ETV Bharat / state

ನೆರೆಪಿಡಿತ ಪ್ರದೇಶಕ್ಕೆ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಭೇಟಿ ಪರಿಶೀಲನೆ

author img

By

Published : Nov 17, 2019, 8:26 AM IST

ಉತ್ತರಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರು ಅಂಕೋಲಾ ತಾಲೂಕಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಪ್ರವಾಹದಿಂದಾದ ಹಾನಿ ಹಾಗೂ ಪರಿಹಾರ ಕಾರ್ಯದ ಕುರಿತು ಮಾಹಿತಿ ಪಡೆದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್

ಕಾರವಾರ: ಉತ್ತರಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರು ಕರಾವಳಿಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಿದರು.

ಅಂಕೋಲಾ ತಾಲೂಕಿನಲ್ಲಿ ಆಗಸ್ಟ್ ತಿಂಗಳ‌ ಮೊದಲ ವಾರ ಸುರಿದ ಭಾರಿ ಮಳೆಗೆ ನೆರೆಹಾವಳಿ ಸೃಷ್ಟಿಯಾಗಿ ಸಾಕಷ್ಟು ಹಾನಿಯಾಗಿತ್ತು.‌ ಇಲ್ಲಿನ ರಾಮನಗುಳಿ ಹಾಗೂ ಸುಂಕಸಾಳ ಬಳಿ ತೂಗು ಸೇತುವೆಗಳು ಕೊಚ್ಚಿ ಹೋಗಿ ಡೊಂಗ್ರಿ ಪಂಚಾಯತ್ ಸಂಪೂರ್ಣ ಹಾನಿಗೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿ, ಅಧಿಕಾರಿಗಳಿಂದ ಹಾನಿ ಹಾಗೂ ಪರಿಹಾರ ಕಾರ್ಯದ ಕುರಿತು ಮಾಹಿತಿ ಪಡೆದರು.

ಇನ್ನು ಸಂಕಸಾಳ ಬಳಿಯ ಅಂಗನವಾಡಿ ಹಾಗೂ ಹೈಸ್ಕೂಲ್ ಶಾಲಾ ಕಟ್ಟಡ ವೀಕ್ಷಣೆ ನಡೆಸಿದ ಅವರು ದುರಸ್ತಿಗೆ ಸೂಚಿಸಿದರು. ಬಳಿಕ ಕಾರವಾರದ ಜಿಲ್ಲಾಸ್ಪತ್ರೆಗೆ ತೆರಳಿ ವಾರ್ಡ್ ವೀಕ್ಷಣೆ ನಡೆಸಿ ವೈದ್ಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ಜಿ. ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ. ರೋಷನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರವಾರ: ಉತ್ತರಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರು ಕರಾವಳಿಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಿದರು.

ಅಂಕೋಲಾ ತಾಲೂಕಿನಲ್ಲಿ ಆಗಸ್ಟ್ ತಿಂಗಳ‌ ಮೊದಲ ವಾರ ಸುರಿದ ಭಾರಿ ಮಳೆಗೆ ನೆರೆಹಾವಳಿ ಸೃಷ್ಟಿಯಾಗಿ ಸಾಕಷ್ಟು ಹಾನಿಯಾಗಿತ್ತು.‌ ಇಲ್ಲಿನ ರಾಮನಗುಳಿ ಹಾಗೂ ಸುಂಕಸಾಳ ಬಳಿ ತೂಗು ಸೇತುವೆಗಳು ಕೊಚ್ಚಿ ಹೋಗಿ ಡೊಂಗ್ರಿ ಪಂಚಾಯತ್ ಸಂಪೂರ್ಣ ಹಾನಿಗೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿ, ಅಧಿಕಾರಿಗಳಿಂದ ಹಾನಿ ಹಾಗೂ ಪರಿಹಾರ ಕಾರ್ಯದ ಕುರಿತು ಮಾಹಿತಿ ಪಡೆದರು.

ಇನ್ನು ಸಂಕಸಾಳ ಬಳಿಯ ಅಂಗನವಾಡಿ ಹಾಗೂ ಹೈಸ್ಕೂಲ್ ಶಾಲಾ ಕಟ್ಟಡ ವೀಕ್ಷಣೆ ನಡೆಸಿದ ಅವರು ದುರಸ್ತಿಗೆ ಸೂಚಿಸಿದರು. ಬಳಿಕ ಕಾರವಾರದ ಜಿಲ್ಲಾಸ್ಪತ್ರೆಗೆ ತೆರಳಿ ವಾರ್ಡ್ ವೀಕ್ಷಣೆ ನಡೆಸಿ ವೈದ್ಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ಜಿ. ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ. ರೋಷನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Intro:Body:
ನೆರೆಪಿಡಿತ ಪ್ರದೇಶಕ್ಕೆ ವಿಜಯ್ ಭಾಸ್ಕರ್ ಭೇಟಿ; ಪರಿಶೀಲನೆ
ಕಾರವಾರ: ಉತ್ತರಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರು ಇಂದು ಕರಾವಳಿಯ ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದರು.
ಅಂಕೋಲಾ ತಾಲ್ಲೂಕಿನಲ್ಲಿ ಆಗಸ್ಟ್ ತಿಂಗಳ‌ ಮೊದಲ ವಾರ ಸುರಿದ ಭಾರಿ ಮಳೆಗೆ ನೆರೆಹಾವಳಿ ಸೃಷ್ಟಿಯಾಗಿ ಸಾಕಷ್ಟು ಹಾನಿಯಾಗಿತ್ತು.‌ ಇಲ್ಲಿನ ರಾಮನಗುಳಿ ಹಾಗೂ ಸುಂಕಸಾಳ ಬಳಿ ತೂಗು ಸೇತುವೆಗಳು ಕೊಚ್ಚಿ ಹೋಗಿ ಡೊಂಗ್ರಿ ಪಂಚಾಯತ ಸಂಪೂರ್ಣ ಹಾನಿಗೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಅಧಿಕಾರಿಗಳಿಂದ ಹಾನಿ ಹಾಗೂ ಪರಿಹಾರ ಕಾರ್ಯದ ಕುರಿತು ಮಾಹಿತಿ ಪಡೆದರು.
ಇನ್ನು ಸಂಕಸಾಳ ಬಳಿಯ ಅಂಗನವಾಡಿ ಹಾಗೂ ಹೈಸ್ಕೂಲ್ ಶಾಲಾ ಕಟ್ಟಡ ವೀಕ್ಷಣೆ ನಡೆಸಿದ ಅವರು ದುರಸ್ತಿಗೆ ಸೂಚಿಸಿದರು. ಬಳಿಕ ಕಾರವಾರದ ಜಿಲ್ಲಾಸ್ಪತ್ರೆಗೆ ತೆರಳಿ ವಾರ್ಡ್ ವೀಕ್ಷಣೆ ನಡೆಸಿ ವೈದ್ಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ., ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.