ಪಡೆಯುವ ಮೂಲಕ ಹಾಲಕ್ಕಿ ಸಮುದಾಯದ ಮಹಿಳೆ ದೇಶದ ಗಮನ ಸೆಳೆದಿದ್ದರು.
Conclusion:
Last Updated : Jan 25, 2020, 9:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.