ಶಿರಸಿ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜಕೀಯ ಪಕ್ಷಗಳ ನಡುವೆ ಗೆಲುವಿನ ಲೆಕ್ಕಾಚಾರ ಶುರುವಾಗಿದೆ.
ಕ್ಷೇತ್ರದಲ್ಲಿ ಉಪ ಚುನಾವಣೆಗೆ ಬಿಜೆಪಿಯಿಂದ ಶಿವರಾಮ ಹೆಬ್ಬಾರ್ ಮತ್ತು ಕಾಂಗ್ರೆಸ್ನಿಂದ ಭೀಮಣ್ಣ ನಾಯ್ಕ ಮತ್ತು ಜೆಡಿಎಸ್ನಿಂದ ಚೈತ್ರಾ ಗೌಡ ಸ್ಪರ್ಧಿಸಿದ್ದು, ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿಯಿದೆ. ಮೂರು ಪಕ್ಷದ ಅಭ್ಯರ್ಥಿಗಳು ತಮ್ಮ ತಮ್ಮ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ಈ ಬಾರಿಯ ಉಪ ಚುನಾವಣೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ನಿಂದ ಯಾರೇ ಅಭ್ಯರ್ಥಿಗಳು ಗೆದ್ದರೂ ಅದು ಅವರ ಮೊದಲ ಜಯವಾಗಲಿದೆ. ಶಿವರಾಮ ಹೆಬ್ಬಾರ್ ಆಯ್ಕೆಯಾದಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಶಾಸಕರಾಗಲಿದ್ದಾರೆ. ಇನ್ನು ಮೂರು ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಸೋತಿರುವ ಭೀಮಣ್ಣ ಗೆದ್ದರೆ ಮೊದಲ ಬಾರಿಗೆ ವಿಧಾನಸೌಧ ಪ್ರವೇಶ ಮಾಡಲಿದ್ದಾರೆ. ಜೆಡಿಎಸ್ನಿಂದ ಸ್ಪರ್ಧಿಸಿರುವ ಚೈತ್ರಾ ಗೌಡ ಕೂಡಾ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಒಟ್ಟಾರೆಯಾಗಿ ಎಲ್ಲಿಯೂ ಅಹಿತಕರ ಘಟನೆಗಳು ನಡೆಯದಂತೆ ಮತದಾನ ಪ್ರಕ್ರಿಯೆ ಮುಗಿದಿದ್ದು, ಡಿಸೆಂಬರ್ 9ರಂದು ಫಲಿತಾಂಶ ಹೊರಬರಲಿದೆ.