ETV Bharat / state

ಬೈಕ್ ಲಾರಿ ನಡುವೆ ಡಿಕ್ಕಿ: ಕೂಲಿ ಮಾಡಿ ಮರಳುತ್ತಿದ್ದವರ ದಾರುಣ ಸಾವು

ಮಂಗಳೂರು ಕಡೆಯಿಂದ ಅತಿವೇಗವಾಗಿ ಬಂದ ಲಾರಿಯು ಎದುರು ಬರುತ್ತಿದ್ದ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಪಕ್ಕದಲ್ಲೇ ಇದ್ದ ಕಂದಕಕ್ಕೆ ಬಿದ್ದಿದ್ದಾರೆ.

author img

By

Published : May 16, 2019, 10:41 PM IST

ಕೂಲಿಯಿಂದ ಮರಳುತ್ತಿದ್ದವರ ದಾರುಣ ಸಾವು

ಕಾರವಾರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕೂಲಿ ಮಾಡಿಕೊಂಡು ಮನೆಗೆ ಮರಳುತ್ತಿದ್ದ ಕೆಲಸಗಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕುಮಟಾದ ಹಂದಿಗೊಣ ಬಳಿ ನಡೆದಿದೆ.

ವಿನೋದ ಲಕ್ಷ್ಮಣ ಮುಕ್ರಿ ಹಾಗೂ ಸದಾನಂದ ನಾರಾಯಣ ಮುಕ್ರಿ ಸಾವಿಗೀಡಾದವರು. ಮಂಗಳೂರು ಕಡೆಯಿಂದ ಅತಿವೇಗವಾಗಿ ಬಂದ ಲಾರಿಯು ಎದುರಿನಿಂದ ಬರುತ್ತಿದ್ದ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಪಕ್ಕದಲ್ಲೇ ಇದ್ದ ಕಂದಕಕ್ಕೆ ಬಿದ್ದಿದ್ದಾರೆ.

ಕೂಲಿಯಿಂದ ಮರಳುತ್ತಿದ್ದವರ ದಾರುಣ ಸಾವು

ಅಪಘಾತದ ತೀವ್ರತೆಗೆ ತಲೆ ಹಾಗೂ ಮುಖಕ್ಕೆ ಗಂಭೀರವಾದ ಗಾಯಗಳಾಗಿದ್ದು, ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರವಾರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕೂಲಿ ಮಾಡಿಕೊಂಡು ಮನೆಗೆ ಮರಳುತ್ತಿದ್ದ ಕೆಲಸಗಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕುಮಟಾದ ಹಂದಿಗೊಣ ಬಳಿ ನಡೆದಿದೆ.

ವಿನೋದ ಲಕ್ಷ್ಮಣ ಮುಕ್ರಿ ಹಾಗೂ ಸದಾನಂದ ನಾರಾಯಣ ಮುಕ್ರಿ ಸಾವಿಗೀಡಾದವರು. ಮಂಗಳೂರು ಕಡೆಯಿಂದ ಅತಿವೇಗವಾಗಿ ಬಂದ ಲಾರಿಯು ಎದುರಿನಿಂದ ಬರುತ್ತಿದ್ದ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಪಕ್ಕದಲ್ಲೇ ಇದ್ದ ಕಂದಕಕ್ಕೆ ಬಿದ್ದಿದ್ದಾರೆ.

ಕೂಲಿಯಿಂದ ಮರಳುತ್ತಿದ್ದವರ ದಾರುಣ ಸಾವು

ಅಪಘಾತದ ತೀವ್ರತೆಗೆ ತಲೆ ಹಾಗೂ ಮುಖಕ್ಕೆ ಗಂಭೀರವಾದ ಗಾಯಗಳಾಗಿದ್ದು, ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:
ಬೈಕ್ ಲಾರಿ ಡಿಕ್ಕಿ...ಕೂಲಿಗೆ ತೆರಳಿ ಮರಳುತ್ತಿದ್ದವರ ಧಾರುಣ ಸಾವು
ಕಾರವಾರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕೂಲಿಗೆ ತೆರಳಿ ಮನೆಗೆ ಮರಳುತ್ತಿದ್ದ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕುಮಟಾದ ಹಂದಿಗೊಣ ಬಳಿ ಇದೀಗ ನಡೆದಿದೆ.
ಮೃತಪಟ್ಟ ಬೈಕ್ ಸವಾರರನ್ನು ವಿನೋದ ಲಕ್ಷ್ಮಣ ಮುಕ್ರಿ ಹಾಗೂ ಸದಾನಂದ ನಾರಾಯಣ ಮುಕ್ರಿ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಅತಿವೇಗವಾಗಿ ಬಂದ ಲಾರಿಯು ಮುಂದೆ ಬರುತ್ತಿದ್ದ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಪಕ್ಕದಲ್ಲೇ ಇದ್ದ ಕಂದಕ್ಕೆ ಬಿದ್ದಿದ್ದರು. ಅಪಘಾತದ ತೀವ್ರತೆಗೆ ತಲೆ ಹಾಗೂ ಮುಖಕ್ಕೆ ಗಂಭೀರವಾದ ಗಾಯಗೊಂಡು ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ತೆರಳಿರುವ ಪೊಲೀಸರು ಪರಿಸಶೀಲನೆ ನಡೆಸಿದ್ದು, ಮರಥದೇಹಗಳನ್ನು ಶವಾಗಾರಕ್ಕೆ ಸಾಗಿಸಲಾಗಿದೆ. ಆದರೆ ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Body:ಕConclusion:ಕ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.